Homeಮುಖಪುಟರಕ್ಷಣಾ ಸ್ಥಾಯಿ ಸಮಿತಿಯ 14 ಸಭೆಗಳಲ್ಲಿ 2 ಕ್ಕೆ ಮಾತ್ರ ರಾಹುಲ್ ಭಾಗಿ: ಕೇಂದ್ರ ಸಚಿವ...

ರಕ್ಷಣಾ ಸ್ಥಾಯಿ ಸಮಿತಿಯ 14 ಸಭೆಗಳಲ್ಲಿ 2 ಕ್ಕೆ ಮಾತ್ರ ರಾಹುಲ್ ಭಾಗಿ: ಕೇಂದ್ರ ಸಚಿವ ಆರೋಪ

"ಸಬೆಗೆ ಹಾಜರಾಗದಿರುವುದು. ಚರ್ಚೆ ಮಾಡ ಬಯಸಿದ ವಿಷಯವನ್ನು ಪ್ರಸ್ತಾಪಿಸದಿರುವುದು, ನಂತರ 'ಪ್ರಮುಖ ವಿಷಯಗಳ' ಚರ್ಚೆ ಮಾಡುತ್ತಿಲ್ಲ ಎಂದು ದೂಷಿಸುವುದು"

- Advertisement -
- Advertisement -

‘ಕಳೆದ ಒಂದೂವರೆ ವರ್ಷಗಳಲ್ಲಿ ರಕ್ಷಣಾ ಸ್ಥಾಯಿ ಸಮಿತಿಯ 14 ಸಭೆಗಳಲ್ಲಿ ಕೇವಲ 2 ರಲ್ಲಿ ಮಾತ್ರ ರಾಹುಲ್ ಗಾಂಧಿ ಭಾಗವಗಹಿಸಿದ್ದಾರೆ’ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಆರೋಪಿಸಿದ್ದಾರೆ. ನಿನ್ನೆ ನಡೆದ ರಕ್ಷಣಾ ಸಂಸದೀಯ ಸಮಿತಿ ಸಭೆಯ ನಡುವೆಯೇ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಎದ್ದು ಹೊರ ನಡೆದಿದ್ದರು.

“ರಕ್ಷಣಾ ಸಂಸದೀಯ ಸಮಿತಿ ಸಭೆಯಲ್ಲಿ ಸೈನಿಕರನ್ನು ಹೇಗೆ ಉತ್ತಮವಾಗಿ ಸಜ್ಜುಗೊಳಿಸಬೇಕು ಎಂಬುದರ ಕುರಿತು ಚರ್ಚಿಸುವ ಬದಲು, ಸಶಸ್ತ್ರ ಪಡೆಗಳ ಸಮವಸ್ತ್ರಗಳ ಬಗ್ಗೆ ಚರ್ಚೆ ನಡೆಸುತ್ತಾ ಸಮಯವನ್ನು ವ್ಯರ್ಥ ಮಾಡಲಾಯಿತು” ಎಂದು ನಿನ್ನೆ ರಾಹುಲ್ ಗಾಂಧಿ ಆರೋಪಿಸಿದ್ದರು.

ಇದನ್ನೂ ಓದಿ: ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನದಲ್ಲಿ ಮೋದಿ ಪಾತ್ರವಿತ್ತು: ಬಿಜೆಪಿ ನಾಯಕನ ಹೇಳಿಕೆ ವೈರಲ್

ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, “ಕಳೆದ ಒಂದೂವರೆ ವರ್ಷಗಳಲ್ಲಿ ರಕ್ಷಣಾ ಸಂಸದೀಯ ಸ್ಥಾಯಿ ಸಮಿತಿಯ 14 ಸಭೆಗಳಲ್ಲಿ ಕೇವಲ 2 ರಲ್ಲಿ ಮಾತ್ರ ರಾಹುಲ್ ಗಾಂಧಿ ಭಾಗವಹಿಸಿದ್ದರು. ಸ್ವತಃ ಅವರೇ ಗೈರುಹಾಜರಾಗಿ ನಂತರ ಸರ್ಕಾರ ಎಲ್ಲಾ ಕಾರ್ಯವಿಧಾನಗಳನ್ನು ದೂಷಿಸುತ್ತಾರೆ. ಸಭೆಯನ್ನೂ ಪ್ರತಿಭಟಿಸಿ ಹೊರನಡೆಯುತ್ತಾರೆ. ಸ್ಥಾಯಿ ಸಮಿತಿ ಪ್ರತಿಭಟನಾ ಸ್ಥಳವಲ್ಲ” ಎಂದು ಹೇಳಿದ್ದಾರೆ ಎಂದು ಎಎನ್‌ಐ ಟ್ವೀಟ್ ಮಾಡಿದೆ.

