Homeಮುಖಪುಟರಾಯಚೂರು ಜಿಲ್ಲೆಯನ್ನು ತೆಲಂಗಾಣಕ್ಕೆ ಸೇರಿಸಬೇಕು: ಕೆಸಿಆರ್ ಹೇಳಿಕೆಗೆ ಕಾಂಗ್ರೆಸ್ ತೀವ್ರ ವಿರೋಧ

ರಾಯಚೂರು ಜಿಲ್ಲೆಯನ್ನು ತೆಲಂಗಾಣಕ್ಕೆ ಸೇರಿಸಬೇಕು: ಕೆಸಿಆರ್ ಹೇಳಿಕೆಗೆ ಕಾಂಗ್ರೆಸ್ ತೀವ್ರ ವಿರೋಧ

- Advertisement -
- Advertisement -

ಕರ್ನಾಟಕದ ರಾಯಚೂರು ಜಿಲ್ಲೆಯನ್ನು ತೆಲಂಗಾಣ ರಾಜ್ಯಕ್ಕೆ ಸೇರಿಸಿಕೊಳ್ಳಬೇಕೆಂದು ಅಲ್ಲಿನ ಜನ ಹೇಳುತ್ತಿದ್ದಾರೆಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಪಕ್ಷದ ಮುಖಂಡರು ಕೆಸಿಆರ್ ಹೇಳಿಕೆಯನ್ನು ವಿರೋಧಿಸಿದ್ದಾರೆ.

ತೆಲಂಗಾಣದಲ್ಲಿ 2016 ರಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ವಿಕಾರಾಬಾದ್ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕಛೇರಿ ಉದ್ಘಾಟನೆ ವೇಳೆ ಕೆಸಿಆರ್, “ತೆಲಂಗಾಣದಲ್ಲಿ ನಡೆಯುತ್ತಿರುವ ಕಲ್ಯಾಣ ಕಾರ್‍ಯಕ್ರಮಗಳನ್ನು ನೋಡಿ ರಾಯಚೂರು ಗಡಿ ಭಾಗದ ಜನ ಸಹ ತಮ್ಮ ಜಿಲ್ಲೆಯನ್ನು ತೆಲಂಗಾಣ ರಾಜ್ಯಕ್ಕೆ ಸೇರಿಸಬೇಕು, ಇಲ್ಲವೇ ಅಲ್ಲಿ ನೀಡುತ್ತಿರುವ ಸವಲತ್ತುಗಳನ್ನು ನಮಗೂ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ” ಎಂದಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಜನರಿಗೆ ಉಚಿತ ಕುಡಿಯುವ ನೀರು ಒದಗಿಸುವ ಭಗೀರಥ ಯೋಜನೆ ಜಾರಿಗೊಳಿಸಿದ್ದೇವೆ. ಬಸುರಿ-ಬಾಣಂತಿಯರಿಗೆ ಕೆಸಿಆರ್‌ ಕಿಟ್ ನೀಡುತ್ತಿದ್ದೇವೆ, ಉಚಿತ ವಿದ್ಯುತ್ ಜೊತೆಗೆ ರೈತರಿಗೆ ವಾರ್ಷಿಕ 10,000 ಧನ ಸಹಾಯ ನೀಡುತ್ತಿದ್ದೇವೆ. ಇವೆಲ್ಲವೂ ಅಲ್ಲಿನ ಜನರನ್ನು ಆಕರ್ಷಿಸಿದೆ ಎಂದು ಕೆಸಿಆರ್ ಹೇಳಿದ್ದಾರೆ.

ಕಳೆದ ವರ್ಷ ರಾಯಚೂರಿನ ಬಿಜೆಪಿ ಶಾಸಕ ಡಾ.ಶಿವರಾಜ ಪಾಟೀಲ್‌ರವರು ರಾಯಚೂರು ತೆಲಂಗಾಣಕ್ಕೆ ಸೇರಬೇಕೆಂದು ಹೇಳಿಕೆ ನೀಡಿದ್ದರು. ಅದನ್ನು ತೆಲಂಗಾಣದ ಕೆ.ಟಿ ರಾಮರಾವ್ ಸೇರಿದಂತೆ ಹಲವು ನಾಯಕರು ಟ್ವೀಟ್ ಮಾಡಿ ಸ್ವಾಗತಿಸಿದ್ದರು.

ಸದ್ಯದ ಕೆಸಿಆರ್ ಹೇಳಿಕೆಯನ್ನು ಕಾಂಗ್ರೆಸ್ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. “ಕಲ್ಯಾಣ ಕರ್ನಾಟಕದ ರಾಯಚೂರು ಜಿಲ್ಲೆಯನ್ನು ತೆಲಂಗಾಣ ರಾಜ್ಯಕ್ಕೆ ಸೇರಿಸಬೇಕೆಂದಿರುವ ಶಾಸಕ ಡಾ.ಶಿವರಾಜ ಪಾಟೀಲ್ ಮತ್ತು ಕೆಸಿಆರ್‌ ಅವರ ಹೇಳಿಕೆ ಅತ್ಯಂತ ಖಂಡನೀಯ, ರಾಯಚೂರು ಎಂದೆಂದಿಗೂ ಕರ್ನಾಟಕದ ಅವಿಭಾಜ್ಯ ಅಂಗವಾಗಿರಲಿದೆ” ಎಂದು ಕೆಪಿಸಿಸಿ ಉಪಾಧ್ಯಕ್ಷರಾದ ಈಶ್ವರ್ ಖಂಡ್ರೆ ಪ್ರತಿಕ್ರಿಯಿಸಿದ್ದಾರೆ.

