Homeಮುಖಪುಟಲಂಡನ್‌ ಭಾಷಣ ಸಂಬಂಧ ಕ್ಷಮೆಯಾಚಿಸಿದ್ದರೆ ರಾಹುಲ್ ಅನರ್ಹರಾಗುತ್ತಿರಲಿಲ್ಲ; ಕೇಂದ್ರ ಸಚಿವ

ಲಂಡನ್‌ ಭಾಷಣ ಸಂಬಂಧ ಕ್ಷಮೆಯಾಚಿಸಿದ್ದರೆ ರಾಹುಲ್ ಅನರ್ಹರಾಗುತ್ತಿರಲಿಲ್ಲ; ಕೇಂದ್ರ ಸಚಿವ

- Advertisement -
- Advertisement -

“ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲಂಡನ್‌ನಲ್ಲಿ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ಕ್ಷಮೆಯಾಚಿಸಿದ್ದರೆ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸುತ್ತಿರಲಿಲ್ಲ” ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಶನಿವಾರ ಹೇಳಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

‘ಮೋದಿ’ ಉಪನಾಮದ ಕುರಿತು ಮಾಡಿದ ಟೀಕೆಗೆ ಸಂಬಂಧಿದಂತೆ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್‌ ನ್ಯಾಯಾಲಯ ತೀರ್ಪು ನೀಡಿ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ರಾಹುಲ್ ಅವರಿಗೆ ವಿಧಿಸಿದ ಒಂದು ದಿನದ ನಂತರ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅಮಾನತು ಮಾಡಲಾಯಿತು.

ವಿದೇಶದಲ್ಲಿದ್ದಾಗ ರಾಹುಲ್ ಅವರು ಆಗಾಗ್ಗೆ ಭಾರತದ ವಿರುದ್ಧ ಮಾತನಾಡುತ್ತಾರೆ. ಹೀಗಾಗಿ ಸಂಸತ್ತಿನ ಸದಸ್ಯತ್ವವನ್ನು ರದ್ದುಗೊಳಿಸುವುದು ಸರಿಯಾದ ನಿರ್ಧಾರ ಎಂದು ಅಠಾವಳೆ ಹೇಳಿಕೆ ನೀಡಿದ್ದಾರೆ.

“ರಾಹುಲ್ ಗಾಂಧಿಯವರು ಕಾಂಗ್ರೆಸ್ ನಾಯಕರಾಗಿದ್ದು, ಅವರು ಪಕ್ಷದ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿದ್ದರು. ಕಾಂಗ್ರೆಸ್ ಪಕ್ಷವು 60 ರಿಂದ 70 ವರ್ಷಗಳ ಕಾಲ ದೇಶವನ್ನು ಆಳಿದೆ, ಆದ್ದರಿಂದ ವಿದೇಶಕ್ಕೆ ಹೋಗಿ ರಾಷ್ಟ್ರದ ವಿರುದ್ಧ ಮಾತನಾಡುವುದು ಒಳ್ಳೆಯದಲ್ಲ ಎಂದು ರಾಹುಲ್ ತಿಳಿದುಕೊಳ್ಳಬೇಕು” ಎಂದಿದ್ದಾರೆ.

ಭಾರತವು ತನ್ನ ಪ್ರಜಾಪ್ರಭುತ್ವದ ಮೂಲ ರಚನೆಯ ಮೇಲೆ ದಾಳಿಯನ್ನು ಎದುರಿಸುತ್ತಿದೆ, ದೇಶದ ಸಾಂವಿಧಾನಿಕ ಸಂಸ್ಥೆಗಳ ಮೇಲೆ  ಪೂರ್ಣ ಪ್ರಮಾಣದ ಆಕ್ರಮಣ ನಡೆಯುತ್ತಿದೆ ಎಂದು ರಾಹುಲ್ ಗಾಂಧಿಯವರು ಲಂಡನ್‌ನಲ್ಲಿ ನೀಡಿರುವ ಹೇಳಿಕೆಯ ಹಿನ್ನೆಲೆಯ ಅಠಾವಳೆ ಪ್ರತಿಕ್ರಿಯೆ ನೀಡಿದ್ದಾರೆ.

“ನಮ್ಮ ಸಂವಿಧಾನದಲ್ಲಿ ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ ಎಂಬ ನಿಬಂಧನೆ ಇದೆ. ನಮ್ಮ ಪ್ರಜಾಪ್ರಭುತ್ವ ಬಲಿಷ್ಠವಾಗಿದೆ ಮತ್ತು ಭಾರತದಲ್ಲಿ ಪ್ರಜಾಪ್ರಭುತ್ವ ಇಲ್ಲ ಎಂದು ರಾಹುಲ್ ಅವರು ಲಂಡನ್‌ನಲ್ಲಿ ಹೇಳಿರುವುದು ರಾಷ್ಟ್ರಕ್ಕೆ ಮಾಡಿದ ಅಪಚಾರವಾಗಿದೆ” ಎಂದು ಟೀಕಿಸಿದ್ದಾರೆ.

ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರ ಮೈಕ್‌ಗಳನ್ನು ಮ್ಯೂಟ್ ಮಾಡಲಾಗಿದೆ ಎಂದಿದ್ದ ರಾಹುಲ್‌, “ರಾಷ್ಟ್ರೀಯ ಸ್ವಯಂಸೇವಕ ಸಂಘವು ಮೂಲಭೂತವಾದಿ ಮತ್ತು ಫ್ಯಾಸಿಸ್ಟ್ ಸಂಘಟನೆ” ಎಂದು ಬ್ರಿಟನ್‌ನಲ್ಲಿ ಹೇಳಿದ್ದರು.

