Homeಚಳವಳಿರೈತರ ಹತ್ಯೆ: ರಾಹುಲ್‌, ಪ್ರಿಯಾಂಕಾ ಭೇಟಿಗೆ ಕೊನೆಗೂ ಅವಕಾಶ ನೀಡಿದ ಯುಪಿ ಸರ್ಕಾರ

ರೈತರ ಹತ್ಯೆ: ರಾಹುಲ್‌, ಪ್ರಿಯಾಂಕಾ ಭೇಟಿಗೆ ಕೊನೆಗೂ ಅವಕಾಶ ನೀಡಿದ ಯುಪಿ ಸರ್ಕಾರ

- Advertisement -
- Advertisement -

ರೈತರ ಹತ್ಯೆ ನಡೆದ ಉತ್ತರ ಪ್ರದೇಶದ ಲಖಿಂಪುರ್‌ ಖೇರಿಗೆ ಕಾಂಗ್ರೆಸ್ ನಾಯಕರಾದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ಪ್ರವೇಶಿಸದಂತೆ ತಡೆಯೊಡ್ಡಿದ್ದ ಉತ್ತರ ಪ್ರದೇಶ ಸರ್ಕಾರ ಕೊನೆಗೂ ಅವಕಾಶ ನೀಡಿದೆ.

ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಇತರರು ಮೂವರು ಘಟನಾ ಸ್ಥಳಕ್ಕೆ ಭೇಟಿ ನೀಡಬಹುದು ಎಂದು ಉತ್ತರ ಪ್ರದೇಶದ ಗೃಹ ಇಲಾಖೆ ಮಧ್ಯಾಹ್ನ ಸ್ಪಷ್ಟಪಡಿಸಿದೆ.

ಸೋಮವಾರ ಸ್ಥಳಕ್ಕೆ ಹೊರಟಿದ್ದ ಪ್ರಿಯಾಂಕಾ ಗಾಂಧಿಯವರನ್ನು ಯುಪಿ ಸರ್ಕಾರ ತಡೆದು ಗೃಹಬಂಧನದಲ್ಲಿ ಇರಿಸಿತ್ತು. ಇದನ್ನು ಪ್ರಿಯಾಂಕಾ ಗಾಂಧಿ ಅವರು ಸೇರಿದಂತೆ ಇತರ ನಾಯಕರು “ಅಕ್ರಮ ಬಂಧನ” ಎಂದು ಟೀಕಿಸಿದ್ದರು.

ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಿಯೋಗವು ಲಖಿಂಪುರ್ ಖೇರಿಗೆ ಭೇಟಿ ನೀಡಲು ಉತ್ತರ ಪ್ರದೇಶ ಸರ್ಕಾರ ಅನುಮತಿ ನಿರಾಕರಿಸಿತ್ತು. ಭಾನುವಾರ ನಡೆದ ಹಿಂಸಾಚಾರದಲ್ಲಿ ಮೃತಪಟ್ಟ ಎಂಟು ಜನರ ಪೈಕಿ ನಾಲ್ವರು ರೈತರ ಕುಟುಂಬ ಸದಸ್ಯರನ್ನು ಭೇಟಿಯಾಗಲು ಕಾಂಗ್ರೆಸ್ ನಿಯೋಗ ಹೊರಟಿತ್ತು.

ಲಖಿಂಪುರ್ ಖೇರಿಯಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ಹಾಕಲಾಗಿದೆ. ಇದರ ಅಡಿಯಲ್ಲಿ ಅನುಮತಿ ನಿರಾಕರಿಸಲಾಗಿದೆ ಎಂದು ಹೇಳಲಾಗಿತ್ತು. ಲಖಿಂಪುರ್ ಖೇರಿಯ ಜಿಲ್ಲಾ ಕೇಂದ್ರದಿಂದ 70 ಕಿಮೀ ದೂರದಲ್ಲಿರುವ ಟಿಕುನಿಯಾಕ್ಕೆ ಪ್ರತಿಪಕ್ಷ ನಾಯಕರು ಹೋಗುವುದನ್ನು ತಡೆಯಲು ಉತ್ತರ ಪ್ರದೇಶ ಸರ್ಕಾರವು ಬಿಗಿ ಬಂದೋಬಸ್ತ್ ಮತ್ತು ಪೊಲೀಸರನ್ನು ನಿಯೋಜಿಸಿದೆ.

ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ, ಛತ್ತೀಸ್‌ಘಡದ ಮುಖ್ಯಮಂತ್ರಿ ಭೂಪೇಶ್‌ ಭಾಗೇಲ್‌ ಮತ್ತು ಪಂಜಾಬ್‌ ಮುಖ್ಯಮಂತ್ರಿ ಚರಣ್‌ಜಿತ್‌ ಚನ್ನಿ, ಹಿರಿಯ ನಾಯಕ ಕೆ.ಸಿ.ವೇಣುಗೋಪಲ್‌ ಮತ್ತು ಸಚಿನ್‌ ಪೈಲೆಟ್‌ ಅವರು ಸ್ಥಳಕ್ಕೆ ಹೊರಟಾಗ ದೆಹಲಿ-ಲಕ್ನೋ ವಿಮಾನವನ್ನು ಹತ್ತದಂತೆ ಬುಧವಾರ ಬೆಳಿಗ್ಗೆಯೂ ತಡೆಯಲಾಗಿತ್ತು. ಬುಧವಾರ ಬೆಳಿಗ್ಗೆ ನವದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಹುಲ್ ಗಾಂಧಿ ಪತ್ರಿಕಾಗೋಷ್ಠಿ ನಡೆಸಿದ್ದರು.

