Homeಕರ್ನಾಟಕರಾಯಚೂರು ಕೃಷಿ ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ತಡೆಗೆ ಸಂಚು ಆರೋಪ: ನಿಗದಿತ ದಿನಾಂಕದಂದು ಪರೀಕ್ಷೆ...

ರಾಯಚೂರು ಕೃಷಿ ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ತಡೆಗೆ ಸಂಚು ಆರೋಪ: ನಿಗದಿತ ದಿನಾಂಕದಂದು ಪರೀಕ್ಷೆ ನಡೆಸಲು ಒತ್ತಾಯ 

- Advertisement -
- Advertisement -

ಬೆಂಗಳೂರು: ರಾಯಚೂರು ಕೃಷಿ ವಿವಿಯಲ್ಲಿನ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ನಿಗದಿತ ದಿನಾಂಕಗಳಾದ ಜನವರಿ.17 ಮತ್ತು ಜನವರಿ.18ರಂದೇ ನಡೆಸಬೇಕು. ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯಕ್ಕೆ ಮಣಿದು ಪರೀಕ್ಷೆಯನ್ನು ಮುಂದೂಡಬಾರದು ಎಂದು ಅಭ್ಯರ್ಥಿಗಳು ಒತ್ತಾಯಿಸಿದ್ದಾರೆ.

ಮಂಗಳವಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರಕಟನೆ ಹೊರಡಿಸಿದ್ದು, ರಾಯಚೂರು ಕೃಷಿ ವಿಶ್ವವಿದ್ಯಾಲಯವು 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ 2023ರ ಅ.18ರಂದು ಅಧಿಸೂಚನೆಯನ್ನು ಹೊರಡಿಸಿತ್ತು. ಈ 75 ಹುದ್ದೆಗಳಲ್ಲಿ ಹೊಸ ಮೀಸಲಾತಿ ರೋಸ್ಟರ್ ಬಿಂದುಗಳ ಅನುಗುಣವಾಗಿ, ಮೊದಲ ರೋಸ್ಟರ್ ಬಿಂದು ಪರಿಶಿಷ್ಟ ಜಾತಿಗೆ ಮತ್ತು ಮೂರನೇ ರೋಸ್ಟರ್ ಬಿಂದು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ. 

75 ಹುದ್ದೆಗಳಲ್ಲಿ 24 ಹುದ್ದೆಗಳು ಪರಿಶಿಷ್ಟ ಜಾತಿಗೆ ಹಾಗೂ 10 ಹುದ್ದೆಗಳು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದ್ದು, ಒಟ್ಟಾರೆ 34 ಹುದ್ದೆಗಳು ದಲಿತ ಸಮುದಾಯಕ್ಕೆ ಮೀಸಲಾಗಿವೆ. ಇದನ್ನು ಸಹಿಸದ ಬಲಾಢ್ಯ ಜಾತಿಗಳ ಜನ ಪರೀಕ್ಷೆ ನಡೆಯದಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಲಾಗಿದೆ.  

ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 18/10/2023ರಂದು ಅಧಿಸೂಚನೆಯನ್ನು ಹೊರಡಿಸಲಾಗಿತ್ತು. 

ಈ 75 ಹುದ್ದೆಗಳಲ್ಲಿ ಹೊಸಮೀಸಲಾತಿ ರೋಸ್ಟರ್ ಬಿಂದುಗಳ ಅನುಗುಣವಾಗಿ, ಮೊದಲ ರೋಸ್ಟರ್ ಬಿಂದು ಪರಿಶಿಷ್ಟಜಾತಿಗೆ ಮತ್ತು ಮೂರನೇ ರೋಸ್ಟರ್ ಬಿಂದು ಪರಿಶಿಷ್ಟಪಂಗಡಕ್ಕೆ ಮೀಸಲಾಗಿರುತ್ತದೆ. 

ಅಧಿಸೂಚನೆಯಲ್ಲಿ ವಿಷಯವಾರು ಹುದ್ದೆಗಳನ್ನು ವಿಂಗಡಿಸಿರುವುದರಿಂದ, ಪ್ರತಿ ವಿಷಯದ ಮೊದಲ ಮತ್ತು ಮೂರನೇ ಸ್ಥಾನಗಳು ಕ್ರಮವಾಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಮೀಸಲಾಗಿವೆ. 

ಈ ರೀತಿ ಒಟ್ಟು 75 ಹುದ್ದೆಗಳಲ್ಲಿ 24 ಹುದ್ದೆಗಳು ಪರಿಶಿಷ್ಟ ಜಾತಿಗೆ ಹಾಗೂ 10 ಹುದ್ದೆಗಳು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದ್ದು, ಒಟ್ಟಾರೆ 34 ಹುದ್ದೆಗಳು ದಲಿತ ಸಮುದಾಯಕ್ಕೆ ಮೀಸಲಾಗಿವೆ. 

