Homeಕರ್ನಾಟಕವರುಣನ ನಡುವೆಯೇ ರಾಹುಲ್ ಭಾಷಣ; ‘ಮೆಚ್ಚುಗೆಯ ಮಳೆ’ ಸುರಿಸಿದ ಜನತೆ

ವರುಣನ ನಡುವೆಯೇ ರಾಹುಲ್ ಭಾಷಣ; ‘ಮೆಚ್ಚುಗೆಯ ಮಳೆ’ ಸುರಿಸಿದ ಜನತೆ

- Advertisement -
- Advertisement -

ಭಾರತ ಐಕ್ಯತೆ ಯಾತ್ರೆಯ ಭಾಗವಾಗಿ ರಾಹುಲ್ ಗಾಂಧಿಯವರು ಸುರಿವ ಮಳೆಯ ನಡುವೆಯೇ ಮೈಸೂರಿನಲ್ಲಿ ಭಾಷಣ ಮಾಡಿದ್ದು ಜನರ ಮೆಚ್ಚುಗೆಗೆ ಪಾತ್ರವಾಗಿದೆ. ರಾಹುಲ್‌ ಗಾಂಧಿಯವರ ಬದ್ಧತೆ ಇದು ಎಂದು ಹೊಗಳುತ್ತಿದ್ದಾರೆ.

ರಾಜ್ಯದಲ್ಲಿ ಮೂರನೇ ದಿನದ ಭಾರತ್‌ ಜೋಡೋ ಯಾತ್ರೆ ಮೈಸೂರು ಬಂಡಿಪಾಳ್ಯ ಸರ್ಕಲ್ ತಲುಪುತ್ತಿದ್ದಂತೆ ರಭಸವಾಗಿ ಮಳೆ ಸುರಿಯತೊಡಗಿತು. ಮಳೆ ಲೆಕ್ಕಿಸದೇ ರಾಹುಲ್‌ ಗಾಂಧಿ ಅವರು ಸಾರ್ವಜನಿಕ ಸಮಾವೇಶದಲ್ಲಿ ನೆರಿದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿ, ಭಾನುವಾರದ ಯಾತ್ರೆಗೆ ವಿರಾಮ ನೀಡಿದರು.

ಆಗಮಿಸಿದ್ದ ಸಾವಿರಾರು ಜನ ಮಳೆಯಲ್ಲೇ ತೋಯಿಸಿಕೊಂಡು ರಾಹುಲ್‌ ಭಾಷಣಕ್ಕೆ ಕಿವಿಗೊಟ್ಟರು. ಕಾಂಗ್ರೆಸ್‌ ನಾಯಕರು ಕೂಡ ರಾಹುಲ್‌ ಜೊತೆಯಲ್ಲೇ ಮಳೆಯಲ್ಲಿ ಭಾಷಣ ಕೇಳಿದರು. ಸದ್ಯ ರಾಹುಲ್‌ ಗಾಂಧಿ ಅವರ ಮಳೆಯ ಭಾಷಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

ಮಳೆ ನಡುವೆಯೇ ಮಾತು ಆರಂಭಿಸಿದ ರಾಹುಲ್‌, “ರಾಷ್ಟ್ರದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಜನರ ನಡುವೆ ದ್ವೇಷವನ್ನು‌ ಹೆಚ್ಚಿಸುತ್ತಿದೆ. ದೇಶದಲ್ಲಿ ಪ್ರೀತಿ, ಸಹನೆ ಮೂಡಿಸಲು ಭಾರತ್‌ ಜೋಡೋ ಯಾತ್ರೆ ಕೈಗೊಂಡಿದ್ದೇವೆ” ಎಂದು ತಿಳಿಸಿದರು.

“ರಾಜ್ಯದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಕುರಿತು ಪ್ರಧಾನಿ ಮೋದಿ ಅವರಿಗೆ ಗುತ್ತಿಗೆದಾರರ ಸಂಘ ಪತ್ರ ಬರೆದಿದೆ. ಅನೇಕ ಶಾಲಾ ಸಂಘಟನೆಗಳು 40 ಪರ್ಸೆಂಟ್‌ ಕಮಿಷನ್‌ ಕುರಿತು ಸರ್ಕಾರದ ಬಗ್ಗೆ ಆರೋಪ ಮಾಡಿವೆ. ಮೋದಿಯವರು ಮಾತ್ರ ಈ ಬಗ್ಗೆ ತುಟಿ ಬಿಚ್ಚಿಲ್ಲ” ಎಂದು ಟೀಕಿಸಿದರು.