ಅಮಾನತುಗೊಂಡ ಒಂದು ದಿನದ ನಂತರ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿಯವರು, “ಪ್ರಧಾನಿ ನರೇಂದ್ರ ಮೋದಿ ಮತ್ತು ಕೈಗಾರಿಕೋದ್ಯಮಿ ಗೌತಮ್ ಅದಾನಿ ನಡುವಿನ ಸಂಬಂಧದ ಬಗ್ಗೆ ಪ್ರಶ್ನೆಗಳನ್ನು ಕೇಳುವುದನ್ನು ಮುಂದುವರಿಸುತ್ತೇನೆ” ಎಂದು ತಿಳಿಸಿದ್ದಾರೆ.

ಅದಾನಿ ಸಮೂಹದ ಸಂಸ್ಥಾಪಕ ಗೌತಮ್ ಅದಾನಿಗೆ ಪ್ರಧಾನಿ ಒಲವು ತೋರುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ.

ಅಮೆರಿಕ ಮೂಲದ ಹಿಂಡೆನ್‌ಬರ್ಗ್ ರಿಸರ್ಚ್ ಸಂಸ್ಥೆಯು ಬಿಡುಗಡೆ ಮಾಡಿದ ವರದಿಯ ಬಳಿಕ ಅದಾನಿ ಗ್ರೂಪ್‌ನ ಹಗರಣಗಳು ಹೊರಬಿದ್ದಿದ್ದವು. ಷೇರುಗಳ ಮೌಲ್ಯವನ್ನು ಕೃತಕವಾಗಿ ಹೆಚ್ಚಿಸಲಾಗಿದೆ ಎಂದು ಹಿಂಡನ್‌ಬರ್ಗ್‌‌ ಸಂಸ್ಥೆ ಹೇಳಿತ್ತು.

“ಲೋಕಸಭೆ ಸಂಸದ ಸ್ಥಾನದಿಂದ ಶಾಶ್ವತವಾಗಿ ಅನರ್ಹಗೊಂಡರೂ ದೇಶಕ್ಕಾಗಿ ಹೋರಾಡುತ್ತೇನೆ” ಎಂದು ರಾಹುಲ್ ಗುಡುಗಿದ್ದಾರೆ.

“ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದ್ದರೂ, ತೀರ್ಪನ್ನು ಉಚ್ಚ ನ್ಯಾಯಾಲಯವು ತಡೆಹಿಡಿದರೆ ರಾಹುಲ್ ಗಾಂಧಿಯವರು ಮತ್ತೆ ಸದಸ್ಯರಾಗಿ ಉಳಿಯಬಹುದು.”

ಸಂಸತ್ತಿನಲ್ಲಿ ಇರದಿದ್ದರೂ ತನ್ನ ಕೆಲಸವನ್ನು ಮಾಡುತ್ತಲೇ ಇರುತ್ತೇನೆ ಎಂದು ರಾಹುಲ್ ಸ್ಪಷ್ಟಪಡಿಸಿದ್ದಾರೆ.

“ನಾನು ಸತ್ಯವನ್ನು ಮಾತ್ರ ಮಾತನಾಡುತ್ತೇನೆ. ಅದು ನನ್ನ ಕೆಲಸ ಮತ್ತು ನಾನು ಅನರ್ಹಗೊಂಡರೂ ಅಥವಾ ಬಂಧಿಸಲ್ಪಟ್ಟರೂ ಆ ಕೆಲಸವನ್ನು ಮಾಡುತ್ತಲೇ ಇರುತ್ತೇನೆ. ಈ ದೇಶ ನನಗೆ ಎಲ್ಲವನ್ನೂ ನೀಡಿದೆ, ಅದಕ್ಕಾಗಿಯೇ ನಾನು ಇದನ್ನು ಮಾಡುತ್ತೇನೆ” ಎಂದಿದ್ದಾರೆ.

ತಮ್ಮ ಹೇಳಿಕೆಗಳಿಗೆ ಕ್ಷಮೆ ಯಾಚಿಸುತ್ತೀರಾ ಎಂಬ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, “ನನ್ನ ಹೆಸರು ರಾಹುಲ್‌ ಗಾಂಧಿ, ಸಾವರ್ಕರ್ ಅಲ್ಲ. ನಾನು ಯಾರ ಬಳಿಯೂ ಕ್ಷಮೆ ಕೇಳುವುದಿಲ್ಲ” ಎಂದು ದಿಟ್ಟವಾಗಿ ಹೇಳಿದ್ದಾರೆ.

ಹಿಂದುತ್ವ ಸಿದ್ಧಾಂತವಾದಿ ವಿಡಿ ಸಾವರ್ಕರ್ ಅವರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಸೆಲ್ಯುಲಾರ್ ಜೈಲಿನಲ್ಲಿದ್ದಾಗ ಬ್ರಿಟಿಷರಿಗೆ ಬರೆದ ಕ್ಷಮಾಪಣ ಪತ್ರಗಳನ್ನು ರಾಹುಲ್ ಉಲ್ಲೇಖಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...