Homeಮುಖಪುಟಲಂಡನ್‌ ಭಾಷಣ ಸಂಬಂಧ ಕ್ಷಮೆಯಾಚಿಸಿದ್ದರೆ ರಾಹುಲ್ ಅನರ್ಹರಾಗುತ್ತಿರಲಿಲ್ಲ; ಕೇಂದ್ರ ಸಚಿವ

ಲಂಡನ್‌ ಭಾಷಣ ಸಂಬಂಧ ಕ್ಷಮೆಯಾಚಿಸಿದ್ದರೆ ರಾಹುಲ್ ಅನರ್ಹರಾಗುತ್ತಿರಲಿಲ್ಲ; ಕೇಂದ್ರ ಸಚಿವ

- Advertisement -
- Advertisement -

“ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲಂಡನ್‌ನಲ್ಲಿ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ಕ್ಷಮೆಯಾಚಿಸಿದ್ದರೆ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸುತ್ತಿರಲಿಲ್ಲ” ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಶನಿವಾರ ಹೇಳಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

‘ಮೋದಿ’ ಉಪನಾಮದ ಕುರಿತು ಮಾಡಿದ ಟೀಕೆಗೆ ಸಂಬಂಧಿದಂತೆ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್‌ ನ್ಯಾಯಾಲಯ ತೀರ್ಪು ನೀಡಿ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ರಾಹುಲ್ ಅವರಿಗೆ ವಿಧಿಸಿದ ಒಂದು ದಿನದ ನಂತರ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅಮಾನತು ಮಾಡಲಾಯಿತು.

ವಿದೇಶದಲ್ಲಿದ್ದಾಗ ರಾಹುಲ್ ಅವರು ಆಗಾಗ್ಗೆ ಭಾರತದ ವಿರುದ್ಧ ಮಾತನಾಡುತ್ತಾರೆ. ಹೀಗಾಗಿ ಸಂಸತ್ತಿನ ಸದಸ್ಯತ್ವವನ್ನು ರದ್ದುಗೊಳಿಸುವುದು ಸರಿಯಾದ ನಿರ್ಧಾರ ಎಂದು ಅಠಾವಳೆ ಹೇಳಿಕೆ ನೀಡಿದ್ದಾರೆ.

“ರಾಹುಲ್ ಗಾಂಧಿಯವರು ಕಾಂಗ್ರೆಸ್ ನಾಯಕರಾಗಿದ್ದು, ಅವರು ಪಕ್ಷದ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿದ್ದರು. ಕಾಂಗ್ರೆಸ್ ಪಕ್ಷವು 60 ರಿಂದ 70 ವರ್ಷಗಳ ಕಾಲ ದೇಶವನ್ನು ಆಳಿದೆ, ಆದ್ದರಿಂದ ವಿದೇಶಕ್ಕೆ ಹೋಗಿ ರಾಷ್ಟ್ರದ ವಿರುದ್ಧ ಮಾತನಾಡುವುದು ಒಳ್ಳೆಯದಲ್ಲ ಎಂದು ರಾಹುಲ್ ತಿಳಿದುಕೊಳ್ಳಬೇಕು” ಎಂದಿದ್ದಾರೆ.

ಭಾರತವು ತನ್ನ ಪ್ರಜಾಪ್ರಭುತ್ವದ ಮೂಲ ರಚನೆಯ ಮೇಲೆ ದಾಳಿಯನ್ನು ಎದುರಿಸುತ್ತಿದೆ, ದೇಶದ ಸಾಂವಿಧಾನಿಕ ಸಂಸ್ಥೆಗಳ ಮೇಲೆ  ಪೂರ್ಣ ಪ್ರಮಾಣದ ಆಕ್ರಮಣ ನಡೆಯುತ್ತಿದೆ ಎಂದು ರಾಹುಲ್ ಗಾಂಧಿಯವರು ಲಂಡನ್‌ನಲ್ಲಿ ನೀಡಿರುವ ಹೇಳಿಕೆಯ ಹಿನ್ನೆಲೆಯ ಅಠಾವಳೆ ಪ್ರತಿಕ್ರಿಯೆ ನೀಡಿದ್ದಾರೆ.

“ನಮ್ಮ ಸಂವಿಧಾನದಲ್ಲಿ ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ ಎಂಬ ನಿಬಂಧನೆ ಇದೆ. ನಮ್ಮ ಪ್ರಜಾಪ್ರಭುತ್ವ ಬಲಿಷ್ಠವಾಗಿದೆ ಮತ್ತು ಭಾರತದಲ್ಲಿ ಪ್ರಜಾಪ್ರಭುತ್ವ ಇಲ್ಲ ಎಂದು ರಾಹುಲ್ ಅವರು ಲಂಡನ್‌ನಲ್ಲಿ ಹೇಳಿರುವುದು ರಾಷ್ಟ್ರಕ್ಕೆ ಮಾಡಿದ ಅಪಚಾರವಾಗಿದೆ” ಎಂದು ಟೀಕಿಸಿದ್ದಾರೆ.

ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರ ಮೈಕ್‌ಗಳನ್ನು ಮ್ಯೂಟ್ ಮಾಡಲಾಗಿದೆ ಎಂದಿದ್ದ ರಾಹುಲ್‌, “ರಾಷ್ಟ್ರೀಯ ಸ್ವಯಂಸೇವಕ ಸಂಘವು ಮೂಲಭೂತವಾದಿ ಮತ್ತು ಫ್ಯಾಸಿಸ್ಟ್ ಸಂಘಟನೆ” ಎಂದು ಬ್ರಿಟನ್‌ನಲ್ಲಿ ಹೇಳಿದ್ದರು.

