Homeಮುಖಪುಟರಾಯಚೂರು ಜಿಲ್ಲೆಯನ್ನು ತೆಲಂಗಾಣಕ್ಕೆ ಸೇರಿಸಬೇಕು: ಕೆಸಿಆರ್ ಹೇಳಿಕೆಗೆ ಕಾಂಗ್ರೆಸ್ ತೀವ್ರ ವಿರೋಧ

ರಾಯಚೂರು ಜಿಲ್ಲೆಯನ್ನು ತೆಲಂಗಾಣಕ್ಕೆ ಸೇರಿಸಬೇಕು: ಕೆಸಿಆರ್ ಹೇಳಿಕೆಗೆ ಕಾಂಗ್ರೆಸ್ ತೀವ್ರ ವಿರೋಧ

- Advertisement -
- Advertisement -

ಕರ್ನಾಟಕದ ರಾಯಚೂರು ಜಿಲ್ಲೆಯನ್ನು ತೆಲಂಗಾಣ ರಾಜ್ಯಕ್ಕೆ ಸೇರಿಸಿಕೊಳ್ಳಬೇಕೆಂದು ಅಲ್ಲಿನ ಜನ ಹೇಳುತ್ತಿದ್ದಾರೆಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಪಕ್ಷದ ಮುಖಂಡರು ಕೆಸಿಆರ್ ಹೇಳಿಕೆಯನ್ನು ವಿರೋಧಿಸಿದ್ದಾರೆ.

ತೆಲಂಗಾಣದಲ್ಲಿ 2016 ರಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ವಿಕಾರಾಬಾದ್ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕಛೇರಿ ಉದ್ಘಾಟನೆ ವೇಳೆ ಕೆಸಿಆರ್, “ತೆಲಂಗಾಣದಲ್ಲಿ ನಡೆಯುತ್ತಿರುವ ಕಲ್ಯಾಣ ಕಾರ್‍ಯಕ್ರಮಗಳನ್ನು ನೋಡಿ ರಾಯಚೂರು ಗಡಿ ಭಾಗದ ಜನ ಸಹ ತಮ್ಮ ಜಿಲ್ಲೆಯನ್ನು ತೆಲಂಗಾಣ ರಾಜ್ಯಕ್ಕೆ ಸೇರಿಸಬೇಕು, ಇಲ್ಲವೇ ಅಲ್ಲಿ ನೀಡುತ್ತಿರುವ ಸವಲತ್ತುಗಳನ್ನು ನಮಗೂ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ” ಎಂದಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಜನರಿಗೆ ಉಚಿತ ಕುಡಿಯುವ ನೀರು ಒದಗಿಸುವ ಭಗೀರಥ ಯೋಜನೆ ಜಾರಿಗೊಳಿಸಿದ್ದೇವೆ. ಬಸುರಿ-ಬಾಣಂತಿಯರಿಗೆ ಕೆಸಿಆರ್‌ ಕಿಟ್ ನೀಡುತ್ತಿದ್ದೇವೆ, ಉಚಿತ ವಿದ್ಯುತ್ ಜೊತೆಗೆ ರೈತರಿಗೆ ವಾರ್ಷಿಕ 10,000 ಧನ ಸಹಾಯ ನೀಡುತ್ತಿದ್ದೇವೆ. ಇವೆಲ್ಲವೂ ಅಲ್ಲಿನ ಜನರನ್ನು ಆಕರ್ಷಿಸಿದೆ ಎಂದು ಕೆಸಿಆರ್ ಹೇಳಿದ್ದಾರೆ.

ಕಳೆದ ವರ್ಷ ರಾಯಚೂರಿನ ಬಿಜೆಪಿ ಶಾಸಕ ಡಾ.ಶಿವರಾಜ ಪಾಟೀಲ್‌ರವರು ರಾಯಚೂರು ತೆಲಂಗಾಣಕ್ಕೆ ಸೇರಬೇಕೆಂದು ಹೇಳಿಕೆ ನೀಡಿದ್ದರು. ಅದನ್ನು ತೆಲಂಗಾಣದ ಕೆ.ಟಿ ರಾಮರಾವ್ ಸೇರಿದಂತೆ ಹಲವು ನಾಯಕರು ಟ್ವೀಟ್ ಮಾಡಿ ಸ್ವಾಗತಿಸಿದ್ದರು.

ಸದ್ಯದ ಕೆಸಿಆರ್ ಹೇಳಿಕೆಯನ್ನು ಕಾಂಗ್ರೆಸ್ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. “ಕಲ್ಯಾಣ ಕರ್ನಾಟಕದ ರಾಯಚೂರು ಜಿಲ್ಲೆಯನ್ನು ತೆಲಂಗಾಣ ರಾಜ್ಯಕ್ಕೆ ಸೇರಿಸಬೇಕೆಂದಿರುವ ಶಾಸಕ ಡಾ.ಶಿವರಾಜ ಪಾಟೀಲ್ ಮತ್ತು ಕೆಸಿಆರ್‌ ಅವರ ಹೇಳಿಕೆ ಅತ್ಯಂತ ಖಂಡನೀಯ, ರಾಯಚೂರು ಎಂದೆಂದಿಗೂ ಕರ್ನಾಟಕದ ಅವಿಭಾಜ್ಯ ಅಂಗವಾಗಿರಲಿದೆ” ಎಂದು ಕೆಪಿಸಿಸಿ ಉಪಾಧ್ಯಕ್ಷರಾದ ಈಶ್ವರ್ ಖಂಡ್ರೆ ಪ್ರತಿಕ್ರಿಯಿಸಿದ್ದಾರೆ.

