Homeಮುಖಪುಟರಾಯಚೂರು ಜಿಲ್ಲೆಯನ್ನು ತೆಲಂಗಾಣಕ್ಕೆ ಸೇರಿಸಬೇಕು: ಕೆಸಿಆರ್ ಹೇಳಿಕೆಗೆ ಕಾಂಗ್ರೆಸ್ ತೀವ್ರ ವಿರೋಧ

ರಾಯಚೂರು ಜಿಲ್ಲೆಯನ್ನು ತೆಲಂಗಾಣಕ್ಕೆ ಸೇರಿಸಬೇಕು: ಕೆಸಿಆರ್ ಹೇಳಿಕೆಗೆ ಕಾಂಗ್ರೆಸ್ ತೀವ್ರ ವಿರೋಧ

- Advertisement -
- Advertisement -

ಕರ್ನಾಟಕದ ರಾಯಚೂರು ಜಿಲ್ಲೆಯನ್ನು ತೆಲಂಗಾಣ ರಾಜ್ಯಕ್ಕೆ ಸೇರಿಸಿಕೊಳ್ಳಬೇಕೆಂದು ಅಲ್ಲಿನ ಜನ ಹೇಳುತ್ತಿದ್ದಾರೆಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಪಕ್ಷದ ಮುಖಂಡರು ಕೆಸಿಆರ್ ಹೇಳಿಕೆಯನ್ನು ವಿರೋಧಿಸಿದ್ದಾರೆ.

ತೆಲಂಗಾಣದಲ್ಲಿ 2016 ರಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ವಿಕಾರಾಬಾದ್ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕಛೇರಿ ಉದ್ಘಾಟನೆ ವೇಳೆ ಕೆಸಿಆರ್, “ತೆಲಂಗಾಣದಲ್ಲಿ ನಡೆಯುತ್ತಿರುವ ಕಲ್ಯಾಣ ಕಾರ್‍ಯಕ್ರಮಗಳನ್ನು ನೋಡಿ ರಾಯಚೂರು ಗಡಿ ಭಾಗದ ಜನ ಸಹ ತಮ್ಮ ಜಿಲ್ಲೆಯನ್ನು ತೆಲಂಗಾಣ ರಾಜ್ಯಕ್ಕೆ ಸೇರಿಸಬೇಕು, ಇಲ್ಲವೇ ಅಲ್ಲಿ ನೀಡುತ್ತಿರುವ ಸವಲತ್ತುಗಳನ್ನು ನಮಗೂ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ” ಎಂದಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಜನರಿಗೆ ಉಚಿತ ಕುಡಿಯುವ ನೀರು ಒದಗಿಸುವ ಭಗೀರಥ ಯೋಜನೆ ಜಾರಿಗೊಳಿಸಿದ್ದೇವೆ. ಬಸುರಿ-ಬಾಣಂತಿಯರಿಗೆ ಕೆಸಿಆರ್‌ ಕಿಟ್ ನೀಡುತ್ತಿದ್ದೇವೆ, ಉಚಿತ ವಿದ್ಯುತ್ ಜೊತೆಗೆ ರೈತರಿಗೆ ವಾರ್ಷಿಕ 10,000 ಧನ ಸಹಾಯ ನೀಡುತ್ತಿದ್ದೇವೆ. ಇವೆಲ್ಲವೂ ಅಲ್ಲಿನ ಜನರನ್ನು ಆಕರ್ಷಿಸಿದೆ ಎಂದು ಕೆಸಿಆರ್ ಹೇಳಿದ್ದಾರೆ.

ಕಳೆದ ವರ್ಷ ರಾಯಚೂರಿನ ಬಿಜೆಪಿ ಶಾಸಕ ಡಾ.ಶಿವರಾಜ ಪಾಟೀಲ್‌ರವರು ರಾಯಚೂರು ತೆಲಂಗಾಣಕ್ಕೆ ಸೇರಬೇಕೆಂದು ಹೇಳಿಕೆ ನೀಡಿದ್ದರು. ಅದನ್ನು ತೆಲಂಗಾಣದ ಕೆ.ಟಿ ರಾಮರಾವ್ ಸೇರಿದಂತೆ ಹಲವು ನಾಯಕರು ಟ್ವೀಟ್ ಮಾಡಿ ಸ್ವಾಗತಿಸಿದ್ದರು.

ಸದ್ಯದ ಕೆಸಿಆರ್ ಹೇಳಿಕೆಯನ್ನು ಕಾಂಗ್ರೆಸ್ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. “ಕಲ್ಯಾಣ ಕರ್ನಾಟಕದ ರಾಯಚೂರು ಜಿಲ್ಲೆಯನ್ನು ತೆಲಂಗಾಣ ರಾಜ್ಯಕ್ಕೆ ಸೇರಿಸಬೇಕೆಂದಿರುವ ಶಾಸಕ ಡಾ.ಶಿವರಾಜ ಪಾಟೀಲ್ ಮತ್ತು ಕೆಸಿಆರ್‌ ಅವರ ಹೇಳಿಕೆ ಅತ್ಯಂತ ಖಂಡನೀಯ, ರಾಯಚೂರು ಎಂದೆಂದಿಗೂ ಕರ್ನಾಟಕದ ಅವಿಭಾಜ್ಯ ಅಂಗವಾಗಿರಲಿದೆ” ಎಂದು ಕೆಪಿಸಿಸಿ ಉಪಾಧ್ಯಕ್ಷರಾದ ಈಶ್ವರ್ ಖಂಡ್ರೆ ಪ್ರತಿಕ್ರಿಯಿಸಿದ್ದಾರೆ.

