Homeಮುಖಪುಟರಾಯಚೂರು ಜಿಲ್ಲೆಯನ್ನು ತೆಲಂಗಾಣಕ್ಕೆ ಸೇರಿಸಬೇಕು: ಕೆಸಿಆರ್ ಹೇಳಿಕೆಗೆ ಕಾಂಗ್ರೆಸ್ ತೀವ್ರ ವಿರೋಧ

ರಾಯಚೂರು ಜಿಲ್ಲೆಯನ್ನು ತೆಲಂಗಾಣಕ್ಕೆ ಸೇರಿಸಬೇಕು: ಕೆಸಿಆರ್ ಹೇಳಿಕೆಗೆ ಕಾಂಗ್ರೆಸ್ ತೀವ್ರ ವಿರೋಧ

- Advertisement -
- Advertisement -

ಕರ್ನಾಟಕದ ರಾಯಚೂರು ಜಿಲ್ಲೆಯನ್ನು ತೆಲಂಗಾಣ ರಾಜ್ಯಕ್ಕೆ ಸೇರಿಸಿಕೊಳ್ಳಬೇಕೆಂದು ಅಲ್ಲಿನ ಜನ ಹೇಳುತ್ತಿದ್ದಾರೆಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಪಕ್ಷದ ಮುಖಂಡರು ಕೆಸಿಆರ್ ಹೇಳಿಕೆಯನ್ನು ವಿರೋಧಿಸಿದ್ದಾರೆ.

ತೆಲಂಗಾಣದಲ್ಲಿ 2016 ರಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ವಿಕಾರಾಬಾದ್ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕಛೇರಿ ಉದ್ಘಾಟನೆ ವೇಳೆ ಕೆಸಿಆರ್, “ತೆಲಂಗಾಣದಲ್ಲಿ ನಡೆಯುತ್ತಿರುವ ಕಲ್ಯಾಣ ಕಾರ್‍ಯಕ್ರಮಗಳನ್ನು ನೋಡಿ ರಾಯಚೂರು ಗಡಿ ಭಾಗದ ಜನ ಸಹ ತಮ್ಮ ಜಿಲ್ಲೆಯನ್ನು ತೆಲಂಗಾಣ ರಾಜ್ಯಕ್ಕೆ ಸೇರಿಸಬೇಕು, ಇಲ್ಲವೇ ಅಲ್ಲಿ ನೀಡುತ್ತಿರುವ ಸವಲತ್ತುಗಳನ್ನು ನಮಗೂ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ” ಎಂದಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಜನರಿಗೆ ಉಚಿತ ಕುಡಿಯುವ ನೀರು ಒದಗಿಸುವ ಭಗೀರಥ ಯೋಜನೆ ಜಾರಿಗೊಳಿಸಿದ್ದೇವೆ. ಬಸುರಿ-ಬಾಣಂತಿಯರಿಗೆ ಕೆಸಿಆರ್‌ ಕಿಟ್ ನೀಡುತ್ತಿದ್ದೇವೆ, ಉಚಿತ ವಿದ್ಯುತ್ ಜೊತೆಗೆ ರೈತರಿಗೆ ವಾರ್ಷಿಕ 10,000 ಧನ ಸಹಾಯ ನೀಡುತ್ತಿದ್ದೇವೆ. ಇವೆಲ್ಲವೂ ಅಲ್ಲಿನ ಜನರನ್ನು ಆಕರ್ಷಿಸಿದೆ ಎಂದು ಕೆಸಿಆರ್ ಹೇಳಿದ್ದಾರೆ.

ಕಳೆದ ವರ್ಷ ರಾಯಚೂರಿನ ಬಿಜೆಪಿ ಶಾಸಕ ಡಾ.ಶಿವರಾಜ ಪಾಟೀಲ್‌ರವರು ರಾಯಚೂರು ತೆಲಂಗಾಣಕ್ಕೆ ಸೇರಬೇಕೆಂದು ಹೇಳಿಕೆ ನೀಡಿದ್ದರು. ಅದನ್ನು ತೆಲಂಗಾಣದ ಕೆ.ಟಿ ರಾಮರಾವ್ ಸೇರಿದಂತೆ ಹಲವು ನಾಯಕರು ಟ್ವೀಟ್ ಮಾಡಿ ಸ್ವಾಗತಿಸಿದ್ದರು.

ಸದ್ಯದ ಕೆಸಿಆರ್ ಹೇಳಿಕೆಯನ್ನು ಕಾಂಗ್ರೆಸ್ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. “ಕಲ್ಯಾಣ ಕರ್ನಾಟಕದ ರಾಯಚೂರು ಜಿಲ್ಲೆಯನ್ನು ತೆಲಂಗಾಣ ರಾಜ್ಯಕ್ಕೆ ಸೇರಿಸಬೇಕೆಂದಿರುವ ಶಾಸಕ ಡಾ.ಶಿವರಾಜ ಪಾಟೀಲ್ ಮತ್ತು ಕೆಸಿಆರ್‌ ಅವರ ಹೇಳಿಕೆ ಅತ್ಯಂತ ಖಂಡನೀಯ, ರಾಯಚೂರು ಎಂದೆಂದಿಗೂ ಕರ್ನಾಟಕದ ಅವಿಭಾಜ್ಯ ಅಂಗವಾಗಿರಲಿದೆ” ಎಂದು ಕೆಪಿಸಿಸಿ ಉಪಾಧ್ಯಕ್ಷರಾದ ಈಶ್ವರ್ ಖಂಡ್ರೆ ಪ್ರತಿಕ್ರಿಯಿಸಿದ್ದಾರೆ.

