Homeಮುಖಪುಟರಾಯಚೂರು ಜಿಲ್ಲೆಯನ್ನು ತೆಲಂಗಾಣಕ್ಕೆ ಸೇರಿಸಬೇಕು: ಕೆಸಿಆರ್ ಹೇಳಿಕೆಗೆ ಕಾಂಗ್ರೆಸ್ ತೀವ್ರ ವಿರೋಧ

ರಾಯಚೂರು ಜಿಲ್ಲೆಯನ್ನು ತೆಲಂಗಾಣಕ್ಕೆ ಸೇರಿಸಬೇಕು: ಕೆಸಿಆರ್ ಹೇಳಿಕೆಗೆ ಕಾಂಗ್ರೆಸ್ ತೀವ್ರ ವಿರೋಧ

- Advertisement -
- Advertisement -

ಕರ್ನಾಟಕದ ರಾಯಚೂರು ಜಿಲ್ಲೆಯನ್ನು ತೆಲಂಗಾಣ ರಾಜ್ಯಕ್ಕೆ ಸೇರಿಸಿಕೊಳ್ಳಬೇಕೆಂದು ಅಲ್ಲಿನ ಜನ ಹೇಳುತ್ತಿದ್ದಾರೆಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಪಕ್ಷದ ಮುಖಂಡರು ಕೆಸಿಆರ್ ಹೇಳಿಕೆಯನ್ನು ವಿರೋಧಿಸಿದ್ದಾರೆ.

ತೆಲಂಗಾಣದಲ್ಲಿ 2016 ರಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ವಿಕಾರಾಬಾದ್ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕಛೇರಿ ಉದ್ಘಾಟನೆ ವೇಳೆ ಕೆಸಿಆರ್, “ತೆಲಂಗಾಣದಲ್ಲಿ ನಡೆಯುತ್ತಿರುವ ಕಲ್ಯಾಣ ಕಾರ್‍ಯಕ್ರಮಗಳನ್ನು ನೋಡಿ ರಾಯಚೂರು ಗಡಿ ಭಾಗದ ಜನ ಸಹ ತಮ್ಮ ಜಿಲ್ಲೆಯನ್ನು ತೆಲಂಗಾಣ ರಾಜ್ಯಕ್ಕೆ ಸೇರಿಸಬೇಕು, ಇಲ್ಲವೇ ಅಲ್ಲಿ ನೀಡುತ್ತಿರುವ ಸವಲತ್ತುಗಳನ್ನು ನಮಗೂ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ” ಎಂದಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಜನರಿಗೆ ಉಚಿತ ಕುಡಿಯುವ ನೀರು ಒದಗಿಸುವ ಭಗೀರಥ ಯೋಜನೆ ಜಾರಿಗೊಳಿಸಿದ್ದೇವೆ. ಬಸುರಿ-ಬಾಣಂತಿಯರಿಗೆ ಕೆಸಿಆರ್‌ ಕಿಟ್ ನೀಡುತ್ತಿದ್ದೇವೆ, ಉಚಿತ ವಿದ್ಯುತ್ ಜೊತೆಗೆ ರೈತರಿಗೆ ವಾರ್ಷಿಕ 10,000 ಧನ ಸಹಾಯ ನೀಡುತ್ತಿದ್ದೇವೆ. ಇವೆಲ್ಲವೂ ಅಲ್ಲಿನ ಜನರನ್ನು ಆಕರ್ಷಿಸಿದೆ ಎಂದು ಕೆಸಿಆರ್ ಹೇಳಿದ್ದಾರೆ.

ಕಳೆದ ವರ್ಷ ರಾಯಚೂರಿನ ಬಿಜೆಪಿ ಶಾಸಕ ಡಾ.ಶಿವರಾಜ ಪಾಟೀಲ್‌ರವರು ರಾಯಚೂರು ತೆಲಂಗಾಣಕ್ಕೆ ಸೇರಬೇಕೆಂದು ಹೇಳಿಕೆ ನೀಡಿದ್ದರು. ಅದನ್ನು ತೆಲಂಗಾಣದ ಕೆ.ಟಿ ರಾಮರಾವ್ ಸೇರಿದಂತೆ ಹಲವು ನಾಯಕರು ಟ್ವೀಟ್ ಮಾಡಿ ಸ್ವಾಗತಿಸಿದ್ದರು.

ಸದ್ಯದ ಕೆಸಿಆರ್ ಹೇಳಿಕೆಯನ್ನು ಕಾಂಗ್ರೆಸ್ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. “ಕಲ್ಯಾಣ ಕರ್ನಾಟಕದ ರಾಯಚೂರು ಜಿಲ್ಲೆಯನ್ನು ತೆಲಂಗಾಣ ರಾಜ್ಯಕ್ಕೆ ಸೇರಿಸಬೇಕೆಂದಿರುವ ಶಾಸಕ ಡಾ.ಶಿವರಾಜ ಪಾಟೀಲ್ ಮತ್ತು ಕೆಸಿಆರ್‌ ಅವರ ಹೇಳಿಕೆ ಅತ್ಯಂತ ಖಂಡನೀಯ, ರಾಯಚೂರು ಎಂದೆಂದಿಗೂ ಕರ್ನಾಟಕದ ಅವಿಭಾಜ್ಯ ಅಂಗವಾಗಿರಲಿದೆ” ಎಂದು ಕೆಪಿಸಿಸಿ ಉಪಾಧ್ಯಕ್ಷರಾದ ಈಶ್ವರ್ ಖಂಡ್ರೆ ಪ್ರತಿಕ್ರಿಯಿಸಿದ್ದಾರೆ.

