Homeಚಳವಳಿರೈತರ ಹತ್ಯೆ: ರಾಹುಲ್‌, ಪ್ರಿಯಾಂಕಾ ಭೇಟಿಗೆ ಕೊನೆಗೂ ಅವಕಾಶ ನೀಡಿದ ಯುಪಿ ಸರ್ಕಾರ

ರೈತರ ಹತ್ಯೆ: ರಾಹುಲ್‌, ಪ್ರಿಯಾಂಕಾ ಭೇಟಿಗೆ ಕೊನೆಗೂ ಅವಕಾಶ ನೀಡಿದ ಯುಪಿ ಸರ್ಕಾರ

- Advertisement -
- Advertisement -

ರೈತರ ಹತ್ಯೆ ನಡೆದ ಉತ್ತರ ಪ್ರದೇಶದ ಲಖಿಂಪುರ್‌ ಖೇರಿಗೆ ಕಾಂಗ್ರೆಸ್ ನಾಯಕರಾದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ಪ್ರವೇಶಿಸದಂತೆ ತಡೆಯೊಡ್ಡಿದ್ದ ಉತ್ತರ ಪ್ರದೇಶ ಸರ್ಕಾರ ಕೊನೆಗೂ ಅವಕಾಶ ನೀಡಿದೆ.

ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಇತರರು ಮೂವರು ಘಟನಾ ಸ್ಥಳಕ್ಕೆ ಭೇಟಿ ನೀಡಬಹುದು ಎಂದು ಉತ್ತರ ಪ್ರದೇಶದ ಗೃಹ ಇಲಾಖೆ ಮಧ್ಯಾಹ್ನ ಸ್ಪಷ್ಟಪಡಿಸಿದೆ.

ಸೋಮವಾರ ಸ್ಥಳಕ್ಕೆ ಹೊರಟಿದ್ದ ಪ್ರಿಯಾಂಕಾ ಗಾಂಧಿಯವರನ್ನು ಯುಪಿ ಸರ್ಕಾರ ತಡೆದು ಗೃಹಬಂಧನದಲ್ಲಿ ಇರಿಸಿತ್ತು. ಇದನ್ನು ಪ್ರಿಯಾಂಕಾ ಗಾಂಧಿ ಅವರು ಸೇರಿದಂತೆ ಇತರ ನಾಯಕರು “ಅಕ್ರಮ ಬಂಧನ” ಎಂದು ಟೀಕಿಸಿದ್ದರು.

ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಿಯೋಗವು ಲಖಿಂಪುರ್ ಖೇರಿಗೆ ಭೇಟಿ ನೀಡಲು ಉತ್ತರ ಪ್ರದೇಶ ಸರ್ಕಾರ ಅನುಮತಿ ನಿರಾಕರಿಸಿತ್ತು. ಭಾನುವಾರ ನಡೆದ ಹಿಂಸಾಚಾರದಲ್ಲಿ ಮೃತಪಟ್ಟ ಎಂಟು ಜನರ ಪೈಕಿ ನಾಲ್ವರು ರೈತರ ಕುಟುಂಬ ಸದಸ್ಯರನ್ನು ಭೇಟಿಯಾಗಲು ಕಾಂಗ್ರೆಸ್ ನಿಯೋಗ ಹೊರಟಿತ್ತು.

ಲಖಿಂಪುರ್ ಖೇರಿಯಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ಹಾಕಲಾಗಿದೆ. ಇದರ ಅಡಿಯಲ್ಲಿ ಅನುಮತಿ ನಿರಾಕರಿಸಲಾಗಿದೆ ಎಂದು ಹೇಳಲಾಗಿತ್ತು. ಲಖಿಂಪುರ್ ಖೇರಿಯ ಜಿಲ್ಲಾ ಕೇಂದ್ರದಿಂದ 70 ಕಿಮೀ ದೂರದಲ್ಲಿರುವ ಟಿಕುನಿಯಾಕ್ಕೆ ಪ್ರತಿಪಕ್ಷ ನಾಯಕರು ಹೋಗುವುದನ್ನು ತಡೆಯಲು ಉತ್ತರ ಪ್ರದೇಶ ಸರ್ಕಾರವು ಬಿಗಿ ಬಂದೋಬಸ್ತ್ ಮತ್ತು ಪೊಲೀಸರನ್ನು ನಿಯೋಜಿಸಿದೆ.

ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ, ಛತ್ತೀಸ್‌ಘಡದ ಮುಖ್ಯಮಂತ್ರಿ ಭೂಪೇಶ್‌ ಭಾಗೇಲ್‌ ಮತ್ತು ಪಂಜಾಬ್‌ ಮುಖ್ಯಮಂತ್ರಿ ಚರಣ್‌ಜಿತ್‌ ಚನ್ನಿ, ಹಿರಿಯ ನಾಯಕ ಕೆ.ಸಿ.ವೇಣುಗೋಪಲ್‌ ಮತ್ತು ಸಚಿನ್‌ ಪೈಲೆಟ್‌ ಅವರು ಸ್ಥಳಕ್ಕೆ ಹೊರಟಾಗ ದೆಹಲಿ-ಲಕ್ನೋ ವಿಮಾನವನ್ನು ಹತ್ತದಂತೆ ಬುಧವಾರ ಬೆಳಿಗ್ಗೆಯೂ ತಡೆಯಲಾಗಿತ್ತು. ಬುಧವಾರ ಬೆಳಿಗ್ಗೆ ನವದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಹುಲ್ ಗಾಂಧಿ ಪತ್ರಿಕಾಗೋಷ್ಠಿ ನಡೆಸಿದ್ದರು.

