Homeಮುಖಪುಟಲೈಂಗಿಕ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಮಾಮ್‌ಕೂಟತ್ತಿಲ್ ರಾಜೀನಾಮೆ

ಲೈಂಗಿಕ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಮಾಮ್‌ಕೂಟತ್ತಿಲ್ ರಾಜೀನಾಮೆ

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪಗಳ ಹಿನ್ನೆಲೆಯಲ್ಲಿ ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷ ಮತ್ತು ಪಾಲಕ್ಕಾಡ್ ಶಾಸಕ ರಾಹುಲ್ ಮಾಮ್‌ಕೂಟತ್ತಿಲ್ ಅವರು ಗುರುವಾರ (ಆ.21) ಪಕ್ಷದ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.

ಯುವ ಕಾಂಗ್ರೆಸ್‌ನೊಳಗೆ ಒತ್ತಡ ಹೆಚ್ಚಾದ ಹಿನ್ನೆಲೆ ಮತ್ತು ಹಿರಿಯ ನಾಯಕರಿಂದ ತೀವ್ರ ಟೀಕೆ ವ್ಯಕ್ತವಾದ ಕಾರಣ ಕಾಂಗ್ರೆಸ್ ನಾಯಕತ್ವವು ಹುದ್ದೆಗಳಿಗೆ ರಾಜೀನಾಮೆ ನೀಡುವಂತೆ ರಾಹುಲ್ ಅವರಿಗೆ ಸೂಚಿಸಿದೆ ಎಂದು ವರದಿಯಾಗಿದೆ.

ರಾಹುಲ್ ಕಾಂಗ್ರೆಸ್ ಪಕ್ಷದ ತಮ್ಮ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದರೂ, ಪಕ್ಷವು ಅವರನ್ನು ಅಮಾನತುಗೊಳಿಸಲು ಅಥವಾ ಹೊರಹಾಕಲು ನಿರ್ಧರಿಸದ ಹೊರತು, ಅವರು ಪಾಲಕ್ಕಾಡ್‌ನಿಂದ ಸ್ವತಂತ್ರ ಶಾಸಕರಾಗಿ ಮುಂದುವರಿಯಬಹುದು ಎಂದು ಹಿರಿಯ ಕಾಂಗ್ರೆಸ್ ಮೂಲವೊಂದು ತಿಳಿಸಿದ್ದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

“ಮೂರು ವರ್ಷಗಳ ಹಿಂದೆ ಕೇರಳದ ಯುವ ರಾಜಕಾರಣಿಯೊಬ್ಬರು ತನಗೆ ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸಿ ಹೋಟೆಲ್ ಕೋಣೆಗೆ ಆಹ್ವಾನಿಸಿದ್ದರು” ಎಂದು ನಟಿ ಮತ್ತು ಮಾಜಿ ಪತ್ರಕರ್ತೆ ರಿನಿ ಆನ್ ಜಾರ್ಜ್ ಅವರು ಆಗಸ್ಟ್ 20ರಂದು ಆರೋಪಿಸಿದ್ದರು.

ರಿನಿ ಆರೋಪ ಮಾಡುವಾಗ ಯುವ ರಾಜಕಾರಣಿ ರಾಹುಲ್ ಮಾಮ್‌ಕೂಟತ್ತಿಲ್ ಎಂದು ಹೇಳಿರಲಿಲ್ಲ. ಆದರೆ, ಪಾಲಕ್ಕಾಡ್‌ನಲ್ಲಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಯುವ ಘಟಕದ ನಾಯಕರು ರಿನಿ ಆರೋಪ ಮಾಡಿರುವುದು ರಾಹುಲ್ ವಿರುದ್ದವೇ ಎಂದಿದ್ದರು.

ರಿನಿ ಆರೋಪ ಬೆನ್ನಲ್ಲೇ ಮಲಯಾಳಂ ಬರಗಾರ್ತಿ ಹನಿ ಭಾಸ್ಕರನ್ ಕೂಡ ರಾಹುಲ್ ವಿರುದ್ದ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. “ತಾನು ಶ್ರೀಲಂಕಾದಲ್ಲಿದ್ದಾಗ ರಾಹುಲ್ ಇನ್‌ಸ್ಟಾಗ್ರಾಮ್ ಮೂಲಕ ಸಂಭಾಷಣೆ ಆರಂಭಿಸಿದ್ದರು. ನಂತರ, ಖಾಸಗಿ ವಿಷಯಗಳನ್ನು ಹಂಚಿಕೊಳ್ಳಲು ಶುರು ಮಾಡಿದ್ದರು. ಈ ಬಗ್ಗೆ ಅವರ ಗೆಳೆಯರಲ್ಲಿ ಹೇಳಿಕೊಂಡು ತನ್ನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು ಎಂದು ಹನಿ ಭಾಸ್ಕರನ್ ಸಾರ್ವಜನಿಕವಾಗಿ ಆರೋಪಿಸಿದ್ದರು.

