Homeಕರ್ನಾಟಕಮಹಿಳೆಯರ ಗೌರವದ ಬದುಕಿಗಾಗಿ ಜಾಗೃತಿ ಮೂಡಿಸುವ ರಾಯಚೂರಿನ ಚಿನ್ನಮ್ಮ

ಮಹಿಳೆಯರ ಗೌರವದ ಬದುಕಿಗಾಗಿ ಜಾಗೃತಿ ಮೂಡಿಸುವ ರಾಯಚೂರಿನ ಚಿನ್ನಮ್ಮ

- Advertisement -
- Advertisement -

ಎಲೆಮರೆಯಾಗಿ ಕೆಲಸ ಮಾಡಿ ಸಾವಿರಾರು ಜನರು ನೆಮ್ಮದಿಯ, ಗೌರವದ ಬದುಕು ಕಟ್ಟಿಕೊಳ್ಳಲು ಕಾರಣವಾದ ಸಾಮಾಜಿಕ ಹೋರಾಟಗಾರರಲ್ಲಿ ಜಾಗೃತ ಮಹಿಳಾ ಸಂಘಟನೆಯ ಚಿನ್ನಮ್ಮ ಕೂಡ ಒಬ್ಬರು. ತಮ್ಮ ನೋವುಗಳನ್ನು ದಾಟಿ, ಮತ್ತೊಬ್ಬರ ನೋವಿಗೆ ಕಿವಿಯಾಗುವ ಇವರ ಬದುಕು, ಕೆಲಸ ಮತ್ತೊಬ್ಬರಿಗೂ ಸ್ಫೂರ್ತಿದಾಯಕ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಅವರ ಕಿರು ಪರಿಚಯ ಇಲ್ಲಿದೆ.

ರಾಯಚೂರು ಜಿಲ್ಲೆಯಲ್ಲಿ ಕೃಷಿ, ಕೂಲಿಕಾರ, ಬಡ-ದಲಿತ ಮಹಿಳೆಯರ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಹಕ್ಕುಗಳಿಗಾಗಿ, ಗೌರವದ ಬದುಕಿಗಾಗಿ ಹೋರಾಟ ನಡೆಸುವ ಜಾಗೃತ ಮಹಿಳಾ ಸಂಘಟನೆಯ ಅಧ್ಯಕ್ಷೆ ಚಿನ್ನಮ್ಮ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮುದ್ದಂಗುಡ್ಡಿ ಇವರ ಊರು.. ದೇವದಾಸಿ ಕುಟುಂಬದಲ್ಲಿ ಬೆಳೆದ ಅನಕ್ಷರಸ್ಥೆ.. ಬಾಲ್ಯ ವಿವಾಹಕ್ಕೆ ಸಿಲುಕಿ ಬಾಲ್ಯವನ್ನು ಕಳೆದುಕೊಂಡವರು ಚಿನ್ನಮ್ಮ. ಬಡತನ, ಜಾತಿ ವ್ಯವಸ್ಥೆಯ ಕಹಿ ಅನುಭವಗಳನ್ನು ಅನುಭವಿಸುತ್ತಾ ಬೆಳೆದವರು. ಅದರಲ್ಲೂ ದಲಿತ ಹೆಣ್ಣು ಮಗಳಾಗಿ ತನ್ನ ಸುತ್ತಲಿನ ಜನರ ನೋವನ್ನು ಕಾಣುತ್ತಾ, ಸಹಿಸುತ್ತಾ ಬೆಳೆದವರು.

ಇದನ್ನೂ ಓದಿ: ಅಂತಾರಾಷ್ಟ್ರೀಯ ಮಹಿಳಾ ದಿನ: ಸ್ತ್ರೀವಾದ ಸಮಾನ ಹಕ್ಕುಗಳ ಬೇಡಿಕೆಯಷ್ಟೆ ಅಲ್ಲ ಸಮಾನ ಗೌರವದ ಬೇಡಿಕೆ ಕೂಡ

ಜಾತಿ ಕಾರಣಕ್ಕೆ ಪುರುಷನಿಗಿಂತ ಮಹಿಳೆ ಅನುಭವಿಸುವ ಕಷ್ಟ ಕಂಡ ಇವರು ಮಹಿಳೆಯರ ಜೊತೆ ಸೇರಿ ಮಹಿಳಾ ಗುಂಪುಗಳನ್ನು ಕಟ್ಟಿದವರು. ಮನೆಯ ಗಂಡಸರು, ಊರ ಮುಖಂಡರು, ಪುಂಡ ಪೋಕರಿಗಳ ಮಾತಿಗೆ ತಲೆಕೆಡಿಸಿಕೊಳ್ಳದೆ ತನ್ನ ಹಕ್ಕುಗಳಿಗಾಗಿ ಬೀದಿಗಿಳಿದು ಹೋರಾಡಿದವರು.

