Homeಮುಖಪುಟನೇಪಾಳದ ಸ್ನೇಹಿತೆ ಮದುವೆಯಲ್ಲಿ ರಾಹುಲ್ ಇದ್ದಾರೆ ಹೊರತು ನವಾಜ಼್ ಶರೀಫ್‌ ಜೊತೆ ಕೇಕ್‌ ಕಟ್‌‌ ಮಾಡಿಲ್ಲ:...

ನೇಪಾಳದ ಸ್ನೇಹಿತೆ ಮದುವೆಯಲ್ಲಿ ರಾಹುಲ್ ಇದ್ದಾರೆ ಹೊರತು ನವಾಜ಼್ ಶರೀಫ್‌ ಜೊತೆ ಕೇಕ್‌ ಕಟ್‌‌ ಮಾಡಿಲ್ಲ: ಕಾಂಗ್ರೆ‌ಸ್‌

- Advertisement -
- Advertisement -

ಸ್ನೇಹಿತೆಯ ವಿವಾಹಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇಪಾಳಕ್ಕೆ ಭೇಟಿ ನೀಡಿದ್ದನ್ನೂ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ವಿವಾದವನ್ನಾಗಿಸಿದ್ದು, ಕಾಂಗ್ರೆಸ್ ಖಡಕ್‌ ಪ್ರತಿಕ್ರಿಯೆ ನೀಡಿದೆ.

ಮಂಗಳವಾರ ಬಿಜೆಪಿ ಮುಖಂಡರು ಹಾಗೂ ಬೆಂಬಲಿಗರು ಟ್ವೀಟ್‌ಗಳ ಸುರಿಮಳೆ ಸುರಿಸಿದ್ದು, ರಾಹುಲ್‌ ಗಾಂಧಿ ಪಬ್‌‌ನಲ್ಲಿದ್ದಾರೆ ಎಂದು ಆರೋಪಿಸಿದ್ದಾರೆ.

“ಸ್ನೇಹಿತೆಯ ಮದುವೆಯಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಆಪ್ತ ಹಾಗೂ ನೆರೆಯ ರಾಷ್ಟ್ರಕ್ಕೆ ಭೇಟಿ ನೀಡುವುದು ಅಪರಾಧವಲ್ಲ” ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ. “ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪುತ್ರಿಯ ವಿವಾಹಕ್ಕೆ 2015ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಠಾತ್ ಭೇಟಿ ನೀಡಿದ್ದಕ್ಕಿಂತ ಇದು ತುಂಬಾ ದೊಡ್ಡ ವಿಷಯವೇನಲ್ಲ” ಎಂದು ಕಾಂಗ್ರೆಸ್ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಹುಲ್ ಗಾಂಧಿ ಅವರು ನವಾಜ್ ಷರೀಫ್ ಅವರೊಂದಿಗೆ ಕೇಕ್ ಕತ್ತರಿಸಲು ಪ್ರಧಾನಿ ಮೋದಿಯಂತೆ ಆಹ್ವಾನಿತ ಅತಿಥಿಯಾಗಿ ಪಾಕಿಸ್ತಾನಕ್ಕೆ ಹೋಗಿಲ್ಲ. ಪಠಾಣ್‌ಕೋಟ್‌ನಲ್ಲಿ ಏನಾಗುತ್ತದೆ ಎಂದು ನಮಗೆ ತಿಳಿದಿದೆ” ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

“ಸ್ನೇಹಿತೆಯ ವಿವಾಹದಲ್ಲಿ ಪಾಲ್ಗೊಳ್ಳಲು ನೆರೆಯ ಆಪ್ತ ದೇಶವಾದ ನೇಪಾಳಕ್ಕೆ ರಾಹುಲ್ ಗಾಂಧಿ ಹೋಗಿದ್ದಾರೆ. ಅದರಲ್ಲಿ ಯಾವುದೇ ತಪ್ಪಿಲ್ಲ. ಇದು ನಮ್ಮ ಸಂಸ್ಕೃತಿಯ ವಿಷಯ. ಇದು ಅಪರಾಧವಲ್ಲ. ಸ್ನೇಹಿತರು ಮತ್ತು ಕುಟುಂಬ ಸದಸ್ಯರೊಂದಿಗೆ ಮದುವೆಯಲ್ಲಿ ಪಾಲ್ಗೊಳ್ಳುವುದು ಅಪರಾಧ ಎಂದು ಪ್ರಧಾನಿ ಮತ್ತು ಬಿಜೆಪಿ ಶೀಘ್ರದಲ್ಲೇ ನಿರ್ಧರಿಸಬಹುದು” ಎಂದು ಕುಟುಕಿದ್ದಾರೆ.

ಬಿಜೆಪಿ ಮುಖಂಡ ಅಮಿತ್ ಮಾಳವಿಯಾ ಮಾಡಿರುವ ಟ್ವೀಟ್‌ಗೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ನೇಪಾಳದ ಕಠ್ಮಂಡುವಿಗೆ ಸೋಮವಾರ ರಾಹುಲ್ ಭೇಟಿ ನೀಡಿರುವುದಾಗಿ ‘ದಿ ಕಠ್ಮಂಡು ಪೋಸ್ಟ್‌’ ಸುದ್ದಿ ಜಾಲತಾಣ ವರದಿ ಮಾಡಿದೆ.

