Homeಮುಖಪುಟಲಂಡನ್‌ ಭಾಷಣ ಸಂಬಂಧ ಕ್ಷಮೆಯಾಚಿಸಿದ್ದರೆ ರಾಹುಲ್ ಅನರ್ಹರಾಗುತ್ತಿರಲಿಲ್ಲ; ಕೇಂದ್ರ ಸಚಿವ

ಲಂಡನ್‌ ಭಾಷಣ ಸಂಬಂಧ ಕ್ಷಮೆಯಾಚಿಸಿದ್ದರೆ ರಾಹುಲ್ ಅನರ್ಹರಾಗುತ್ತಿರಲಿಲ್ಲ; ಕೇಂದ್ರ ಸಚಿವ

- Advertisement -
- Advertisement -

“ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲಂಡನ್‌ನಲ್ಲಿ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ಕ್ಷಮೆಯಾಚಿಸಿದ್ದರೆ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸುತ್ತಿರಲಿಲ್ಲ” ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಶನಿವಾರ ಹೇಳಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

‘ಮೋದಿ’ ಉಪನಾಮದ ಕುರಿತು ಮಾಡಿದ ಟೀಕೆಗೆ ಸಂಬಂಧಿದಂತೆ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್‌ ನ್ಯಾಯಾಲಯ ತೀರ್ಪು ನೀಡಿ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ರಾಹುಲ್ ಅವರಿಗೆ ವಿಧಿಸಿದ ಒಂದು ದಿನದ ನಂತರ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅಮಾನತು ಮಾಡಲಾಯಿತು.

ವಿದೇಶದಲ್ಲಿದ್ದಾಗ ರಾಹುಲ್ ಅವರು ಆಗಾಗ್ಗೆ ಭಾರತದ ವಿರುದ್ಧ ಮಾತನಾಡುತ್ತಾರೆ. ಹೀಗಾಗಿ ಸಂಸತ್ತಿನ ಸದಸ್ಯತ್ವವನ್ನು ರದ್ದುಗೊಳಿಸುವುದು ಸರಿಯಾದ ನಿರ್ಧಾರ ಎಂದು ಅಠಾವಳೆ ಹೇಳಿಕೆ ನೀಡಿದ್ದಾರೆ.

“ರಾಹುಲ್ ಗಾಂಧಿಯವರು ಕಾಂಗ್ರೆಸ್ ನಾಯಕರಾಗಿದ್ದು, ಅವರು ಪಕ್ಷದ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿದ್ದರು. ಕಾಂಗ್ರೆಸ್ ಪಕ್ಷವು 60 ರಿಂದ 70 ವರ್ಷಗಳ ಕಾಲ ದೇಶವನ್ನು ಆಳಿದೆ, ಆದ್ದರಿಂದ ವಿದೇಶಕ್ಕೆ ಹೋಗಿ ರಾಷ್ಟ್ರದ ವಿರುದ್ಧ ಮಾತನಾಡುವುದು ಒಳ್ಳೆಯದಲ್ಲ ಎಂದು ರಾಹುಲ್ ತಿಳಿದುಕೊಳ್ಳಬೇಕು” ಎಂದಿದ್ದಾರೆ.

ಭಾರತವು ತನ್ನ ಪ್ರಜಾಪ್ರಭುತ್ವದ ಮೂಲ ರಚನೆಯ ಮೇಲೆ ದಾಳಿಯನ್ನು ಎದುರಿಸುತ್ತಿದೆ, ದೇಶದ ಸಾಂವಿಧಾನಿಕ ಸಂಸ್ಥೆಗಳ ಮೇಲೆ  ಪೂರ್ಣ ಪ್ರಮಾಣದ ಆಕ್ರಮಣ ನಡೆಯುತ್ತಿದೆ ಎಂದು ರಾಹುಲ್ ಗಾಂಧಿಯವರು ಲಂಡನ್‌ನಲ್ಲಿ ನೀಡಿರುವ ಹೇಳಿಕೆಯ ಹಿನ್ನೆಲೆಯ ಅಠಾವಳೆ ಪ್ರತಿಕ್ರಿಯೆ ನೀಡಿದ್ದಾರೆ.

“ನಮ್ಮ ಸಂವಿಧಾನದಲ್ಲಿ ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ ಎಂಬ ನಿಬಂಧನೆ ಇದೆ. ನಮ್ಮ ಪ್ರಜಾಪ್ರಭುತ್ವ ಬಲಿಷ್ಠವಾಗಿದೆ ಮತ್ತು ಭಾರತದಲ್ಲಿ ಪ್ರಜಾಪ್ರಭುತ್ವ ಇಲ್ಲ ಎಂದು ರಾಹುಲ್ ಅವರು ಲಂಡನ್‌ನಲ್ಲಿ ಹೇಳಿರುವುದು ರಾಷ್ಟ್ರಕ್ಕೆ ಮಾಡಿದ ಅಪಚಾರವಾಗಿದೆ” ಎಂದು ಟೀಕಿಸಿದ್ದಾರೆ.

ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರ ಮೈಕ್‌ಗಳನ್ನು ಮ್ಯೂಟ್ ಮಾಡಲಾಗಿದೆ ಎಂದಿದ್ದ ರಾಹುಲ್‌, “ರಾಷ್ಟ್ರೀಯ ಸ್ವಯಂಸೇವಕ ಸಂಘವು ಮೂಲಭೂತವಾದಿ ಮತ್ತು ಫ್ಯಾಸಿಸ್ಟ್ ಸಂಘಟನೆ” ಎಂದು ಬ್ರಿಟನ್‌ನಲ್ಲಿ ಹೇಳಿದ್ದರು.

