Homeಮುಖಪುಟರಾಹುಲ್‌ಗೆ 2 ವರ್ಷ ಜೈಲು ಶಿಕ್ಷೆ; ಲೋಕಸಭಾ ಸದಸ್ಯತ್ವ ಅನರ್ಹಗೊಳ್ಳುವುದೇ?

ರಾಹುಲ್‌ಗೆ 2 ವರ್ಷ ಜೈಲು ಶಿಕ್ಷೆ; ಲೋಕಸಭಾ ಸದಸ್ಯತ್ವ ಅನರ್ಹಗೊಳ್ಳುವುದೇ?

- Advertisement -
- Advertisement -

‘ಮೋದಿ ಸರ್‌ನೇಮ್‌‌’ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್‌ ಶಿಕ್ಷೆ ವಿಧಿಸಿದ ನಂತರ ಕಾಂಗ್ರೆಸ್ ನಾಯಕ, ವಯನಾಡ್ ಸಂಸದ ರಾಹುಲ್ ಗಾಂಧಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆಯೇ? ಎಂಬ ಪ್ರಶ್ನೆ ಉದ್ಭವಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ 2019ರಲ್ಲಿ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಸೂರತ್ ನ್ಯಾಯಾಲಯವು ತೀರ್ಪು ನೀಡಿದ್ದು, ಸಂಸದ ರಾಹುಲ್‌ ಅವರು ತಪ್ಪಿತಸ್ಥರೆಂದು ಗುರುತಿಸಿದೆ.

ಗುಜರಾತ್‌ನ ನ್ಯಾಯಾಲಯವು ರಾಹು‌ಲ್ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದು, ಆದರೆ ತಕ್ಷಣಕ್ಕೆ ಜಾರಿಯಾಗುವುದಿಲ್ಲ. ಐಪಿಸಿ ಸೆಕ್ಷನ್ 500 (ಮಾನನಷ್ಟ) ಅಡಿಯಲ್ಲಿ ರಾಹುಲ್ ಅವರನ್ನು ತಪ್ಪಿತಸ್ಥರು ಎಂದು ಗುರುತಿಸಲಾಗಿದೆ. ಎರಡು ವರ್ಷಗಳವರೆಗೆ ಸರಳ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಬಹುದು ಎಂದು ಕೋರ್ಟ್ ಹೇಳಿದೆ.

ಸೂರತ್ ನ್ಯಾಯಾಲಯವು ರಾಹುಲ್‌ ಅವರ ಶಿಕ್ಷೆಯನ್ನು 30 ದಿನಗಳ ಕಾಲ ಅಮಾನತುಗೊಳಿಸಿದ್ದು, ಅವರ ವಕೀಲರ ತಂಡದಲ್ಲಿನ ಮನವಿಯ ಆಧಾರದಲ್ಲಿ ಈ ತೀರ್ಪನ್ನು ಪ್ರಶ್ನಿಸಲು ಅವಕಾಶ ನೀಡಲಾಗಿದೆ.

2013ರಲ್ಲಿ ಶಿಕ್ಷೆಗೊಳಗಾದ ಸಂಸದರಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಅನ್ವಯ ರಾಹುಲ್ ಅವರು ಲೋಕಸಭಾ ಸದಸ್ಯತ್ವವನ್ನು ಕಳೆದುಕೊಳ್ಳುತ್ತಾರೆಯೇ ಎಂಬ ಊಹಾಪೋಹಗಳು ಹಬ್ಬಿವೆ. (ಕುತೂಹಲಕಾರಿ ಸಂಗತಿಯೆಂದರೆ ಸುಪ್ರೀಂಕೋರ್ಟ್‌ನ ತೀರ್ಮಾನವನ್ನು ರದ್ದುಗೊಳಿಸುವ ಸುಗ್ರೀವಾಜ್ಞೆಯನ್ನು ವಿರೋಧಿಸಿದ್ದ ರಾಹುಲ್‌, ತನ್ನದೇ ಪಕ್ಷದ ನಿರ್ಧಾರವನ್ನು ಟೀಕಿಸಿದ್ದರು.) ಆದಾಗ್ಯೂ, ಈ ಶಿಕ್ಷೆಯನ್ನು ತಡೆಯಲು ಉನ್ನತ ನ್ಯಾಯಾಲಯದ ಮೆಟ್ಟಿಲೇರಲು ರಾಹುಲ್ ಅವರಿಗೆ ಅವಕಾಶವಿದೆ.

ರಾಹುಲ್ ಅವರ ಅನರ್ಹತೆಯು ಒಂದು ತಿಂಗಳ ನಂತರ ಪ್ರಾರಂಭವಾಗಲಿದೆ, ಆ ಅವಧಿಯೊಳಗೆ ಅವರು ಮೇಲ್ಮನವಿ ಸಲ್ಲಿಸಬಹುದು.

