Homeಮುಖಪುಟರಕ್ಷಣಾ ಸ್ಥಾಯಿ ಸಮಿತಿಯ 14 ಸಭೆಗಳಲ್ಲಿ 2 ಕ್ಕೆ ಮಾತ್ರ ರಾಹುಲ್ ಭಾಗಿ: ಕೇಂದ್ರ ಸಚಿವ...

ರಕ್ಷಣಾ ಸ್ಥಾಯಿ ಸಮಿತಿಯ 14 ಸಭೆಗಳಲ್ಲಿ 2 ಕ್ಕೆ ಮಾತ್ರ ರಾಹುಲ್ ಭಾಗಿ: ಕೇಂದ್ರ ಸಚಿವ ಆರೋಪ

"ಸಬೆಗೆ ಹಾಜರಾಗದಿರುವುದು. ಚರ್ಚೆ ಮಾಡ ಬಯಸಿದ ವಿಷಯವನ್ನು ಪ್ರಸ್ತಾಪಿಸದಿರುವುದು, ನಂತರ 'ಪ್ರಮುಖ ವಿಷಯಗಳ' ಚರ್ಚೆ ಮಾಡುತ್ತಿಲ್ಲ ಎಂದು ದೂಷಿಸುವುದು"

- Advertisement -
- Advertisement -

‘ಕಳೆದ ಒಂದೂವರೆ ವರ್ಷಗಳಲ್ಲಿ ರಕ್ಷಣಾ ಸ್ಥಾಯಿ ಸಮಿತಿಯ 14 ಸಭೆಗಳಲ್ಲಿ ಕೇವಲ 2 ರಲ್ಲಿ ಮಾತ್ರ ರಾಹುಲ್ ಗಾಂಧಿ ಭಾಗವಗಹಿಸಿದ್ದಾರೆ’ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಆರೋಪಿಸಿದ್ದಾರೆ. ನಿನ್ನೆ ನಡೆದ ರಕ್ಷಣಾ ಸಂಸದೀಯ ಸಮಿತಿ ಸಭೆಯ ನಡುವೆಯೇ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಎದ್ದು ಹೊರ ನಡೆದಿದ್ದರು.

“ರಕ್ಷಣಾ ಸಂಸದೀಯ ಸಮಿತಿ ಸಭೆಯಲ್ಲಿ ಸೈನಿಕರನ್ನು ಹೇಗೆ ಉತ್ತಮವಾಗಿ ಸಜ್ಜುಗೊಳಿಸಬೇಕು ಎಂಬುದರ ಕುರಿತು ಚರ್ಚಿಸುವ ಬದಲು, ಸಶಸ್ತ್ರ ಪಡೆಗಳ ಸಮವಸ್ತ್ರಗಳ ಬಗ್ಗೆ ಚರ್ಚೆ ನಡೆಸುತ್ತಾ ಸಮಯವನ್ನು ವ್ಯರ್ಥ ಮಾಡಲಾಯಿತು” ಎಂದು ನಿನ್ನೆ ರಾಹುಲ್ ಗಾಂಧಿ ಆರೋಪಿಸಿದ್ದರು.

ಇದನ್ನೂ ಓದಿ: ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನದಲ್ಲಿ ಮೋದಿ ಪಾತ್ರವಿತ್ತು: ಬಿಜೆಪಿ ನಾಯಕನ ಹೇಳಿಕೆ ವೈರಲ್

ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, “ಕಳೆದ ಒಂದೂವರೆ ವರ್ಷಗಳಲ್ಲಿ ರಕ್ಷಣಾ ಸಂಸದೀಯ ಸ್ಥಾಯಿ ಸಮಿತಿಯ 14 ಸಭೆಗಳಲ್ಲಿ ಕೇವಲ 2 ರಲ್ಲಿ ಮಾತ್ರ ರಾಹುಲ್ ಗಾಂಧಿ ಭಾಗವಹಿಸಿದ್ದರು. ಸ್ವತಃ ಅವರೇ ಗೈರುಹಾಜರಾಗಿ ನಂತರ ಸರ್ಕಾರ ಎಲ್ಲಾ ಕಾರ್ಯವಿಧಾನಗಳನ್ನು ದೂಷಿಸುತ್ತಾರೆ. ಸಭೆಯನ್ನೂ ಪ್ರತಿಭಟಿಸಿ ಹೊರನಡೆಯುತ್ತಾರೆ. ಸ್ಥಾಯಿ ಸಮಿತಿ ಪ್ರತಿಭಟನಾ ಸ್ಥಳವಲ್ಲ” ಎಂದು ಹೇಳಿದ್ದಾರೆ ಎಂದು ಎಎನ್‌ಐ ಟ್ವೀಟ್ ಮಾಡಿದೆ.

