Homeಕರ್ನಾಟಕಮಹಿಳೆಯರ ಗೌರವದ ಬದುಕಿಗಾಗಿ ಜಾಗೃತಿ ಮೂಡಿಸುವ ರಾಯಚೂರಿನ ಚಿನ್ನಮ್ಮ

ಮಹಿಳೆಯರ ಗೌರವದ ಬದುಕಿಗಾಗಿ ಜಾಗೃತಿ ಮೂಡಿಸುವ ರಾಯಚೂರಿನ ಚಿನ್ನಮ್ಮ

- Advertisement -
- Advertisement -

ಎಲೆಮರೆಯಾಗಿ ಕೆಲಸ ಮಾಡಿ ಸಾವಿರಾರು ಜನರು ನೆಮ್ಮದಿಯ, ಗೌರವದ ಬದುಕು ಕಟ್ಟಿಕೊಳ್ಳಲು ಕಾರಣವಾದ ಸಾಮಾಜಿಕ ಹೋರಾಟಗಾರರಲ್ಲಿ ಜಾಗೃತ ಮಹಿಳಾ ಸಂಘಟನೆಯ ಚಿನ್ನಮ್ಮ ಕೂಡ ಒಬ್ಬರು. ತಮ್ಮ ನೋವುಗಳನ್ನು ದಾಟಿ, ಮತ್ತೊಬ್ಬರ ನೋವಿಗೆ ಕಿವಿಯಾಗುವ ಇವರ ಬದುಕು, ಕೆಲಸ ಮತ್ತೊಬ್ಬರಿಗೂ ಸ್ಫೂರ್ತಿದಾಯಕ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಅವರ ಕಿರು ಪರಿಚಯ ಇಲ್ಲಿದೆ.

ರಾಯಚೂರು ಜಿಲ್ಲೆಯಲ್ಲಿ ಕೃಷಿ, ಕೂಲಿಕಾರ, ಬಡ-ದಲಿತ ಮಹಿಳೆಯರ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಹಕ್ಕುಗಳಿಗಾಗಿ, ಗೌರವದ ಬದುಕಿಗಾಗಿ ಹೋರಾಟ ನಡೆಸುವ ಜಾಗೃತ ಮಹಿಳಾ ಸಂಘಟನೆಯ ಅಧ್ಯಕ್ಷೆ ಚಿನ್ನಮ್ಮ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮುದ್ದಂಗುಡ್ಡಿ ಇವರ ಊರು.. ದೇವದಾಸಿ ಕುಟುಂಬದಲ್ಲಿ ಬೆಳೆದ ಅನಕ್ಷರಸ್ಥೆ.. ಬಾಲ್ಯ ವಿವಾಹಕ್ಕೆ ಸಿಲುಕಿ ಬಾಲ್ಯವನ್ನು ಕಳೆದುಕೊಂಡವರು ಚಿನ್ನಮ್ಮ. ಬಡತನ, ಜಾತಿ ವ್ಯವಸ್ಥೆಯ ಕಹಿ ಅನುಭವಗಳನ್ನು ಅನುಭವಿಸುತ್ತಾ ಬೆಳೆದವರು. ಅದರಲ್ಲೂ ದಲಿತ ಹೆಣ್ಣು ಮಗಳಾಗಿ ತನ್ನ ಸುತ್ತಲಿನ ಜನರ ನೋವನ್ನು ಕಾಣುತ್ತಾ, ಸಹಿಸುತ್ತಾ ಬೆಳೆದವರು.

ಇದನ್ನೂ ಓದಿ: ಅಂತಾರಾಷ್ಟ್ರೀಯ ಮಹಿಳಾ ದಿನ: ಸ್ತ್ರೀವಾದ ಸಮಾನ ಹಕ್ಕುಗಳ ಬೇಡಿಕೆಯಷ್ಟೆ ಅಲ್ಲ ಸಮಾನ ಗೌರವದ ಬೇಡಿಕೆ ಕೂಡ

ಜಾತಿ ಕಾರಣಕ್ಕೆ ಪುರುಷನಿಗಿಂತ ಮಹಿಳೆ ಅನುಭವಿಸುವ ಕಷ್ಟ ಕಂಡ ಇವರು ಮಹಿಳೆಯರ ಜೊತೆ ಸೇರಿ ಮಹಿಳಾ ಗುಂಪುಗಳನ್ನು ಕಟ್ಟಿದವರು. ಮನೆಯ ಗಂಡಸರು, ಊರ ಮುಖಂಡರು, ಪುಂಡ ಪೋಕರಿಗಳ ಮಾತಿಗೆ ತಲೆಕೆಡಿಸಿಕೊಳ್ಳದೆ ತನ್ನ ಹಕ್ಕುಗಳಿಗಾಗಿ ಬೀದಿಗಿಳಿದು ಹೋರಾಡಿದವರು.

