Homeಕರ್ನಾಟಕವರುಣನ ನಡುವೆಯೇ ರಾಹುಲ್ ಭಾಷಣ; ‘ಮೆಚ್ಚುಗೆಯ ಮಳೆ’ ಸುರಿಸಿದ ಜನತೆ

ವರುಣನ ನಡುವೆಯೇ ರಾಹುಲ್ ಭಾಷಣ; ‘ಮೆಚ್ಚುಗೆಯ ಮಳೆ’ ಸುರಿಸಿದ ಜನತೆ

- Advertisement -
- Advertisement -

ಭಾರತ ಐಕ್ಯತೆ ಯಾತ್ರೆಯ ಭಾಗವಾಗಿ ರಾಹುಲ್ ಗಾಂಧಿಯವರು ಸುರಿವ ಮಳೆಯ ನಡುವೆಯೇ ಮೈಸೂರಿನಲ್ಲಿ ಭಾಷಣ ಮಾಡಿದ್ದು ಜನರ ಮೆಚ್ಚುಗೆಗೆ ಪಾತ್ರವಾಗಿದೆ. ರಾಹುಲ್‌ ಗಾಂಧಿಯವರ ಬದ್ಧತೆ ಇದು ಎಂದು ಹೊಗಳುತ್ತಿದ್ದಾರೆ.

ರಾಜ್ಯದಲ್ಲಿ ಮೂರನೇ ದಿನದ ಭಾರತ್‌ ಜೋಡೋ ಯಾತ್ರೆ ಮೈಸೂರು ಬಂಡಿಪಾಳ್ಯ ಸರ್ಕಲ್ ತಲುಪುತ್ತಿದ್ದಂತೆ ರಭಸವಾಗಿ ಮಳೆ ಸುರಿಯತೊಡಗಿತು. ಮಳೆ ಲೆಕ್ಕಿಸದೇ ರಾಹುಲ್‌ ಗಾಂಧಿ ಅವರು ಸಾರ್ವಜನಿಕ ಸಮಾವೇಶದಲ್ಲಿ ನೆರಿದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿ, ಭಾನುವಾರದ ಯಾತ್ರೆಗೆ ವಿರಾಮ ನೀಡಿದರು.

ಆಗಮಿಸಿದ್ದ ಸಾವಿರಾರು ಜನ ಮಳೆಯಲ್ಲೇ ತೋಯಿಸಿಕೊಂಡು ರಾಹುಲ್‌ ಭಾಷಣಕ್ಕೆ ಕಿವಿಗೊಟ್ಟರು. ಕಾಂಗ್ರೆಸ್‌ ನಾಯಕರು ಕೂಡ ರಾಹುಲ್‌ ಜೊತೆಯಲ್ಲೇ ಮಳೆಯಲ್ಲಿ ಭಾಷಣ ಕೇಳಿದರು. ಸದ್ಯ ರಾಹುಲ್‌ ಗಾಂಧಿ ಅವರ ಮಳೆಯ ಭಾಷಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

ಮಳೆ ನಡುವೆಯೇ ಮಾತು ಆರಂಭಿಸಿದ ರಾಹುಲ್‌, “ರಾಷ್ಟ್ರದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಜನರ ನಡುವೆ ದ್ವೇಷವನ್ನು‌ ಹೆಚ್ಚಿಸುತ್ತಿದೆ. ದೇಶದಲ್ಲಿ ಪ್ರೀತಿ, ಸಹನೆ ಮೂಡಿಸಲು ಭಾರತ್‌ ಜೋಡೋ ಯಾತ್ರೆ ಕೈಗೊಂಡಿದ್ದೇವೆ” ಎಂದು ತಿಳಿಸಿದರು.

“ರಾಜ್ಯದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಕುರಿತು ಪ್ರಧಾನಿ ಮೋದಿ ಅವರಿಗೆ ಗುತ್ತಿಗೆದಾರರ ಸಂಘ ಪತ್ರ ಬರೆದಿದೆ. ಅನೇಕ ಶಾಲಾ ಸಂಘಟನೆಗಳು 40 ಪರ್ಸೆಂಟ್‌ ಕಮಿಷನ್‌ ಕುರಿತು ಸರ್ಕಾರದ ಬಗ್ಗೆ ಆರೋಪ ಮಾಡಿವೆ. ಮೋದಿಯವರು ಮಾತ್ರ ಈ ಬಗ್ಗೆ ತುಟಿ ಬಿಚ್ಚಿಲ್ಲ” ಎಂದು ಟೀಕಿಸಿದರು.

