Homeಕರ್ನಾಟಕವರುಣನ ನಡುವೆಯೇ ರಾಹುಲ್ ಭಾಷಣ; ‘ಮೆಚ್ಚುಗೆಯ ಮಳೆ’ ಸುರಿಸಿದ ಜನತೆ

ವರುಣನ ನಡುವೆಯೇ ರಾಹುಲ್ ಭಾಷಣ; ‘ಮೆಚ್ಚುಗೆಯ ಮಳೆ’ ಸುರಿಸಿದ ಜನತೆ

- Advertisement -
- Advertisement -

ಭಾರತ ಐಕ್ಯತೆ ಯಾತ್ರೆಯ ಭಾಗವಾಗಿ ರಾಹುಲ್ ಗಾಂಧಿಯವರು ಸುರಿವ ಮಳೆಯ ನಡುವೆಯೇ ಮೈಸೂರಿನಲ್ಲಿ ಭಾಷಣ ಮಾಡಿದ್ದು ಜನರ ಮೆಚ್ಚುಗೆಗೆ ಪಾತ್ರವಾಗಿದೆ. ರಾಹುಲ್‌ ಗಾಂಧಿಯವರ ಬದ್ಧತೆ ಇದು ಎಂದು ಹೊಗಳುತ್ತಿದ್ದಾರೆ.

ರಾಜ್ಯದಲ್ಲಿ ಮೂರನೇ ದಿನದ ಭಾರತ್‌ ಜೋಡೋ ಯಾತ್ರೆ ಮೈಸೂರು ಬಂಡಿಪಾಳ್ಯ ಸರ್ಕಲ್ ತಲುಪುತ್ತಿದ್ದಂತೆ ರಭಸವಾಗಿ ಮಳೆ ಸುರಿಯತೊಡಗಿತು. ಮಳೆ ಲೆಕ್ಕಿಸದೇ ರಾಹುಲ್‌ ಗಾಂಧಿ ಅವರು ಸಾರ್ವಜನಿಕ ಸಮಾವೇಶದಲ್ಲಿ ನೆರಿದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿ, ಭಾನುವಾರದ ಯಾತ್ರೆಗೆ ವಿರಾಮ ನೀಡಿದರು.

ಆಗಮಿಸಿದ್ದ ಸಾವಿರಾರು ಜನ ಮಳೆಯಲ್ಲೇ ತೋಯಿಸಿಕೊಂಡು ರಾಹುಲ್‌ ಭಾಷಣಕ್ಕೆ ಕಿವಿಗೊಟ್ಟರು. ಕಾಂಗ್ರೆಸ್‌ ನಾಯಕರು ಕೂಡ ರಾಹುಲ್‌ ಜೊತೆಯಲ್ಲೇ ಮಳೆಯಲ್ಲಿ ಭಾಷಣ ಕೇಳಿದರು. ಸದ್ಯ ರಾಹುಲ್‌ ಗಾಂಧಿ ಅವರ ಮಳೆಯ ಭಾಷಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

ಮಳೆ ನಡುವೆಯೇ ಮಾತು ಆರಂಭಿಸಿದ ರಾಹುಲ್‌, “ರಾಷ್ಟ್ರದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಜನರ ನಡುವೆ ದ್ವೇಷವನ್ನು‌ ಹೆಚ್ಚಿಸುತ್ತಿದೆ. ದೇಶದಲ್ಲಿ ಪ್ರೀತಿ, ಸಹನೆ ಮೂಡಿಸಲು ಭಾರತ್‌ ಜೋಡೋ ಯಾತ್ರೆ ಕೈಗೊಂಡಿದ್ದೇವೆ” ಎಂದು ತಿಳಿಸಿದರು.

“ರಾಜ್ಯದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಕುರಿತು ಪ್ರಧಾನಿ ಮೋದಿ ಅವರಿಗೆ ಗುತ್ತಿಗೆದಾರರ ಸಂಘ ಪತ್ರ ಬರೆದಿದೆ. ಅನೇಕ ಶಾಲಾ ಸಂಘಟನೆಗಳು 40 ಪರ್ಸೆಂಟ್‌ ಕಮಿಷನ್‌ ಕುರಿತು ಸರ್ಕಾರದ ಬಗ್ಗೆ ಆರೋಪ ಮಾಡಿವೆ. ಮೋದಿಯವರು ಮಾತ್ರ ಈ ಬಗ್ಗೆ ತುಟಿ ಬಿಚ್ಚಿಲ್ಲ” ಎಂದು ಟೀಕಿಸಿದರು.