ಝಾನ್ಸಿ ರಾಣಿ ಮಹಿಳಾ ಸಂಘದ ಮೂಲಕ ತನ್ನ ಊರಿನ ರಸ್ತೆಗಳ ನಿರ್ಮಾಣಕ್ಕೆ ಕೈಹಾಕಿ ಸೈ ಎನಿಕೊಂಡಿದ್ದಾರೆ. ಕೂಲಿ ಕೆಲಸಕ್ಕೆ ಹೋಗಿ ಬೇರೆಯವರ ಮುಂದೆ ನಿಂತು ಹೆಣ್ಣು ಎಂಬ ಕಾರಣಕ್ಕೆ ತಾವು ಅನುಭವಿಸಿದ್ದ ಅವಮಾನಗಳಿಂದ ಹೊರ ಬರಲು, ಗೌರವದ ಬದುಕು ಕಟ್ಟಿಕೊಳ್ಳಲು ಸ್ವಂತ ಉದ್ಯಮ ಸ್ಥಾಪಿಸಲು ನಿರ್ಧರಿಸಿ, ಸಹಾಯ ಬೇಡಿ ಪೋತ್ನಾಳ ಗ್ರಾಮದಲ್ಲಿ ಬೇವಿನ ಗೊಬ್ಬರ ತಯಾರಿಕಾ ಘಟಕ ಸ್ಥಾಪಿಸಿದವರು ಚಿನ್ನಮ್ಮ.

ತಮ್ಮ ಸಮುದಾಯದ ಮಹಿಳೆಯರು ಅನಾರೋಗ್ಯದಿಂದ ಆಸ್ಪತ್ರೆಗೆ ಹೋದರೆ, ಆಸ್ಪತ್ರೆಗಳ ವೈದ್ಯರು ಜಾತಿಯ ಕಾರಣಕ್ಕೆ ಮುಟ್ಟಲು ಹಿಂದೆ ಮುಂದೆ ನೋಡುತ್ತಿದ್ದದ್ದನ್ನು ಗಮನಿಸಿದ ಚಿನ್ನಮ್ಮ, ತಾವೇ ಮಹಿಳೆಯರ ಜೊತೆ ಸೇರಿ ಗಿಡಮೂಲಿಕೆ ಔಷಧಿಗಳನ್ನು ನೀಡುವುದನ್ನು ಕಲಿತಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ಮಹಿಳೆಯರ ಆರೋಗ್ಯ ಜಾಗೃತಿಗಾಗಿ ಬರಿಗಾಲಲ್ಲಿ ಹಳ್ಳಿ ಹಳ್ಳಿಗೂ ನಡೆದು, ಹೆಣ್ಣು ಮಕ್ಕಳಿಗೆ ಆರೋಗ್ಯದ ಬಗ್ಗೆ ತಿಳುವಳಿಕೆ ನೀಡಿದ್ದಾರೆ. ಗಿಡಮೂಲಿಕೆ ಔಷಧಿಗಳನ್ನು ಬಳಸುವುದನ್ನು ಹೇಳಿಕೊಟ್ಟಿದ್ದಾರೆ. ಇಂದಿಗೂ ಹೆಣ್ಣು ಮಕ್ಕಳ ಹಲವಾರು ಕಾಯಿಲೆಗಳಿಗೆ ಚಿನ್ನಮ್ಮನ ಬಳಿ ಔಷಧಿಗಳಿವೆ. ನಗರ ಪ್ರದೇಶಗಳಿಂದಲೂ ಇವರ ಬಳಿ ಚಿಕಿತ್ಸೆ ಪಡೆಯಲು ಬರುತ್ತಾರೆ.

ರಾಯಚೂರಿನ ಪೋತ್ನಾಳ ಗ್ರಾಮದಲ್ಲಿ ಬೇವಿನ ಬೀಜದ ಗೊಬ್ಬರ ತಯಾರಿಕಾ ಘಟಕ ಸ್ಥಾಪಿಸಿ ನೂರಾರು ಮಹಿಳೆಯರಿಗೆ ಕೆಲಸ ನೀಡಿದ ಚಿನ್ನಮ್ಮನಿಗೆ ದಕ್ಷಿಣ ಭಾರತದ ಯಶಸ್ವಿ ಕಿರು ಉದ್ಯಮಿ ರಾಷ್ಟ್ರೀಯ ಪ್ರಶಸ್ತಿ ಒಲಿದು ಬಂದಿದೆ. ಅಂತರಾಷ್ಟ್ರೀಯ ಸಂಸ್ಥೆಗಳಾದ ಸಿಟಿ ಗ್ರೂಪ್, UNDP, UNCDF ಸಂಯುಕ್ತವಾಗಿ ಪ್ರಶಸ್ತಿ ನೀಡಿ ಗೌರವಿಸಿವೆ.