“ಹಿಂದೆ ಪ್ರಜಾಪ್ರಭುತ್ವವಿತ್ತು, (ಈಗ) ಭಾರತದಲ್ಲಿ ಸರ್ವಾಧಿಕಾರವಿದೆ. ರಾಜಕಾರಣಿಗಳು ಉತ್ತರ ಪ್ರದೇಶಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ. ನಾವು ಉತ್ತರ ಪ್ರದೇಶಕ್ಕೆ ಹೋಗಲು ಸಾಧ್ಯವಿಲ್ಲ ಎಂದು ನಿನ್ನೆಯಿಂದ ಹೇಳಲಾಗುತ್ತಿದೆ” ಎಂದು ರಾಹುಲ್‌ ಗಾಂಧಿ ಟೀಕಿಸಿದ್ದರು.

ಮಂಗಳವಾರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ದ ನಾಯಕರು ಲಖಿಂಪುರ ಖೇರಿಗೆ ಭೇಟಿ ನೀಡಿದ್ದ ಹಿನ್ನೆಲೆಯಲ್ಲಿ ಮೃತ ರೈತರ ಕುಟುಂಬಗಳನ್ನು ಭೇಟಿಯಾಗಲು ಲಖಿಂಪುರ್‌ ಖೇರಿಗೆ ಕಾಂಗ್ರೆಸ್ ನಿಯೋಗ ಹೊರಟಿತ್ತು.

“ಸೆಕ್ಷನ್ 144 ಜಾರಿಯಿದ್ದರೂ ಮೂರು ಜನರ ತಂಡ ಹೋಗಬಹುದು. ಸೆಕ್ಷನ್ 144 ನಲ್ಲಿ 5 ಜನರ ತಂಡ ಹೋಗಬಾರದು. ಇದರಿಂದಾಗಿ ನಾವು ಪತ್ರ ಬರೆದಿದ್ದೇವೆ. ಬೇರೆ ಪಕ್ಷದವರಿಗೆ ಅನುಮತಿ ನೀಡಲಾಗುತ್ತಿದೆ. ನಮ್ಮನ್ನು ಮಾತ್ರ ತಡೆಯಲಾಗುತ್ತಿದೆ. ನಾವೇನು ತಪ್ಪು ಮಾಡಿದ್ದೇವೆ..?” ಎಂದು ಪ್ರಶ್ನಿಸಿದ್ದರು.

“ನಾವು ವಿರೋಧ ಪಕ್ಷದವರು. ನಾವು ಸರ್ಕಾರದ ಮೇಲೆ ಒತ್ತಡ ಹಾಕಬೇಕು. ಹತ್ರಾಸ್‌ನಲ್ಲಿ ನಾವು ಒತ್ತಡ ಹಾಕಿದ ಕಾರಣಕ್ಕೆ ಅಲ್ಲಿ ತನಿಖೆ ಆರಂಭವಾಯಿತು. ಇದರಿಂದಾಗಿ ರೈತರ ವಿಷಯದಲ್ಲಿಯೂ ನಾವು ಒತ್ತಡ ಹಾಕುತ್ತಿದ್ದೇವೆ. ರೈತರನ್ನು ಕೊಲೆ ಮಾಡಲಾಗಿದೆ, ಅವರಿಗೆ ಅನ್ಯಾಯವಾಗಿದೆ. ನಿಜ ಹೇಳಬೇಕೆಂದರೆ ಇದು ನಿಮ್ಮ (ಮಾಧ್ಯಮ) ಕೆಲಸ. ನೀವು ನಿಮ್ಮ ಜವಾಬ್ದಾರಿ ಮರೆತು ಕುಳಿತಿದ್ದಿರಿ ಅದಕ್ಕೆ ನಾವು ಮಾಡುತ್ತಿದ್ದೆವೆ” ಎಂದು ಮಾಧ್ಯಮದವರ ವಿರುದ್ದ ಕಿಡಿ ಕಾರಿದ್ದರು.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಸೀತಾಪುರದಲ್ಲಿ 10 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪ್ರಿಯಾಂಕಾ ಗಾಂಧಿಯನ್ನು ಅತಿಥಿ ಗೃಹದಲ್ಲಿ ಬಂಧನದಲ್ಲಿರಿಸಲಾಗಿದೆ. ಪ್ರಿಯಾಂಕಾ, ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು, ಪಕ್ಷದ ನಾಯಕ ದೀಪೇಂದ್ರ ಹೂಡಾ ಮತ್ತು ಇತರರ ವಿರುದ್ಧ  (ಸಿಆರ್‌ಪಿಸಿ) ಸೆಕ್ಷನ್ 151, 107, 116 ರ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದು ಉಲ್ಲೇಖನೀಯ. ಈ ಎಲ್ಲ ಬೆಳವಣಿಗೆಗಳ ನಡುವೆ ಅಂತಿಮವಾಗಿ ಕಾಂಗ್ರೆಸ್ ನಾಯಕರು ಸ್ಥಳಕ್ಕೆ ತೆರಳಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿರಿ: ರೈತರ ಹತ್ಯೆಯಲ್ಲಿ ಸಚಿವ ‘ಅಜಯ್‌ ಮಿಶ್ರಾ’‍ ಹೆಸರು: ಯುಪಿ ಬ್ರಾಹ್ಮಣ ಪ್ರಾತಿನಿಧ್ಯಕ್ಕೆ ಸಂಕಷ್ಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...