ಇದನ್ನೂ ಓದಿ: ತೀವ್ರ ಚಳಿಗಾಳಿಯಿಂದಾಗಿ ಪಂಜಾಬ್- ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಸಾವು

ಇದನ್ನೂ ಓದಿ: ಸಿಐಡಿ ವಿಭಾಗದ ಡಿವೈಎಸ್ಪಿ ಲಕ್ಷ್ಮಿ(33) ಅಸಹಜ ಸಾವು

“ಸಭೆಗೆ ಗೈರಾಗುವುದು, ಅವರು ಚರ್ಚೆ ಮಾಡ ಬಯಸಿದ ವಿಷಯವನ್ನು ಬಹಿರಂಗಪಡಿಸದಿರುವುದು, ನಂತರ ‘ಪ್ರಮುಖ ವಿಷಯಗಳ’ ಚರ್ಚೆ ಮಾಡುತ್ತಿಲ್ಲ ಎಂದು ದೂಷಿಸುವುದು. ಇವು ಸಂಸತ್ತಿನ ಕಾರ್ಯವಿಧಾನಗಳು ಮತ್ತು ಸಾಂವಿಧಾನಿಕ ಸಂಸ್ಥೆಗಳಿಗೆ ಮಾಡಿದ ಅವಮಾನ. ಈ ಮನೋಭಾವವನ್ನು ನಾವು ಖಂಡಿಸುತ್ತೇವೆ” ಎಂದು ಆರೋಪಿಸಿದರು.

ಸಭೆಯಲ್ಲಿ ಭೂ ಸೇನೆ, ಜಲಸೇನೆ ಮತ್ತು ವಾಯುಸೇನೆಯ ಸಮವಸ್ತ್ರದ ಬಗ್ಗೆ ಸಮಿತಿ ಚರ್ಚಿಸುತ್ತಿದ್ದಾಗ ಮಧ್ಯಪ್ರವೇಶಿಸಿದ ರಾಹುಲ್ ಗಾಂಧಿ, ಇದನ್ನು ಸಶಸ್ತ್ರ ಪಡೆಗಳ ಹಿರಿಯ ರಕ್ಷಣಾ ಅಧಿಕಾರಿಗಳು ನಿರ್ಧರಿಸಬಹುದು ಎಂದು ಹೇಳಿದ ನಂತರ ಎಲ್‌ಎಸಿ (ಲಡಾಖ್ ಗಡಿ)ಯಲ್ಲಿ ಹೋರಾಡುತ್ತಿರುವ ಸೈನಿಕರ ವಿಷಯವನ್ನು ಚರ್ಚಿಸಲು ಮುಂದಾದರು.

ಇದನ್ನೂ ಓದಿ: 189 ದೇಶಗಳಲ್ಲಿ 131ನೇ ಸ್ಥಾನ: ಮಾನವ ಅಭಿವೃದ್ದಿ ಸೂಚ್ಯಂಕದಲ್ಲಿ ಮತ್ತೆರೆಡು ಸ್ಥಾನ ಕುಸಿದ ಭಾರತ!

ಈ ಸಮಯದಲ್ಲಿ ಸಮಿತಿಯ ಅಧ್ಯಕ್ಷ, ಬಿಜೆಪಿ ಸಂಸದ ಜುವಾಲ್ ಓರಮ್, ರಾಹುಲ್ ಗಾಂಧಿಯವರಿಗೆ ಮಾತನಾಡಲು ಅನುಮತಿಸಲಿಲ್ಲ ಹಾಗಾಗಿ ಅವರು ಸಭೆಯಿಂದ ಹೊರನಡೆದರು ಎಂದು ಮೂಲಗಳು ಮಾಹಿತಿ ನೀಡಿವೆ.

ರಾಹುಲ್ ಗಾಂಧಿ ಸಭೆಯನ್ನು ಸಮಯ ವ್ಯರ್ಥ ಎಂದು ಹೇಳಿ ಹೊರ ನಡೆಯುತ್ತಿದ್ದಂತೆ, ಅವರ ಹಿಂದೆಯೇ ಕಾಂಗ್ರೆಸ್ ಸದಸ್ಯ ರಾಜೀವ್ ಸತವ್ ಮತ್ತು ರೇವಂತ್ ರೆಡ್ಡಿ ಕೂಡ ಹೊರನಡೆದಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ಶಾಲಾ ಪಠ್ಯಪುಸ್ತಕದಲ್ಲಿ ಬ್ರಾಹ್ಮಣರ ಅವಹೇಳನ ಆರೋಪ: ಕ್ರಮಕ್ಕೆ ಸೂಚಿಸಿದ ಮುಖ್ಯಮಂತ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...