Homeಕರ್ನಾಟಕಮಹಿಳೆಯರ ಗೌರವದ ಬದುಕಿಗಾಗಿ ಜಾಗೃತಿ ಮೂಡಿಸುವ ರಾಯಚೂರಿನ ಚಿನ್ನಮ್ಮ

ಮಹಿಳೆಯರ ಗೌರವದ ಬದುಕಿಗಾಗಿ ಜಾಗೃತಿ ಮೂಡಿಸುವ ರಾಯಚೂರಿನ ಚಿನ್ನಮ್ಮ

- Advertisement -
- Advertisement -

ಎಲೆಮರೆಯಾಗಿ ಕೆಲಸ ಮಾಡಿ ಸಾವಿರಾರು ಜನರು ನೆಮ್ಮದಿಯ, ಗೌರವದ ಬದುಕು ಕಟ್ಟಿಕೊಳ್ಳಲು ಕಾರಣವಾದ ಸಾಮಾಜಿಕ ಹೋರಾಟಗಾರರಲ್ಲಿ ಜಾಗೃತ ಮಹಿಳಾ ಸಂಘಟನೆಯ ಚಿನ್ನಮ್ಮ ಕೂಡ ಒಬ್ಬರು. ತಮ್ಮ ನೋವುಗಳನ್ನು ದಾಟಿ, ಮತ್ತೊಬ್ಬರ ನೋವಿಗೆ ಕಿವಿಯಾಗುವ ಇವರ ಬದುಕು, ಕೆಲಸ ಮತ್ತೊಬ್ಬರಿಗೂ ಸ್ಫೂರ್ತಿದಾಯಕ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಅವರ ಕಿರು ಪರಿಚಯ ಇಲ್ಲಿದೆ.

ರಾಯಚೂರು ಜಿಲ್ಲೆಯಲ್ಲಿ ಕೃಷಿ, ಕೂಲಿಕಾರ, ಬಡ-ದಲಿತ ಮಹಿಳೆಯರ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಹಕ್ಕುಗಳಿಗಾಗಿ, ಗೌರವದ ಬದುಕಿಗಾಗಿ ಹೋರಾಟ ನಡೆಸುವ ಜಾಗೃತ ಮಹಿಳಾ ಸಂಘಟನೆಯ ಅಧ್ಯಕ್ಷೆ ಚಿನ್ನಮ್ಮ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮುದ್ದಂಗುಡ್ಡಿ ಇವರ ಊರು.. ದೇವದಾಸಿ ಕುಟುಂಬದಲ್ಲಿ ಬೆಳೆದ ಅನಕ್ಷರಸ್ಥೆ.. ಬಾಲ್ಯ ವಿವಾಹಕ್ಕೆ ಸಿಲುಕಿ ಬಾಲ್ಯವನ್ನು ಕಳೆದುಕೊಂಡವರು ಚಿನ್ನಮ್ಮ. ಬಡತನ, ಜಾತಿ ವ್ಯವಸ್ಥೆಯ ಕಹಿ ಅನುಭವಗಳನ್ನು ಅನುಭವಿಸುತ್ತಾ ಬೆಳೆದವರು. ಅದರಲ್ಲೂ ದಲಿತ ಹೆಣ್ಣು ಮಗಳಾಗಿ ತನ್ನ ಸುತ್ತಲಿನ ಜನರ ನೋವನ್ನು ಕಾಣುತ್ತಾ, ಸಹಿಸುತ್ತಾ ಬೆಳೆದವರು.

ಇದನ್ನೂ ಓದಿ: ಅಂತಾರಾಷ್ಟ್ರೀಯ ಮಹಿಳಾ ದಿನ: ಸ್ತ್ರೀವಾದ ಸಮಾನ ಹಕ್ಕುಗಳ ಬೇಡಿಕೆಯಷ್ಟೆ ಅಲ್ಲ ಸಮಾನ ಗೌರವದ ಬೇಡಿಕೆ ಕೂಡ

ಜಾತಿ ಕಾರಣಕ್ಕೆ ಪುರುಷನಿಗಿಂತ ಮಹಿಳೆ ಅನುಭವಿಸುವ ಕಷ್ಟ ಕಂಡ ಇವರು ಮಹಿಳೆಯರ ಜೊತೆ ಸೇರಿ ಮಹಿಳಾ ಗುಂಪುಗಳನ್ನು ಕಟ್ಟಿದವರು. ಮನೆಯ ಗಂಡಸರು, ಊರ ಮುಖಂಡರು, ಪುಂಡ ಪೋಕರಿಗಳ ಮಾತಿಗೆ ತಲೆಕೆಡಿಸಿಕೊಳ್ಳದೆ ತನ್ನ ಹಕ್ಕುಗಳಿಗಾಗಿ ಬೀದಿಗಿಳಿದು ಹೋರಾಡಿದವರು.

