Homeಕರ್ನಾಟಕರಾಯಚೂರು: ಬೆಲೆ ಏರಿಕೆ ವಿರುದ್ಧ ಮಾರ್ಚ್ 6ಕ್ಕೆ ಬೃಹತ್ ಪ್ರತಿಭಟನಾ ರ್‍ಯಾಲಿ

ರಾಯಚೂರು: ಬೆಲೆ ಏರಿಕೆ ವಿರುದ್ಧ ಮಾರ್ಚ್ 6ಕ್ಕೆ ಬೃಹತ್ ಪ್ರತಿಭಟನಾ ರ್‍ಯಾಲಿ

ಸಿಂಧನೂರಿನಲ್ಲಿಯು ಇಂಧನ ಬೆಲೆ ಗಗನಕ್ಕೆ ಏರಿಸಿದ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಸೋಮವಾರ (ಮಾರ್ಚ್ 1)ಕ್ಕೆ ಟ್ರಾಕ್ಟರ್ ಎಳೆದು ಪ್ರತಿಭಟನಾ ರ್‍ಯಾಲಿ ನಡೆಸಲು ನಿರ್ಧರಿಸಲಾಗಿದೆ

- Advertisement -
- Advertisement -

’ಆನೆಗೆ ಅಂಕುಶ ಇರುವಂತೆ ಆಡಳಿತಗಾರರನ್ನು ಎಚ್ಚರಿಸಲು ಹೋರಾಟ ಎನ್ನುವ ಅಂಕುಶ ಬೇಕೇ ಬೇಕು’ ಎಂದು ಬೆಲೆ ಏರಿಕೆ ವಿರುದ್ಧ ಮಾರ್ಚ್ 6ರಂದು ರಾಯಚೂರಿನಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನಾ ರ್‍ಯಾಲಿಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ನಾಗರಿಕರು ಅಭಿಪ್ರಾಯ ವ್ಯಕ್ತಪಡಿಸಿದರು.

ರಾಯಚೂರಿನ ಸ್ಪಂದನ ಭವನದಲ್ಲಿ ಭಾನುವಾರ (ಫೆ.28) ಬೆಳಿಗ್ಗೆ ವಿವಿಧ ವಿಭಾಗಗಳ ಜನರು ಈ ಪೂರ್ವಸಿದ್ಧತಾ ಸಭೆಯಲ್ಲಿ ಭಾಗವಹಿಸಿದ್ದರು. ಮಾರ್ಚ್ 6ರಂದು ಬೆಳಿಗ್ಗೆ 11ಕ್ಕೆ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಗೆ ಬೃಹತ್ ಪ್ರತಿಭಟನಾ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ.

SUCI(C) ಪಕ್ಷದ ರಾಯಚೂರು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಡಾಕ್ಟರ್ ಚಂದ್ರಗಿರೀಶ್ ಮಾತನಾಡಿ, ’ಅಚ್ಛೇ ದಿನ ತರುತ್ತೇವೆ ಎಂದು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರವು ಜನಗಳ ಜೇಬಿಗೆ ಕೈಹಾಕಿ ಲೂಟಿ ಮಾಡುತ್ತಿದೆ. ಎಲ್ಲಾ ಅಗತ್ಯ ವಸ್ತುಗಳ ಮೇಲೆ ಅತೀ ಹೆಚ್ಚು ತೆರಿಗೆ ಹಾಕಿ, ಬೆಲೆ ಏರಿಕೆ ಮಾಡಿದೆ. ಜನರು ಒಂದೊತ್ತಿನ ಊಟಕ್ಕೆ ಪರದಾಡುವಂತಾಗಿದೆ’ ಎಂದರು.

