Homeಕರ್ನಾಟಕವರುಣನ ನಡುವೆಯೇ ರಾಹುಲ್ ಭಾಷಣ; ‘ಮೆಚ್ಚುಗೆಯ ಮಳೆ’ ಸುರಿಸಿದ ಜನತೆ

ವರುಣನ ನಡುವೆಯೇ ರಾಹುಲ್ ಭಾಷಣ; ‘ಮೆಚ್ಚುಗೆಯ ಮಳೆ’ ಸುರಿಸಿದ ಜನತೆ

- Advertisement -
- Advertisement -

ಭಾರತ ಐಕ್ಯತೆ ಯಾತ್ರೆಯ ಭಾಗವಾಗಿ ರಾಹುಲ್ ಗಾಂಧಿಯವರು ಸುರಿವ ಮಳೆಯ ನಡುವೆಯೇ ಮೈಸೂರಿನಲ್ಲಿ ಭಾಷಣ ಮಾಡಿದ್ದು ಜನರ ಮೆಚ್ಚುಗೆಗೆ ಪಾತ್ರವಾಗಿದೆ. ರಾಹುಲ್‌ ಗಾಂಧಿಯವರ ಬದ್ಧತೆ ಇದು ಎಂದು ಹೊಗಳುತ್ತಿದ್ದಾರೆ.

ರಾಜ್ಯದಲ್ಲಿ ಮೂರನೇ ದಿನದ ಭಾರತ್‌ ಜೋಡೋ ಯಾತ್ರೆ ಮೈಸೂರು ಬಂಡಿಪಾಳ್ಯ ಸರ್ಕಲ್ ತಲುಪುತ್ತಿದ್ದಂತೆ ರಭಸವಾಗಿ ಮಳೆ ಸುರಿಯತೊಡಗಿತು. ಮಳೆ ಲೆಕ್ಕಿಸದೇ ರಾಹುಲ್‌ ಗಾಂಧಿ ಅವರು ಸಾರ್ವಜನಿಕ ಸಮಾವೇಶದಲ್ಲಿ ನೆರಿದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿ, ಭಾನುವಾರದ ಯಾತ್ರೆಗೆ ವಿರಾಮ ನೀಡಿದರು.

ಆಗಮಿಸಿದ್ದ ಸಾವಿರಾರು ಜನ ಮಳೆಯಲ್ಲೇ ತೋಯಿಸಿಕೊಂಡು ರಾಹುಲ್‌ ಭಾಷಣಕ್ಕೆ ಕಿವಿಗೊಟ್ಟರು. ಕಾಂಗ್ರೆಸ್‌ ನಾಯಕರು ಕೂಡ ರಾಹುಲ್‌ ಜೊತೆಯಲ್ಲೇ ಮಳೆಯಲ್ಲಿ ಭಾಷಣ ಕೇಳಿದರು. ಸದ್ಯ ರಾಹುಲ್‌ ಗಾಂಧಿ ಅವರ ಮಳೆಯ ಭಾಷಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

ಮಳೆ ನಡುವೆಯೇ ಮಾತು ಆರಂಭಿಸಿದ ರಾಹುಲ್‌, “ರಾಷ್ಟ್ರದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಜನರ ನಡುವೆ ದ್ವೇಷವನ್ನು‌ ಹೆಚ್ಚಿಸುತ್ತಿದೆ. ದೇಶದಲ್ಲಿ ಪ್ರೀತಿ, ಸಹನೆ ಮೂಡಿಸಲು ಭಾರತ್‌ ಜೋಡೋ ಯಾತ್ರೆ ಕೈಗೊಂಡಿದ್ದೇವೆ” ಎಂದು ತಿಳಿಸಿದರು.

“ರಾಜ್ಯದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಕುರಿತು ಪ್ರಧಾನಿ ಮೋದಿ ಅವರಿಗೆ ಗುತ್ತಿಗೆದಾರರ ಸಂಘ ಪತ್ರ ಬರೆದಿದೆ. ಅನೇಕ ಶಾಲಾ ಸಂಘಟನೆಗಳು 40 ಪರ್ಸೆಂಟ್‌ ಕಮಿಷನ್‌ ಕುರಿತು ಸರ್ಕಾರದ ಬಗ್ಗೆ ಆರೋಪ ಮಾಡಿವೆ. ಮೋದಿಯವರು ಮಾತ್ರ ಈ ಬಗ್ಗೆ ತುಟಿ ಬಿಚ್ಚಿಲ್ಲ” ಎಂದು ಟೀಕಿಸಿದರು.