ಪ್ರತಿ ದಿನ ಯುವಕರು ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ. ಬೆಲೆ ಏರಿಕೆ ಸಮಸ್ಯೆ ಬಡಜನರನ್ನು ಕಾಡುತ್ತಿದೆ. ದೇಶದ ಸಮಸ್ಯೆಗಳಿಗೆ ಕಿವಿಯಾಗಲು ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೂ ಯಾತ್ರೆ ನಡೆಯಲಿದೆ. ಬಿಜೆಪಿಯವರು ಎಷ್ಟೇ ಕುತಂತ್ರ ಮಾಡಿದರೂ ಯಾವುದೇ ಕಾರಣಕ್ಕೂ ಯಾತ್ರೆ ಮಧ್ಯದಲ್ಲಿ ನಿಲ್ಲುವುದಿಲ್ಲ” ಎಂದರು.

ಮೆಚ್ಚುಗೆಯ ಮಳೆ ಸುರಿಸಿದ ಜನತೆ

“ಜನ ನಾಯಕನಿಗಿರಬೇಕಾದ ಬದ್ದತೆ ಇದು. ಇದೇ ನಿಮ್ಮನ್ನು ಮತ್ತಷ್ಟು ಹತ್ತಿರಕ್ಕೆ ಸೆಳೆಯುತ್ತದೆ” ಎಂದು ಪದ್ಮಾ ರೇಖಾ ಎನ್ನುವವರು ಪೋಸ್ಟ್ ಮಾಡಿದ್ದಾರೆ.

“ರಾಜಕೀಯ ಏನಾಗುತ್ತೊ ಏನಾಗಲ್ವೊ ಗೊತ್ತಿಲ್ಲ. I’m sure, ಈ ರಾಹುಲ್ ಗಾಂಧಿ ಐಕ್ಯತಾ ಯಾತ್ರೆ ಮುಗಿಸುವುದರೊಳಗೆ ಕಿಂದರಿಜೋಗಿಯಂತೆ ದೇಶದುದ್ದಗಲಕ್ಕೂ ಕೋಟ್ಯಾಂತರ ಅಭಿಮಾನಿಗಳನ್ನು, ನಿಜವಾದ ದೇಶಪ್ರೇಮಿಗಳನ್ನು ಜೊತೆಯಲ್ಲಿ ಸೇರಿಸಿಕೊಳ್ಳುತ್ತಾರೆ! ಮನುಷ್ಯನಿಗೆ ಏನಾದರೂ ಸಾಧಿಸಲು ಬೇಕಿರುವುದು true commitment. ಅದು ಇವರಿಗಿದೆ. ಸ್ಪಷ್ಟತೆಯಿದೆ. ಬರೆದಿಟ್ಟುಕೊಳ್ಳಿ, ದೇಶವನ್ನು ಕಟ್ಟಿಯೇ ಕಟ್ಟುತ್ತಾರೆ” ಎಂದು ಲೇಖಕಿ ಪಲ್ಲವಿ ಇಡೂರು ಪೋಸ್ಟ್‌ ಮಾಡಿದ್ದಾರೆ.

“ಮಳೆ, ಚಳಿ, ಬಿಸಿಲು ಗಾಳಿ… ಯಾವುದಕ್ಕೂ ನಿಲ್ಲದು ಈ ಚೈತ್ರಯಾತ್ರೆ. ಮೈಸೂರಿನಲ್ಲಿ ಮಳೆಯಲ್ಲೂ ರಾಹುಲ್ ಗಾಂಧಿ ಅವರ ಭಾಷಣ” ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೊಗಳಿದ್ದಾರೆ.