ಕ್ರಿಮಿನಲ್ ಮೊಕದ್ದಮೆಯಲ್ಲಿ ಶಿಕ್ಷೆಯಾಗಿರುವ ಕಾರಣ ರಾಹುಲ್ ಅವರು ನೇರವಾಗಿ ಉಚ್ಚ ನ್ಯಾಯಾಲಯ ಅಥವಾ ಸರ್ವೊಚ್ಚ ನ್ಯಾಯಾಲಯವನ್ನು ಸಂಪರ್ಕಿಸಲು ಸಾಧ್ಯವಿಲ್ಲ. “ಸೂರತ್ ನ್ಯಾಯಾಲಯದ ತೀರ್ಪಿನಿಂದಾಗಿ ದೊಡ್ಡ ಸಾರ್ವಜನಿಕ ಹಿತಾಸಕ್ತಿಗಳಿಗೆ ಹಾನಿಯಾಗುತ್ತದೆ ಎಂಬ ಕಾರಣಕ್ಕಾಗಿ ಉನ್ನತ ನ್ಯಾಯಾಂಗವು ಮಧ್ಯಪ್ರವೇಶಿಸಬೇಕೆಂದು ಮೂರನೇ ವ್ಯಕ್ತಿಯೊಬ್ಬರು ಮುಂದಾಗಬಹುದು.”

ಮೊದಲನೆಯದಾಗಿ, 1951ರ ಜನತಾ ಪ್ರಾತಿನಿಧ್ಯ ಕಾಯಿದೆಯ ಸೆಕ್ಷನ್ 8(1) ರಲ್ಲಿ ಅಪರಾಧವನ್ನು ಪಟ್ಟಿ ಮಾಡಿದ್ದರೆ ಪ್ರಶ್ನೆ ಉದ್ಭವಿಸುತ್ತದೆ. ಈ ಕಾನೂನು ಲಂಚ ಮತ್ತು ಅನಗತ್ಯ ಪ್ರಭಾವದಂತಹ ಅಪರಾಧಗಳನ್ನು ಒಳಗೊಳ್ಳುತ್ತದೆ. ಮಾನನಷ್ಟವನ್ನು ಈ ವಿಭಾಗದಲ್ಲಿ ಸೇರಿಸಲಾಗಿಲ್ಲ.

ಎರಡನೆಯದಾಗಿ, ಒಬ್ಬ ಜನಪ್ರತಿನಿಧಿಯು ಇತರ ಅಪರಾಧಗಳಲ್ಲಿ ತಪ್ಪಿತಸ್ಥನಾಗಿದ್ದರೆ ಮತ್ತು ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದರೆ ಸೆಕ್ಷನ್ 8(3) ಪ್ರಕಾರ ಸಂಸದರನ್ನು ಅನರ್ಹಗೊಳಿಸಬಹುದು.

ಸೆಕ್ಷನ್ 8(4)ರ ಪ್ರಕಾರ ಅನರ್ಹತೆಯು ಅಪರಾಧ ನಿರ್ಣಯದ ದಿನಾಂಕದಿಂದ ‘ಮೂರು ತಿಂಗಳುಗಳು ಕಳೆದ ನಂತರ’ ಮಾತ್ರ ಜಾರಿಗೆ ಬರುತ್ತದೆ.

ಇದರರ್ಥ ಮೇಲ್ಮನವಿ ಸಲ್ಲಿಸುವುದು ಸಾಕಾಗುವುದಿಲ್ಲ. ಆದರೆ ಶಿಕ್ಷೆಗೊಳಗಾದ ಸಂಸದ ಅಥವಾ ಶಾಸಕರು ವಿಚಾರಣಾ ನ್ಯಾಯಾಲಯದ ಶಿಕ್ಷೆಗೆ ವಿರುದ್ಧವಾಗಿ ನಿರ್ದಿಷ್ಟ ತಡೆಯಾಜ್ಞೆಯನ್ನು ಪಡೆದುಕೊಳ್ಳಬೇಕಾಗುತ್ತದೆ.

ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 389ರ ಪ್ರಕಾರ ಮೇಲ್ಮನವಿಯು ಬಾಕಿ ಉಳಿದಿರುವಾಗ ಮೇಲ್ಮನವಿ ನ್ಯಾಯಾಲಯವು ಅಪರಾಧಿಯ ಶಿಕ್ಷೆಯನ್ನು ಅಮಾನತುಗೊಳಿಸಬಹುದು.

2013ರ ‘ಲಿಲಿ ಥಾಮಸ್ ವಿ ಯೂನಿಯನ್ ಆಫ್ ಇಂಡಿಯಾ’ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್, ಸೆಕ್ಷನ್ 8(4) ಅನ್ನು ರದ್ದುಗೊಳಿಸಿತು. ಸಂಸದರು ಮತ್ತು ಶಾಸಕರ ಅಪರಾಧಗಳಿಗೆ ಶಿಕ್ಷೆಯಾದರೆ, ಮೇಲ್ಮನವಿ ಸಲ್ಲಿಸಲು ಮೂರು ತಿಂಗಳ ಸಮಯವನ್ನು ನೀಡದೆ ತಕ್ಷಣವೇ ಅವರ ಸ್ಥಾನದಿಂದ ಅನರ್ಹಗೊಳಿಸಲಾಗುವುದು ಎಂದು ಕೋರ್ಟ್ ಹೇಳಿತು.