ಮುಂದುವರಿದು, ’ಅಂಬಾನಿ, ಅದಾನಿ, ಟಾಟಾ, ಬಿರ್ಲಾ ಅಂತಹ ಕಾರ್ಫೊರೇಟರ್‌ಗಳ ಸಂಪತ್ತಿನ ಹೆಚ್ಚಳವಾಗುತ್ತಿದೆ‌. ಜನರು ದರಿದ್ರರಾಗುತ್ತಿದ್ದಾರೆ. ಅಧಿಕಾರಕ್ಕೆ ಬಂದ ಸರ್ಕಾರಗಳು ಬಂಡವಾಳಗಾರರ ಸೇವೆಗೆ ನಿಂತಿವೆ. ಇದರ ವಿರುದ್ಧ ಹೋರಾಟ ಮಾಡುವುದನ್ನು ಬಿಟ್ಟು ಬೇರೆ ದಾರಿ ಇಲ್ಲವಾಗಿದೆ. ಸಣ್ಣಪುಟ್ಟ ಹೋರಾಟಗಳಿಗೆ ಇವರು ಮಣಿಯುವುದಿಲ್ಲ. ಹಾಗಾಗಿ ಜನರು ಬೃಹತ್ ಹೋರಾಟಕ್ಕೆ ತಯಾರಾಗಬೇಕಾದ ಅವಶ್ಯಕತೆ ಇದೆ. ಈಗ ಅಂತಹ ಸಮಯ ಬಂದಿದೆ. ಪ್ರತಿಯೊಬ್ಬರು ಆ ದಿಕ್ಕಿನಲ್ಲಿ ಕೆಲಸ ಮಾಡಲು ತಯಾರಾಗಬೇಕು’ ಎಂದರು.

ಇದನ್ನೂ ಓದಿ: ಪಂಚ ರಾಜ್ಯ ಚುನಾವಣೆ ಕುರಿತು ಎಬಿಪಿ-ಸಿ- ಓಟರ್ ಸಮೀಕ್ಷೆ ಹೇಳಿದ್ದೇನು…ಇಲ್ಲಿದೆ ವಿವರ

ಸಭೆಯ ಅಧ್ಯಕ್ಷತೆ ವಹಿಸಿದ್ದ AIUTUC ಜಿಲ್ಲಾಧ್ಯಕ್ಷ ವೀರೇಶ್ ಎನ್.ಎಸ್ ಮಾತನಾಡಿ, ’ನಿರುದ್ಯೋಗ, ಬಡತನ, ಬೆಲೆಯೇರಿಕೆ ಜನಗಳ ದಿನನಿತ್ಯ ಸಮಸ್ಯೆಗಳಾಗಿವೆ. ಕೊರೊನಾ ಕಾಲದಲ್ಲಿ ಜನಗಳಲ್ಲಿ ನೆರವಿಗೆ ಬರಬೇಕಾದ ಸರಕಾರ ಬಂಡವಾಳಗಾರರ ಸೇವೆಗೆ ನಿಂತಿದೆ. ಈ ಸಮಯದಲ್ಲಿ ರೈತ- ಕಾರ್ಮಿಕರ ವಿರೋಧಿ ನೀತಿಗಳನ್ನು ಜಾರಿಗೆ ತಂದಿದೆ. ಇಂತಹ ಜನವಿರೋಧಿ ನೀತಿಗಳ ವಿರುದ್ಧ ಜನಗಳು ಒಂದುಗೂಡಿ ಹೋರಾಟಕ್ಕೆ ಮುಂದಾಗಬೇಕು’ ಎಂದರು.

’ಜನಕಲ್ಯಾಣ ಯೋಜನೆಗಳಿಗೆ ಬೊಕ್ಕಸದಲ್ಲಿ ಹಣವಿಲ್ಲವೆಂದು ಹೇಳುವ ಸರ್ಕಾರಗಳು ಮಂತ್ರಿಗಳು ಐಷಾರಾಮಿ ಕಾರುಗಳನ್ನು ಖರೀದಿಸಲು ಹಣ ಹೆಚ್ಚಳ ಮಾಡಿದೆ. ತಿರುಪತಿಯಲ್ಲಿ ಬೃಹತ್ ವಸತಿ ಗೃಹ ