Homeಕರ್ನಾಟಕವರುಣನ ನಡುವೆಯೇ ರಾಹುಲ್ ಭಾಷಣ; ‘ಮೆಚ್ಚುಗೆಯ ಮಳೆ’ ಸುರಿಸಿದ ಜನತೆ

ವರುಣನ ನಡುವೆಯೇ ರಾಹುಲ್ ಭಾಷಣ; ‘ಮೆಚ್ಚುಗೆಯ ಮಳೆ’ ಸುರಿಸಿದ ಜನತೆ

- Advertisement -
- Advertisement -

ಭಾರತ ಐಕ್ಯತೆ ಯಾತ್ರೆಯ ಭಾಗವಾಗಿ ರಾಹುಲ್ ಗಾಂಧಿಯವರು ಸುರಿವ ಮಳೆಯ ನಡುವೆಯೇ ಮೈಸೂರಿನಲ್ಲಿ ಭಾಷಣ ಮಾಡಿದ್ದು ಜನರ ಮೆಚ್ಚುಗೆಗೆ ಪಾತ್ರವಾಗಿದೆ. ರಾಹುಲ್‌ ಗಾಂಧಿಯವರ ಬದ್ಧತೆ ಇದು ಎಂದು ಹೊಗಳುತ್ತಿದ್ದಾರೆ.

ರಾಜ್ಯದಲ್ಲಿ ಮೂರನೇ ದಿನದ ಭಾರತ್‌ ಜೋಡೋ ಯಾತ್ರೆ ಮೈಸೂರು ಬಂಡಿಪಾಳ್ಯ ಸರ್ಕಲ್ ತಲುಪುತ್ತಿದ್ದಂತೆ ರಭಸವಾಗಿ ಮಳೆ ಸುರಿಯತೊಡಗಿತು. ಮಳೆ ಲೆಕ್ಕಿಸದೇ ರಾಹುಲ್‌ ಗಾಂಧಿ ಅವರು ಸಾರ್ವಜನಿಕ ಸಮಾವೇಶದಲ್ಲಿ ನೆರಿದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿ, ಭಾನುವಾರದ ಯಾತ್ರೆಗೆ ವಿರಾಮ ನೀಡಿದರು.

ಆಗಮಿಸಿದ್ದ ಸಾವಿರಾರು ಜನ ಮಳೆಯಲ್ಲೇ ತೋಯಿಸಿಕೊಂಡು ರಾಹುಲ್‌ ಭಾಷಣಕ್ಕೆ ಕಿವಿಗೊಟ್ಟರು. ಕಾಂಗ್ರೆಸ್‌ ನಾಯಕರು ಕೂಡ ರಾಹುಲ್‌ ಜೊತೆಯಲ್ಲೇ ಮಳೆಯಲ್ಲಿ ಭಾಷಣ ಕೇಳಿದರು. ಸದ್ಯ ರಾಹುಲ್‌ ಗಾಂಧಿ ಅವರ ಮಳೆಯ ಭಾಷಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

ಮಳೆ ನಡುವೆಯೇ ಮಾತು ಆರಂಭಿಸಿದ ರಾಹುಲ್‌, “ರಾಷ್ಟ್ರದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಜನರ ನಡುವೆ ದ್ವೇಷವನ್ನು‌ ಹೆಚ್ಚಿಸುತ್ತಿದೆ. ದೇಶದಲ್ಲಿ ಪ್ರೀತಿ, ಸಹನೆ ಮೂಡಿಸಲು ಭಾರತ್‌ ಜೋಡೋ ಯಾತ್ರೆ ಕೈಗೊಂಡಿದ್ದೇವೆ” ಎಂದು ತಿಳಿಸಿದರು.

“ರಾಜ್ಯದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಕುರಿತು ಪ್ರಧಾನಿ ಮೋದಿ ಅವರಿಗೆ ಗುತ್ತಿಗೆದಾರರ ಸಂಘ ಪತ್ರ ಬರೆದಿದೆ. ಅನೇಕ ಶಾಲಾ ಸಂಘಟನೆಗಳು 40 ಪರ್ಸೆಂಟ್‌ ಕಮಿಷನ್‌ ಕುರಿತು ಸರ್ಕಾರದ ಬಗ್ಗೆ ಆರೋಪ ಮಾಡಿವೆ. ಮೋದಿಯವರು ಮಾತ್ರ ಈ ಬಗ್ಗೆ ತುಟಿ ಬಿಚ್ಚಿಲ್ಲ” ಎಂದು ಟೀಕಿಸಿದರು.

