Homeಮುಖಪುಟರಕ್ಷಣಾ ಸ್ಥಾಯಿ ಸಮಿತಿಯ 14 ಸಭೆಗಳಲ್ಲಿ 2 ಕ್ಕೆ ಮಾತ್ರ ರಾಹುಲ್ ಭಾಗಿ: ಕೇಂದ್ರ ಸಚಿವ...

ರಕ್ಷಣಾ ಸ್ಥಾಯಿ ಸಮಿತಿಯ 14 ಸಭೆಗಳಲ್ಲಿ 2 ಕ್ಕೆ ಮಾತ್ರ ರಾಹುಲ್ ಭಾಗಿ: ಕೇಂದ್ರ ಸಚಿವ ಆರೋಪ

"ಸಬೆಗೆ ಹಾಜರಾಗದಿರುವುದು. ಚರ್ಚೆ ಮಾಡ ಬಯಸಿದ ವಿಷಯವನ್ನು ಪ್ರಸ್ತಾಪಿಸದಿರುವುದು, ನಂತರ 'ಪ್ರಮುಖ ವಿಷಯಗಳ' ಚರ್ಚೆ ಮಾಡುತ್ತಿಲ್ಲ ಎಂದು ದೂಷಿಸುವುದು"

- Advertisement -
- Advertisement -

‘ಕಳೆದ ಒಂದೂವರೆ ವರ್ಷಗಳಲ್ಲಿ ರಕ್ಷಣಾ ಸ್ಥಾಯಿ ಸಮಿತಿಯ 14 ಸಭೆಗಳಲ್ಲಿ ಕೇವಲ 2 ರಲ್ಲಿ ಮಾತ್ರ ರಾಹುಲ್ ಗಾಂಧಿ ಭಾಗವಗಹಿಸಿದ್ದಾರೆ’ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಆರೋಪಿಸಿದ್ದಾರೆ. ನಿನ್ನೆ ನಡೆದ ರಕ್ಷಣಾ ಸಂಸದೀಯ ಸಮಿತಿ ಸಭೆಯ ನಡುವೆಯೇ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಎದ್ದು ಹೊರ ನಡೆದಿದ್ದರು.

“ರಕ್ಷಣಾ ಸಂಸದೀಯ ಸಮಿತಿ ಸಭೆಯಲ್ಲಿ ಸೈನಿಕರನ್ನು ಹೇಗೆ ಉತ್ತಮವಾಗಿ ಸಜ್ಜುಗೊಳಿಸಬೇಕು ಎಂಬುದರ ಕುರಿತು ಚರ್ಚಿಸುವ ಬದಲು, ಸಶಸ್ತ್ರ ಪಡೆಗಳ ಸಮವಸ್ತ್ರಗಳ ಬಗ್ಗೆ ಚರ್ಚೆ ನಡೆಸುತ್ತಾ ಸಮಯವನ್ನು ವ್ಯರ್ಥ ಮಾಡಲಾಯಿತು” ಎಂದು ನಿನ್ನೆ ರಾಹುಲ್ ಗಾಂಧಿ ಆರೋಪಿಸಿದ್ದರು.

ಇದನ್ನೂ ಓದಿ: ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನದಲ್ಲಿ ಮೋದಿ ಪಾತ್ರವಿತ್ತು: ಬಿಜೆಪಿ ನಾಯಕನ ಹೇಳಿಕೆ ವೈರಲ್

ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, “ಕಳೆದ ಒಂದೂವರೆ ವರ್ಷಗಳಲ್ಲಿ ರಕ್ಷಣಾ ಸಂಸದೀಯ ಸ್ಥಾಯಿ ಸಮಿತಿಯ 14 ಸಭೆಗಳಲ್ಲಿ ಕೇವಲ 2 ರಲ್ಲಿ ಮಾತ್ರ ರಾಹುಲ್ ಗಾಂಧಿ ಭಾಗವಹಿಸಿದ್ದರು. ಸ್ವತಃ ಅವರೇ ಗೈರುಹಾಜರಾಗಿ ನಂತರ ಸರ್ಕಾರ ಎಲ್ಲಾ ಕಾರ್ಯವಿಧಾನಗಳನ್ನು ದೂಷಿಸುತ್ತಾರೆ. ಸಭೆಯನ್ನೂ ಪ್ರತಿಭಟಿಸಿ ಹೊರನಡೆಯುತ್ತಾರೆ. ಸ್ಥಾಯಿ ಸಮಿತಿ ಪ್ರತಿಭಟನಾ ಸ್ಥಳವಲ್ಲ” ಎಂದು ಹೇಳಿದ್ದಾರೆ ಎಂದು ಎಎನ್‌ಐ ಟ್ವೀಟ್ ಮಾಡಿದೆ.

