Homeಕರ್ನಾಟಕರಾಯಚೂರು ಕೃಷಿ ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ತಡೆಗೆ ಸಂಚು ಆರೋಪ: ನಿಗದಿತ ದಿನಾಂಕದಂದು ಪರೀಕ್ಷೆ...

ರಾಯಚೂರು ಕೃಷಿ ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ತಡೆಗೆ ಸಂಚು ಆರೋಪ: ನಿಗದಿತ ದಿನಾಂಕದಂದು ಪರೀಕ್ಷೆ ನಡೆಸಲು ಒತ್ತಾಯ 

- Advertisement -
- Advertisement -

ಬೆಂಗಳೂರು: ರಾಯಚೂರು ಕೃಷಿ ವಿವಿಯಲ್ಲಿನ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ನಿಗದಿತ ದಿನಾಂಕಗಳಾದ ಜನವರಿ.17 ಮತ್ತು ಜನವರಿ.18ರಂದೇ ನಡೆಸಬೇಕು. ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯಕ್ಕೆ ಮಣಿದು ಪರೀಕ್ಷೆಯನ್ನು ಮುಂದೂಡಬಾರದು ಎಂದು ಅಭ್ಯರ್ಥಿಗಳು ಒತ್ತಾಯಿಸಿದ್ದಾರೆ.

ಮಂಗಳವಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರಕಟನೆ ಹೊರಡಿಸಿದ್ದು, ರಾಯಚೂರು ಕೃಷಿ ವಿಶ್ವವಿದ್ಯಾಲಯವು 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ 2023ರ ಅ.18ರಂದು ಅಧಿಸೂಚನೆಯನ್ನು ಹೊರಡಿಸಿತ್ತು. ಈ 75 ಹುದ್ದೆಗಳಲ್ಲಿ ಹೊಸ ಮೀಸಲಾತಿ ರೋಸ್ಟರ್ ಬಿಂದುಗಳ ಅನುಗುಣವಾಗಿ, ಮೊದಲ ರೋಸ್ಟರ್ ಬಿಂದು ಪರಿಶಿಷ್ಟ ಜಾತಿಗೆ ಮತ್ತು ಮೂರನೇ ರೋಸ್ಟರ್ ಬಿಂದು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ. 

75 ಹುದ್ದೆಗಳಲ್ಲಿ 24 ಹುದ್ದೆಗಳು ಪರಿಶಿಷ್ಟ ಜಾತಿಗೆ ಹಾಗೂ 10 ಹುದ್ದೆಗಳು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದ್ದು, ಒಟ್ಟಾರೆ 34 ಹುದ್ದೆಗಳು ದಲಿತ ಸಮುದಾಯಕ್ಕೆ ಮೀಸಲಾಗಿವೆ. ಇದನ್ನು ಸಹಿಸದ ಬಲಾಢ್ಯ ಜಾತಿಗಳ ಜನ ಪರೀಕ್ಷೆ ನಡೆಯದಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಲಾಗಿದೆ.  

ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 18/10/2023ರಂದು ಅಧಿಸೂಚನೆಯನ್ನು ಹೊರಡಿಸಲಾಗಿತ್ತು. 

ಈ 75 ಹುದ್ದೆಗಳಲ್ಲಿ ಹೊಸಮೀಸಲಾತಿ ರೋಸ್ಟರ್ ಬಿಂದುಗಳ ಅನುಗುಣವಾಗಿ, ಮೊದಲ ರೋಸ್ಟರ್ ಬಿಂದು ಪರಿಶಿಷ್ಟಜಾತಿಗೆ ಮತ್ತು ಮೂರನೇ ರೋಸ್ಟರ್ ಬಿಂದು ಪರಿಶಿಷ್ಟಪಂಗಡಕ್ಕೆ ಮೀಸಲಾಗಿರುತ್ತದೆ. 

ಅಧಿಸೂಚನೆಯಲ್ಲಿ ವಿಷಯವಾರು ಹುದ್ದೆಗಳನ್ನು ವಿಂಗಡಿಸಿರುವುದರಿಂದ, ಪ್ರತಿ ವಿಷಯದ ಮೊದಲ ಮತ್ತು ಮೂರನೇ ಸ್ಥಾನಗಳು ಕ್ರಮವಾಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಮೀಸಲಾಗಿವೆ. 

ಈ ರೀತಿ ಒಟ್ಟು 75 ಹುದ್ದೆಗಳಲ್ಲಿ 24 ಹುದ್ದೆಗಳು ಪರಿಶಿಷ್ಟ ಜಾತಿಗೆ ಹಾಗೂ 10 ಹುದ್ದೆಗಳು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದ್ದು, ಒಟ್ಟಾರೆ 34 ಹುದ್ದೆಗಳು ದಲಿತ ಸಮುದಾಯಕ್ಕೆ ಮೀಸಲಾಗಿವೆ. 

