Homeಕರ್ನಾಟಕವರುಣನ ನಡುವೆಯೇ ರಾಹುಲ್ ಭಾಷಣ; ‘ಮೆಚ್ಚುಗೆಯ ಮಳೆ’ ಸುರಿಸಿದ ಜನತೆ

ವರುಣನ ನಡುವೆಯೇ ರಾಹುಲ್ ಭಾಷಣ; ‘ಮೆಚ್ಚುಗೆಯ ಮಳೆ’ ಸುರಿಸಿದ ಜನತೆ

- Advertisement -
- Advertisement -

ಭಾರತ ಐಕ್ಯತೆ ಯಾತ್ರೆಯ ಭಾಗವಾಗಿ ರಾಹುಲ್ ಗಾಂಧಿಯವರು ಸುರಿವ ಮಳೆಯ ನಡುವೆಯೇ ಮೈಸೂರಿನಲ್ಲಿ ಭಾಷಣ ಮಾಡಿದ್ದು ಜನರ ಮೆಚ್ಚುಗೆಗೆ ಪಾತ್ರವಾಗಿದೆ. ರಾಹುಲ್‌ ಗಾಂಧಿಯವರ ಬದ್ಧತೆ ಇದು ಎಂದು ಹೊಗಳುತ್ತಿದ್ದಾರೆ.

ರಾಜ್ಯದಲ್ಲಿ ಮೂರನೇ ದಿನದ ಭಾರತ್‌ ಜೋಡೋ ಯಾತ್ರೆ ಮೈಸೂರು ಬಂಡಿಪಾಳ್ಯ ಸರ್ಕಲ್ ತಲುಪುತ್ತಿದ್ದಂತೆ ರಭಸವಾಗಿ ಮಳೆ ಸುರಿಯತೊಡಗಿತು. ಮಳೆ ಲೆಕ್ಕಿಸದೇ ರಾಹುಲ್‌ ಗಾಂಧಿ ಅವರು ಸಾರ್ವಜನಿಕ ಸಮಾವೇಶದಲ್ಲಿ ನೆರಿದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿ, ಭಾನುವಾರದ ಯಾತ್ರೆಗೆ ವಿರಾಮ ನೀಡಿದರು.

ಆಗಮಿಸಿದ್ದ ಸಾವಿರಾರು ಜನ ಮಳೆಯಲ್ಲೇ ತೋಯಿಸಿಕೊಂಡು ರಾಹುಲ್‌ ಭಾಷಣಕ್ಕೆ ಕಿವಿಗೊಟ್ಟರು. ಕಾಂಗ್ರೆಸ್‌ ನಾಯಕರು ಕೂಡ ರಾಹುಲ್‌ ಜೊತೆಯಲ್ಲೇ ಮಳೆಯಲ್ಲಿ ಭಾಷಣ ಕೇಳಿದರು. ಸದ್ಯ ರಾಹುಲ್‌ ಗಾಂಧಿ ಅವರ ಮಳೆಯ ಭಾಷಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

ಮಳೆ ನಡುವೆಯೇ ಮಾತು ಆರಂಭಿಸಿದ ರಾಹುಲ್‌, “ರಾಷ್ಟ್ರದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಜನರ ನಡುವೆ ದ್ವೇಷವನ್ನು‌ ಹೆಚ್ಚಿಸುತ್ತಿದೆ. ದೇಶದಲ್ಲಿ ಪ್ರೀತಿ, ಸಹನೆ ಮೂಡಿಸಲು ಭಾರತ್‌ ಜೋಡೋ ಯಾತ್ರೆ ಕೈಗೊಂಡಿದ್ದೇವೆ” ಎಂದು ತಿಳಿಸಿದರು.

“ರಾಜ್ಯದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಕುರಿತು ಪ್ರಧಾನಿ ಮೋದಿ ಅವರಿಗೆ ಗುತ್ತಿಗೆದಾರರ ಸಂಘ ಪತ್ರ ಬರೆದಿದೆ. ಅನೇಕ ಶಾಲಾ ಸಂಘಟನೆಗಳು 40 ಪರ್ಸೆಂಟ್‌ ಕಮಿಷನ್‌ ಕುರಿತು ಸರ್ಕಾರದ ಬಗ್ಗೆ ಆರೋಪ ಮಾಡಿವೆ. ಮೋದಿಯವರು ಮಾತ್ರ ಈ ಬಗ್ಗೆ ತುಟಿ ಬಿಚ್ಚಿಲ್ಲ” ಎಂದು ಟೀಕಿಸಿದರು.