ಪ್ರತಿ ದಿನ ಯುವಕರು ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ. ಬೆಲೆ ಏರಿಕೆ ಸಮಸ್ಯೆ ಬಡಜನರನ್ನು ಕಾಡುತ್ತಿದೆ. ದೇಶದ ಸಮಸ್ಯೆಗಳಿಗೆ ಕಿವಿಯಾಗಲು ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೂ ಯಾತ್ರೆ ನಡೆಯಲಿದೆ. ಬಿಜೆಪಿಯವರು ಎಷ್ಟೇ ಕುತಂತ್ರ ಮಾಡಿದರೂ ಯಾವುದೇ ಕಾರಣಕ್ಕೂ ಯಾತ್ರೆ ಮಧ್ಯದಲ್ಲಿ ನಿಲ್ಲುವುದಿಲ್ಲ” ಎಂದರು.

ಮೆಚ್ಚುಗೆಯ ಮಳೆ ಸುರಿಸಿದ ಜನತೆ

“ಜನ ನಾಯಕನಿಗಿರಬೇಕಾದ ಬದ್ದತೆ ಇದು. ಇದೇ ನಿಮ್ಮನ್ನು ಮತ್ತಷ್ಟು ಹತ್ತಿರಕ್ಕೆ ಸೆಳೆಯುತ್ತದೆ” ಎಂದು ಪದ್ಮಾ ರೇಖಾ ಎನ್ನುವವರು ಪೋಸ್ಟ್ ಮಾಡಿದ್ದಾರೆ.

“ರಾಜಕೀಯ ಏನಾಗುತ್ತೊ ಏನಾಗಲ್ವೊ ಗೊತ್ತಿಲ್ಲ. I’m sure, ಈ ರಾಹುಲ್ ಗಾಂಧಿ ಐಕ್ಯತಾ ಯಾತ್ರೆ ಮುಗಿಸುವುದರೊಳಗೆ ಕಿಂದರಿಜೋಗಿಯಂತೆ ದೇಶದುದ್ದಗಲಕ್ಕೂ ಕೋಟ್ಯಾಂತರ ಅಭಿಮಾನಿಗಳನ್ನು, ನಿಜವಾದ ದೇಶಪ್ರೇಮಿಗಳನ್ನು ಜೊತೆಯಲ್ಲಿ ಸೇರಿಸಿಕೊಳ್ಳುತ್ತಾರೆ! ಮನುಷ್ಯನಿಗೆ ಏನಾದರೂ ಸಾಧಿಸಲು ಬೇಕಿರುವುದು true commitment. ಅದು ಇವರಿಗಿದೆ. ಸ್ಪಷ್ಟತೆಯಿದೆ. ಬರೆದಿಟ್ಟುಕೊಳ್ಳಿ, ದೇಶವನ್ನು ಕಟ್ಟಿಯೇ ಕಟ್ಟುತ್ತಾರೆ” ಎಂದು ಲೇಖಕಿ ಪಲ್ಲವಿ ಇಡೂರು ಪೋಸ್ಟ್‌ ಮಾಡಿದ್ದಾರೆ.

“ಮಳೆ, ಚಳಿ, ಬಿಸಿಲು ಗಾಳಿ… ಯಾವುದಕ್ಕೂ ನಿಲ್ಲದು ಈ ಚೈತ್ರಯಾತ್ರೆ. ಮೈಸೂರಿನಲ್ಲಿ ಮಳೆಯಲ್ಲೂ ರಾಹುಲ್ ಗಾಂಧಿ ಅವರ ಭಾಷಣ” ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೊಗಳಿದ್ದಾರೆ.