ಝಾನ್ಸಿ ರಾಣಿ ಮಹಿಳಾ ಸಂಘದ ಮೂಲಕ ತನ್ನ ಊರಿನ ರಸ್ತೆಗಳ ನಿರ್ಮಾಣಕ್ಕೆ ಕೈಹಾಕಿ ಸೈ ಎನಿಕೊಂಡಿದ್ದಾರೆ. ಕೂಲಿ ಕೆಲಸಕ್ಕೆ ಹೋಗಿ ಬೇರೆಯವರ ಮುಂದೆ ನಿಂತು ಹೆಣ್ಣು ಎಂಬ ಕಾರಣಕ್ಕೆ ತಾವು ಅನುಭವಿಸಿದ್ದ ಅವಮಾನಗಳಿಂದ ಹೊರ ಬರಲು, ಗೌರವದ ಬದುಕು ಕಟ್ಟಿಕೊಳ್ಳಲು ಸ್ವಂತ ಉದ್ಯಮ ಸ್ಥಾಪಿಸಲು ನಿರ್ಧರಿಸಿ, ಸಹಾಯ ಬೇಡಿ ಪೋತ್ನಾಳ ಗ್ರಾಮದಲ್ಲಿ ಬೇವಿನ ಗೊಬ್ಬರ ತಯಾರಿಕಾ ಘಟಕ ಸ್ಥಾಪಿಸಿದವರು ಚಿನ್ನಮ್ಮ.

ತಮ್ಮ ಸಮುದಾಯದ ಮಹಿಳೆಯರು ಅನಾರೋಗ್ಯದಿಂದ ಆಸ್ಪತ್ರೆಗೆ ಹೋದರೆ, ಆಸ್ಪತ್ರೆಗಳ ವೈದ್ಯರು ಜಾತಿಯ ಕಾರಣಕ್ಕೆ ಮುಟ್ಟಲು ಹಿಂದೆ ಮುಂದೆ ನೋಡುತ್ತಿದ್ದದ್ದನ್ನು ಗಮನಿಸಿದ ಚಿನ್ನಮ್ಮ, ತಾವೇ ಮಹಿಳೆಯರ ಜೊತೆ ಸೇರಿ ಗಿಡಮೂಲಿಕೆ ಔಷಧಿಗಳನ್ನು ನೀಡುವುದನ್ನು ಕಲಿತಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ಮಹಿಳೆಯರ ಆರೋಗ್ಯ ಜಾಗೃತಿಗಾಗಿ ಬರಿಗಾಲಲ್ಲಿ ಹಳ್ಳಿ ಹಳ್ಳಿಗೂ ನಡೆದು, ಹೆಣ್ಣು ಮಕ್ಕಳಿಗೆ ಆರೋಗ್ಯದ ಬಗ್ಗೆ ತಿಳುವಳಿಕೆ ನೀಡಿದ್ದಾರೆ. ಗಿಡಮೂಲಿಕೆ ಔಷಧಿಗಳನ್ನು ಬಳಸುವುದನ್ನು ಹೇಳಿಕೊಟ್ಟಿದ್ದಾರೆ. ಇಂದಿಗೂ ಹೆಣ್ಣು ಮಕ್ಕಳ ಹಲವಾರು ಕಾಯಿಲೆಗಳಿಗೆ ಚಿನ್ನಮ್ಮನ ಬಳಿ ಔಷಧಿಗಳಿವೆ. ನಗರ ಪ್ರದೇಶಗಳಿಂದಲೂ ಇವರ ಬಳಿ ಚಿಕಿತ್ಸೆ ಪಡೆಯಲು ಬರುತ್ತಾರೆ.

ರಾಯಚೂರಿನ ಪೋತ್ನಾಳ ಗ್ರಾಮದಲ್ಲಿ ಬೇವಿನ ಬೀಜದ ಗೊಬ್ಬರ ತಯಾರಿಕಾ ಘಟಕ ಸ್ಥಾಪಿಸಿ ನೂರಾರು ಮಹಿಳೆಯರಿಗೆ ಕೆಲಸ ನೀಡಿದ ಚಿನ್ನಮ್ಮನಿಗೆ ದಕ್ಷಿಣ ಭಾರತದ ಯಶಸ್ವಿ ಕಿರು ಉದ್ಯಮಿ ರಾಷ್ಟ್ರೀಯ ಪ್ರಶಸ್ತಿ ಒಲಿದು ಬಂದಿದೆ. ಅಂತರಾಷ್ಟ್ರೀಯ ಸಂಸ್ಥೆಗಳಾದ ಸಿಟಿ ಗ್ರೂಪ್, UNDP, UNCDF ಸಂಯುಕ್ತವಾಗಿ ಪ್ರಶಸ್ತಿ ನೀಡಿ ಗೌರವಿಸಿವೆ.