ಇದನ್ನೂ ಓದಿ: ತೀವ್ರ ಚಳಿಗಾಳಿಯಿಂದಾಗಿ ಪಂಜಾಬ್- ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಸಾವು

ಇದನ್ನೂ ಓದಿ: ಸಿಐಡಿ ವಿಭಾಗದ ಡಿವೈಎಸ್ಪಿ ಲಕ್ಷ್ಮಿ(33) ಅಸಹಜ ಸಾವು

“ಸಭೆಗೆ ಗೈರಾಗುವುದು, ಅವರು ಚರ್ಚೆ ಮಾಡ ಬಯಸಿದ ವಿಷಯವನ್ನು ಬಹಿರಂಗಪಡಿಸದಿರುವುದು, ನಂತರ ‘ಪ್ರಮುಖ ವಿಷಯಗಳ’ ಚರ್ಚೆ ಮಾಡುತ್ತಿಲ್ಲ ಎಂದು ದೂಷಿಸುವುದು. ಇವು ಸಂಸತ್ತಿನ ಕಾರ್ಯವಿಧಾನಗಳು ಮತ್ತು ಸಾಂವಿಧಾನಿಕ ಸಂಸ್ಥೆಗಳಿಗೆ ಮಾಡಿದ ಅವಮಾನ. ಈ ಮನೋಭಾವವನ್ನು ನಾವು ಖಂಡಿಸುತ್ತೇವೆ” ಎಂದು ಆರೋಪಿಸಿದರು.

ಸಭೆಯಲ್ಲಿ ಭೂ ಸೇನೆ, ಜಲಸೇನೆ ಮತ್ತು ವಾಯುಸೇನೆಯ ಸಮವಸ್ತ್ರದ ಬಗ್ಗೆ ಸಮಿತಿ ಚರ್ಚಿಸುತ್ತಿದ್ದಾಗ ಮಧ್ಯಪ್ರವೇಶಿಸಿದ ರಾಹುಲ್ ಗಾಂಧಿ, ಇದನ್ನು ಸಶಸ್ತ್ರ ಪಡೆಗಳ ಹಿರಿಯ ರಕ್ಷಣಾ ಅಧಿಕಾರಿಗಳು ನಿರ್ಧರಿಸಬಹುದು ಎಂದು ಹೇಳಿದ ನಂತರ ಎಲ್‌ಎಸಿ (ಲಡಾಖ್ ಗಡಿ)ಯಲ್ಲಿ ಹೋರಾಡುತ್ತಿರುವ ಸೈನಿಕರ ವಿಷಯವನ್ನು ಚರ್ಚಿಸಲು ಮುಂದಾದರು.

ಇದನ್ನೂ ಓದಿ: 189 ದೇಶಗಳಲ್ಲಿ 131ನೇ ಸ್ಥಾನ: ಮಾನವ ಅಭಿವೃದ್ದಿ ಸೂಚ್ಯಂಕದಲ್ಲಿ ಮತ್ತೆರೆಡು ಸ್ಥಾನ ಕುಸಿದ ಭಾರತ!

ಈ ಸಮಯದಲ್ಲಿ ಸಮಿತಿಯ ಅಧ್ಯಕ್ಷ, ಬಿಜೆಪಿ ಸಂಸದ ಜುವಾಲ್ ಓರಮ್, ರಾಹುಲ್ ಗಾಂಧಿಯವರಿಗೆ ಮಾತನಾಡಲು ಅನುಮತಿಸಲಿಲ್ಲ ಹಾಗಾಗಿ ಅವರು ಸಭೆಯಿಂದ ಹೊರನಡೆದರು ಎಂದು ಮೂಲಗಳು ಮಾಹಿತಿ ನೀಡಿವೆ.

ರಾಹುಲ್ ಗಾಂಧಿ ಸಭೆಯನ್ನು ಸಮಯ ವ್ಯರ್ಥ ಎಂದು ಹೇಳಿ ಹೊರ ನಡೆಯುತ್ತಿದ್ದಂತೆ, ಅವರ ಹಿಂದೆಯೇ ಕಾಂಗ್ರೆಸ್ ಸದಸ್ಯ ರಾಜೀವ್ ಸತವ್ ಮತ್ತು ರೇವಂತ್ ರೆಡ್ಡಿ ಕೂಡ ಹೊರನಡೆದಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ಶಾಲಾ ಪಠ್ಯಪುಸ್ತಕದಲ್ಲಿ ಬ್ರಾಹ್ಮಣರ ಅವಹೇಳನ ಆರೋಪ: ಕ್ರಮಕ್ಕೆ ಸೂಚಿಸಿದ ಮುಖ್ಯಮಂತ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...