ಅಮಾನತುಗೊಂಡ ಒಂದು ದಿನದ ನಂತರ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿಯವರು, “ಪ್ರಧಾನಿ ನರೇಂದ್ರ ಮೋದಿ ಮತ್ತು ಕೈಗಾರಿಕೋದ್ಯಮಿ ಗೌತಮ್ ಅದಾನಿ ನಡುವಿನ ಸಂಬಂಧದ ಬಗ್ಗೆ ಪ್ರಶ್ನೆಗಳನ್ನು ಕೇಳುವುದನ್ನು ಮುಂದುವರಿಸುತ್ತೇನೆ” ಎಂದು ತಿಳಿಸಿದ್ದಾರೆ.

ಅದಾನಿ ಸಮೂಹದ ಸಂಸ್ಥಾಪಕ ಗೌತಮ್ ಅದಾನಿಗೆ ಪ್ರಧಾನಿ ಒಲವು ತೋರುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ.

ಅಮೆರಿಕ ಮೂಲದ ಹಿಂಡೆನ್‌ಬರ್ಗ್ ರಿಸರ್ಚ್ ಸಂಸ್ಥೆಯು ಬಿಡುಗಡೆ ಮಾಡಿದ ವರದಿಯ ಬಳಿಕ ಅದಾನಿ ಗ್ರೂಪ್‌ನ ಹಗರಣಗಳು ಹೊರಬಿದ್ದಿದ್ದವು. ಷೇರುಗಳ ಮೌಲ್ಯವನ್ನು ಕೃತಕವಾಗಿ ಹೆಚ್ಚಿಸಲಾಗಿದೆ ಎಂದು ಹಿಂಡನ್‌ಬರ್ಗ್‌‌ ಸಂಸ್ಥೆ ಹೇಳಿತ್ತು.

“ಲೋಕಸಭೆ ಸಂಸದ ಸ್ಥಾನದಿಂದ ಶಾಶ್ವತವಾಗಿ ಅನರ್ಹಗೊಂಡರೂ ದೇಶಕ್ಕಾಗಿ ಹೋರಾಡುತ್ತೇನೆ” ಎಂದು ರಾಹುಲ್ ಗುಡುಗಿದ್ದಾರೆ.

“ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದ್ದರೂ, ತೀರ್ಪನ್ನು ಉಚ್ಚ ನ್ಯಾಯಾಲಯವು ತಡೆಹಿಡಿದರೆ ರಾಹುಲ್ ಗಾಂಧಿಯವರು ಮತ್ತೆ ಸದಸ್ಯರಾಗಿ ಉಳಿಯಬಹುದು.”

ಸಂಸತ್ತಿನಲ್ಲಿ ಇರದಿದ್ದರೂ ತನ್ನ ಕೆಲಸವನ್ನು ಮಾಡುತ್ತಲೇ ಇರುತ್ತೇನೆ ಎಂದು ರಾಹುಲ್ ಸ್ಪಷ್ಟಪಡಿಸಿದ್ದಾರೆ.

“ನಾನು ಸತ್ಯವನ್ನು ಮಾತ್ರ ಮಾತನಾಡುತ್ತೇನೆ. ಅದು ನನ್ನ ಕೆಲಸ ಮತ್ತು ನಾನು ಅನರ್ಹಗೊಂಡರೂ ಅಥವಾ ಬಂಧಿಸಲ್ಪಟ್ಟರೂ ಆ ಕೆಲಸವನ್ನು ಮಾಡುತ್ತಲೇ ಇರುತ್ತೇನೆ. ಈ ದೇಶ ನನಗೆ ಎಲ್ಲವನ್ನೂ ನೀಡಿದೆ, ಅದಕ್ಕಾಗಿಯೇ ನಾನು ಇದನ್ನು ಮಾಡುತ್ತೇನೆ” ಎಂದಿದ್ದಾರೆ.

ತಮ್ಮ ಹೇಳಿಕೆಗಳಿಗೆ ಕ್ಷಮೆ ಯಾಚಿಸುತ್ತೀರಾ ಎಂಬ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, “ನನ್ನ ಹೆಸರು ರಾಹುಲ್‌ ಗಾಂಧಿ, ಸಾವರ್ಕರ್ ಅಲ್ಲ. ನಾನು ಯಾರ ಬಳಿಯೂ ಕ್ಷಮೆ ಕೇಳುವುದಿಲ್ಲ” ಎಂದು ದಿಟ್ಟವಾಗಿ ಹೇಳಿದ್ದಾರೆ.

ಹಿಂದುತ್ವ ಸಿದ್ಧಾಂತವಾದಿ ವಿಡಿ ಸಾವರ್ಕರ್ ಅವರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಸೆಲ್ಯುಲಾರ್ ಜೈಲಿನಲ್ಲಿದ್ದಾಗ ಬ್ರಿಟಿಷರಿಗೆ ಬರೆದ ಕ್ಷಮಾಪಣ ಪತ್ರಗಳನ್ನು ರಾಹುಲ್ ಉಲ್ಲೇಖಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...