ಪ್ರತಿ ದಿನ ಯುವಕರು ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ. ಬೆಲೆ ಏರಿಕೆ ಸಮಸ್ಯೆ ಬಡಜನರನ್ನು ಕಾಡುತ್ತಿದೆ. ದೇಶದ ಸಮಸ್ಯೆಗಳಿಗೆ ಕಿವಿಯಾಗಲು ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೂ ಯಾತ್ರೆ ನಡೆಯಲಿದೆ. ಬಿಜೆಪಿಯವರು ಎಷ್ಟೇ ಕುತಂತ್ರ ಮಾಡಿದರೂ ಯಾವುದೇ ಕಾರಣಕ್ಕೂ ಯಾತ್ರೆ ಮಧ್ಯದಲ್ಲಿ ನಿಲ್ಲುವುದಿಲ್ಲ” ಎಂದರು.

ಮೆಚ್ಚುಗೆಯ ಮಳೆ ಸುರಿಸಿದ ಜನತೆ

“ಜನ ನಾಯಕನಿಗಿರಬೇಕಾದ ಬದ್ದತೆ ಇದು. ಇದೇ ನಿಮ್ಮನ್ನು ಮತ್ತಷ್ಟು ಹತ್ತಿರಕ್ಕೆ ಸೆಳೆಯುತ್ತದೆ” ಎಂದು ಪದ್ಮಾ ರೇಖಾ ಎನ್ನುವವರು ಪೋಸ್ಟ್ ಮಾಡಿದ್ದಾರೆ.

“ರಾಜಕೀಯ ಏನಾಗುತ್ತೊ ಏನಾಗಲ್ವೊ ಗೊತ್ತಿಲ್ಲ. I’m sure, ಈ ರಾಹುಲ್ ಗಾಂಧಿ ಐಕ್ಯತಾ ಯಾತ್ರೆ ಮುಗಿಸುವುದರೊಳಗೆ ಕಿಂದರಿಜೋಗಿಯಂತೆ ದೇಶದುದ್ದಗಲಕ್ಕೂ ಕೋಟ್ಯಾಂತರ ಅಭಿಮಾನಿಗಳನ್ನು, ನಿಜವಾದ ದೇಶಪ್ರೇಮಿಗಳನ್ನು ಜೊತೆಯಲ್ಲಿ ಸೇರಿಸಿಕೊಳ್ಳುತ್ತಾರೆ! ಮನುಷ್ಯನಿಗೆ ಏನಾದರೂ ಸಾಧಿಸಲು ಬೇಕಿರುವುದು true commitment. ಅದು ಇವರಿಗಿದೆ. ಸ್ಪಷ್ಟತೆಯಿದೆ. ಬರೆದಿಟ್ಟುಕೊಳ್ಳಿ, ದೇಶವನ್ನು ಕಟ್ಟಿಯೇ ಕಟ್ಟುತ್ತಾರೆ” ಎಂದು ಲೇಖಕಿ ಪಲ್ಲವಿ ಇಡೂರು ಪೋಸ್ಟ್‌ ಮಾಡಿದ್ದಾರೆ.

“ಮಳೆ, ಚಳಿ, ಬಿಸಿಲು ಗಾಳಿ… ಯಾವುದಕ್ಕೂ ನಿಲ್ಲದು ಈ ಚೈತ್ರಯಾತ್ರೆ. ಮೈಸೂರಿನಲ್ಲಿ ಮಳೆಯಲ್ಲೂ ರಾಹುಲ್ ಗಾಂಧಿ ಅವರ ಭಾಷಣ” ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೊಗಳಿದ್ದಾರೆ.