ಇದನ್ನೂ ಓದಿ: ತೀವ್ರ ಚಳಿಗಾಳಿಯಿಂದಾಗಿ ಪಂಜಾಬ್- ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಸಾವು

ಇದನ್ನೂ ಓದಿ: ಸಿಐಡಿ ವಿಭಾಗದ ಡಿವೈಎಸ್ಪಿ ಲಕ್ಷ್ಮಿ(33) ಅಸಹಜ ಸಾವು

“ಸಭೆಗೆ ಗೈರಾಗುವುದು, ಅವರು ಚರ್ಚೆ ಮಾಡ ಬಯಸಿದ ವಿಷಯವನ್ನು ಬಹಿರಂಗಪಡಿಸದಿರುವುದು, ನಂತರ ‘ಪ್ರಮುಖ ವಿಷಯಗಳ’ ಚರ್ಚೆ ಮಾಡುತ್ತಿಲ್ಲ ಎಂದು ದೂಷಿಸುವುದು. ಇವು ಸಂಸತ್ತಿನ ಕಾರ್ಯವಿಧಾನಗಳು ಮತ್ತು ಸಾಂವಿಧಾನಿಕ ಸಂಸ್ಥೆಗಳಿಗೆ ಮಾಡಿದ ಅವಮಾನ. ಈ ಮನೋಭಾವವನ್ನು ನಾವು ಖಂಡಿಸುತ್ತೇವೆ” ಎಂದು ಆರೋಪಿಸಿದರು.

ಸಭೆಯಲ್ಲಿ ಭೂ ಸೇನೆ, ಜಲಸೇನೆ ಮತ್ತು ವಾಯುಸೇನೆಯ ಸಮವಸ್ತ್ರದ ಬಗ್ಗೆ ಸಮಿತಿ ಚರ್ಚಿಸುತ್ತಿದ್ದಾಗ ಮಧ್ಯಪ್ರವೇಶಿಸಿದ ರಾಹುಲ್ ಗಾಂಧಿ, ಇದನ್ನು ಸಶಸ್ತ್ರ ಪಡೆಗಳ ಹಿರಿಯ ರಕ್ಷಣಾ ಅಧಿಕಾರಿಗಳು ನಿರ್ಧರಿಸಬಹುದು ಎಂದು ಹೇಳಿದ ನಂತರ ಎಲ್‌ಎಸಿ (ಲಡಾಖ್ ಗಡಿ)ಯಲ್ಲಿ ಹೋರಾಡುತ್ತಿರುವ ಸೈನಿಕರ ವಿಷಯವನ್ನು ಚರ್ಚಿಸಲು ಮುಂದಾದರು.

ಇದನ್ನೂ ಓದಿ: 189 ದೇಶಗಳಲ್ಲಿ 131ನೇ ಸ್ಥಾನ: ಮಾನವ ಅಭಿವೃದ್ದಿ ಸೂಚ್ಯಂಕದಲ್ಲಿ ಮತ್ತೆರೆಡು ಸ್ಥಾನ ಕುಸಿದ ಭಾರತ!

ಈ ಸಮಯದಲ್ಲಿ ಸಮಿತಿಯ ಅಧ್ಯಕ್ಷ, ಬಿಜೆಪಿ ಸಂಸದ ಜುವಾಲ್ ಓರಮ್, ರಾಹುಲ್ ಗಾಂಧಿಯವರಿಗೆ ಮಾತನಾಡಲು ಅನುಮತಿಸಲಿಲ್ಲ ಹಾಗಾಗಿ ಅವರು ಸಭೆಯಿಂದ ಹೊರನಡೆದರು ಎಂದು ಮೂಲಗಳು ಮಾಹಿತಿ ನೀಡಿವೆ.

ರಾಹುಲ್ ಗಾಂಧಿ ಸಭೆಯನ್ನು ಸಮಯ ವ್ಯರ್ಥ ಎಂದು ಹೇಳಿ ಹೊರ ನಡೆಯುತ್ತಿದ್ದಂತೆ, ಅವರ ಹಿಂದೆಯೇ ಕಾಂಗ್ರೆಸ್ ಸದಸ್ಯ ರಾಜೀವ್ ಸತವ್ ಮತ್ತು ರೇವಂತ್ ರೆಡ್ಡಿ ಕೂಡ ಹೊರನಡೆದಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ಶಾಲಾ ಪಠ್ಯಪುಸ್ತಕದಲ್ಲಿ ಬ್ರಾಹ್ಮಣರ ಅವಹೇಳನ ಆರೋಪ: ಕ್ರಮಕ್ಕೆ ಸೂಚಿಸಿದ ಮುಖ್ಯಮಂತ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...