Homeಕರ್ನಾಟಕಮಹಿಳೆಯರ ಗೌರವದ ಬದುಕಿಗಾಗಿ ಜಾಗೃತಿ ಮೂಡಿಸುವ ರಾಯಚೂರಿನ ಚಿನ್ನಮ್ಮ

ಮಹಿಳೆಯರ ಗೌರವದ ಬದುಕಿಗಾಗಿ ಜಾಗೃತಿ ಮೂಡಿಸುವ ರಾಯಚೂರಿನ ಚಿನ್ನಮ್ಮ

- Advertisement -
- Advertisement -

ಎಲೆಮರೆಯಾಗಿ ಕೆಲಸ ಮಾಡಿ ಸಾವಿರಾರು ಜನರು ನೆಮ್ಮದಿಯ, ಗೌರವದ ಬದುಕು ಕಟ್ಟಿಕೊಳ್ಳಲು ಕಾರಣವಾದ ಸಾಮಾಜಿಕ ಹೋರಾಟಗಾರರಲ್ಲಿ ಜಾಗೃತ ಮಹಿಳಾ ಸಂಘಟನೆಯ ಚಿನ್ನಮ್ಮ ಕೂಡ ಒಬ್ಬರು. ತಮ್ಮ ನೋವುಗಳನ್ನು ದಾಟಿ, ಮತ್ತೊಬ್ಬರ ನೋವಿಗೆ ಕಿವಿಯಾಗುವ ಇವರ ಬದುಕು, ಕೆಲಸ ಮತ್ತೊಬ್ಬರಿಗೂ ಸ್ಫೂರ್ತಿದಾಯಕ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಅವರ ಕಿರು ಪರಿಚಯ ಇಲ್ಲಿದೆ.

ರಾಯಚೂರು ಜಿಲ್ಲೆಯಲ್ಲಿ ಕೃಷಿ, ಕೂಲಿಕಾರ, ಬಡ-ದಲಿತ ಮಹಿಳೆಯರ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಹಕ್ಕುಗಳಿಗಾಗಿ, ಗೌರವದ ಬದುಕಿಗಾಗಿ ಹೋರಾಟ ನಡೆಸುವ ಜಾಗೃತ ಮಹಿಳಾ ಸಂಘಟನೆಯ ಅಧ್ಯಕ್ಷೆ ಚಿನ್ನಮ್ಮ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮುದ್ದಂಗುಡ್ಡಿ ಇವರ ಊರು.. ದೇವದಾಸಿ ಕುಟುಂಬದಲ್ಲಿ ಬೆಳೆದ ಅನಕ್ಷರಸ್ಥೆ.. ಬಾಲ್ಯ ವಿವಾಹಕ್ಕೆ ಸಿಲುಕಿ ಬಾಲ್ಯವನ್ನು ಕಳೆದುಕೊಂಡವರು ಚಿನ್ನಮ್ಮ. ಬಡತನ, ಜಾತಿ ವ್ಯವಸ್ಥೆಯ ಕಹಿ ಅನುಭವಗಳನ್ನು ಅನುಭವಿಸುತ್ತಾ ಬೆಳೆದವರು. ಅದರಲ್ಲೂ ದಲಿತ ಹೆಣ್ಣು ಮಗಳಾಗಿ ತನ್ನ ಸುತ್ತಲಿನ ಜನರ ನೋವನ್ನು ಕಾಣುತ್ತಾ, ಸಹಿಸುತ್ತಾ ಬೆಳೆದವರು.

ಇದನ್ನೂ ಓದಿ: ಅಂತಾರಾಷ್ಟ್ರೀಯ ಮಹಿಳಾ ದಿನ: ಸ್ತ್ರೀವಾದ ಸಮಾನ ಹಕ್ಕುಗಳ ಬೇಡಿಕೆಯಷ್ಟೆ ಅಲ್ಲ ಸಮಾನ ಗೌರವದ ಬೇಡಿಕೆ ಕೂಡ

ಜಾತಿ ಕಾರಣಕ್ಕೆ ಪುರುಷನಿಗಿಂತ ಮಹಿಳೆ ಅನುಭವಿಸುವ ಕಷ್ಟ ಕಂಡ ಇವರು ಮಹಿಳೆಯರ ಜೊತೆ ಸೇರಿ ಮಹಿಳಾ ಗುಂಪುಗಳನ್ನು ಕಟ್ಟಿದವರು. ಮನೆಯ ಗಂಡಸರು, ಊರ ಮುಖಂಡರು, ಪುಂಡ ಪೋಕರಿಗಳ ಮಾತಿಗೆ ತಲೆಕೆಡಿಸಿಕೊಳ್ಳದೆ ತನ್ನ ಹಕ್ಕುಗಳಿಗಾಗಿ ಬೀದಿಗಿಳಿದು ಹೋರಾಡಿದವರು.