“ಕಾಲ ಬದಲಾಗಲಿದೆ, ಬರವಳಿದು ಪ್ರೀತಿಯ ಮಳೆ ಸುರಿಯಲಿದೆ. ನಳನಳಿಸಲಿದೆ ಭಾರತ. ಸೃಷ್ಟಿಯಾಗಲಿದೆ ಇತಿಹಾಸ” ಎಂದು ಬರಹಗಾರ ರಾ.ಚಿಂತನ್ ಅಭಿಪ್ರಾಯಪಟ್ಟಿದ್ದಾರೆ.

“ಮೂರನೇ ದಿನದ ಭಾರತ ಐಕ್ಯತಾ ಯಾತ್ರೆ ಅಭೂತಪೂರ್ವ ಜನಬೆಂಬಲದೊಂದಿಗೆ ಮಳೆ ಗಾಳಿ ಚಳಿ ಅಂಜದೆ ಮುರಿದ ಮನಸ್ಸುಗಳನ್ನು ಒಗ್ಗೂಡಿಸುವ ಕೆಲಸವನ್ನು ರಾಹುಲ್ ಗಾಂಧಿಯವರು ಮುನ್ನಡೆಸುತ್ತಿದ್ದಾರೆ” ಎಂದು ಅಭಿಲಾಷ್ ರೆಡ್ಡಿ ಬರೆದುಕೊಂಡಿದ್ದಾರೆ.

“ಇಚ್ಚಾಶಕ್ತಿ ಇರುವ ನಾಯಕ ಯಾವ ಅಡ್ಡಿಗೂ ಅಂಜಿ ಓಡುವುದಿಲ್ಲ. ಭಾರತ್‌ ಜೋಡೋ ಯಾತ್ರೆ ವೇದಿಕೆ ಕಾರ್ಯಕ್ರಮದ ನಡುವೆ ಧಾರಾಕಾರ ಮಳೆ, ಜನರಿರುವ ಮಳೆ ನನಗೂ ಇರಲಿ ಎಂಬ ಧೀಮಂತಿಕೆಯ ಗುಣ ರಾಹುಲ್‌ಗಾಂಧಿ ಅವರದ್ದು. ಮಳೆಗೆ ಅಂಜದೆ ಕುರ್ಚಿಗಳನ್ನೇ ಛತ್ರಿಗಳನ್ನಾಗಿಸಿ ಭಾಷಣ ಆಲಿಸಿದ ಜನರ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವೆ ಇಲ್ಲ” ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.

“ಜಾತಿ ಧರ್ಮಗಳಿಂದ ಬೇರ್ಪಡಿಸಿರುವ ಕೋಮುವಾದಿಗಳಿಂದ ರಕ್ಷಿಸಲು ಮಳೆ ಬಿಸಿಲು ಗಾಳಿ ಎನ್ನದೆ ದೇಶಕ್ಕಾಗಿ ಹೋರಾಟ ಮಾಡುತ್ತಿರುವ ರಾಹುಲ್ ಗಾಂಧಿಯವರ ಹೋರಾಟಕ್ಕೆ ಜಯವಾಗಲಿ” ಎಂದು ನಾರಾಯಣಸ್ವಾಮಿ ಎಂ. ಎಂಬವರು ಟ್ವೀಟ್ ಮಾಡಿದ್ದಾರೆ.

“ಜೀವ ಭಯ ಇದೆ ಅಂತ ಕಾರ್ಯಕ್ರಮ ರದ್ದು ಮಾಡಿ ಓಡಿ ಹೋದ ವ್ಯಕ್ತಿಗೂ ಜೀವದ ಭಯವನ್ನೇ ತೊರೆದು ಬಿಸಿಲು ಮಳೆ ಎನ್ನದೆ ಜನರೆಡೆಗೆ ದೇಶದ ಐಕ್ಯತೆಗೆ ಯಾತ್ರಿಸುತ್ತಿರುವ ಈ ವ್ಯಕ್ತಿಗೂ ಅಜಗಜಾಂತರ” ಎಂದು ಸುನಿಲ್ ಕುಬೇರ ಎಂಬವರು ಟ್ವೀಟ್ ಮಾಡಿದ್ದಾರೆ.

ಹೀಗೆ ಹಲವಾರು ಜನರು ಮೆಚ್ಚುಗೆ ಸೂಚಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....