ರಾಹುಲ್ ವಿರುದ್ದದ  ಈ  ಗಂಭೀರ ಆರೋಪಗಳು ಯುವ ಕಾಂಗ್ರೆಸ್‌ನೊಳಗೆ ದೊಡ್ಡ ಮಟ್ಟದ ಚರ್ಚೆಯಾಗಿತ್ತು. ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್‌.ವಿ ಸ್ನೇಹಾ ಮತ್ತು ಉಪಾಧ್ಯಕ್ಷ ವಿಷ್ಣು ಸುನಿಲ್ ಪಂದಲಂ ಸೇರಿದಂತೆ ಹಲವಾರು ನಾಯಕರು ರಾಹುಲ್ ರಾಜೀನಾಮೆಗೆ ಒತ್ತಾಯಿಸಿದ್ದರು. ಶಾಸಕ ಚಾಂಡಿ ಉಮ್ಮನ್ ಅವರ ಬೆಂಬಲಿಗರು ಕೂಡ ರಾಹುಲ್ ಅವರನ್ನು ಪಕ್ಷದ ಹುದ್ದೆಗಳಿಂದ ತೆಗೆದುಹಾಕುವಂತೆ ಒತ್ತಾಯಿಸಿದ್ದರು.

ಗಂಭೀರ ಆರೋಪಗಳ ನಡುವೆ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿರುವ ರಾಹುಲ್, “ನಾನು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ನನ್ನಲ್ಲಿ ಯಾರೂ ರಾಜೀನಾಮೆ ಕೇಳಿಲ್ಲ. ನನ್ನ ವಿರುದ್ದ ಕೇಳಿ ಬಂದಿರುವ ಆರೋಪಗಳೆಲ್ಲ ಸುಳ್ಳು” ಎಂದಿದ್ದಾರೆ.

ಈ ನಡುವೆ, “ಯುವ ನಟ ತನ್ನ ವಿರುದ್ಧ ಮಾತನಾಡಿದ್ದಾರೆಂದು ತಾನು ಭಾವಿಸುವುದಿಲ್ಲ. ಅವರು ನನ್ನ ಹೆಸರನ್ನು ಎಲ್ಲೂ ಉಲ್ಲೇಖಿಸಿಲ್ಲ. ನಾನು ಕಾನೂನುಬಾಹಿರ ಅಥವಾ ಸಂವಿಧಾನಬಾಹಿರವಾದ ಏನನ್ನೂ ಮಾಡಿಲ್ಲ” ಎಂದು ರಾಹುಲ್ ಸಮರ್ಥಿಸಿಕೊಂಡಿದ್ದಾರೆ.

ರಾಹುಲ್ ಅವರ ರಾಜೀನಾಮೆಯಿಂದ ತೆರವಾದ ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಬಿನ್ ವರ್ಗೀಸ್ ಮತ್ತು ಕೆ.ಎಂ ಅಭಿಜಿತ್ ಅವರನ್ನು ಪರಿಗಣಿಸಲಾಗುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ದಿ ನ್ಯೂಸ್ ಮಿನಿಟನ್ ವರದಿ ಮಾಡಿದೆ.

ರಾಹುಲ್ ವಿರುದ್ದ ಯಾವುದೇ ಔಪಚಾರಿಕ ದೂರು ಬಂದಿಲ್ಲ. ಆದರೆ, ಪಕ್ಷವು ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿ ಅದಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಲಿದೆ ಎಂದು ಕೇರಳ ವಿಧಾನಸಭೆಯ ವಿರೋಧ ಪಕ್ಷದ ಹಾಗೂ ಕಾಂಗ್ರೆಸ್‌ನ ನಾಯಕ ವಿ.ಡಿ. ಸತೀಶನ್ ಗುರುವಾರ ಭರವಸೆ ನೀಡಿದ್ದಾರೆ.

2024ರಲ್ಲಿ ನಡೆದ ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ 18,840 ಮತಗಳ ಅಂತರದಿಂದ ರಾಹುಲ್ ದಾಖಲೆಯ ಗೆಲುವು ಸಾಧಿಸಿದ್ದರು. ಕೇರಳ ವಿದ್ಯಾರ್ಥಿ ಸಂಘದ ಮೂಲಕ ತಮ್ಮ ರಾಜಕೀಯ ಪಯಣ ಆರಂಭಿಸಿದ ರಾಹುಲ್, ನಂತರ ಯುವ ಕಾಂಗ್ರೆಸ್‌ನ ಅಧ್ಯಕ್ಷ ಹುದ್ದೆಗೇರುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ಯುವ ನಾಯಕ ಎನಿಸಿಕೊಂಡರು.

ನವೆಂಬರ್ 2023ರಲ್ಲಿ ಕೇರಳದಲ್ಲಿ ನಡೆದ ಭಾರತೀಯ ಯುವ ಕಾಂಗ್ರೆಸ್ ಪಕ್ಷದ ಆಂತರಿಕ ಚುನಾವಣೆಯಲ್ಲಿ 2,21,986 ಮತಗಳನ್ನು ಪಡೆದು ರಾಹುಲ್ ಜಯಗಳಿಸಿದ್ದರು. ಅವರ ಹತ್ತಿರದ ಪ್ರತಿಸ್ಪರ್ಧಿ ಅಬಿನ್ ವರ್ಕಿ ಕೊಡಿಯಾಟ್ಟು ಅವರು 53,398 ಮತಗಳ ಅಂತರದಿಂದ ಸೋಲನುಭವಿಸಿದ್ದರು.

ಚುನಾಯಿತ ಸರ್ಕಾರ ರಾಜ್ಯಪಾಲರ ಇಚ್ಛೆಗೆ ಒಳಪಡುವಂತಾಗುವುದಿಲ್ಲವೆ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...