ಝಾನ್ಸಿ ರಾಣಿ ಮಹಿಳಾ ಸಂಘದ ಮೂಲಕ ತನ್ನ ಊರಿನ ರಸ್ತೆಗಳ ನಿರ್ಮಾಣಕ್ಕೆ ಕೈಹಾಕಿ ಸೈ ಎನಿಕೊಂಡಿದ್ದಾರೆ. ಕೂಲಿ ಕೆಲಸಕ್ಕೆ ಹೋಗಿ ಬೇರೆಯವರ ಮುಂದೆ ನಿಂತು ಹೆಣ್ಣು ಎಂಬ ಕಾರಣಕ್ಕೆ ತಾವು ಅನುಭವಿಸಿದ್ದ ಅವಮಾನಗಳಿಂದ ಹೊರ ಬರಲು, ಗೌರವದ ಬದುಕು ಕಟ್ಟಿಕೊಳ್ಳಲು ಸ್ವಂತ ಉದ್ಯಮ ಸ್ಥಾಪಿಸಲು ನಿರ್ಧರಿಸಿ, ಸಹಾಯ ಬೇಡಿ ಪೋತ್ನಾಳ ಗ್ರಾಮದಲ್ಲಿ ಬೇವಿನ ಗೊಬ್ಬರ ತಯಾರಿಕಾ ಘಟಕ ಸ್ಥಾಪಿಸಿದವರು ಚಿನ್ನಮ್ಮ.

ತಮ್ಮ ಸಮುದಾಯದ ಮಹಿಳೆಯರು ಅನಾರೋಗ್ಯದಿಂದ ಆಸ್ಪತ್ರೆಗೆ ಹೋದರೆ, ಆಸ್ಪತ್ರೆಗಳ ವೈದ್ಯರು ಜಾತಿಯ ಕಾರಣಕ್ಕೆ ಮುಟ್ಟಲು ಹಿಂದೆ ಮುಂದೆ ನೋಡುತ್ತಿದ್ದದ್ದನ್ನು ಗಮನಿಸಿದ ಚಿನ್ನಮ್ಮ, ತಾವೇ ಮಹಿಳೆಯರ ಜೊತೆ ಸೇರಿ ಗಿಡಮೂಲಿಕೆ ಔಷಧಿಗಳನ್ನು ನೀಡುವುದನ್ನು ಕಲಿತಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ಮಹಿಳೆಯರ ಆರೋಗ್ಯ ಜಾಗೃತಿಗಾಗಿ ಬರಿಗಾಲಲ್ಲಿ ಹಳ್ಳಿ ಹಳ್ಳಿಗೂ ನಡೆದು, ಹೆಣ್ಣು ಮಕ್ಕಳಿಗೆ ಆರೋಗ್ಯದ ಬಗ್ಗೆ ತಿಳುವಳಿಕೆ ನೀಡಿದ್ದಾರೆ. ಗಿಡಮೂಲಿಕೆ ಔಷಧಿಗಳನ್ನು ಬಳಸುವುದನ್ನು ಹೇಳಿಕೊಟ್ಟಿದ್ದಾರೆ. ಇಂದಿಗೂ ಹೆಣ್ಣು ಮಕ್ಕಳ ಹಲವಾರು ಕಾಯಿಲೆಗಳಿಗೆ ಚಿನ್ನಮ್ಮನ ಬಳಿ ಔಷಧಿಗಳಿವೆ. ನಗರ ಪ್ರದೇಶಗಳಿಂದಲೂ ಇವರ ಬಳಿ ಚಿಕಿತ್ಸೆ ಪಡೆಯಲು ಬರುತ್ತಾರೆ.

ರಾಯಚೂರಿನ ಪೋತ್ನಾಳ ಗ್ರಾಮದಲ್ಲಿ ಬೇವಿನ ಬೀಜದ ಗೊಬ್ಬರ ತಯಾರಿಕಾ ಘಟಕ ಸ್ಥಾಪಿಸಿ ನೂರಾರು ಮಹಿಳೆಯರಿಗೆ ಕೆಲಸ ನೀಡಿದ ಚಿನ್ನಮ್ಮನಿಗೆ ದಕ್ಷಿಣ ಭಾರತದ ಯಶಸ್ವಿ ಕಿರು ಉದ್ಯಮಿ ರಾಷ್ಟ್ರೀಯ ಪ್ರಶಸ್ತಿ ಒಲಿದು ಬಂದಿದೆ. ಅಂತರಾಷ್ಟ್ರೀಯ ಸಂಸ್ಥೆಗಳಾದ ಸಿಟಿ ಗ್ರೂಪ್, UNDP, UNCDF ಸಂಯುಕ್ತವಾಗಿ ಪ್ರಶಸ್ತಿ ನೀಡಿ ಗೌರವಿಸಿವೆ.

