Homeಮುಖಪುಟಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆಗೆ ರಾಹುಲ್‌, ಖರ್ಗೆ ಒತ್ತಾಯ

ಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆಗೆ ರಾಹುಲ್‌, ಖರ್ಗೆ ಒತ್ತಾಯ

- Advertisement -
- Advertisement -

2011ರಲ್ಲಿ ಮಾಡಲಾದ ಜಾತಿ ಗಣತಿಯ ಅಂಕಿಅಂಶಗಳನ್ನು ಪ್ರಕಟಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರೂ ರಾಹುಲ್‌ ಹೇಳಿಕೆಗೆ ಧ್ವನಿಗೂಡಿಸಿದ್ದು ಸರ್ಕಾರಕ್ಕೆ ಒತ್ತಡ ಹಾಕಿದ್ದಾರೆ.

ಜಾತಿ ಗಣತಿಯ ಬಹುದಿನದ ಬೇಡಿಕೆಯನ್ನು ಪ್ರಸ್ತಾಪಿಸಿರುವ ಖರ್ಗೆಯವರು ಕೇಂದ್ರ ಸರ್ಕಾರದ ಮೇಲೆ ಒತ್ತಡವನ್ನು ಹೆಚ್ಚಿಸಿದ್ದಾರೆ. ಅಂತಹ ದತ್ತಾಂಶ ಇಲ್ಲವಾದರೆ, ‘ಅರ್ಥಪೂರ್ಣ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಕಾರ್ಯಕ್ರಮಗಳ ಮೇಲೆ, ವಿಶೇಷವಾಗಿ ಒಬಿಸಿಗಳ ಮೇಲೆ ಪರಿಣಾಮ ಬೀರಬಹುದು’ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

“2011-12ರ ಅವಧಿಯಲ್ಲಿ ಯುಪಿಎ ಸರ್ಕಾರವು ಮೊದಲ ಬಾರಿಗೆ ಸುಮಾರು 25 ಕೋಟಿ ಕುಟುಂಬಗಳನ್ನು ಒಳಗೊಂಡ ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿಯನ್ನು (ಎಸ್‌ಇಸಿಸಿ) ನಡೆಸಿದ್ದು ನಿಮಗೆ (ಪಿಎಂ ಮೋದಿ) ತಿಳಿದಿದೆ. ಮೇ 2014 ರಲ್ಲಿ ನಿಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಮತ್ತು ಇತರ ಸಂಸದರು ಅದನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರೂ ಹಲವಾರು ಕಾರಣಗಳಿಗಾಗಿ ಜಾತಿ ದತ್ತಾಂಶವನ್ನು ಪ್ರಕಟಿಸಿಲ್ಲ. ನವೀಕರಿಸಲಾದ ಜಾತಿ ಗಣತಿ ಇಲ್ಲದಿರುವಾಗ, ನಾನು ವಿಶ್ವಾಸಾರ್ಹ ದತ್ತಾಂಶಗಳ ಬಗ್ಗೆ ಆತಂಕಗೊಂಡಿದ್ದೇನೆ. ಅರ್ಥಪೂರ್ಣ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಕಾರ್ಯಕ್ರಮಗಳಿಗೆ, ವಿಶೇಷವಾಗಿ ಒಬಿಸಿಗಳಿಗೆ ಜಾತಿ ಗಣತಿಯಿಂದ ಅನುಕೂಲವಾಗುತ್ತದೆ” ಎಂದು ಖರ್ಗೆ ತಿಳಿಸಿದ್ದಾರೆ.

2021 ರ ವೇಳೆಗೆ ಮಾಡಬೇಕಾದ ಕೊನೆಯ ಗಣತಿಯನ್ನು ಮುಂದೂಡಲಾಗಿದೆ ಎಂದು ಖರ್ಗೆಯವರು ಕೇಂದ್ರ ಸರ್ಕಾರಕ್ಕೆ ನೆನಪಿಸಿದ್ದಾರೆ. ಕೂಡಲೇ ಗಣತಿ ಮಾಡಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದಿದ್ದಾರೆ. ಟ್ವಿಟರ್ ಮೂಲಕ ತಮ್ಮ ಪತ್ರವನ್ನು ಸಾರ್ವಜನಿಕಗೊಳಿಸಿದ್ದಾರೆ.