ಝಾನ್ಸಿ ರಾಣಿ ಮಹಿಳಾ ಸಂಘದ ಮೂಲಕ ತನ್ನ ಊರಿನ ರಸ್ತೆಗಳ ನಿರ್ಮಾಣಕ್ಕೆ ಕೈಹಾಕಿ ಸೈ ಎನಿಕೊಂಡಿದ್ದಾರೆ. ಕೂಲಿ ಕೆಲಸಕ್ಕೆ ಹೋಗಿ ಬೇರೆಯವರ ಮುಂದೆ ನಿಂತು ಹೆಣ್ಣು ಎಂಬ ಕಾರಣಕ್ಕೆ ತಾವು ಅನುಭವಿಸಿದ್ದ ಅವಮಾನಗಳಿಂದ ಹೊರ ಬರಲು, ಗೌರವದ ಬದುಕು ಕಟ್ಟಿಕೊಳ್ಳಲು ಸ್ವಂತ ಉದ್ಯಮ ಸ್ಥಾಪಿಸಲು ನಿರ್ಧರಿಸಿ, ಸಹಾಯ ಬೇಡಿ ಪೋತ್ನಾಳ ಗ್ರಾಮದಲ್ಲಿ ಬೇವಿನ ಗೊಬ್ಬರ ತಯಾರಿಕಾ ಘಟಕ ಸ್ಥಾಪಿಸಿದವರು ಚಿನ್ನಮ್ಮ.

ತಮ್ಮ ಸಮುದಾಯದ ಮಹಿಳೆಯರು ಅನಾರೋಗ್ಯದಿಂದ ಆಸ್ಪತ್ರೆಗೆ ಹೋದರೆ, ಆಸ್ಪತ್ರೆಗಳ ವೈದ್ಯರು ಜಾತಿಯ ಕಾರಣಕ್ಕೆ ಮುಟ್ಟಲು ಹಿಂದೆ ಮುಂದೆ ನೋಡುತ್ತಿದ್ದದ್ದನ್ನು ಗಮನಿಸಿದ ಚಿನ್ನಮ್ಮ, ತಾವೇ ಮಹಿಳೆಯರ ಜೊತೆ ಸೇರಿ ಗಿಡಮೂಲಿಕೆ ಔಷಧಿಗಳನ್ನು ನೀಡುವುದನ್ನು ಕಲಿತಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ಮಹಿಳೆಯರ ಆರೋಗ್ಯ ಜಾಗೃತಿಗಾಗಿ ಬರಿಗಾಲಲ್ಲಿ ಹಳ್ಳಿ ಹಳ್ಳಿಗೂ ನಡೆದು, ಹೆಣ್ಣು ಮಕ್ಕಳಿಗೆ ಆರೋಗ್ಯದ ಬಗ್ಗೆ ತಿಳುವಳಿಕೆ ನೀಡಿದ್ದಾರೆ. ಗಿಡಮೂಲಿಕೆ ಔಷಧಿಗಳನ್ನು ಬಳಸುವುದನ್ನು ಹೇಳಿಕೊಟ್ಟಿದ್ದಾರೆ. ಇಂದಿಗೂ ಹೆಣ್ಣು ಮಕ್ಕಳ ಹಲವಾರು ಕಾಯಿಲೆಗಳಿಗೆ ಚಿನ್ನಮ್ಮನ ಬಳಿ ಔಷಧಿಗಳಿವೆ. ನಗರ ಪ್ರದೇಶಗಳಿಂದಲೂ ಇವರ ಬಳಿ ಚಿಕಿತ್ಸೆ ಪಡೆಯಲು ಬರುತ್ತಾರೆ.

ರಾಯಚೂರಿನ ಪೋತ್ನಾಳ ಗ್ರಾಮದಲ್ಲಿ ಬೇವಿನ ಬೀಜದ ಗೊಬ್ಬರ ತಯಾರಿಕಾ ಘಟಕ ಸ್ಥಾಪಿಸಿ ನೂರಾರು ಮಹಿಳೆಯರಿಗೆ ಕೆಲಸ ನೀಡಿದ ಚಿನ್ನಮ್ಮನಿಗೆ ದಕ್ಷಿಣ ಭಾರತದ ಯಶಸ್ವಿ ಕಿರು ಉದ್ಯಮಿ ರಾಷ್ಟ್ರೀಯ ಪ್ರಶಸ್ತಿ ಒಲಿದು ಬಂದಿದೆ. ಅಂತರಾಷ್ಟ್ರೀಯ ಸಂಸ್ಥೆಗಳಾದ ಸಿಟಿ ಗ್ರೂಪ್, UNDP, UNCDF ಸಂಯುಕ್ತವಾಗಿ ಪ್ರಶಸ್ತಿ ನೀಡಿ ಗೌರವಿಸಿವೆ.

