Homeಮುಖಪುಟರಾಯಚೂರು ಜಿಲ್ಲೆಯನ್ನು ತೆಲಂಗಾಣಕ್ಕೆ ಸೇರಿಸಬೇಕು: ಕೆಸಿಆರ್ ಹೇಳಿಕೆಗೆ ಕಾಂಗ್ರೆಸ್ ತೀವ್ರ ವಿರೋಧ

ರಾಯಚೂರು ಜಿಲ್ಲೆಯನ್ನು ತೆಲಂಗಾಣಕ್ಕೆ ಸೇರಿಸಬೇಕು: ಕೆಸಿಆರ್ ಹೇಳಿಕೆಗೆ ಕಾಂಗ್ರೆಸ್ ತೀವ್ರ ವಿರೋಧ

- Advertisement -
- Advertisement -

ಕರ್ನಾಟಕದ ರಾಯಚೂರು ಜಿಲ್ಲೆಯನ್ನು ತೆಲಂಗಾಣ ರಾಜ್ಯಕ್ಕೆ ಸೇರಿಸಿಕೊಳ್ಳಬೇಕೆಂದು ಅಲ್ಲಿನ ಜನ ಹೇಳುತ್ತಿದ್ದಾರೆಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಪಕ್ಷದ ಮುಖಂಡರು ಕೆಸಿಆರ್ ಹೇಳಿಕೆಯನ್ನು ವಿರೋಧಿಸಿದ್ದಾರೆ.

ತೆಲಂಗಾಣದಲ್ಲಿ 2016 ರಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ವಿಕಾರಾಬಾದ್ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕಛೇರಿ ಉದ್ಘಾಟನೆ ವೇಳೆ ಕೆಸಿಆರ್, “ತೆಲಂಗಾಣದಲ್ಲಿ ನಡೆಯುತ್ತಿರುವ ಕಲ್ಯಾಣ ಕಾರ್‍ಯಕ್ರಮಗಳನ್ನು ನೋಡಿ ರಾಯಚೂರು ಗಡಿ ಭಾಗದ ಜನ ಸಹ ತಮ್ಮ ಜಿಲ್ಲೆಯನ್ನು ತೆಲಂಗಾಣ ರಾಜ್ಯಕ್ಕೆ ಸೇರಿಸಬೇಕು, ಇಲ್ಲವೇ ಅಲ್ಲಿ ನೀಡುತ್ತಿರುವ ಸವಲತ್ತುಗಳನ್ನು ನಮಗೂ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ” ಎಂದಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಜನರಿಗೆ ಉಚಿತ ಕುಡಿಯುವ ನೀರು ಒದಗಿಸುವ ಭಗೀರಥ ಯೋಜನೆ ಜಾರಿಗೊಳಿಸಿದ್ದೇವೆ. ಬಸುರಿ-ಬಾಣಂತಿಯರಿಗೆ ಕೆಸಿಆರ್‌ ಕಿಟ್ ನೀಡುತ್ತಿದ್ದೇವೆ, ಉಚಿತ ವಿದ್ಯುತ್ ಜೊತೆಗೆ ರೈತರಿಗೆ ವಾರ್ಷಿಕ 10,000 ಧನ ಸಹಾಯ ನೀಡುತ್ತಿದ್ದೇವೆ. ಇವೆಲ್ಲವೂ ಅಲ್ಲಿನ ಜನರನ್ನು ಆಕರ್ಷಿಸಿದೆ ಎಂದು ಕೆಸಿಆರ್ ಹೇಳಿದ್ದಾರೆ.

ಕಳೆದ ವರ್ಷ ರಾಯಚೂರಿನ ಬಿಜೆಪಿ ಶಾಸಕ ಡಾ.ಶಿವರಾಜ ಪಾಟೀಲ್‌ರವರು ರಾಯಚೂರು ತೆಲಂಗಾಣಕ್ಕೆ ಸೇರಬೇಕೆಂದು ಹೇಳಿಕೆ ನೀಡಿದ್ದರು. ಅದನ್ನು ತೆಲಂಗಾಣದ ಕೆ.ಟಿ ರಾಮರಾವ್ ಸೇರಿದಂತೆ ಹಲವು ನಾಯಕರು ಟ್ವೀಟ್ ಮಾಡಿ ಸ್ವಾಗತಿಸಿದ್ದರು.

ಸದ್ಯದ ಕೆಸಿಆರ್ ಹೇಳಿಕೆಯನ್ನು ಕಾಂಗ್ರೆಸ್ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. “ಕಲ್ಯಾಣ ಕರ್ನಾಟಕದ ರಾಯಚೂರು ಜಿಲ್ಲೆಯನ್ನು ತೆಲಂಗಾಣ ರಾಜ್ಯಕ್ಕೆ ಸೇರಿಸಬೇಕೆಂದಿರುವ ಶಾಸಕ ಡಾ.ಶಿವರಾಜ ಪಾಟೀಲ್ ಮತ್ತು ಕೆಸಿಆರ್‌ ಅವರ ಹೇಳಿಕೆ ಅತ್ಯಂತ ಖಂಡನೀಯ, ರಾಯಚೂರು ಎಂದೆಂದಿಗೂ ಕರ್ನಾಟಕದ ಅವಿಭಾಜ್ಯ ಅಂಗವಾಗಿರಲಿದೆ” ಎಂದು ಕೆಪಿಸಿಸಿ ಉಪಾಧ್ಯಕ್ಷರಾದ ಈಶ್ವರ್ ಖಂಡ್ರೆ ಪ್ರತಿಕ್ರಿಯಿಸಿದ್ದಾರೆ.

ಈ ಹೇಳಿಕೆ ಮತ್ತು ಸರ್ಕಾರದ ಮೌನವನ್ನು ಗಮನಿಸಿದರೇ ಬಿಜೆಪಿ ಸರ್ಕಾರಕ್ಕೆ ಕಲ್ಯಾಣ ಕರ್ನಾಟಕದ ಬಗ್ಗೆ ಇರುವ ದ್ವೇಷ ಮತ್ತು ಈ ಭಾಗದ ಬಗ್ಗೆ ಅವರ ಮಲತಾಯಿ ಧೋರಣೆ ಎಷ್ಟೊಂದು ಅನ್ನೋದು ಮತ್ತೊಮೆ ಸಾಬೀತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿ,  “ಕೆಸಿಆರ್‌ರವರು ಹೇಳಿಕೆ ನೀಡಿ 24 ಗಂಟೆಗಳಾಗಿವೆ. ಆದರೂ ಸರ್ಕಾರದ ವತಿಯಿಂದ ಒಬ್ಬರೂ ಆದನ್ನು ಖಂಡಿಸಿಲ್ಲ. ಬೆಳಗಾವಿ ಗಡಿ ವಿವಾದವಾದರೆ ಇಡೀ ಕ್ಯಾಬಿನೆಟ್ ಮುಂದೆ ಬಂದು ಮಾತನಾಡುತ್ತದೆ. ಆದರೆ ನಮ್ಮ ಬಗ್ಗೆ ನೀವು ದನಿಯೆತ್ತುವುದಿಲ್ಲವೇಕೆ? ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕವನ್ನು ಕರ್ನಾಟಕದ ಭಾಗ ಎಂದು ಪರಿಗಣಿಸುತ್ತದೆಯೋ ಅಥವಾ ಇಲ್ಲವೋ? ರಾಯಚೂರು ತೆಲಂಗಾಣದ ಭಾಗವಾಗಬೇಕೆಂದು ಹೇಳಿಕೆ ನೀಡಿದ ನಿಮ್ಮ ಶಾಸಕನ ವಿರುದ್ಧ ಯಾವ ಕ್ರಮ ಕೈಗೊಂಡಿದ್ದೀರಿ?” ಎಂದು ಪ್ರಶ್ನಿಸಿದ್ದಾರೆ.

“ರಾಯಚೂರಿನ ಜನ ತೆಲಂಗಾಣಕ್ಕೆ ಸೇರಿಸಿ ಅಂತ ಒತ್ತಾಯ ಮಾಡ್ತಿದ್ದಾರೆ ಅಂತ ಮಾಧ್ಯಮಗಳಲ್ಲಿ ಸ್ಟೇಟ್ಮೆಂಟ್ ಮಾಡುತ್ತಿರುವ ಮಾನ್ಯ ತೆಲಂಗಾಣ ಮುಖ್ಯಮಂತ್ರಿ KCR ಅವ್ರೆ , ಸಂವಿಧಾನದ ಆಶಯದೊಂದಿಗೆ ರಾಜ್ಯದ ಏಕೀಕರಣ ವ್ಯವಸ್ಥೆಯನ್ನು ಗೌರವಿಸುತ್ತಾ ಆದಾಗ್ಯೂ ಕರ್ನಾಟಕದ ಎಷ್ಟು ಜಾಗ ಇಂದು ತೆಲಂಗಾಣಕ್ಕೆ ಸೇರಿಹೋಗಿದೆ ಅಂತ ದಾಖಲೆಗಳ ಸಮೇತ ನಿರೂಪಿಸುತ್ತೇನೆ. ನಿಮಗೆ ಇದು ಓಪನ್ ಚಾಲೆಂಜ್ ಎಂದು ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ; ಮಂತ್ರಿಯಾಗುವ ಎಲ್ಲಾ ಅರ್ಹತೆ ನನಗಿದ್ದು, ನಾನು ಮುಖ್ಯಮಂತ್ರಿ ಅಭ್ಯರ್ಥಿಯಾದರೆ ಪಕ್ಷಕ್ಕೆ 150 ಸೀಟು ಬರುತ್ತದೆ:…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತೆಲಂಗಾಣ ಮುಖ್ಯಮಂತ್ರಿಗಳ ಈ ಹೇಳಿಕೆ ಕಂಡನಾರ್ಹ. ಟಿ.ಆರ್.ಎಸ್. ಮತ್ತು ಕಾಂಗ್ರೆಸ್ ಪಕ್ಷಗಳನ್ನು ಒಳಗೊಂಡಂತೆ, ಎಲ್ಲಾ ವಿರೋಧ ಪಕ್ಷದವರು ಒಂದಾಗಿ ಬಿ.ಜೆ.ಪಿ.ಯನ್ನು ಎದುರಿಸಬೇಕಾಗಿರುವ ಈ ವಿಷಮ ಪರಿಸ್ಥಿತಿಯಲ್ಲಿ, ಮುಗಿದುಹೋಗಿರುವ ಗಡಿ ವಿವಾದವನ್ನು ಕೆದಕುವುದರಿಂದ, ತೆಲಂಗಾಣಕ್ಕಾಗಲೀ, ಕರ್ನಾಟಕಕ್ಕಾಗಲಿ ಯಾವುದೇ ಪ್ರಯೋಜನ ಇಲ್ಲ.

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...