ಈ ನೇಮಕಾತಿ ಅಧಿಸೂಚನೆ ಪ್ರಕಟವಾದ ದಿನದಿಂದಲೂ, 75 ಹುದ್ದೆಗಳಲ್ಲಿ 34 ಹುದ್ದೆಗಳು ದಲಿತರಿಗೆ ಮೀಸಲಾಗಿರುವುದನ್ನು ಸಹಿಸದ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ವಿವಿಧ ರೀತಿಯ ಷಡ್ಯಂತ್ರಗಳ ಮೂಲಕ ನೇಮಕಾತಿ ಪ್ರಕ್ರಿಯೆಗೆ ಅಡ್ಡಿಪಡಿಸುತ್ತಾ ಬರುತ್ತಿದ್ದಾರೆ.

ಈ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷೆಯನ್ನು ದಿನಾಂಕ 22/02/2025 ರಂದು ನಡೆಸಲು ನಿಗದಿಪಡಿಸಲಾಗಿತ್ತು. ಆದರೆ ಪರೀಕ್ಷೆಗೆ ಕೇವಲ ಒಂದು ವಾರ ಬಾಕಿಯಿದ್ದಾಗಲೇ ಅದನ್ನು ಮುಂದೂಡಲಾಯಿತು. ನಂತರ ಪರೀಕ್ಷೆಯನ್ನು ದಿನಾಂಕ 05/03/2025ರಂದು ಮರುನಿಗದಿ ಪಡಿಸಲಾಯಿತು. 

ಆದರೆ ಪರೀಕ್ಷೆಗೆ ಕೇವಲ 12 ಗಂಟೆಗಳು ಉಳಿದಿದ್ದಾಗ ಯಾವುದೇ ಸಮಂಜಸ ಕಾರಣವಿಲ್ಲದೆ ಮತ್ತೆ ಪರೀಕ್ಷೆಯನ್ನು ಮುಂದೂಡಲಾಯಿತು.

ಇದಾದ ಬಳಿಕ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದಂತೆ ಕಲಬುರಗಿ ಹೈಕೋರ್ಟ್ನಲ್ಲಿ ಪ್ರಕರಣ ದಾಖಲಿಸಲಾಯಿತು (WP No. 202940 of 2024). 

ಹೈಕೋರ್ಟ್ ಈ ಪ್ರಕರಣದಲ್ಲಿ ತಾತ್ಕಾಲಿಕವಾಗಿ ಪರೀಕ್ಷಾ ಪ್ರಕ್ರಿಯೆಗೆ ತಡೆನೀಡಿತು.

ನಂತರ ಎಲ್ಲಾ ವಾದ–ವಿವಾದಗಳನ್ನು ಆಲಿಸಿದ ಗೌರವಾನ್ವಿತ ಕರ್ನಾಟಕ ಹೈಕೋರ್ಟ್, ದಿನಾಂಕ 04/08/2025ರಂದು

ಅರ್ಜಿಯನ್ನು ವಜಾಗೊಳಿಸಿ, ಅಧಿಸೂಚನೆ ಹಾಗೂ ನೇಮಕಾತಿ ಪ್ರಕ್ರಿಯೆ ಯುಜಿಸಿ ನಿಯಮಗಳ ಪ್ರಕಾರ ಸರಿಯಾಗಿದೆ ಎಂದು ಸ್ಪಷ್ಟ ತೀರ್ಪು ನೀಡಿತು. 

ಇಷ್ಟೆಲ್ಲಾ ಆದರೂ ಈವರೆಗೆ ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷೆಗಳು ನಡೆಯದಂತೆ ಪಟ್ಟಭದ್ರರು ನೋಡಿಕೊಂಡಿದ್ದಾರೆ. ಆದರೆ ಇದೇ ತಿಂಗಳ ಅಂದರೆ ಜನವರಿ 17 ಮತ್ತು ಜನವರಿ 18ರಂದು ಪರೀಕ್ಷಾ ದಿನಾಂಕ ನಿಗಧಿಯಾಗಿದ್ದು, ಈ ಬಾರಿ ಯಾವುದೇ ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯಕ್ಕೆ ಮಣಿದು ಪರೀಕ್ಷೆಯನ್ನು ಮುಂದೂಡಬಾರದು ಎಂದು ಅಭ್ಯರ್ಥಿಗಳು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...