ಈ ಹೇಳಿಕೆ ಮತ್ತು ಸರ್ಕಾರದ ಮೌನವನ್ನು ಗಮನಿಸಿದರೇ ಬಿಜೆಪಿ ಸರ್ಕಾರಕ್ಕೆ ಕಲ್ಯಾಣ ಕರ್ನಾಟಕದ ಬಗ್ಗೆ ಇರುವ ದ್ವೇಷ ಮತ್ತು ಈ ಭಾಗದ ಬಗ್ಗೆ ಅವರ ಮಲತಾಯಿ ಧೋರಣೆ ಎಷ್ಟೊಂದು ಅನ್ನೋದು ಮತ್ತೊಮೆ ಸಾಬೀತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿ,  “ಕೆಸಿಆರ್‌ರವರು ಹೇಳಿಕೆ ನೀಡಿ 24 ಗಂಟೆಗಳಾಗಿವೆ. ಆದರೂ ಸರ್ಕಾರದ ವತಿಯಿಂದ ಒಬ್ಬರೂ ಆದನ್ನು ಖಂಡಿಸಿಲ್ಲ. ಬೆಳಗಾವಿ ಗಡಿ ವಿವಾದವಾದರೆ ಇಡೀ ಕ್ಯಾಬಿನೆಟ್ ಮುಂದೆ ಬಂದು ಮಾತನಾಡುತ್ತದೆ. ಆದರೆ ನಮ್ಮ ಬಗ್ಗೆ ನೀವು ದನಿಯೆತ್ತುವುದಿಲ್ಲವೇಕೆ? ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕವನ್ನು ಕರ್ನಾಟಕದ ಭಾಗ ಎಂದು ಪರಿಗಣಿಸುತ್ತದೆಯೋ ಅಥವಾ ಇಲ್ಲವೋ? ರಾಯಚೂರು ತೆಲಂಗಾಣದ ಭಾಗವಾಗಬೇಕೆಂದು ಹೇಳಿಕೆ ನೀಡಿದ ನಿಮ್ಮ ಶಾಸಕನ ವಿರುದ್ಧ ಯಾವ ಕ್ರಮ ಕೈಗೊಂಡಿದ್ದೀರಿ?” ಎಂದು ಪ್ರಶ್ನಿಸಿದ್ದಾರೆ.

“ರಾಯಚೂರಿನ ಜನ ತೆಲಂಗಾಣಕ್ಕೆ ಸೇರಿಸಿ ಅಂತ ಒತ್ತಾಯ ಮಾಡ್ತಿದ್ದಾರೆ ಅಂತ ಮಾಧ್ಯಮಗಳಲ್ಲಿ ಸ್ಟೇಟ್ಮೆಂಟ್ ಮಾಡುತ್ತಿರುವ ಮಾನ್ಯ ತೆಲಂಗಾಣ ಮುಖ್ಯಮಂತ್ರಿ KCR ಅವ್ರೆ , ಸಂವಿಧಾನದ ಆಶಯದೊಂದಿಗೆ ರಾಜ್ಯದ ಏಕೀಕರಣ ವ್ಯವಸ್ಥೆಯನ್ನು ಗೌರವಿಸುತ್ತಾ ಆದಾಗ್ಯೂ ಕರ್ನಾಟಕದ ಎಷ್ಟು ಜಾಗ ಇಂದು ತೆಲಂಗಾಣಕ್ಕೆ ಸೇರಿಹೋಗಿದೆ ಅಂತ ದಾಖಲೆಗಳ ಸಮೇತ ನಿರೂಪಿಸುತ್ತೇನೆ. ನಿಮಗೆ ಇದು ಓಪನ್ ಚಾಲೆಂಜ್ ಎಂದು ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ; ಮಂತ್ರಿಯಾಗುವ ಎಲ್ಲಾ ಅರ್ಹತೆ ನನಗಿದ್ದು, ನಾನು ಮುಖ್ಯಮಂತ್ರಿ ಅಭ್ಯರ್ಥಿಯಾದರೆ ಪಕ್ಷಕ್ಕೆ 150 ಸೀಟು ಬರುತ್ತದೆ:…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತೆಲಂಗಾಣ ಮುಖ್ಯಮಂತ್ರಿಗಳ ಈ ಹೇಳಿಕೆ ಕಂಡನಾರ್ಹ. ಟಿ.ಆರ್.ಎಸ್. ಮತ್ತು ಕಾಂಗ್ರೆಸ್ ಪಕ್ಷಗಳನ್ನು ಒಳಗೊಂಡಂತೆ, ಎಲ್ಲಾ ವಿರೋಧ ಪಕ್ಷದವರು ಒಂದಾಗಿ ಬಿ.ಜೆ.ಪಿ.ಯನ್ನು ಎದುರಿಸಬೇಕಾಗಿರುವ ಈ ವಿಷಮ ಪರಿಸ್ಥಿತಿಯಲ್ಲಿ, ಮುಗಿದುಹೋಗಿರುವ ಗಡಿ ವಿವಾದವನ್ನು ಕೆದಕುವುದರಿಂದ, ತೆಲಂಗಾಣಕ್ಕಾಗಲೀ, ಕರ್ನಾಟಕಕ್ಕಾಗಲಿ ಯಾವುದೇ ಪ್ರಯೋಜನ ಇಲ್ಲ.

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...