ಪ್ರತಿ ದಿನ ಯುವಕರು ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ. ಬೆಲೆ ಏರಿಕೆ ಸಮಸ್ಯೆ ಬಡಜನರನ್ನು ಕಾಡುತ್ತಿದೆ. ದೇಶದ ಸಮಸ್ಯೆಗಳಿಗೆ ಕಿವಿಯಾಗಲು ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೂ ಯಾತ್ರೆ ನಡೆಯಲಿದೆ. ಬಿಜೆಪಿಯವರು ಎಷ್ಟೇ ಕುತಂತ್ರ ಮಾಡಿದರೂ ಯಾವುದೇ ಕಾರಣಕ್ಕೂ ಯಾತ್ರೆ ಮಧ್ಯದಲ್ಲಿ ನಿಲ್ಲುವುದಿಲ್ಲ” ಎಂದರು.

ಮೆಚ್ಚುಗೆಯ ಮಳೆ ಸುರಿಸಿದ ಜನತೆ

“ಜನ ನಾಯಕನಿಗಿರಬೇಕಾದ ಬದ್ದತೆ ಇದು. ಇದೇ ನಿಮ್ಮನ್ನು ಮತ್ತಷ್ಟು ಹತ್ತಿರಕ್ಕೆ ಸೆಳೆಯುತ್ತದೆ” ಎಂದು ಪದ್ಮಾ ರೇಖಾ ಎನ್ನುವವರು ಪೋಸ್ಟ್ ಮಾಡಿದ್ದಾರೆ.

“ರಾಜಕೀಯ ಏನಾಗುತ್ತೊ ಏನಾಗಲ್ವೊ ಗೊತ್ತಿಲ್ಲ. I’m sure, ಈ ರಾಹುಲ್ ಗಾಂಧಿ ಐಕ್ಯತಾ ಯಾತ್ರೆ ಮುಗಿಸುವುದರೊಳಗೆ ಕಿಂದರಿಜೋಗಿಯಂತೆ ದೇಶದುದ್ದಗಲಕ್ಕೂ ಕೋಟ್ಯಾಂತರ ಅಭಿಮಾನಿಗಳನ್ನು, ನಿಜವಾದ ದೇಶಪ್ರೇಮಿಗಳನ್ನು ಜೊತೆಯಲ್ಲಿ ಸೇರಿಸಿಕೊಳ್ಳುತ್ತಾರೆ! ಮನುಷ್ಯನಿಗೆ ಏನಾದರೂ ಸಾಧಿಸಲು ಬೇಕಿರುವುದು true commitment. ಅದು ಇವರಿಗಿದೆ. ಸ್ಪಷ್ಟತೆಯಿದೆ. ಬರೆದಿಟ್ಟುಕೊಳ್ಳಿ, ದೇಶವನ್ನು ಕಟ್ಟಿಯೇ ಕಟ್ಟುತ್ತಾರೆ” ಎಂದು ಲೇಖಕಿ ಪಲ್ಲವಿ ಇಡೂರು ಪೋಸ್ಟ್‌ ಮಾಡಿದ್ದಾರೆ.

“ಮಳೆ, ಚಳಿ, ಬಿಸಿಲು ಗಾಳಿ… ಯಾವುದಕ್ಕೂ ನಿಲ್ಲದು ಈ ಚೈತ್ರಯಾತ್ರೆ. ಮೈಸೂರಿನಲ್ಲಿ ಮಳೆಯಲ್ಲೂ ರಾಹುಲ್ ಗಾಂಧಿ ಅವರ ಭಾಷಣ” ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೊಗಳಿದ್ದಾರೆ.

