Homeಮುಖಪುಟಲೈಂಗಿಕ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಮಾಮ್‌ಕೂಟತ್ತಿಲ್ ರಾಜೀನಾಮೆ

ಲೈಂಗಿಕ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಮಾಮ್‌ಕೂಟತ್ತಿಲ್ ರಾಜೀನಾಮೆ

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪಗಳ ಹಿನ್ನೆಲೆಯಲ್ಲಿ ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷ ಮತ್ತು ಪಾಲಕ್ಕಾಡ್ ಶಾಸಕ ರಾಹುಲ್ ಮಾಮ್‌ಕೂಟತ್ತಿಲ್ ಅವರು ಗುರುವಾರ (ಆ.21) ಪಕ್ಷದ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.

ಯುವ ಕಾಂಗ್ರೆಸ್‌ನೊಳಗೆ ಒತ್ತಡ ಹೆಚ್ಚಾದ ಹಿನ್ನೆಲೆ ಮತ್ತು ಹಿರಿಯ ನಾಯಕರಿಂದ ತೀವ್ರ ಟೀಕೆ ವ್ಯಕ್ತವಾದ ಕಾರಣ ಕಾಂಗ್ರೆಸ್ ನಾಯಕತ್ವವು ಹುದ್ದೆಗಳಿಗೆ ರಾಜೀನಾಮೆ ನೀಡುವಂತೆ ರಾಹುಲ್ ಅವರಿಗೆ ಸೂಚಿಸಿದೆ ಎಂದು ವರದಿಯಾಗಿದೆ.

ರಾಹುಲ್ ಕಾಂಗ್ರೆಸ್ ಪಕ್ಷದ ತಮ್ಮ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದರೂ, ಪಕ್ಷವು ಅವರನ್ನು ಅಮಾನತುಗೊಳಿಸಲು ಅಥವಾ ಹೊರಹಾಕಲು ನಿರ್ಧರಿಸದ ಹೊರತು, ಅವರು ಪಾಲಕ್ಕಾಡ್‌ನಿಂದ ಸ್ವತಂತ್ರ ಶಾಸಕರಾಗಿ ಮುಂದುವರಿಯಬಹುದು ಎಂದು ಹಿರಿಯ ಕಾಂಗ್ರೆಸ್ ಮೂಲವೊಂದು ತಿಳಿಸಿದ್ದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

“ಮೂರು ವರ್ಷಗಳ ಹಿಂದೆ ಕೇರಳದ ಯುವ ರಾಜಕಾರಣಿಯೊಬ್ಬರು ತನಗೆ ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸಿ ಹೋಟೆಲ್ ಕೋಣೆಗೆ ಆಹ್ವಾನಿಸಿದ್ದರು” ಎಂದು ನಟಿ ಮತ್ತು ಮಾಜಿ ಪತ್ರಕರ್ತೆ ರಿನಿ ಆನ್ ಜಾರ್ಜ್ ಅವರು ಆಗಸ್ಟ್ 20ರಂದು ಆರೋಪಿಸಿದ್ದರು.

ರಿನಿ ಆರೋಪ ಮಾಡುವಾಗ ಯುವ ರಾಜಕಾರಣಿ ರಾಹುಲ್ ಮಾಮ್‌ಕೂಟತ್ತಿಲ್ ಎಂದು ಹೇಳಿರಲಿಲ್ಲ. ಆದರೆ, ಪಾಲಕ್ಕಾಡ್‌ನಲ್ಲಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಯುವ ಘಟಕದ ನಾಯಕರು ರಿನಿ ಆರೋಪ ಮಾಡಿರುವುದು ರಾಹುಲ್ ವಿರುದ್ದವೇ ಎಂದಿದ್ದರು.

ರಿನಿ ಆರೋಪ ಬೆನ್ನಲ್ಲೇ ಮಲಯಾಳಂ ಬರಗಾರ್ತಿ ಹನಿ ಭಾಸ್ಕರನ್ ಕೂಡ ರಾಹುಲ್ ವಿರುದ್ದ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. “ತಾನು ಶ್ರೀಲಂಕಾದಲ್ಲಿದ್ದಾಗ ರಾಹುಲ್ ಇನ್‌ಸ್ಟಾಗ್ರಾಮ್ ಮೂಲಕ ಸಂಭಾಷಣೆ ಆರಂಭಿಸಿದ್ದರು. ನಂತರ, ಖಾಸಗಿ ವಿಷಯಗಳನ್ನು ಹಂಚಿಕೊಳ್ಳಲು ಶುರು ಮಾಡಿದ್ದರು. ಈ ಬಗ್ಗೆ ಅವರ ಗೆಳೆಯರಲ್ಲಿ ಹೇಳಿಕೊಂಡು ತನ್ನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು ಎಂದು ಹನಿ ಭಾಸ್ಕರನ್ ಸಾರ್ವಜನಿಕವಾಗಿ ಆರೋಪಿಸಿದ್ದರು.