“ಕಾಲ ಬದಲಾಗಲಿದೆ, ಬರವಳಿದು ಪ್ರೀತಿಯ ಮಳೆ ಸುರಿಯಲಿದೆ. ನಳನಳಿಸಲಿದೆ ಭಾರತ. ಸೃಷ್ಟಿಯಾಗಲಿದೆ ಇತಿಹಾಸ” ಎಂದು ಬರಹಗಾರ ರಾ.ಚಿಂತನ್ ಅಭಿಪ್ರಾಯಪಟ್ಟಿದ್ದಾರೆ.

“ಮೂರನೇ ದಿನದ ಭಾರತ ಐಕ್ಯತಾ ಯಾತ್ರೆ ಅಭೂತಪೂರ್ವ ಜನಬೆಂಬಲದೊಂದಿಗೆ ಮಳೆ ಗಾಳಿ ಚಳಿ ಅಂಜದೆ ಮುರಿದ ಮನಸ್ಸುಗಳನ್ನು ಒಗ್ಗೂಡಿಸುವ ಕೆಲಸವನ್ನು ರಾಹುಲ್ ಗಾಂಧಿಯವರು ಮುನ್ನಡೆಸುತ್ತಿದ್ದಾರೆ” ಎಂದು ಅಭಿಲಾಷ್ ರೆಡ್ಡಿ ಬರೆದುಕೊಂಡಿದ್ದಾರೆ.

“ಇಚ್ಚಾಶಕ್ತಿ ಇರುವ ನಾಯಕ ಯಾವ ಅಡ್ಡಿಗೂ ಅಂಜಿ ಓಡುವುದಿಲ್ಲ. ಭಾರತ್‌ ಜೋಡೋ ಯಾತ್ರೆ ವೇದಿಕೆ ಕಾರ್ಯಕ್ರಮದ ನಡುವೆ ಧಾರಾಕಾರ ಮಳೆ, ಜನರಿರುವ ಮಳೆ ನನಗೂ ಇರಲಿ ಎಂಬ ಧೀಮಂತಿಕೆಯ ಗುಣ ರಾಹುಲ್‌ಗಾಂಧಿ ಅವರದ್ದು. ಮಳೆಗೆ ಅಂಜದೆ ಕುರ್ಚಿಗಳನ್ನೇ ಛತ್ರಿಗಳನ್ನಾಗಿಸಿ ಭಾಷಣ ಆಲಿಸಿದ ಜನರ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವೆ ಇಲ್ಲ” ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.

“ಜಾತಿ ಧರ್ಮಗಳಿಂದ ಬೇರ್ಪಡಿಸಿರುವ ಕೋಮುವಾದಿಗಳಿಂದ ರಕ್ಷಿಸಲು ಮಳೆ ಬಿಸಿಲು ಗಾಳಿ ಎನ್ನದೆ ದೇಶಕ್ಕಾಗಿ ಹೋರಾಟ ಮಾಡುತ್ತಿರುವ ರಾಹುಲ್ ಗಾಂಧಿಯವರ ಹೋರಾಟಕ್ಕೆ ಜಯವಾಗಲಿ” ಎಂದು ನಾರಾಯಣಸ್ವಾಮಿ ಎಂ. ಎಂಬವರು ಟ್ವೀಟ್ ಮಾಡಿದ್ದಾರೆ.

“ಜೀವ ಭಯ ಇದೆ ಅಂತ ಕಾರ್ಯಕ್ರಮ ರದ್ದು ಮಾಡಿ ಓಡಿ ಹೋದ ವ್ಯಕ್ತಿಗೂ ಜೀವದ ಭಯವನ್ನೇ ತೊರೆದು ಬಿಸಿಲು ಮಳೆ ಎನ್ನದೆ ಜನರೆಡೆಗೆ ದೇಶದ ಐಕ್ಯತೆಗೆ ಯಾತ್ರಿಸುತ್ತಿರುವ ಈ ವ್ಯಕ್ತಿಗೂ ಅಜಗಜಾಂತರ” ಎಂದು ಸುನಿಲ್ ಕುಬೇರ ಎಂಬವರು ಟ್ವೀಟ್ ಮಾಡಿದ್ದಾರೆ.

ಹೀಗೆ ಹಲವಾರು ಜನರು ಮೆಚ್ಚುಗೆ ಸೂಚಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....