PC: Jagrutha Mahila Sanghatan

ನಿರ್ದಿಷ್ಟವಾಗಿ ದಲಿತ ಮಹಿಳೆಯರನ್ನು ಸಂಘಟಿಸುವಲ್ಲಿನ ನಾಯಕತ್ವಕ್ಕಾಗಿ ಮತ್ತು ದಲಿತ ಮಹಿಳೆಯರ ಹಕ್ಕುಗಳಿಗಾಗಿ ಅವರು ಮಾಡಿದ ಕಾರ್ಯಕ್ಕಾಗಿ ರಾಷ್ಟ್ರಮಟ್ಟದ ಗೌರವವನ್ನು ನೀಡಲಾಗಿದೆ. ರಾಷ್ಟ್ರೀಯ ಮಹಿಳಾ ಆಯೋಗವು ಮಾರ್ಚ್ 21, 2013 ರಂದು ದೆಹಲಿಯಲ್ಲಿ ಈ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಿದೆ.

ಚಿನ್ನಮ್ಮ ಅವರ ಕೆಲಸವನ್ನು ಗುರುತಿಸಿದ ಕರ್ನಾಟಕ ರಾಜ್ಯ ಸರ್ಕಾರವು 2013 ರ ಮಾರ್ಚ್ 8 ರಂದು ಬೆಂಗಳೂರಿನಲ್ಲಿ ‘ಕಿತ್ತೂರು ಚಿನ್ನಮ್ಮ’ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಪ್ರಸಕ್ತ ವರ್ಷದ ಸೈರೋಸ್ ಕರ್ನಾಟಕ ಸಂಸ್ಥೆ ನೀಡುವ ಪ್ರಶಸ್ತಿಗೂ ಚಿನ್ನಮ್ಮ ಭಾಜನರಾಗಿದ್ದಾರೆ.

ಕೃಷಿ ಕೂಲಿಕಾರ ಬಡ ದಲಿತ ಮಹಿಳೆಯರ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಹಕ್ಕುಗಳಿಗಾಗಿ, ಗೌರವದ ಬದುಕಿಗಾಗಿ ಹೋರಾಟ ನಡೆಸುವ ಪೋತ್ನಾಳದ ಜಾಗೃತ ಮಹಿಳಾ ಸಂಘಟನೆಯ ಅಧ್ಯಕ್ಷೆಯಾಗಿ, ತನ್ನ ತಾಲೂಕಿನಲ್ಲಿ ಬಡ ಜನರ ಹಕ್ಕುಗಳಿಗಾಗಿ ಹೋರಾಡುತ್ತಾರೆ.

credit: Jagrutha Mahila Sanghatan

ಜನಾಧಿಕಾರ, ತಾಯಿ ಮಗು ಆರೋಗ್ಯದ ಹಕ್ಕೊತ್ತಾಯ, ಉದ್ಯೋಗದ ಹಕ್ಕು (ನರೇಗಾ) ಇವುಗಳ ಅನುಷ್ಠಾನಕ್ಕಾಗಿ ಮಹಿಳೆಯರನ್ನು, ಊರಿನ ಜನರನ್ನು ಒಗ್ಗೂಡಿಸಿ ಪ್ರತಿಭಟಿಸುತ್ತಾರೆ. ದಲಿತ ಬಾಲಕಿ ಅಂಬಿಕಾ ಹತ್ಯೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿದ ಪ್ರಮುಖ ಸಂಘಟನೆ ಜಾಗೃತ ಮಹಿಳಾ ಸಂಘಟನೆಯಾಗಿದೆ. ಮಹಿಳೆಯರ, ರಾಜಕೀಯ ಮತ್ತು ಆರ್ಥಿಕ ಹಕ್ಕುಗಳಿಗಾಗಿ, ಗೌರವದ ಬದುಕಿಗಾಗಿ ಹೋರಾಟ ನಡೆಸುತ್ತಿರುವ ಈ ಸಂಘಟನೆಯ ಮುಖ್ಯ ‌ಆಧಾರವಾಗಿ ಮುಂದಿನ ಪೀಳಿಗೆಗೆ ದಾರಿ ದೀಪವಾಗಿದ್ದಾರೆ ಚಿನ್ನಮ್ಮ.


ಇದನ್ನೂ ಓದಿ: ಬಹುಜನ ಭಾರತ; ಪ್ರತಿಭಟನೆ ಸಾಂವಿಧಾನಿಕ ಹಕ್ಕು ಎಂದ ನೌದೀಪ್ ಕೌರ್: ಡಿ ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...