ಈ ಹೇಳಿಕೆ ಮತ್ತು ಸರ್ಕಾರದ ಮೌನವನ್ನು ಗಮನಿಸಿದರೇ ಬಿಜೆಪಿ ಸರ್ಕಾರಕ್ಕೆ ಕಲ್ಯಾಣ ಕರ್ನಾಟಕದ ಬಗ್ಗೆ ಇರುವ ದ್ವೇಷ ಮತ್ತು ಈ ಭಾಗದ ಬಗ್ಗೆ ಅವರ ಮಲತಾಯಿ ಧೋರಣೆ ಎಷ್ಟೊಂದು ಅನ್ನೋದು ಮತ್ತೊಮೆ ಸಾಬೀತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿ,  “ಕೆಸಿಆರ್‌ರವರು ಹೇಳಿಕೆ ನೀಡಿ 24 ಗಂಟೆಗಳಾಗಿವೆ. ಆದರೂ ಸರ್ಕಾರದ ವತಿಯಿಂದ ಒಬ್ಬರೂ ಆದನ್ನು ಖಂಡಿಸಿಲ್ಲ. ಬೆಳಗಾವಿ ಗಡಿ ವಿವಾದವಾದರೆ ಇಡೀ ಕ್ಯಾಬಿನೆಟ್ ಮುಂದೆ ಬಂದು ಮಾತನಾಡುತ್ತದೆ. ಆದರೆ ನಮ್ಮ ಬಗ್ಗೆ ನೀವು ದನಿಯೆತ್ತುವುದಿಲ್ಲವೇಕೆ? ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕವನ್ನು ಕರ್ನಾಟಕದ ಭಾಗ ಎಂದು ಪರಿಗಣಿಸುತ್ತದೆಯೋ ಅಥವಾ ಇಲ್ಲವೋ? ರಾಯಚೂರು ತೆಲಂಗಾಣದ ಭಾಗವಾಗಬೇಕೆಂದು ಹೇಳಿಕೆ ನೀಡಿದ ನಿಮ್ಮ ಶಾಸಕನ ವಿರುದ್ಧ ಯಾವ ಕ್ರಮ ಕೈಗೊಂಡಿದ್ದೀರಿ?” ಎಂದು ಪ್ರಶ್ನಿಸಿದ್ದಾರೆ.

“ರಾಯಚೂರಿನ ಜನ ತೆಲಂಗಾಣಕ್ಕೆ ಸೇರಿಸಿ ಅಂತ ಒತ್ತಾಯ ಮಾಡ್ತಿದ್ದಾರೆ ಅಂತ ಮಾಧ್ಯಮಗಳಲ್ಲಿ ಸ್ಟೇಟ್ಮೆಂಟ್ ಮಾಡುತ್ತಿರುವ ಮಾನ್ಯ ತೆಲಂಗಾಣ ಮುಖ್ಯಮಂತ್ರಿ KCR ಅವ್ರೆ , ಸಂವಿಧಾನದ ಆಶಯದೊಂದಿಗೆ ರಾಜ್ಯದ ಏಕೀಕರಣ ವ್ಯವಸ್ಥೆಯನ್ನು ಗೌರವಿಸುತ್ತಾ ಆದಾಗ್ಯೂ ಕರ್ನಾಟಕದ ಎಷ್ಟು ಜಾಗ ಇಂದು ತೆಲಂಗಾಣಕ್ಕೆ ಸೇರಿಹೋಗಿದೆ ಅಂತ ದಾಖಲೆಗಳ ಸಮೇತ ನಿರೂಪಿಸುತ್ತೇನೆ. ನಿಮಗೆ ಇದು ಓಪನ್ ಚಾಲೆಂಜ್ ಎಂದು ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ; ಮಂತ್ರಿಯಾಗುವ ಎಲ್ಲಾ ಅರ್ಹತೆ ನನಗಿದ್ದು, ನಾನು ಮುಖ್ಯಮಂತ್ರಿ ಅಭ್ಯರ್ಥಿಯಾದರೆ ಪಕ್ಷಕ್ಕೆ 150 ಸೀಟು ಬರುತ್ತದೆ:…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತೆಲಂಗಾಣ ಮುಖ್ಯಮಂತ್ರಿಗಳ ಈ ಹೇಳಿಕೆ ಕಂಡನಾರ್ಹ. ಟಿ.ಆರ್.ಎಸ್. ಮತ್ತು ಕಾಂಗ್ರೆಸ್ ಪಕ್ಷಗಳನ್ನು ಒಳಗೊಂಡಂತೆ, ಎಲ್ಲಾ ವಿರೋಧ ಪಕ್ಷದವರು ಒಂದಾಗಿ ಬಿ.ಜೆ.ಪಿ.ಯನ್ನು ಎದುರಿಸಬೇಕಾಗಿರುವ ಈ ವಿಷಮ ಪರಿಸ್ಥಿತಿಯಲ್ಲಿ, ಮುಗಿದುಹೋಗಿರುವ ಗಡಿ ವಿವಾದವನ್ನು ಕೆದಕುವುದರಿಂದ, ತೆಲಂಗಾಣಕ್ಕಾಗಲೀ, ಕರ್ನಾಟಕಕ್ಕಾಗಲಿ ಯಾವುದೇ ಪ್ರಯೋಜನ ಇಲ್ಲ.

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...