Homeಮುಖಪುಟಲಂಡನ್‌ ಭಾಷಣ ಸಂಬಂಧ ಕ್ಷಮೆಯಾಚಿಸಿದ್ದರೆ ರಾಹುಲ್ ಅನರ್ಹರಾಗುತ್ತಿರಲಿಲ್ಲ; ಕೇಂದ್ರ ಸಚಿವ

ಲಂಡನ್‌ ಭಾಷಣ ಸಂಬಂಧ ಕ್ಷಮೆಯಾಚಿಸಿದ್ದರೆ ರಾಹುಲ್ ಅನರ್ಹರಾಗುತ್ತಿರಲಿಲ್ಲ; ಕೇಂದ್ರ ಸಚಿವ

- Advertisement -
- Advertisement -

“ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲಂಡನ್‌ನಲ್ಲಿ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ಕ್ಷಮೆಯಾಚಿಸಿದ್ದರೆ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸುತ್ತಿರಲಿಲ್ಲ” ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಶನಿವಾರ ಹೇಳಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

‘ಮೋದಿ’ ಉಪನಾಮದ ಕುರಿತು ಮಾಡಿದ ಟೀಕೆಗೆ ಸಂಬಂಧಿದಂತೆ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್‌ ನ್ಯಾಯಾಲಯ ತೀರ್ಪು ನೀಡಿ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ರಾಹುಲ್ ಅವರಿಗೆ ವಿಧಿಸಿದ ಒಂದು ದಿನದ ನಂತರ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅಮಾನತು ಮಾಡಲಾಯಿತು.

ವಿದೇಶದಲ್ಲಿದ್ದಾಗ ರಾಹುಲ್ ಅವರು ಆಗಾಗ್ಗೆ ಭಾರತದ ವಿರುದ್ಧ ಮಾತನಾಡುತ್ತಾರೆ. ಹೀಗಾಗಿ ಸಂಸತ್ತಿನ ಸದಸ್ಯತ್ವವನ್ನು ರದ್ದುಗೊಳಿಸುವುದು ಸರಿಯಾದ ನಿರ್ಧಾರ ಎಂದು ಅಠಾವಳೆ ಹೇಳಿಕೆ ನೀಡಿದ್ದಾರೆ.

“ರಾಹುಲ್ ಗಾಂಧಿಯವರು ಕಾಂಗ್ರೆಸ್ ನಾಯಕರಾಗಿದ್ದು, ಅವರು ಪಕ್ಷದ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿದ್ದರು. ಕಾಂಗ್ರೆಸ್ ಪಕ್ಷವು 60 ರಿಂದ 70 ವರ್ಷಗಳ ಕಾಲ ದೇಶವನ್ನು ಆಳಿದೆ, ಆದ್ದರಿಂದ ವಿದೇಶಕ್ಕೆ ಹೋಗಿ ರಾಷ್ಟ್ರದ ವಿರುದ್ಧ ಮಾತನಾಡುವುದು ಒಳ್ಳೆಯದಲ್ಲ ಎಂದು ರಾಹುಲ್ ತಿಳಿದುಕೊಳ್ಳಬೇಕು” ಎಂದಿದ್ದಾರೆ.

ಭಾರತವು ತನ್ನ ಪ್ರಜಾಪ್ರಭುತ್ವದ ಮೂಲ ರಚನೆಯ ಮೇಲೆ ದಾಳಿಯನ್ನು ಎದುರಿಸುತ್ತಿದೆ, ದೇಶದ ಸಾಂವಿಧಾನಿಕ ಸಂಸ್ಥೆಗಳ ಮೇಲೆ  ಪೂರ್ಣ ಪ್ರಮಾಣದ ಆಕ್ರಮಣ ನಡೆಯುತ್ತಿದೆ ಎಂದು ರಾಹುಲ್ ಗಾಂಧಿಯವರು ಲಂಡನ್‌ನಲ್ಲಿ ನೀಡಿರುವ ಹೇಳಿಕೆಯ ಹಿನ್ನೆಲೆಯ ಅಠಾವಳೆ ಪ್ರತಿಕ್ರಿಯೆ ನೀಡಿದ್ದಾರೆ.

“ನಮ್ಮ ಸಂವಿಧಾನದಲ್ಲಿ ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ ಎಂಬ ನಿಬಂಧನೆ ಇದೆ. ನಮ್ಮ ಪ್ರಜಾಪ್ರಭುತ್ವ ಬಲಿಷ್ಠವಾಗಿದೆ ಮತ್ತು ಭಾರತದಲ್ಲಿ ಪ್ರಜಾಪ್ರಭುತ್ವ ಇಲ್ಲ ಎಂದು ರಾಹುಲ್ ಅವರು ಲಂಡನ್‌ನಲ್ಲಿ ಹೇಳಿರುವುದು ರಾಷ್ಟ್ರಕ್ಕೆ ಮಾಡಿದ ಅಪಚಾರವಾಗಿದೆ” ಎಂದು ಟೀಕಿಸಿದ್ದಾರೆ.

ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರ ಮೈಕ್‌ಗಳನ್ನು ಮ್ಯೂಟ್ ಮಾಡಲಾಗಿದೆ ಎಂದಿದ್ದ ರಾಹುಲ್‌, “ರಾಷ್ಟ್ರೀಯ ಸ್ವಯಂಸೇವಕ ಸಂಘವು ಮೂಲಭೂತವಾದಿ ಮತ್ತು ಫ್ಯಾಸಿಸ್ಟ್ ಸಂಘಟನೆ” ಎಂದು ಬ್ರಿಟನ್‌ನಲ್ಲಿ ಹೇಳಿದ್ದರು.