“ಕಾಲ ಬದಲಾಗಲಿದೆ, ಬರವಳಿದು ಪ್ರೀತಿಯ ಮಳೆ ಸುರಿಯಲಿದೆ. ನಳನಳಿಸಲಿದೆ ಭಾರತ. ಸೃಷ್ಟಿಯಾಗಲಿದೆ ಇತಿಹಾಸ” ಎಂದು ಬರಹಗಾರ ರಾ.ಚಿಂತನ್ ಅಭಿಪ್ರಾಯಪಟ್ಟಿದ್ದಾರೆ.

“ಮೂರನೇ ದಿನದ ಭಾರತ ಐಕ್ಯತಾ ಯಾತ್ರೆ ಅಭೂತಪೂರ್ವ ಜನಬೆಂಬಲದೊಂದಿಗೆ ಮಳೆ ಗಾಳಿ ಚಳಿ ಅಂಜದೆ ಮುರಿದ ಮನಸ್ಸುಗಳನ್ನು ಒಗ್ಗೂಡಿಸುವ ಕೆಲಸವನ್ನು ರಾಹುಲ್ ಗಾಂಧಿಯವರು ಮುನ್ನಡೆಸುತ್ತಿದ್ದಾರೆ” ಎಂದು ಅಭಿಲಾಷ್ ರೆಡ್ಡಿ ಬರೆದುಕೊಂಡಿದ್ದಾರೆ.

“ಇಚ್ಚಾಶಕ್ತಿ ಇರುವ ನಾಯಕ ಯಾವ ಅಡ್ಡಿಗೂ ಅಂಜಿ ಓಡುವುದಿಲ್ಲ. ಭಾರತ್‌ ಜೋಡೋ ಯಾತ್ರೆ ವೇದಿಕೆ ಕಾರ್ಯಕ್ರಮದ ನಡುವೆ ಧಾರಾಕಾರ ಮಳೆ, ಜನರಿರುವ ಮಳೆ ನನಗೂ ಇರಲಿ ಎಂಬ ಧೀಮಂತಿಕೆಯ ಗುಣ ರಾಹುಲ್‌ಗಾಂಧಿ ಅವರದ್ದು. ಮಳೆಗೆ ಅಂಜದೆ ಕುರ್ಚಿಗಳನ್ನೇ ಛತ್ರಿಗಳನ್ನಾಗಿಸಿ ಭಾಷಣ ಆಲಿಸಿದ ಜನರ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವೆ ಇಲ್ಲ” ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.

“ಜಾತಿ ಧರ್ಮಗಳಿಂದ ಬೇರ್ಪಡಿಸಿರುವ ಕೋಮುವಾದಿಗಳಿಂದ ರಕ್ಷಿಸಲು ಮಳೆ ಬಿಸಿಲು ಗಾಳಿ ಎನ್ನದೆ ದೇಶಕ್ಕಾಗಿ ಹೋರಾಟ ಮಾಡುತ್ತಿರುವ ರಾಹುಲ್ ಗಾಂಧಿಯವರ ಹೋರಾಟಕ್ಕೆ ಜಯವಾಗಲಿ” ಎಂದು ನಾರಾಯಣಸ್ವಾಮಿ ಎಂ. ಎಂಬವರು ಟ್ವೀಟ್ ಮಾಡಿದ್ದಾರೆ.

“ಜೀವ ಭಯ ಇದೆ ಅಂತ ಕಾರ್ಯಕ್ರಮ ರದ್ದು ಮಾಡಿ ಓಡಿ ಹೋದ ವ್ಯಕ್ತಿಗೂ ಜೀವದ ಭಯವನ್ನೇ ತೊರೆದು ಬಿಸಿಲು ಮಳೆ ಎನ್ನದೆ ಜನರೆಡೆಗೆ ದೇಶದ ಐಕ್ಯತೆಗೆ ಯಾತ್ರಿಸುತ್ತಿರುವ ಈ ವ್ಯಕ್ತಿಗೂ ಅಜಗಜಾಂತರ” ಎಂದು ಸುನಿಲ್ ಕುಬೇರ ಎಂಬವರು ಟ್ವೀಟ್ ಮಾಡಿದ್ದಾರೆ.

ಹೀಗೆ ಹಲವಾರು ಜನರು ಮೆಚ್ಚುಗೆ ಸೂಚಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...