Homeಮುಖಪುಟರಕ್ಷಣಾ ಸ್ಥಾಯಿ ಸಮಿತಿಯ 14 ಸಭೆಗಳಲ್ಲಿ 2 ಕ್ಕೆ ಮಾತ್ರ ರಾಹುಲ್ ಭಾಗಿ: ಕೇಂದ್ರ ಸಚಿವ...

ರಕ್ಷಣಾ ಸ್ಥಾಯಿ ಸಮಿತಿಯ 14 ಸಭೆಗಳಲ್ಲಿ 2 ಕ್ಕೆ ಮಾತ್ರ ರಾಹುಲ್ ಭಾಗಿ: ಕೇಂದ್ರ ಸಚಿವ ಆರೋಪ

"ಸಬೆಗೆ ಹಾಜರಾಗದಿರುವುದು. ಚರ್ಚೆ ಮಾಡ ಬಯಸಿದ ವಿಷಯವನ್ನು ಪ್ರಸ್ತಾಪಿಸದಿರುವುದು, ನಂತರ 'ಪ್ರಮುಖ ವಿಷಯಗಳ' ಚರ್ಚೆ ಮಾಡುತ್ತಿಲ್ಲ ಎಂದು ದೂಷಿಸುವುದು"

- Advertisement -
- Advertisement -

‘ಕಳೆದ ಒಂದೂವರೆ ವರ್ಷಗಳಲ್ಲಿ ರಕ್ಷಣಾ ಸ್ಥಾಯಿ ಸಮಿತಿಯ 14 ಸಭೆಗಳಲ್ಲಿ ಕೇವಲ 2 ರಲ್ಲಿ ಮಾತ್ರ ರಾಹುಲ್ ಗಾಂಧಿ ಭಾಗವಗಹಿಸಿದ್ದಾರೆ’ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಆರೋಪಿಸಿದ್ದಾರೆ. ನಿನ್ನೆ ನಡೆದ ರಕ್ಷಣಾ ಸಂಸದೀಯ ಸಮಿತಿ ಸಭೆಯ ನಡುವೆಯೇ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಎದ್ದು ಹೊರ ನಡೆದಿದ್ದರು.

“ರಕ್ಷಣಾ ಸಂಸದೀಯ ಸಮಿತಿ ಸಭೆಯಲ್ಲಿ ಸೈನಿಕರನ್ನು ಹೇಗೆ ಉತ್ತಮವಾಗಿ ಸಜ್ಜುಗೊಳಿಸಬೇಕು ಎಂಬುದರ ಕುರಿತು ಚರ್ಚಿಸುವ ಬದಲು, ಸಶಸ್ತ್ರ ಪಡೆಗಳ ಸಮವಸ್ತ್ರಗಳ ಬಗ್ಗೆ ಚರ್ಚೆ ನಡೆಸುತ್ತಾ ಸಮಯವನ್ನು ವ್ಯರ್ಥ ಮಾಡಲಾಯಿತು” ಎಂದು ನಿನ್ನೆ ರಾಹುಲ್ ಗಾಂಧಿ ಆರೋಪಿಸಿದ್ದರು.

ಇದನ್ನೂ ಓದಿ: ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನದಲ್ಲಿ ಮೋದಿ ಪಾತ್ರವಿತ್ತು: ಬಿಜೆಪಿ ನಾಯಕನ ಹೇಳಿಕೆ ವೈರಲ್

ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, “ಕಳೆದ ಒಂದೂವರೆ ವರ್ಷಗಳಲ್ಲಿ ರಕ್ಷಣಾ ಸಂಸದೀಯ ಸ್ಥಾಯಿ ಸಮಿತಿಯ 14 ಸಭೆಗಳಲ್ಲಿ ಕೇವಲ 2 ರಲ್ಲಿ ಮಾತ್ರ ರಾಹುಲ್ ಗಾಂಧಿ ಭಾಗವಹಿಸಿದ್ದರು. ಸ್ವತಃ ಅವರೇ ಗೈರುಹಾಜರಾಗಿ ನಂತರ ಸರ್ಕಾರ ಎಲ್ಲಾ ಕಾರ್ಯವಿಧಾನಗಳನ್ನು ದೂಷಿಸುತ್ತಾರೆ. ಸಭೆಯನ್ನೂ ಪ್ರತಿಭಟಿಸಿ ಹೊರನಡೆಯುತ್ತಾರೆ. ಸ್ಥಾಯಿ ಸಮಿತಿ ಪ್ರತಿಭಟನಾ ಸ್ಥಳವಲ್ಲ” ಎಂದು ಹೇಳಿದ್ದಾರೆ ಎಂದು ಎಎನ್‌ಐ ಟ್ವೀಟ್ ಮಾಡಿದೆ.