ಈ ನೇಮಕಾತಿ ಅಧಿಸೂಚನೆ ಪ್ರಕಟವಾದ ದಿನದಿಂದಲೂ, 75 ಹುದ್ದೆಗಳಲ್ಲಿ 34 ಹುದ್ದೆಗಳು ದಲಿತರಿಗೆ ಮೀಸಲಾಗಿರುವುದನ್ನು ಸಹಿಸದ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ವಿವಿಧ ರೀತಿಯ ಷಡ್ಯಂತ್ರಗಳ ಮೂಲಕ ನೇಮಕಾತಿ ಪ್ರಕ್ರಿಯೆಗೆ ಅಡ್ಡಿಪಡಿಸುತ್ತಾ ಬರುತ್ತಿದ್ದಾರೆ.

ಈ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷೆಯನ್ನು ದಿನಾಂಕ 22/02/2025 ರಂದು ನಡೆಸಲು ನಿಗದಿಪಡಿಸಲಾಗಿತ್ತು. ಆದರೆ ಪರೀಕ್ಷೆಗೆ ಕೇವಲ ಒಂದು ವಾರ ಬಾಕಿಯಿದ್ದಾಗಲೇ ಅದನ್ನು ಮುಂದೂಡಲಾಯಿತು. ನಂತರ ಪರೀಕ್ಷೆಯನ್ನು ದಿನಾಂಕ 05/03/2025ರಂದು ಮರುನಿಗದಿ ಪಡಿಸಲಾಯಿತು. 

ಆದರೆ ಪರೀಕ್ಷೆಗೆ ಕೇವಲ 12 ಗಂಟೆಗಳು ಉಳಿದಿದ್ದಾಗ ಯಾವುದೇ ಸಮಂಜಸ ಕಾರಣವಿಲ್ಲದೆ ಮತ್ತೆ ಪರೀಕ್ಷೆಯನ್ನು ಮುಂದೂಡಲಾಯಿತು.

ಇದಾದ ಬಳಿಕ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದಂತೆ ಕಲಬುರಗಿ ಹೈಕೋರ್ಟ್ನಲ್ಲಿ ಪ್ರಕರಣ ದಾಖಲಿಸಲಾಯಿತು (WP No. 202940 of 2024). 

ಹೈಕೋರ್ಟ್ ಈ ಪ್ರಕರಣದಲ್ಲಿ ತಾತ್ಕಾಲಿಕವಾಗಿ ಪರೀಕ್ಷಾ ಪ್ರಕ್ರಿಯೆಗೆ ತಡೆನೀಡಿತು.

ನಂತರ ಎಲ್ಲಾ ವಾದ–ವಿವಾದಗಳನ್ನು ಆಲಿಸಿದ ಗೌರವಾನ್ವಿತ ಕರ್ನಾಟಕ ಹೈಕೋರ್ಟ್, ದಿನಾಂಕ 04/08/2025ರಂದು

ಅರ್ಜಿಯನ್ನು ವಜಾಗೊಳಿಸಿ, ಅಧಿಸೂಚನೆ ಹಾಗೂ ನೇಮಕಾತಿ ಪ್ರಕ್ರಿಯೆ ಯುಜಿಸಿ ನಿಯಮಗಳ ಪ್ರಕಾರ ಸರಿಯಾಗಿದೆ ಎಂದು ಸ್ಪಷ್ಟ ತೀರ್ಪು ನೀಡಿತು. 

ಇಷ್ಟೆಲ್ಲಾ ಆದರೂ ಈವರೆಗೆ ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷೆಗಳು ನಡೆಯದಂತೆ ಪಟ್ಟಭದ್ರರು ನೋಡಿಕೊಂಡಿದ್ದಾರೆ. ಆದರೆ ಇದೇ ತಿಂಗಳ ಅಂದರೆ ಜನವರಿ 17 ಮತ್ತು ಜನವರಿ 18ರಂದು ಪರೀಕ್ಷಾ ದಿನಾಂಕ ನಿಗಧಿಯಾಗಿದ್ದು, ಈ ಬಾರಿ ಯಾವುದೇ ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯಕ್ಕೆ ಮಣಿದು ಪರೀಕ್ಷೆಯನ್ನು ಮುಂದೂಡಬಾರದು ಎಂದು ಅಭ್ಯರ್ಥಿಗಳು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...