ಈ ಹೇಳಿಕೆ ಮತ್ತು ಸರ್ಕಾರದ ಮೌನವನ್ನು ಗಮನಿಸಿದರೇ ಬಿಜೆಪಿ ಸರ್ಕಾರಕ್ಕೆ ಕಲ್ಯಾಣ ಕರ್ನಾಟಕದ ಬಗ್ಗೆ ಇರುವ ದ್ವೇಷ ಮತ್ತು ಈ ಭಾಗದ ಬಗ್ಗೆ ಅವರ ಮಲತಾಯಿ ಧೋರಣೆ ಎಷ್ಟೊಂದು ಅನ್ನೋದು ಮತ್ತೊಮೆ ಸಾಬೀತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿ,  “ಕೆಸಿಆರ್‌ರವರು ಹೇಳಿಕೆ ನೀಡಿ 24 ಗಂಟೆಗಳಾಗಿವೆ. ಆದರೂ ಸರ್ಕಾರದ ವತಿಯಿಂದ ಒಬ್ಬರೂ ಆದನ್ನು ಖಂಡಿಸಿಲ್ಲ. ಬೆಳಗಾವಿ ಗಡಿ ವಿವಾದವಾದರೆ ಇಡೀ ಕ್ಯಾಬಿನೆಟ್ ಮುಂದೆ ಬಂದು ಮಾತನಾಡುತ್ತದೆ. ಆದರೆ ನಮ್ಮ ಬಗ್ಗೆ ನೀವು ದನಿಯೆತ್ತುವುದಿಲ್ಲವೇಕೆ? ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕವನ್ನು ಕರ್ನಾಟಕದ ಭಾಗ ಎಂದು ಪರಿಗಣಿಸುತ್ತದೆಯೋ ಅಥವಾ ಇಲ್ಲವೋ? ರಾಯಚೂರು ತೆಲಂಗಾಣದ ಭಾಗವಾಗಬೇಕೆಂದು ಹೇಳಿಕೆ ನೀಡಿದ ನಿಮ್ಮ ಶಾಸಕನ ವಿರುದ್ಧ ಯಾವ ಕ್ರಮ ಕೈಗೊಂಡಿದ್ದೀರಿ?” ಎಂದು ಪ್ರಶ್ನಿಸಿದ್ದಾರೆ.

“ರಾಯಚೂರಿನ ಜನ ತೆಲಂಗಾಣಕ್ಕೆ ಸೇರಿಸಿ ಅಂತ ಒತ್ತಾಯ ಮಾಡ್ತಿದ್ದಾರೆ ಅಂತ ಮಾಧ್ಯಮಗಳಲ್ಲಿ ಸ್ಟೇಟ್ಮೆಂಟ್ ಮಾಡುತ್ತಿರುವ ಮಾನ್ಯ ತೆಲಂಗಾಣ ಮುಖ್ಯಮಂತ್ರಿ KCR ಅವ್ರೆ , ಸಂವಿಧಾನದ ಆಶಯದೊಂದಿಗೆ ರಾಜ್ಯದ ಏಕೀಕರಣ ವ್ಯವಸ್ಥೆಯನ್ನು ಗೌರವಿಸುತ್ತಾ ಆದಾಗ್ಯೂ ಕರ್ನಾಟಕದ ಎಷ್ಟು ಜಾಗ ಇಂದು ತೆಲಂಗಾಣಕ್ಕೆ ಸೇರಿಹೋಗಿದೆ ಅಂತ ದಾಖಲೆಗಳ ಸಮೇತ ನಿರೂಪಿಸುತ್ತೇನೆ. ನಿಮಗೆ ಇದು ಓಪನ್ ಚಾಲೆಂಜ್ ಎಂದು ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ; ಮಂತ್ರಿಯಾಗುವ ಎಲ್ಲಾ ಅರ್ಹತೆ ನನಗಿದ್ದು, ನಾನು ಮುಖ್ಯಮಂತ್ರಿ ಅಭ್ಯರ್ಥಿಯಾದರೆ ಪಕ್ಷಕ್ಕೆ 150 ಸೀಟು ಬರುತ್ತದೆ:…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತೆಲಂಗಾಣ ಮುಖ್ಯಮಂತ್ರಿಗಳ ಈ ಹೇಳಿಕೆ ಕಂಡನಾರ್ಹ. ಟಿ.ಆರ್.ಎಸ್. ಮತ್ತು ಕಾಂಗ್ರೆಸ್ ಪಕ್ಷಗಳನ್ನು ಒಳಗೊಂಡಂತೆ, ಎಲ್ಲಾ ವಿರೋಧ ಪಕ್ಷದವರು ಒಂದಾಗಿ ಬಿ.ಜೆ.ಪಿ.ಯನ್ನು ಎದುರಿಸಬೇಕಾಗಿರುವ ಈ ವಿಷಮ ಪರಿಸ್ಥಿತಿಯಲ್ಲಿ, ಮುಗಿದುಹೋಗಿರುವ ಗಡಿ ವಿವಾದವನ್ನು ಕೆದಕುವುದರಿಂದ, ತೆಲಂಗಾಣಕ್ಕಾಗಲೀ, ಕರ್ನಾಟಕಕ್ಕಾಗಲಿ ಯಾವುದೇ ಪ್ರಯೋಜನ ಇಲ್ಲ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...