“ರಾಹುಲ್‌ ಅವರು ಸೋಮವಾರ ಸಂಜೆ 4:40ರ ವೇಳೆಗೆ ವಿಸ್ತಾರಾ ಏರ್‌ಲೈನ್ಸ್ ವಿಮಾನದಲ್ಲಿ ಕಠ್ಮಂಡುವಿಗೆ ಬಂದಿಳಿದರು. ಇವರೊಂದಿಗೆ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಇತರ ಮೂವರು ಇದ್ದರು” ಎಂದು ಭದ್ರತಾ ಮೂಲಗಳು ಖಚಿತಪಡಿಸಿರುವುದಾಗಿ ವರದಿ ಹೇಳಿದೆ.

ರಾಹುಲ್‌ ಗಾಂಧಿ ಮತ್ತು ಅವರ ಸ್ನೇಹಿತರು ನೇಪಾಳದ ನಕ್ಸಲ್‌ನ ಕಠ್ಮಂಡು ಮ್ಯಾರಿಯಟ್ ಹೋಟೆಲ್‌ನಲ್ಲಿ ತಂಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಹುಲ್‌ ಅವರು ತಮ್ಮ ನೇಪಾಳಿ ಸ್ನೇಹಿತೆ, ಸಿಎನ್‌ಎನ್‌ ಮಾಧ್ಯಮದ ಮಾಜಿ ಪತ್ರಕರ್ತೆ ಸುಮ್ನಿಮಾ ಉದಾಸ್ ಅವರ ವಿವಾಹದಲ್ಲಿ ಪಾಲ್ಗೊಳ್ಳಲು ಕಠ್ಮಂಡುವಿಗೆ ತೆರಳಿದ್ದಾರೆ.

ಮ್ಯಾನ್ಮಾರ್‌ಗೆ ನೇಪಾಳಿ ರಾಯಭಾರಿಯಾಗಿ ಸೇವೆ ಸಲ್ಲಿಸಿದ ಸುಮ್ನಿಮಾ ಅವರ ತಂದೆ ಭೀಮ್ ಉದಾಸ್, “ನನ್ನ ಮಗಳ ಮದುವೆಗೆ ಹಾಜರಾಗಲು ನಾವು ರಾಹುಲ್‌ ಅವರಿಗೆ ಆಹ್ವಾನವನ್ನು ನೀಡಿದ್ದೇವೆ” ಎಂದು ತಿಳಿಸಿದ್ದಾರೆ.

ಸಿಎನ್‌ಎನ್ ವರದಿಗಾರ್ತಿಯಾಗಿದ್ದ ಸುಮ್ನಿಮಾ ಅವರು ನಿಮಾ ಮಾರ್ಟಿನ್ ಶೆರ್ಪಾ ಅವರನ್ನು ವಿವಾಹವಾಗಲಿದ್ದಾರೆ. ಸುಮ್ನಿಮಾ ಅವರೀಗ ‘ದಿ ಲುಂಬಿನಿ ಮ್ಯೂಸಿಯಂ’ನ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ.

ಇದನ್ನೂ ಓದಿರಿ: ರಾಜಸ್ಥಾನ: ಧಾರ್ಮಿಕ ಧ್ವಜಗಳ ಹೆಸರಲ್ಲಿ ಘರ್ಷಣೆ; ಇಂಟರ್‌‌ನೆಟ್‌ ಸ್ಥಗಿತ

ಮಂಗಳವಾರದಂದು ವಿವಾಹ ಕಾರ್ಯಕ್ರಮವನ್ನು ಆಯೋಜಿಸಿದ್ದು, ಬೌದ್ದದಲ್ಲಿರುವ ಹಯಾತ್ ರೀಜೆನ್ಸಿ ಹೋಟೆಲ್‌ನಲ್ಲಿ ಮೇ 5 ರಂದು ಆರತಕ್ಷತೆ ನಡೆಯಲಿದೆ ಎಂದು ವಧುವಿನ ತಂದೆ ಭೀಮ್ ಅವರು ಕಠ್ಮಂಡು ಪೋಸ್ಟ್‌ಗೆ ತಿಳಿಸಿದ್ದಾರೆ.

ಕೆಲವು ಭಾರತೀಯ ವಿವಿಐಪಿಗಳು ಮದುವೆಯಲ್ಲಿ ಪಾಲ್ಗೊಳ್ಳಲು ಕಠ್ಮಂಡುವಿಗೆ ಆಗಮಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆ ಮಾಳವಿಯಾನಿಗೆ ಮಾಡಲು ಕೆಲಸವಿಲ್ಲಾ… ಇದನ್ನ ಮಾಡಿದ್ದಾನೆ… ಇಲ್ಲಿ ಅಶ್ವತ್ತನಾರಾಯಣ ಎಷ್ಟು ನುಂಗ್ಯಾನ ಅನ್ನೋದರ ಬಗ್ಗೆ ಮಾಳವೀಯಾ ಮುಕ್ಳ್ಯಾಗ ಧಮ್ ಇದ್ದ್ರ ಮಾತನಾಡಲಿ….

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...