ಇದನ್ನೂ ಓದಿ: ತೀವ್ರ ಚಳಿಗಾಳಿಯಿಂದಾಗಿ ಪಂಜಾಬ್- ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಸಾವು

ಇದನ್ನೂ ಓದಿ: ಸಿಐಡಿ ವಿಭಾಗದ ಡಿವೈಎಸ್ಪಿ ಲಕ್ಷ್ಮಿ(33) ಅಸಹಜ ಸಾವು

“ಸಭೆಗೆ ಗೈರಾಗುವುದು, ಅವರು ಚರ್ಚೆ ಮಾಡ ಬಯಸಿದ ವಿಷಯವನ್ನು ಬಹಿರಂಗಪಡಿಸದಿರುವುದು, ನಂತರ ‘ಪ್ರಮುಖ ವಿಷಯಗಳ’ ಚರ್ಚೆ ಮಾಡುತ್ತಿಲ್ಲ ಎಂದು ದೂಷಿಸುವುದು. ಇವು ಸಂಸತ್ತಿನ ಕಾರ್ಯವಿಧಾನಗಳು ಮತ್ತು ಸಾಂವಿಧಾನಿಕ ಸಂಸ್ಥೆಗಳಿಗೆ ಮಾಡಿದ ಅವಮಾನ. ಈ ಮನೋಭಾವವನ್ನು ನಾವು ಖಂಡಿಸುತ್ತೇವೆ” ಎಂದು ಆರೋಪಿಸಿದರು.

ಸಭೆಯಲ್ಲಿ ಭೂ ಸೇನೆ, ಜಲಸೇನೆ ಮತ್ತು ವಾಯುಸೇನೆಯ ಸಮವಸ್ತ್ರದ ಬಗ್ಗೆ ಸಮಿತಿ ಚರ್ಚಿಸುತ್ತಿದ್ದಾಗ ಮಧ್ಯಪ್ರವೇಶಿಸಿದ ರಾಹುಲ್ ಗಾಂಧಿ, ಇದನ್ನು ಸಶಸ್ತ್ರ ಪಡೆಗಳ ಹಿರಿಯ ರಕ್ಷಣಾ ಅಧಿಕಾರಿಗಳು ನಿರ್ಧರಿಸಬಹುದು ಎಂದು ಹೇಳಿದ ನಂತರ ಎಲ್‌ಎಸಿ (ಲಡಾಖ್ ಗಡಿ)ಯಲ್ಲಿ ಹೋರಾಡುತ್ತಿರುವ ಸೈನಿಕರ ವಿಷಯವನ್ನು ಚರ್ಚಿಸಲು ಮುಂದಾದರು.

ಇದನ್ನೂ ಓದಿ: 189 ದೇಶಗಳಲ್ಲಿ 131ನೇ ಸ್ಥಾನ: ಮಾನವ ಅಭಿವೃದ್ದಿ ಸೂಚ್ಯಂಕದಲ್ಲಿ ಮತ್ತೆರೆಡು ಸ್ಥಾನ ಕುಸಿದ ಭಾರತ!

ಈ ಸಮಯದಲ್ಲಿ ಸಮಿತಿಯ ಅಧ್ಯಕ್ಷ, ಬಿಜೆಪಿ ಸಂಸದ ಜುವಾಲ್ ಓರಮ್, ರಾಹುಲ್ ಗಾಂಧಿಯವರಿಗೆ ಮಾತನಾಡಲು ಅನುಮತಿಸಲಿಲ್ಲ ಹಾಗಾಗಿ ಅವರು ಸಭೆಯಿಂದ ಹೊರನಡೆದರು ಎಂದು ಮೂಲಗಳು ಮಾಹಿತಿ ನೀಡಿವೆ.

ರಾಹುಲ್ ಗಾಂಧಿ ಸಭೆಯನ್ನು ಸಮಯ ವ್ಯರ್ಥ ಎಂದು ಹೇಳಿ ಹೊರ ನಡೆಯುತ್ತಿದ್ದಂತೆ, ಅವರ ಹಿಂದೆಯೇ ಕಾಂಗ್ರೆಸ್ ಸದಸ್ಯ ರಾಜೀವ್ ಸತವ್ ಮತ್ತು ರೇವಂತ್ ರೆಡ್ಡಿ ಕೂಡ ಹೊರನಡೆದಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ಶಾಲಾ ಪಠ್ಯಪುಸ್ತಕದಲ್ಲಿ ಬ್ರಾಹ್ಮಣರ ಅವಹೇಳನ ಆರೋಪ: ಕ್ರಮಕ್ಕೆ ಸೂಚಿಸಿದ ಮುಖ್ಯಮಂತ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...