PC: Jagrutha Mahila Sanghatan

ನಿರ್ದಿಷ್ಟವಾಗಿ ದಲಿತ ಮಹಿಳೆಯರನ್ನು ಸಂಘಟಿಸುವಲ್ಲಿನ ನಾಯಕತ್ವಕ್ಕಾಗಿ ಮತ್ತು ದಲಿತ ಮಹಿಳೆಯರ ಹಕ್ಕುಗಳಿಗಾಗಿ ಅವರು ಮಾಡಿದ ಕಾರ್ಯಕ್ಕಾಗಿ ರಾಷ್ಟ್ರಮಟ್ಟದ ಗೌರವವನ್ನು ನೀಡಲಾಗಿದೆ. ರಾಷ್ಟ್ರೀಯ ಮಹಿಳಾ ಆಯೋಗವು ಮಾರ್ಚ್ 21, 2013 ರಂದು ದೆಹಲಿಯಲ್ಲಿ ಈ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಿದೆ.

ಚಿನ್ನಮ್ಮ ಅವರ ಕೆಲಸವನ್ನು ಗುರುತಿಸಿದ ಕರ್ನಾಟಕ ರಾಜ್ಯ ಸರ್ಕಾರವು 2013 ರ ಮಾರ್ಚ್ 8 ರಂದು ಬೆಂಗಳೂರಿನಲ್ಲಿ ‘ಕಿತ್ತೂರು ಚಿನ್ನಮ್ಮ’ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಪ್ರಸಕ್ತ ವರ್ಷದ ಸೈರೋಸ್ ಕರ್ನಾಟಕ ಸಂಸ್ಥೆ ನೀಡುವ ಪ್ರಶಸ್ತಿಗೂ ಚಿನ್ನಮ್ಮ ಭಾಜನರಾಗಿದ್ದಾರೆ.

ಕೃಷಿ ಕೂಲಿಕಾರ ಬಡ ದಲಿತ ಮಹಿಳೆಯರ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಹಕ್ಕುಗಳಿಗಾಗಿ, ಗೌರವದ ಬದುಕಿಗಾಗಿ ಹೋರಾಟ ನಡೆಸುವ ಪೋತ್ನಾಳದ ಜಾಗೃತ ಮಹಿಳಾ ಸಂಘಟನೆಯ ಅಧ್ಯಕ್ಷೆಯಾಗಿ, ತನ್ನ ತಾಲೂಕಿನಲ್ಲಿ ಬಡ ಜನರ ಹಕ್ಕುಗಳಿಗಾಗಿ ಹೋರಾಡುತ್ತಾರೆ.

credit: Jagrutha Mahila Sanghatan

ಜನಾಧಿಕಾರ, ತಾಯಿ ಮಗು ಆರೋಗ್ಯದ ಹಕ್ಕೊತ್ತಾಯ, ಉದ್ಯೋಗದ ಹಕ್ಕು (ನರೇಗಾ) ಇವುಗಳ ಅನುಷ್ಠಾನಕ್ಕಾಗಿ ಮಹಿಳೆಯರನ್ನು, ಊರಿನ ಜನರನ್ನು ಒಗ್ಗೂಡಿಸಿ ಪ್ರತಿಭಟಿಸುತ್ತಾರೆ. ದಲಿತ ಬಾಲಕಿ ಅಂಬಿಕಾ ಹತ್ಯೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿದ ಪ್ರಮುಖ ಸಂಘಟನೆ ಜಾಗೃತ ಮಹಿಳಾ ಸಂಘಟನೆಯಾಗಿದೆ. ಮಹಿಳೆಯರ, ರಾಜಕೀಯ ಮತ್ತು ಆರ್ಥಿಕ ಹಕ್ಕುಗಳಿಗಾಗಿ, ಗೌರವದ ಬದುಕಿಗಾಗಿ ಹೋರಾಟ ನಡೆಸುತ್ತಿರುವ ಈ ಸಂಘಟನೆಯ ಮುಖ್ಯ ‌ಆಧಾರವಾಗಿ ಮುಂದಿನ ಪೀಳಿಗೆಗೆ ದಾರಿ ದೀಪವಾಗಿದ್ದಾರೆ ಚಿನ್ನಮ್ಮ.


ಇದನ್ನೂ ಓದಿ: ಬಹುಜನ ಭಾರತ; ಪ್ರತಿಭಟನೆ ಸಾಂವಿಧಾನಿಕ ಹಕ್ಕು ಎಂದ ನೌದೀಪ್ ಕೌರ್: ಡಿ ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...