ರಾಹುಲ್ ವಿರುದ್ದದ  ಈ  ಗಂಭೀರ ಆರೋಪಗಳು ಯುವ ಕಾಂಗ್ರೆಸ್‌ನೊಳಗೆ ದೊಡ್ಡ ಮಟ್ಟದ ಚರ್ಚೆಯಾಗಿತ್ತು. ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್‌.ವಿ ಸ್ನೇಹಾ ಮತ್ತು ಉಪಾಧ್ಯಕ್ಷ ವಿಷ್ಣು ಸುನಿಲ್ ಪಂದಲಂ ಸೇರಿದಂತೆ ಹಲವಾರು ನಾಯಕರು ರಾಹುಲ್ ರಾಜೀನಾಮೆಗೆ ಒತ್ತಾಯಿಸಿದ್ದರು. ಶಾಸಕ ಚಾಂಡಿ ಉಮ್ಮನ್ ಅವರ ಬೆಂಬಲಿಗರು ಕೂಡ ರಾಹುಲ್ ಅವರನ್ನು ಪಕ್ಷದ ಹುದ್ದೆಗಳಿಂದ ತೆಗೆದುಹಾಕುವಂತೆ ಒತ್ತಾಯಿಸಿದ್ದರು.

ಗಂಭೀರ ಆರೋಪಗಳ ನಡುವೆ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿರುವ ರಾಹುಲ್, “ನಾನು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ನನ್ನಲ್ಲಿ ಯಾರೂ ರಾಜೀನಾಮೆ ಕೇಳಿಲ್ಲ. ನನ್ನ ವಿರುದ್ದ ಕೇಳಿ ಬಂದಿರುವ ಆರೋಪಗಳೆಲ್ಲ ಸುಳ್ಳು” ಎಂದಿದ್ದಾರೆ.

ಈ ನಡುವೆ, “ಯುವ ನಟ ತನ್ನ ವಿರುದ್ಧ ಮಾತನಾಡಿದ್ದಾರೆಂದು ತಾನು ಭಾವಿಸುವುದಿಲ್ಲ. ಅವರು ನನ್ನ ಹೆಸರನ್ನು ಎಲ್ಲೂ ಉಲ್ಲೇಖಿಸಿಲ್ಲ. ನಾನು ಕಾನೂನುಬಾಹಿರ ಅಥವಾ ಸಂವಿಧಾನಬಾಹಿರವಾದ ಏನನ್ನೂ ಮಾಡಿಲ್ಲ” ಎಂದು ರಾಹುಲ್ ಸಮರ್ಥಿಸಿಕೊಂಡಿದ್ದಾರೆ.

ರಾಹುಲ್ ಅವರ ರಾಜೀನಾಮೆಯಿಂದ ತೆರವಾದ ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಬಿನ್ ವರ್ಗೀಸ್ ಮತ್ತು ಕೆ.ಎಂ ಅಭಿಜಿತ್ ಅವರನ್ನು ಪರಿಗಣಿಸಲಾಗುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ದಿ ನ್ಯೂಸ್ ಮಿನಿಟನ್ ವರದಿ ಮಾಡಿದೆ.

ರಾಹುಲ್ ವಿರುದ್ದ ಯಾವುದೇ ಔಪಚಾರಿಕ ದೂರು ಬಂದಿಲ್ಲ. ಆದರೆ, ಪಕ್ಷವು ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿ ಅದಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಲಿದೆ ಎಂದು ಕೇರಳ ವಿಧಾನಸಭೆಯ ವಿರೋಧ ಪಕ್ಷದ ಹಾಗೂ ಕಾಂಗ್ರೆಸ್‌ನ ನಾಯಕ ವಿ.ಡಿ. ಸತೀಶನ್ ಗುರುವಾರ ಭರವಸೆ ನೀಡಿದ್ದಾರೆ.

2024ರಲ್ಲಿ ನಡೆದ ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ 18,840 ಮತಗಳ ಅಂತರದಿಂದ ರಾಹುಲ್ ದಾಖಲೆಯ ಗೆಲುವು ಸಾಧಿಸಿದ್ದರು. ಕೇರಳ ವಿದ್ಯಾರ್ಥಿ ಸಂಘದ ಮೂಲಕ ತಮ್ಮ ರಾಜಕೀಯ ಪಯಣ ಆರಂಭಿಸಿದ ರಾಹುಲ್, ನಂತರ ಯುವ ಕಾಂಗ್ರೆಸ್‌ನ ಅಧ್ಯಕ್ಷ ಹುದ್ದೆಗೇರುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ಯುವ ನಾಯಕ ಎನಿಸಿಕೊಂಡರು.

ನವೆಂಬರ್ 2023ರಲ್ಲಿ ಕೇರಳದಲ್ಲಿ ನಡೆದ ಭಾರತೀಯ ಯುವ ಕಾಂಗ್ರೆಸ್ ಪಕ್ಷದ ಆಂತರಿಕ ಚುನಾವಣೆಯಲ್ಲಿ 2,21,986 ಮತಗಳನ್ನು ಪಡೆದು ರಾಹುಲ್ ಜಯಗಳಿಸಿದ್ದರು. ಅವರ ಹತ್ತಿರದ ಪ್ರತಿಸ್ಪರ್ಧಿ ಅಬಿನ್ ವರ್ಕಿ ಕೊಡಿಯಾಟ್ಟು ಅವರು 53,398 ಮತಗಳ ಅಂತರದಿಂದ ಸೋಲನುಭವಿಸಿದ್ದರು.

ಚುನಾಯಿತ ಸರ್ಕಾರ ರಾಜ್ಯಪಾಲರ ಇಚ್ಛೆಗೆ ಒಳಪಡುವಂತಾಗುವುದಿಲ್ಲವೆ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...