ಈ ಹೇಳಿಕೆ ಮತ್ತು ಸರ್ಕಾರದ ಮೌನವನ್ನು ಗಮನಿಸಿದರೇ ಬಿಜೆಪಿ ಸರ್ಕಾರಕ್ಕೆ ಕಲ್ಯಾಣ ಕರ್ನಾಟಕದ ಬಗ್ಗೆ ಇರುವ ದ್ವೇಷ ಮತ್ತು ಈ ಭಾಗದ ಬಗ್ಗೆ ಅವರ ಮಲತಾಯಿ ಧೋರಣೆ ಎಷ್ಟೊಂದು ಅನ್ನೋದು ಮತ್ತೊಮೆ ಸಾಬೀತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿ,  “ಕೆಸಿಆರ್‌ರವರು ಹೇಳಿಕೆ ನೀಡಿ 24 ಗಂಟೆಗಳಾಗಿವೆ. ಆದರೂ ಸರ್ಕಾರದ ವತಿಯಿಂದ ಒಬ್ಬರೂ ಆದನ್ನು ಖಂಡಿಸಿಲ್ಲ. ಬೆಳಗಾವಿ ಗಡಿ ವಿವಾದವಾದರೆ ಇಡೀ ಕ್ಯಾಬಿನೆಟ್ ಮುಂದೆ ಬಂದು ಮಾತನಾಡುತ್ತದೆ. ಆದರೆ ನಮ್ಮ ಬಗ್ಗೆ ನೀವು ದನಿಯೆತ್ತುವುದಿಲ್ಲವೇಕೆ? ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕವನ್ನು ಕರ್ನಾಟಕದ ಭಾಗ ಎಂದು ಪರಿಗಣಿಸುತ್ತದೆಯೋ ಅಥವಾ ಇಲ್ಲವೋ? ರಾಯಚೂರು ತೆಲಂಗಾಣದ ಭಾಗವಾಗಬೇಕೆಂದು ಹೇಳಿಕೆ ನೀಡಿದ ನಿಮ್ಮ ಶಾಸಕನ ವಿರುದ್ಧ ಯಾವ ಕ್ರಮ ಕೈಗೊಂಡಿದ್ದೀರಿ?” ಎಂದು ಪ್ರಶ್ನಿಸಿದ್ದಾರೆ.

“ರಾಯಚೂರಿನ ಜನ ತೆಲಂಗಾಣಕ್ಕೆ ಸೇರಿಸಿ ಅಂತ ಒತ್ತಾಯ ಮಾಡ್ತಿದ್ದಾರೆ ಅಂತ ಮಾಧ್ಯಮಗಳಲ್ಲಿ ಸ್ಟೇಟ್ಮೆಂಟ್ ಮಾಡುತ್ತಿರುವ ಮಾನ್ಯ ತೆಲಂಗಾಣ ಮುಖ್ಯಮಂತ್ರಿ KCR ಅವ್ರೆ , ಸಂವಿಧಾನದ ಆಶಯದೊಂದಿಗೆ ರಾಜ್ಯದ ಏಕೀಕರಣ ವ್ಯವಸ್ಥೆಯನ್ನು ಗೌರವಿಸುತ್ತಾ ಆದಾಗ್ಯೂ ಕರ್ನಾಟಕದ ಎಷ್ಟು ಜಾಗ ಇಂದು ತೆಲಂಗಾಣಕ್ಕೆ ಸೇರಿಹೋಗಿದೆ ಅಂತ ದಾಖಲೆಗಳ ಸಮೇತ ನಿರೂಪಿಸುತ್ತೇನೆ. ನಿಮಗೆ ಇದು ಓಪನ್ ಚಾಲೆಂಜ್ ಎಂದು ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ; ಮಂತ್ರಿಯಾಗುವ ಎಲ್ಲಾ ಅರ್ಹತೆ ನನಗಿದ್ದು, ನಾನು ಮುಖ್ಯಮಂತ್ರಿ ಅಭ್ಯರ್ಥಿಯಾದರೆ ಪಕ್ಷಕ್ಕೆ 150 ಸೀಟು ಬರುತ್ತದೆ:…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತೆಲಂಗಾಣ ಮುಖ್ಯಮಂತ್ರಿಗಳ ಈ ಹೇಳಿಕೆ ಕಂಡನಾರ್ಹ. ಟಿ.ಆರ್.ಎಸ್. ಮತ್ತು ಕಾಂಗ್ರೆಸ್ ಪಕ್ಷಗಳನ್ನು ಒಳಗೊಂಡಂತೆ, ಎಲ್ಲಾ ವಿರೋಧ ಪಕ್ಷದವರು ಒಂದಾಗಿ ಬಿ.ಜೆ.ಪಿ.ಯನ್ನು ಎದುರಿಸಬೇಕಾಗಿರುವ ಈ ವಿಷಮ ಪರಿಸ್ಥಿತಿಯಲ್ಲಿ, ಮುಗಿದುಹೋಗಿರುವ ಗಡಿ ವಿವಾದವನ್ನು ಕೆದಕುವುದರಿಂದ, ತೆಲಂಗಾಣಕ್ಕಾಗಲೀ, ಕರ್ನಾಟಕಕ್ಕಾಗಲಿ ಯಾವುದೇ ಪ್ರಯೋಜನ ಇಲ್ಲ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...