ಕರ್ನಾಟಕದ ಕೋಲಾರದಲ್ಲಿ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, 2011ರಲ್ಲಿ ಯುಪಿಎ ಸರ್ಕಾರ ನಡೆಸಿದ ಜಾತಿ ಗಣತಿಯನ್ನು ಕೇಂದ್ರವು ಮರೆಮಾಚುತ್ತಿದೆ. ಮೀಸಲಾತಿ ಪಡೆಯುತ್ತಿರುವ ಸಮುದಾಯಗಳಿಗೆ ಅಗೌರವ ತೋರುತ್ತಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿರಿ: ಕೋಲಾರದಿಂದ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ: ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಬರಲಿದೆ ಎಂದ ರಾಹುಲ್

ಕಳೆದ ಚುನಾವಣೆಯ ಸಂದರ್ಭದಲ್ಲಿ ಕೋಲಾರದಲ್ಲಿ ಮಾಡಿದ್ದ ಭಾಷಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಯವರಿಗೆ ಗುಜರಾತ್‌ನ ಸೂರತ್ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ‘ಮೋದಿ’ ಸರ್‌ ನೇಮ್‌ ಬಳಸಿರುವುದಕ್ಕೆ ಸಂಬಂಧಿಸಿದಂತೆ ಶಿಕ್ಷೆ ಪ್ರಕಟಿಸಿದ ಬಳಿಕ ಲೋಕಸಭಾ ಸದಸ್ಯತ್ವದಿಂದ ರಾಹುಲ್‌ ಗಾಂಧಿಯವರನ್ನು ಅನರ್ಹಗೊಳಿಸಲಾಯಿತು. ಇದೇ ಕೋಲಾರದಲ್ಲಿಯೇ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ ರಾಹುಲ್‌, ಜಾತಿ ಗಣತಿಯ ಪ್ರಸ್ತಾಪ ಮಾಡಿದ್ದಾರೆ. ಒಬಿಸಿ ಸಮುದಾಯದ ಪರ ಮಾತನಾಡಿದ್ದಾರೆ. ಮತ್ತೊಂದೆಡೆ ಬಿಜೆಪಿ ‘ಮೋದಿ ಸರ್‌ ನೇಮ್‌’ ಪ್ರಕರಣವನ್ನು ಉಲ್ಲೇಖಿಸುತ್ತಾ, “ರಾಹುಲ್ ಗಾಂಧಿಯವರು ಒಬಿಸಿ ಸಮುದಾಯಕ್ಕೆ ಅಗೌರವ ತೋರಿದ್ದಾರೆ” ಎಂದು ಆರೋಪಿಸುತ್ತಿದೆ.

ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಯು ಗ್ರಾಮೀಣ ಮತ್ತು ನಗರ ಕುಟುಂಬಗಳ ಸಾಮಾಜಿಕ-ಆರ್ಥಿಕ ಸ್ಥಿತಿಯ ಸಮಗ್ರ ಅಧ್ಯಯನವಾಗಿದೆ. ಹೆಚ್ಚುವರಿಯಾಗಿ, ಇದು ಜಾತಿ ಗಣತಿಯನ್ನು ಒಳಗೊಂಡಿದೆ, ಇದು ಜನಸಂಖ್ಯೆಯ ಜಾತಿ ಸಂಯೋಜನೆಯ ಮಾಹಿತಿಯನ್ನು ಒದಗಿಸುತ್ತದೆ. 1931ರ ನಂತರ ಜಾತಿ ಗಣತಿ ಸ್ಥಗಿತವಾಗಿತ್ತು. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ 2011ರಲ್ಲಿ ಮತ್ತೆ ಜಾತಿ ಗಣತಿ ನಡೆಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...