“ಹಿಂದೆ ಪ್ರಜಾಪ್ರಭುತ್ವವಿತ್ತು, (ಈಗ) ಭಾರತದಲ್ಲಿ ಸರ್ವಾಧಿಕಾರವಿದೆ. ರಾಜಕಾರಣಿಗಳು ಉತ್ತರ ಪ್ರದೇಶಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ. ನಾವು ಉತ್ತರ ಪ್ರದೇಶಕ್ಕೆ ಹೋಗಲು ಸಾಧ್ಯವಿಲ್ಲ ಎಂದು ನಿನ್ನೆಯಿಂದ ಹೇಳಲಾಗುತ್ತಿದೆ” ಎಂದು ರಾಹುಲ್‌ ಗಾಂಧಿ ಟೀಕಿಸಿದ್ದರು.

ಮಂಗಳವಾರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ದ ನಾಯಕರು ಲಖಿಂಪುರ ಖೇರಿಗೆ ಭೇಟಿ ನೀಡಿದ್ದ ಹಿನ್ನೆಲೆಯಲ್ಲಿ ಮೃತ ರೈತರ ಕುಟುಂಬಗಳನ್ನು ಭೇಟಿಯಾಗಲು ಲಖಿಂಪುರ್‌ ಖೇರಿಗೆ ಕಾಂಗ್ರೆಸ್ ನಿಯೋಗ ಹೊರಟಿತ್ತು.

“ಸೆಕ್ಷನ್ 144 ಜಾರಿಯಿದ್ದರೂ ಮೂರು ಜನರ ತಂಡ ಹೋಗಬಹುದು. ಸೆಕ್ಷನ್ 144 ನಲ್ಲಿ 5 ಜನರ ತಂಡ ಹೋಗಬಾರದು. ಇದರಿಂದಾಗಿ ನಾವು ಪತ್ರ ಬರೆದಿದ್ದೇವೆ. ಬೇರೆ ಪಕ್ಷದವರಿಗೆ ಅನುಮತಿ ನೀಡಲಾಗುತ್ತಿದೆ. ನಮ್ಮನ್ನು ಮಾತ್ರ ತಡೆಯಲಾಗುತ್ತಿದೆ. ನಾವೇನು ತಪ್ಪು ಮಾಡಿದ್ದೇವೆ..?” ಎಂದು ಪ್ರಶ್ನಿಸಿದ್ದರು.

“ನಾವು ವಿರೋಧ ಪಕ್ಷದವರು. ನಾವು ಸರ್ಕಾರದ ಮೇಲೆ ಒತ್ತಡ ಹಾಕಬೇಕು. ಹತ್ರಾಸ್‌ನಲ್ಲಿ ನಾವು ಒತ್ತಡ ಹಾಕಿದ ಕಾರಣಕ್ಕೆ ಅಲ್ಲಿ ತನಿಖೆ ಆರಂಭವಾಯಿತು. ಇದರಿಂದಾಗಿ ರೈತರ ವಿಷಯದಲ್ಲಿಯೂ ನಾವು ಒತ್ತಡ ಹಾಕುತ್ತಿದ್ದೇವೆ. ರೈತರನ್ನು ಕೊಲೆ ಮಾಡಲಾಗಿದೆ, ಅವರಿಗೆ ಅನ್ಯಾಯವಾಗಿದೆ. ನಿಜ ಹೇಳಬೇಕೆಂದರೆ ಇದು ನಿಮ್ಮ (ಮಾಧ್ಯಮ) ಕೆಲಸ. ನೀವು ನಿಮ್ಮ ಜವಾಬ್ದಾರಿ ಮರೆತು ಕುಳಿತಿದ್ದಿರಿ ಅದಕ್ಕೆ ನಾವು ಮಾಡುತ್ತಿದ್ದೆವೆ” ಎಂದು ಮಾಧ್ಯಮದವರ ವಿರುದ್ದ ಕಿಡಿ ಕಾರಿದ್ದರು.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಸೀತಾಪುರದಲ್ಲಿ 10 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪ್ರಿಯಾಂಕಾ ಗಾಂಧಿಯನ್ನು ಅತಿಥಿ ಗೃಹದಲ್ಲಿ ಬಂಧನದಲ್ಲಿರಿಸಲಾಗಿದೆ. ಪ್ರಿಯಾಂಕಾ, ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು, ಪಕ್ಷದ ನಾಯಕ ದೀಪೇಂದ್ರ ಹೂಡಾ ಮತ್ತು ಇತರರ ವಿರುದ್ಧ  (ಸಿಆರ್‌ಪಿಸಿ) ಸೆಕ್ಷನ್ 151, 107, 116 ರ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದು ಉಲ್ಲೇಖನೀಯ. ಈ ಎಲ್ಲ ಬೆಳವಣಿಗೆಗಳ ನಡುವೆ ಅಂತಿಮವಾಗಿ ಕಾಂಗ್ರೆಸ್ ನಾಯಕರು ಸ್ಥಳಕ್ಕೆ ತೆರಳಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿರಿ: ರೈತರ ಹತ್ಯೆಯಲ್ಲಿ ಸಚಿವ ‘ಅಜಯ್‌ ಮಿಶ್ರಾ’‍ ಹೆಸರು: ಯುಪಿ ಬ್ರಾಹ್ಮಣ ಪ್ರಾತಿನಿಧ್ಯಕ್ಕೆ ಸಂಕಷ್ಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...