ಈ ಹೇಳಿಕೆ ಮತ್ತು ಸರ್ಕಾರದ ಮೌನವನ್ನು ಗಮನಿಸಿದರೇ ಬಿಜೆಪಿ ಸರ್ಕಾರಕ್ಕೆ ಕಲ್ಯಾಣ ಕರ್ನಾಟಕದ ಬಗ್ಗೆ ಇರುವ ದ್ವೇಷ ಮತ್ತು ಈ ಭಾಗದ ಬಗ್ಗೆ ಅವರ ಮಲತಾಯಿ ಧೋರಣೆ ಎಷ್ಟೊಂದು ಅನ್ನೋದು ಮತ್ತೊಮೆ ಸಾಬೀತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿ,  “ಕೆಸಿಆರ್‌ರವರು ಹೇಳಿಕೆ ನೀಡಿ 24 ಗಂಟೆಗಳಾಗಿವೆ. ಆದರೂ ಸರ್ಕಾರದ ವತಿಯಿಂದ ಒಬ್ಬರೂ ಆದನ್ನು ಖಂಡಿಸಿಲ್ಲ. ಬೆಳಗಾವಿ ಗಡಿ ವಿವಾದವಾದರೆ ಇಡೀ ಕ್ಯಾಬಿನೆಟ್ ಮುಂದೆ ಬಂದು ಮಾತನಾಡುತ್ತದೆ. ಆದರೆ ನಮ್ಮ ಬಗ್ಗೆ ನೀವು ದನಿಯೆತ್ತುವುದಿಲ್ಲವೇಕೆ? ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕವನ್ನು ಕರ್ನಾಟಕದ ಭಾಗ ಎಂದು ಪರಿಗಣಿಸುತ್ತದೆಯೋ ಅಥವಾ ಇಲ್ಲವೋ? ರಾಯಚೂರು ತೆಲಂಗಾಣದ ಭಾಗವಾಗಬೇಕೆಂದು ಹೇಳಿಕೆ ನೀಡಿದ ನಿಮ್ಮ ಶಾಸಕನ ವಿರುದ್ಧ ಯಾವ ಕ್ರಮ ಕೈಗೊಂಡಿದ್ದೀರಿ?” ಎಂದು ಪ್ರಶ್ನಿಸಿದ್ದಾರೆ.

“ರಾಯಚೂರಿನ ಜನ ತೆಲಂಗಾಣಕ್ಕೆ ಸೇರಿಸಿ ಅಂತ ಒತ್ತಾಯ ಮಾಡ್ತಿದ್ದಾರೆ ಅಂತ ಮಾಧ್ಯಮಗಳಲ್ಲಿ ಸ್ಟೇಟ್ಮೆಂಟ್ ಮಾಡುತ್ತಿರುವ ಮಾನ್ಯ ತೆಲಂಗಾಣ ಮುಖ್ಯಮಂತ್ರಿ KCR ಅವ್ರೆ , ಸಂವಿಧಾನದ ಆಶಯದೊಂದಿಗೆ ರಾಜ್ಯದ ಏಕೀಕರಣ ವ್ಯವಸ್ಥೆಯನ್ನು ಗೌರವಿಸುತ್ತಾ ಆದಾಗ್ಯೂ ಕರ್ನಾಟಕದ ಎಷ್ಟು ಜಾಗ ಇಂದು ತೆಲಂಗಾಣಕ್ಕೆ ಸೇರಿಹೋಗಿದೆ ಅಂತ ದಾಖಲೆಗಳ ಸಮೇತ ನಿರೂಪಿಸುತ್ತೇನೆ. ನಿಮಗೆ ಇದು ಓಪನ್ ಚಾಲೆಂಜ್ ಎಂದು ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ; ಮಂತ್ರಿಯಾಗುವ ಎಲ್ಲಾ ಅರ್ಹತೆ ನನಗಿದ್ದು, ನಾನು ಮುಖ್ಯಮಂತ್ರಿ ಅಭ್ಯರ್ಥಿಯಾದರೆ ಪಕ್ಷಕ್ಕೆ 150 ಸೀಟು ಬರುತ್ತದೆ:…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತೆಲಂಗಾಣ ಮುಖ್ಯಮಂತ್ರಿಗಳ ಈ ಹೇಳಿಕೆ ಕಂಡನಾರ್ಹ. ಟಿ.ಆರ್.ಎಸ್. ಮತ್ತು ಕಾಂಗ್ರೆಸ್ ಪಕ್ಷಗಳನ್ನು ಒಳಗೊಂಡಂತೆ, ಎಲ್ಲಾ ವಿರೋಧ ಪಕ್ಷದವರು ಒಂದಾಗಿ ಬಿ.ಜೆ.ಪಿ.ಯನ್ನು ಎದುರಿಸಬೇಕಾಗಿರುವ ಈ ವಿಷಮ ಪರಿಸ್ಥಿತಿಯಲ್ಲಿ, ಮುಗಿದುಹೋಗಿರುವ ಗಡಿ ವಿವಾದವನ್ನು ಕೆದಕುವುದರಿಂದ, ತೆಲಂಗಾಣಕ್ಕಾಗಲೀ, ಕರ್ನಾಟಕಕ್ಕಾಗಲಿ ಯಾವುದೇ ಪ್ರಯೋಜನ ಇಲ್ಲ.

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...