ಅಮಾನತುಗೊಂಡ ಒಂದು ದಿನದ ನಂತರ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿಯವರು, “ಪ್ರಧಾನಿ ನರೇಂದ್ರ ಮೋದಿ ಮತ್ತು ಕೈಗಾರಿಕೋದ್ಯಮಿ ಗೌತಮ್ ಅದಾನಿ ನಡುವಿನ ಸಂಬಂಧದ ಬಗ್ಗೆ ಪ್ರಶ್ನೆಗಳನ್ನು ಕೇಳುವುದನ್ನು ಮುಂದುವರಿಸುತ್ತೇನೆ” ಎಂದು ತಿಳಿಸಿದ್ದಾರೆ.

ಅದಾನಿ ಸಮೂಹದ ಸಂಸ್ಥಾಪಕ ಗೌತಮ್ ಅದಾನಿಗೆ ಪ್ರಧಾನಿ ಒಲವು ತೋರುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ.

ಅಮೆರಿಕ ಮೂಲದ ಹಿಂಡೆನ್‌ಬರ್ಗ್ ರಿಸರ್ಚ್ ಸಂಸ್ಥೆಯು ಬಿಡುಗಡೆ ಮಾಡಿದ ವರದಿಯ ಬಳಿಕ ಅದಾನಿ ಗ್ರೂಪ್‌ನ ಹಗರಣಗಳು ಹೊರಬಿದ್ದಿದ್ದವು. ಷೇರುಗಳ ಮೌಲ್ಯವನ್ನು ಕೃತಕವಾಗಿ ಹೆಚ್ಚಿಸಲಾಗಿದೆ ಎಂದು ಹಿಂಡನ್‌ಬರ್ಗ್‌‌ ಸಂಸ್ಥೆ ಹೇಳಿತ್ತು.

“ಲೋಕಸಭೆ ಸಂಸದ ಸ್ಥಾನದಿಂದ ಶಾಶ್ವತವಾಗಿ ಅನರ್ಹಗೊಂಡರೂ ದೇಶಕ್ಕಾಗಿ ಹೋರಾಡುತ್ತೇನೆ” ಎಂದು ರಾಹುಲ್ ಗುಡುಗಿದ್ದಾರೆ.

“ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದ್ದರೂ, ತೀರ್ಪನ್ನು ಉಚ್ಚ ನ್ಯಾಯಾಲಯವು ತಡೆಹಿಡಿದರೆ ರಾಹುಲ್ ಗಾಂಧಿಯವರು ಮತ್ತೆ ಸದಸ್ಯರಾಗಿ ಉಳಿಯಬಹುದು.”

ಸಂಸತ್ತಿನಲ್ಲಿ ಇರದಿದ್ದರೂ ತನ್ನ ಕೆಲಸವನ್ನು ಮಾಡುತ್ತಲೇ ಇರುತ್ತೇನೆ ಎಂದು ರಾಹುಲ್ ಸ್ಪಷ್ಟಪಡಿಸಿದ್ದಾರೆ.

“ನಾನು ಸತ್ಯವನ್ನು ಮಾತ್ರ ಮಾತನಾಡುತ್ತೇನೆ. ಅದು ನನ್ನ ಕೆಲಸ ಮತ್ತು ನಾನು ಅನರ್ಹಗೊಂಡರೂ ಅಥವಾ ಬಂಧಿಸಲ್ಪಟ್ಟರೂ ಆ ಕೆಲಸವನ್ನು ಮಾಡುತ್ತಲೇ ಇರುತ್ತೇನೆ. ಈ ದೇಶ ನನಗೆ ಎಲ್ಲವನ್ನೂ ನೀಡಿದೆ, ಅದಕ್ಕಾಗಿಯೇ ನಾನು ಇದನ್ನು ಮಾಡುತ್ತೇನೆ” ಎಂದಿದ್ದಾರೆ.

ತಮ್ಮ ಹೇಳಿಕೆಗಳಿಗೆ ಕ್ಷಮೆ ಯಾಚಿಸುತ್ತೀರಾ ಎಂಬ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, “ನನ್ನ ಹೆಸರು ರಾಹುಲ್‌ ಗಾಂಧಿ, ಸಾವರ್ಕರ್ ಅಲ್ಲ. ನಾನು ಯಾರ ಬಳಿಯೂ ಕ್ಷಮೆ ಕೇಳುವುದಿಲ್ಲ” ಎಂದು ದಿಟ್ಟವಾಗಿ ಹೇಳಿದ್ದಾರೆ.

ಹಿಂದುತ್ವ ಸಿದ್ಧಾಂತವಾದಿ ವಿಡಿ ಸಾವರ್ಕರ್ ಅವರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಸೆಲ್ಯುಲಾರ್ ಜೈಲಿನಲ್ಲಿದ್ದಾಗ ಬ್ರಿಟಿಷರಿಗೆ ಬರೆದ ಕ್ಷಮಾಪಣ ಪತ್ರಗಳನ್ನು ರಾಹುಲ್ ಉಲ್ಲೇಖಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...