ಅಮಾನತುಗೊಂಡ ಒಂದು ದಿನದ ನಂತರ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿಯವರು, “ಪ್ರಧಾನಿ ನರೇಂದ್ರ ಮೋದಿ ಮತ್ತು ಕೈಗಾರಿಕೋದ್ಯಮಿ ಗೌತಮ್ ಅದಾನಿ ನಡುವಿನ ಸಂಬಂಧದ ಬಗ್ಗೆ ಪ್ರಶ್ನೆಗಳನ್ನು ಕೇಳುವುದನ್ನು ಮುಂದುವರಿಸುತ್ತೇನೆ” ಎಂದು ತಿಳಿಸಿದ್ದಾರೆ.

ಅದಾನಿ ಸಮೂಹದ ಸಂಸ್ಥಾಪಕ ಗೌತಮ್ ಅದಾನಿಗೆ ಪ್ರಧಾನಿ ಒಲವು ತೋರುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ.

ಅಮೆರಿಕ ಮೂಲದ ಹಿಂಡೆನ್‌ಬರ್ಗ್ ರಿಸರ್ಚ್ ಸಂಸ್ಥೆಯು ಬಿಡುಗಡೆ ಮಾಡಿದ ವರದಿಯ ಬಳಿಕ ಅದಾನಿ ಗ್ರೂಪ್‌ನ ಹಗರಣಗಳು ಹೊರಬಿದ್ದಿದ್ದವು. ಷೇರುಗಳ ಮೌಲ್ಯವನ್ನು ಕೃತಕವಾಗಿ ಹೆಚ್ಚಿಸಲಾಗಿದೆ ಎಂದು ಹಿಂಡನ್‌ಬರ್ಗ್‌‌ ಸಂಸ್ಥೆ ಹೇಳಿತ್ತು.

“ಲೋಕಸಭೆ ಸಂಸದ ಸ್ಥಾನದಿಂದ ಶಾಶ್ವತವಾಗಿ ಅನರ್ಹಗೊಂಡರೂ ದೇಶಕ್ಕಾಗಿ ಹೋರಾಡುತ್ತೇನೆ” ಎಂದು ರಾಹುಲ್ ಗುಡುಗಿದ್ದಾರೆ.

“ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದ್ದರೂ, ತೀರ್ಪನ್ನು ಉಚ್ಚ ನ್ಯಾಯಾಲಯವು ತಡೆಹಿಡಿದರೆ ರಾಹುಲ್ ಗಾಂಧಿಯವರು ಮತ್ತೆ ಸದಸ್ಯರಾಗಿ ಉಳಿಯಬಹುದು.”

ಸಂಸತ್ತಿನಲ್ಲಿ ಇರದಿದ್ದರೂ ತನ್ನ ಕೆಲಸವನ್ನು ಮಾಡುತ್ತಲೇ ಇರುತ್ತೇನೆ ಎಂದು ರಾಹುಲ್ ಸ್ಪಷ್ಟಪಡಿಸಿದ್ದಾರೆ.

“ನಾನು ಸತ್ಯವನ್ನು ಮಾತ್ರ ಮಾತನಾಡುತ್ತೇನೆ. ಅದು ನನ್ನ ಕೆಲಸ ಮತ್ತು ನಾನು ಅನರ್ಹಗೊಂಡರೂ ಅಥವಾ ಬಂಧಿಸಲ್ಪಟ್ಟರೂ ಆ ಕೆಲಸವನ್ನು ಮಾಡುತ್ತಲೇ ಇರುತ್ತೇನೆ. ಈ ದೇಶ ನನಗೆ ಎಲ್ಲವನ್ನೂ ನೀಡಿದೆ, ಅದಕ್ಕಾಗಿಯೇ ನಾನು ಇದನ್ನು ಮಾಡುತ್ತೇನೆ” ಎಂದಿದ್ದಾರೆ.

ತಮ್ಮ ಹೇಳಿಕೆಗಳಿಗೆ ಕ್ಷಮೆ ಯಾಚಿಸುತ್ತೀರಾ ಎಂಬ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, “ನನ್ನ ಹೆಸರು ರಾಹುಲ್‌ ಗಾಂಧಿ, ಸಾವರ್ಕರ್ ಅಲ್ಲ. ನಾನು ಯಾರ ಬಳಿಯೂ ಕ್ಷಮೆ ಕೇಳುವುದಿಲ್ಲ” ಎಂದು ದಿಟ್ಟವಾಗಿ ಹೇಳಿದ್ದಾರೆ.

ಹಿಂದುತ್ವ ಸಿದ್ಧಾಂತವಾದಿ ವಿಡಿ ಸಾವರ್ಕರ್ ಅವರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಸೆಲ್ಯುಲಾರ್ ಜೈಲಿನಲ್ಲಿದ್ದಾಗ ಬ್ರಿಟಿಷರಿಗೆ ಬರೆದ ಕ್ಷಮಾಪಣ ಪತ್ರಗಳನ್ನು ರಾಹುಲ್ ಉಲ್ಲೇಖಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...