“ಕಾಲ ಬದಲಾಗಲಿದೆ, ಬರವಳಿದು ಪ್ರೀತಿಯ ಮಳೆ ಸುರಿಯಲಿದೆ. ನಳನಳಿಸಲಿದೆ ಭಾರತ. ಸೃಷ್ಟಿಯಾಗಲಿದೆ ಇತಿಹಾಸ” ಎಂದು ಬರಹಗಾರ ರಾ.ಚಿಂತನ್ ಅಭಿಪ್ರಾಯಪಟ್ಟಿದ್ದಾರೆ.

“ಮೂರನೇ ದಿನದ ಭಾರತ ಐಕ್ಯತಾ ಯಾತ್ರೆ ಅಭೂತಪೂರ್ವ ಜನಬೆಂಬಲದೊಂದಿಗೆ ಮಳೆ ಗಾಳಿ ಚಳಿ ಅಂಜದೆ ಮುರಿದ ಮನಸ್ಸುಗಳನ್ನು ಒಗ್ಗೂಡಿಸುವ ಕೆಲಸವನ್ನು ರಾಹುಲ್ ಗಾಂಧಿಯವರು ಮುನ್ನಡೆಸುತ್ತಿದ್ದಾರೆ” ಎಂದು ಅಭಿಲಾಷ್ ರೆಡ್ಡಿ ಬರೆದುಕೊಂಡಿದ್ದಾರೆ.

“ಇಚ್ಚಾಶಕ್ತಿ ಇರುವ ನಾಯಕ ಯಾವ ಅಡ್ಡಿಗೂ ಅಂಜಿ ಓಡುವುದಿಲ್ಲ. ಭಾರತ್‌ ಜೋಡೋ ಯಾತ್ರೆ ವೇದಿಕೆ ಕಾರ್ಯಕ್ರಮದ ನಡುವೆ ಧಾರಾಕಾರ ಮಳೆ, ಜನರಿರುವ ಮಳೆ ನನಗೂ ಇರಲಿ ಎಂಬ ಧೀಮಂತಿಕೆಯ ಗುಣ ರಾಹುಲ್‌ಗಾಂಧಿ ಅವರದ್ದು. ಮಳೆಗೆ ಅಂಜದೆ ಕುರ್ಚಿಗಳನ್ನೇ ಛತ್ರಿಗಳನ್ನಾಗಿಸಿ ಭಾಷಣ ಆಲಿಸಿದ ಜನರ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವೆ ಇಲ್ಲ” ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.

“ಜಾತಿ ಧರ್ಮಗಳಿಂದ ಬೇರ್ಪಡಿಸಿರುವ ಕೋಮುವಾದಿಗಳಿಂದ ರಕ್ಷಿಸಲು ಮಳೆ ಬಿಸಿಲು ಗಾಳಿ ಎನ್ನದೆ ದೇಶಕ್ಕಾಗಿ ಹೋರಾಟ ಮಾಡುತ್ತಿರುವ ರಾಹುಲ್ ಗಾಂಧಿಯವರ ಹೋರಾಟಕ್ಕೆ ಜಯವಾಗಲಿ” ಎಂದು ನಾರಾಯಣಸ್ವಾಮಿ ಎಂ. ಎಂಬವರು ಟ್ವೀಟ್ ಮಾಡಿದ್ದಾರೆ.

“ಜೀವ ಭಯ ಇದೆ ಅಂತ ಕಾರ್ಯಕ್ರಮ ರದ್ದು ಮಾಡಿ ಓಡಿ ಹೋದ ವ್ಯಕ್ತಿಗೂ ಜೀವದ ಭಯವನ್ನೇ ತೊರೆದು ಬಿಸಿಲು ಮಳೆ ಎನ್ನದೆ ಜನರೆಡೆಗೆ ದೇಶದ ಐಕ್ಯತೆಗೆ ಯಾತ್ರಿಸುತ್ತಿರುವ ಈ ವ್ಯಕ್ತಿಗೂ ಅಜಗಜಾಂತರ” ಎಂದು ಸುನಿಲ್ ಕುಬೇರ ಎಂಬವರು ಟ್ವೀಟ್ ಮಾಡಿದ್ದಾರೆ.

ಹೀಗೆ ಹಲವಾರು ಜನರು ಮೆಚ್ಚುಗೆ ಸೂಚಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...