PC: Jagrutha Mahila Sanghatan

ನಿರ್ದಿಷ್ಟವಾಗಿ ದಲಿತ ಮಹಿಳೆಯರನ್ನು ಸಂಘಟಿಸುವಲ್ಲಿನ ನಾಯಕತ್ವಕ್ಕಾಗಿ ಮತ್ತು ದಲಿತ ಮಹಿಳೆಯರ ಹಕ್ಕುಗಳಿಗಾಗಿ ಅವರು ಮಾಡಿದ ಕಾರ್ಯಕ್ಕಾಗಿ ರಾಷ್ಟ್ರಮಟ್ಟದ ಗೌರವವನ್ನು ನೀಡಲಾಗಿದೆ. ರಾಷ್ಟ್ರೀಯ ಮಹಿಳಾ ಆಯೋಗವು ಮಾರ್ಚ್ 21, 2013 ರಂದು ದೆಹಲಿಯಲ್ಲಿ ಈ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಿದೆ.

ಚಿನ್ನಮ್ಮ ಅವರ ಕೆಲಸವನ್ನು ಗುರುತಿಸಿದ ಕರ್ನಾಟಕ ರಾಜ್ಯ ಸರ್ಕಾರವು 2013 ರ ಮಾರ್ಚ್ 8 ರಂದು ಬೆಂಗಳೂರಿನಲ್ಲಿ ‘ಕಿತ್ತೂರು ಚಿನ್ನಮ್ಮ’ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಪ್ರಸಕ್ತ ವರ್ಷದ ಸೈರೋಸ್ ಕರ್ನಾಟಕ ಸಂಸ್ಥೆ ನೀಡುವ ಪ್ರಶಸ್ತಿಗೂ ಚಿನ್ನಮ್ಮ ಭಾಜನರಾಗಿದ್ದಾರೆ.

ಕೃಷಿ ಕೂಲಿಕಾರ ಬಡ ದಲಿತ ಮಹಿಳೆಯರ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಹಕ್ಕುಗಳಿಗಾಗಿ, ಗೌರವದ ಬದುಕಿಗಾಗಿ ಹೋರಾಟ ನಡೆಸುವ ಪೋತ್ನಾಳದ ಜಾಗೃತ ಮಹಿಳಾ ಸಂಘಟನೆಯ ಅಧ್ಯಕ್ಷೆಯಾಗಿ, ತನ್ನ ತಾಲೂಕಿನಲ್ಲಿ ಬಡ ಜನರ ಹಕ್ಕುಗಳಿಗಾಗಿ ಹೋರಾಡುತ್ತಾರೆ.

credit: Jagrutha Mahila Sanghatan

ಜನಾಧಿಕಾರ, ತಾಯಿ ಮಗು ಆರೋಗ್ಯದ ಹಕ್ಕೊತ್ತಾಯ, ಉದ್ಯೋಗದ ಹಕ್ಕು (ನರೇಗಾ) ಇವುಗಳ ಅನುಷ್ಠಾನಕ್ಕಾಗಿ ಮಹಿಳೆಯರನ್ನು, ಊರಿನ ಜನರನ್ನು ಒಗ್ಗೂಡಿಸಿ ಪ್ರತಿಭಟಿಸುತ್ತಾರೆ. ದಲಿತ ಬಾಲಕಿ ಅಂಬಿಕಾ ಹತ್ಯೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿದ ಪ್ರಮುಖ ಸಂಘಟನೆ ಜಾಗೃತ ಮಹಿಳಾ ಸಂಘಟನೆಯಾಗಿದೆ. ಮಹಿಳೆಯರ, ರಾಜಕೀಯ ಮತ್ತು ಆರ್ಥಿಕ ಹಕ್ಕುಗಳಿಗಾಗಿ, ಗೌರವದ ಬದುಕಿಗಾಗಿ ಹೋರಾಟ ನಡೆಸುತ್ತಿರುವ ಈ ಸಂಘಟನೆಯ ಮುಖ್ಯ ‌ಆಧಾರವಾಗಿ ಮುಂದಿನ ಪೀಳಿಗೆಗೆ ದಾರಿ ದೀಪವಾಗಿದ್ದಾರೆ ಚಿನ್ನಮ್ಮ.


ಇದನ್ನೂ ಓದಿ: ಬಹುಜನ ಭಾರತ; ಪ್ರತಿಭಟನೆ ಸಾಂವಿಧಾನಿಕ ಹಕ್ಕು ಎಂದ ನೌದೀಪ್ ಕೌರ್: ಡಿ ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...