ಪ್ರತಿ ದಿನ ಯುವಕರು ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ. ಬೆಲೆ ಏರಿಕೆ ಸಮಸ್ಯೆ ಬಡಜನರನ್ನು ಕಾಡುತ್ತಿದೆ. ದೇಶದ ಸಮಸ್ಯೆಗಳಿಗೆ ಕಿವಿಯಾಗಲು ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೂ ಯಾತ್ರೆ ನಡೆಯಲಿದೆ. ಬಿಜೆಪಿಯವರು ಎಷ್ಟೇ ಕುತಂತ್ರ ಮಾಡಿದರೂ ಯಾವುದೇ ಕಾರಣಕ್ಕೂ ಯಾತ್ರೆ ಮಧ್ಯದಲ್ಲಿ ನಿಲ್ಲುವುದಿಲ್ಲ” ಎಂದರು.

ಮೆಚ್ಚುಗೆಯ ಮಳೆ ಸುರಿಸಿದ ಜನತೆ

“ಜನ ನಾಯಕನಿಗಿರಬೇಕಾದ ಬದ್ದತೆ ಇದು. ಇದೇ ನಿಮ್ಮನ್ನು ಮತ್ತಷ್ಟು ಹತ್ತಿರಕ್ಕೆ ಸೆಳೆಯುತ್ತದೆ” ಎಂದು ಪದ್ಮಾ ರೇಖಾ ಎನ್ನುವವರು ಪೋಸ್ಟ್ ಮಾಡಿದ್ದಾರೆ.

“ರಾಜಕೀಯ ಏನಾಗುತ್ತೊ ಏನಾಗಲ್ವೊ ಗೊತ್ತಿಲ್ಲ. I’m sure, ಈ ರಾಹುಲ್ ಗಾಂಧಿ ಐಕ್ಯತಾ ಯಾತ್ರೆ ಮುಗಿಸುವುದರೊಳಗೆ ಕಿಂದರಿಜೋಗಿಯಂತೆ ದೇಶದುದ್ದಗಲಕ್ಕೂ ಕೋಟ್ಯಾಂತರ ಅಭಿಮಾನಿಗಳನ್ನು, ನಿಜವಾದ ದೇಶಪ್ರೇಮಿಗಳನ್ನು ಜೊತೆಯಲ್ಲಿ ಸೇರಿಸಿಕೊಳ್ಳುತ್ತಾರೆ! ಮನುಷ್ಯನಿಗೆ ಏನಾದರೂ ಸಾಧಿಸಲು ಬೇಕಿರುವುದು true commitment. ಅದು ಇವರಿಗಿದೆ. ಸ್ಪಷ್ಟತೆಯಿದೆ. ಬರೆದಿಟ್ಟುಕೊಳ್ಳಿ, ದೇಶವನ್ನು ಕಟ್ಟಿಯೇ ಕಟ್ಟುತ್ತಾರೆ” ಎಂದು ಲೇಖಕಿ ಪಲ್ಲವಿ ಇಡೂರು ಪೋಸ್ಟ್‌ ಮಾಡಿದ್ದಾರೆ.

“ಮಳೆ, ಚಳಿ, ಬಿಸಿಲು ಗಾಳಿ… ಯಾವುದಕ್ಕೂ ನಿಲ್ಲದು ಈ ಚೈತ್ರಯಾತ್ರೆ. ಮೈಸೂರಿನಲ್ಲಿ ಮಳೆಯಲ್ಲೂ ರಾಹುಲ್ ಗಾಂಧಿ ಅವರ ಭಾಷಣ” ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೊಗಳಿದ್ದಾರೆ.