ಪ್ರತಿ ದಿನ ಯುವಕರು ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ. ಬೆಲೆ ಏರಿಕೆ ಸಮಸ್ಯೆ ಬಡಜನರನ್ನು ಕಾಡುತ್ತಿದೆ. ದೇಶದ ಸಮಸ್ಯೆಗಳಿಗೆ ಕಿವಿಯಾಗಲು ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೂ ಯಾತ್ರೆ ನಡೆಯಲಿದೆ. ಬಿಜೆಪಿಯವರು ಎಷ್ಟೇ ಕುತಂತ್ರ ಮಾಡಿದರೂ ಯಾವುದೇ ಕಾರಣಕ್ಕೂ ಯಾತ್ರೆ ಮಧ್ಯದಲ್ಲಿ ನಿಲ್ಲುವುದಿಲ್ಲ” ಎಂದರು.

ಮೆಚ್ಚುಗೆಯ ಮಳೆ ಸುರಿಸಿದ ಜನತೆ

“ಜನ ನಾಯಕನಿಗಿರಬೇಕಾದ ಬದ್ದತೆ ಇದು. ಇದೇ ನಿಮ್ಮನ್ನು ಮತ್ತಷ್ಟು ಹತ್ತಿರಕ್ಕೆ ಸೆಳೆಯುತ್ತದೆ” ಎಂದು ಪದ್ಮಾ ರೇಖಾ ಎನ್ನುವವರು ಪೋಸ್ಟ್ ಮಾಡಿದ್ದಾರೆ.

“ರಾಜಕೀಯ ಏನಾಗುತ್ತೊ ಏನಾಗಲ್ವೊ ಗೊತ್ತಿಲ್ಲ. I’m sure, ಈ ರಾಹುಲ್ ಗಾಂಧಿ ಐಕ್ಯತಾ ಯಾತ್ರೆ ಮುಗಿಸುವುದರೊಳಗೆ ಕಿಂದರಿಜೋಗಿಯಂತೆ ದೇಶದುದ್ದಗಲಕ್ಕೂ ಕೋಟ್ಯಾಂತರ ಅಭಿಮಾನಿಗಳನ್ನು, ನಿಜವಾದ ದೇಶಪ್ರೇಮಿಗಳನ್ನು ಜೊತೆಯಲ್ಲಿ ಸೇರಿಸಿಕೊಳ್ಳುತ್ತಾರೆ! ಮನುಷ್ಯನಿಗೆ ಏನಾದರೂ ಸಾಧಿಸಲು ಬೇಕಿರುವುದು true commitment. ಅದು ಇವರಿಗಿದೆ. ಸ್ಪಷ್ಟತೆಯಿದೆ. ಬರೆದಿಟ್ಟುಕೊಳ್ಳಿ, ದೇಶವನ್ನು ಕಟ್ಟಿಯೇ ಕಟ್ಟುತ್ತಾರೆ” ಎಂದು ಲೇಖಕಿ ಪಲ್ಲವಿ ಇಡೂರು ಪೋಸ್ಟ್‌ ಮಾಡಿದ್ದಾರೆ.

“ಮಳೆ, ಚಳಿ, ಬಿಸಿಲು ಗಾಳಿ… ಯಾವುದಕ್ಕೂ ನಿಲ್ಲದು ಈ ಚೈತ್ರಯಾತ್ರೆ. ಮೈಸೂರಿನಲ್ಲಿ ಮಳೆಯಲ್ಲೂ ರಾಹುಲ್ ಗಾಂಧಿ ಅವರ ಭಾಷಣ” ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೊಗಳಿದ್ದಾರೆ.