ಅದೇ ವರ್ಷದಲ್ಲಿ, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವು ತೀರ್ಪನ್ನು ರದ್ದುಗೊಳಿಸಲು ಮತ್ತು ಸೆಕ್ಷನ್ 8 (4) ಅನ್ನು ಉಳಿಸಿಕೊಳ್ಳಲು ಪ್ರಯತ್ನಿಸಿತು. ಆದರೆ ಯುಪಿಎಯ ಸುಗ್ರೀವಾಜ್ಞೆಯನ್ನು ವಿರೋಧಿಸಿದ ರಾಹುಲ್ ಗಾಂಧಿ, “ಇದು ಕಿತ್ತು ಬಿಸಾಡಬೇಕಾದ ಅಸಂಬದ್ಧ ಸಂಗತಿ” ಎಂದಿದ್ದರು.

ಸುಪ್ರೀಂ ಕೋರ್ಟ್ ವಕೀಲ ಉಪಮನ್ಯು ಹಜಾರಿಕಾ ‘ಹಿಂದೂಸ್ತಾನ್ ಟೈಮ್ಸ್‌’ಗೆ ಪ್ರತಿಕ್ರಿಯಿಸಿದ್ದು, “ಈ 30 ದಿನಗಳು ಅವರಿಗೆ ನಿರ್ಣಾಯಕ. ಸೂರತ್ ಜಿಲ್ಲಾ ನ್ಯಾಯಾಲಯದ ಆದೇಶವನ್ನು ತಡೆಹಿಡಿಯಲು ಅಥವಾ ರದ್ದುಗೊಳಿಸಲು ಅವರು ಉನ್ನತ ನ್ಯಾಯಾಲಯದ ಮೆಟ್ಟಿಲೇರಿದರೆ ಅವರು ತಮ್ಮ ಲೋಕಸಭಾ ಸ್ಥಾನವನ್ನು ಉಳಿಸಿಕೊಳ್ಳಬಹುದು” ಎಂದು ವಿವರಿಸಿದ್ದಾರೆ.

ಇದನ್ನೂ ಓದಿರಿ: ಚೇತನ್‌ ಬಂಧನ; ವಾಕ್ ಸ್ವಾತಂತ್ರ್ಯದ ಹರಣವೆಂದು ಜನಾಕ್ರೋಶ

ಸೂರತ್ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ನೀಡಲು ಕಾಂಗ್ರೆಸ್‌ನ ಕಾನೂನು ತಂಡವು ಯಾವುದೇ ಸಮಯವನ್ನು ವ್ಯರ್ಥ ಮಾಡುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ನ ಮತ್ತೊಬ್ಬ ವಕೀಲ ಮುಹಮ್ಮದ್ ಖಾನ್ ಹೇಳಿದ್ದಾರೆ.

ಅಂತಹ ಪ್ರಕರಣಗಳಲ್ಲಿ ಮೇಲ್ಮನವಿಯನ್ನು ಸೆಷನ್ಸ್‌ ನ್ಯಾಯಾಲಯದಲ್ಲಿ ಸಲ್ಲಿಸಬೇಕಾಗುತ್ತದೆ. ಅಂದರೆ ಅವರು ತಾವಾಗಿಯೇ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಸಾಧ್ಯವಿಲ್ಲ.

ಪ್ರಧಾನಿ ಮೋದಿ ಬಗ್ಗೆ ರಾಹುಲ್ ಗಾಂಧಿ ಹೇಳಿದ್ದೇನು?

‘ಮೋದಿ’ ಎಂಬ ಸರ್‌ನೇಮ್‌ (ಉಪನಾಮ) ಬಳಸಿದ್ದಕ್ಕಾಗಿ 2019ರಲ್ಲಿ ರಾಹುಲ್‌ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಿಜೆಪಿ ಶಾಸಕ ಮತ್ತು ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ದೂರು ನೀಡಿದ್ದರು. ಕರ್ನಾಟಕದಲ್ಲಿ ಚುನಾವಣಾ ಪೂರ್ವ ರ್‍ಯಾಲಿಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, “ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಸಾಮಾನ್ಯವಾಗಿ ಇರುವುದು ಹೇಗೆ?” ಎಂದು ಪ್ರಶ್ನಿಸಿದ್ದರು. ಇದು ವಿವಾದಕ್ಕೆ ಗುರಿಯಾಗಿತ್ತು.

ವರದಿ ಕೃಪೆ: ಮಿಂಟ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...