“ಕಾಲ ಬದಲಾಗಲಿದೆ, ಬರವಳಿದು ಪ್ರೀತಿಯ ಮಳೆ ಸುರಿಯಲಿದೆ. ನಳನಳಿಸಲಿದೆ ಭಾರತ. ಸೃಷ್ಟಿಯಾಗಲಿದೆ ಇತಿಹಾಸ” ಎಂದು ಬರಹಗಾರ ರಾ.ಚಿಂತನ್ ಅಭಿಪ್ರಾಯಪಟ್ಟಿದ್ದಾರೆ.

“ಮೂರನೇ ದಿನದ ಭಾರತ ಐಕ್ಯತಾ ಯಾತ್ರೆ ಅಭೂತಪೂರ್ವ ಜನಬೆಂಬಲದೊಂದಿಗೆ ಮಳೆ ಗಾಳಿ ಚಳಿ ಅಂಜದೆ ಮುರಿದ ಮನಸ್ಸುಗಳನ್ನು ಒಗ್ಗೂಡಿಸುವ ಕೆಲಸವನ್ನು ರಾಹುಲ್ ಗಾಂಧಿಯವರು ಮುನ್ನಡೆಸುತ್ತಿದ್ದಾರೆ” ಎಂದು ಅಭಿಲಾಷ್ ರೆಡ್ಡಿ ಬರೆದುಕೊಂಡಿದ್ದಾರೆ.

“ಇಚ್ಚಾಶಕ್ತಿ ಇರುವ ನಾಯಕ ಯಾವ ಅಡ್ಡಿಗೂ ಅಂಜಿ ಓಡುವುದಿಲ್ಲ. ಭಾರತ್‌ ಜೋಡೋ ಯಾತ್ರೆ ವೇದಿಕೆ ಕಾರ್ಯಕ್ರಮದ ನಡುವೆ ಧಾರಾಕಾರ ಮಳೆ, ಜನರಿರುವ ಮಳೆ ನನಗೂ ಇರಲಿ ಎಂಬ ಧೀಮಂತಿಕೆಯ ಗುಣ ರಾಹುಲ್‌ಗಾಂಧಿ ಅವರದ್ದು. ಮಳೆಗೆ ಅಂಜದೆ ಕುರ್ಚಿಗಳನ್ನೇ ಛತ್ರಿಗಳನ್ನಾಗಿಸಿ ಭಾಷಣ ಆಲಿಸಿದ ಜನರ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವೆ ಇಲ್ಲ” ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.

“ಜಾತಿ ಧರ್ಮಗಳಿಂದ ಬೇರ್ಪಡಿಸಿರುವ ಕೋಮುವಾದಿಗಳಿಂದ ರಕ್ಷಿಸಲು ಮಳೆ ಬಿಸಿಲು ಗಾಳಿ ಎನ್ನದೆ ದೇಶಕ್ಕಾಗಿ ಹೋರಾಟ ಮಾಡುತ್ತಿರುವ ರಾಹುಲ್ ಗಾಂಧಿಯವರ ಹೋರಾಟಕ್ಕೆ ಜಯವಾಗಲಿ” ಎಂದು ನಾರಾಯಣಸ್ವಾಮಿ ಎಂ. ಎಂಬವರು ಟ್ವೀಟ್ ಮಾಡಿದ್ದಾರೆ.

“ಜೀವ ಭಯ ಇದೆ ಅಂತ ಕಾರ್ಯಕ್ರಮ ರದ್ದು ಮಾಡಿ ಓಡಿ ಹೋದ ವ್ಯಕ್ತಿಗೂ ಜೀವದ ಭಯವನ್ನೇ ತೊರೆದು ಬಿಸಿಲು ಮಳೆ ಎನ್ನದೆ ಜನರೆಡೆಗೆ ದೇಶದ ಐಕ್ಯತೆಗೆ ಯಾತ್ರಿಸುತ್ತಿರುವ ಈ ವ್ಯಕ್ತಿಗೂ ಅಜಗಜಾಂತರ” ಎಂದು ಸುನಿಲ್ ಕುಬೇರ ಎಂಬವರು ಟ್ವೀಟ್ ಮಾಡಿದ್ದಾರೆ.

ಹೀಗೆ ಹಲವಾರು ಜನರು ಮೆಚ್ಚುಗೆ ಸೂಚಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...