“ಕಾಲ ಬದಲಾಗಲಿದೆ, ಬರವಳಿದು ಪ್ರೀತಿಯ ಮಳೆ ಸುರಿಯಲಿದೆ. ನಳನಳಿಸಲಿದೆ ಭಾರತ. ಸೃಷ್ಟಿಯಾಗಲಿದೆ ಇತಿಹಾಸ” ಎಂದು ಬರಹಗಾರ ರಾ.ಚಿಂತನ್ ಅಭಿಪ್ರಾಯಪಟ್ಟಿದ್ದಾರೆ.

“ಮೂರನೇ ದಿನದ ಭಾರತ ಐಕ್ಯತಾ ಯಾತ್ರೆ ಅಭೂತಪೂರ್ವ ಜನಬೆಂಬಲದೊಂದಿಗೆ ಮಳೆ ಗಾಳಿ ಚಳಿ ಅಂಜದೆ ಮುರಿದ ಮನಸ್ಸುಗಳನ್ನು ಒಗ್ಗೂಡಿಸುವ ಕೆಲಸವನ್ನು ರಾಹುಲ್ ಗಾಂಧಿಯವರು ಮುನ್ನಡೆಸುತ್ತಿದ್ದಾರೆ” ಎಂದು ಅಭಿಲಾಷ್ ರೆಡ್ಡಿ ಬರೆದುಕೊಂಡಿದ್ದಾರೆ.

“ಇಚ್ಚಾಶಕ್ತಿ ಇರುವ ನಾಯಕ ಯಾವ ಅಡ್ಡಿಗೂ ಅಂಜಿ ಓಡುವುದಿಲ್ಲ. ಭಾರತ್‌ ಜೋಡೋ ಯಾತ್ರೆ ವೇದಿಕೆ ಕಾರ್ಯಕ್ರಮದ ನಡುವೆ ಧಾರಾಕಾರ ಮಳೆ, ಜನರಿರುವ ಮಳೆ ನನಗೂ ಇರಲಿ ಎಂಬ ಧೀಮಂತಿಕೆಯ ಗುಣ ರಾಹುಲ್‌ಗಾಂಧಿ ಅವರದ್ದು. ಮಳೆಗೆ ಅಂಜದೆ ಕುರ್ಚಿಗಳನ್ನೇ ಛತ್ರಿಗಳನ್ನಾಗಿಸಿ ಭಾಷಣ ಆಲಿಸಿದ ಜನರ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವೆ ಇಲ್ಲ” ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.

“ಜಾತಿ ಧರ್ಮಗಳಿಂದ ಬೇರ್ಪಡಿಸಿರುವ ಕೋಮುವಾದಿಗಳಿಂದ ರಕ್ಷಿಸಲು ಮಳೆ ಬಿಸಿಲು ಗಾಳಿ ಎನ್ನದೆ ದೇಶಕ್ಕಾಗಿ ಹೋರಾಟ ಮಾಡುತ್ತಿರುವ ರಾಹುಲ್ ಗಾಂಧಿಯವರ ಹೋರಾಟಕ್ಕೆ ಜಯವಾಗಲಿ” ಎಂದು ನಾರಾಯಣಸ್ವಾಮಿ ಎಂ. ಎಂಬವರು ಟ್ವೀಟ್ ಮಾಡಿದ್ದಾರೆ.

“ಜೀವ ಭಯ ಇದೆ ಅಂತ ಕಾರ್ಯಕ್ರಮ ರದ್ದು ಮಾಡಿ ಓಡಿ ಹೋದ ವ್ಯಕ್ತಿಗೂ ಜೀವದ ಭಯವನ್ನೇ ತೊರೆದು ಬಿಸಿಲು ಮಳೆ ಎನ್ನದೆ ಜನರೆಡೆಗೆ ದೇಶದ ಐಕ್ಯತೆಗೆ ಯಾತ್ರಿಸುತ್ತಿರುವ ಈ ವ್ಯಕ್ತಿಗೂ ಅಜಗಜಾಂತರ” ಎಂದು ಸುನಿಲ್ ಕುಬೇರ ಎಂಬವರು ಟ್ವೀಟ್ ಮಾಡಿದ್ದಾರೆ.

ಹೀಗೆ ಹಲವಾರು ಜನರು ಮೆಚ್ಚುಗೆ ಸೂಚಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...