PC: Jagrutha Mahila Sanghatan

ನಿರ್ದಿಷ್ಟವಾಗಿ ದಲಿತ ಮಹಿಳೆಯರನ್ನು ಸಂಘಟಿಸುವಲ್ಲಿನ ನಾಯಕತ್ವಕ್ಕಾಗಿ ಮತ್ತು ದಲಿತ ಮಹಿಳೆಯರ ಹಕ್ಕುಗಳಿಗಾಗಿ ಅವರು ಮಾಡಿದ ಕಾರ್ಯಕ್ಕಾಗಿ ರಾಷ್ಟ್ರಮಟ್ಟದ ಗೌರವವನ್ನು ನೀಡಲಾಗಿದೆ. ರಾಷ್ಟ್ರೀಯ ಮಹಿಳಾ ಆಯೋಗವು ಮಾರ್ಚ್ 21, 2013 ರಂದು ದೆಹಲಿಯಲ್ಲಿ ಈ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಿದೆ.

ಚಿನ್ನಮ್ಮ ಅವರ ಕೆಲಸವನ್ನು ಗುರುತಿಸಿದ ಕರ್ನಾಟಕ ರಾಜ್ಯ ಸರ್ಕಾರವು 2013 ರ ಮಾರ್ಚ್ 8 ರಂದು ಬೆಂಗಳೂರಿನಲ್ಲಿ ‘ಕಿತ್ತೂರು ಚಿನ್ನಮ್ಮ’ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಪ್ರಸಕ್ತ ವರ್ಷದ ಸೈರೋಸ್ ಕರ್ನಾಟಕ ಸಂಸ್ಥೆ ನೀಡುವ ಪ್ರಶಸ್ತಿಗೂ ಚಿನ್ನಮ್ಮ ಭಾಜನರಾಗಿದ್ದಾರೆ.

ಕೃಷಿ ಕೂಲಿಕಾರ ಬಡ ದಲಿತ ಮಹಿಳೆಯರ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಹಕ್ಕುಗಳಿಗಾಗಿ, ಗೌರವದ ಬದುಕಿಗಾಗಿ ಹೋರಾಟ ನಡೆಸುವ ಪೋತ್ನಾಳದ ಜಾಗೃತ ಮಹಿಳಾ ಸಂಘಟನೆಯ ಅಧ್ಯಕ್ಷೆಯಾಗಿ, ತನ್ನ ತಾಲೂಕಿನಲ್ಲಿ ಬಡ ಜನರ ಹಕ್ಕುಗಳಿಗಾಗಿ ಹೋರಾಡುತ್ತಾರೆ.

credit: Jagrutha Mahila Sanghatan

ಜನಾಧಿಕಾರ, ತಾಯಿ ಮಗು ಆರೋಗ್ಯದ ಹಕ್ಕೊತ್ತಾಯ, ಉದ್ಯೋಗದ ಹಕ್ಕು (ನರೇಗಾ) ಇವುಗಳ ಅನುಷ್ಠಾನಕ್ಕಾಗಿ ಮಹಿಳೆಯರನ್ನು, ಊರಿನ ಜನರನ್ನು ಒಗ್ಗೂಡಿಸಿ ಪ್ರತಿಭಟಿಸುತ್ತಾರೆ. ದಲಿತ ಬಾಲಕಿ ಅಂಬಿಕಾ ಹತ್ಯೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿದ ಪ್ರಮುಖ ಸಂಘಟನೆ ಜಾಗೃತ ಮಹಿಳಾ ಸಂಘಟನೆಯಾಗಿದೆ. ಮಹಿಳೆಯರ, ರಾಜಕೀಯ ಮತ್ತು ಆರ್ಥಿಕ ಹಕ್ಕುಗಳಿಗಾಗಿ, ಗೌರವದ ಬದುಕಿಗಾಗಿ ಹೋರಾಟ ನಡೆಸುತ್ತಿರುವ ಈ ಸಂಘಟನೆಯ ಮುಖ್ಯ ‌ಆಧಾರವಾಗಿ ಮುಂದಿನ ಪೀಳಿಗೆಗೆ ದಾರಿ ದೀಪವಾಗಿದ್ದಾರೆ ಚಿನ್ನಮ್ಮ.


ಇದನ್ನೂ ಓದಿ: ಬಹುಜನ ಭಾರತ; ಪ್ರತಿಭಟನೆ ಸಾಂವಿಧಾನಿಕ ಹಕ್ಕು ಎಂದ ನೌದೀಪ್ ಕೌರ್: ಡಿ ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...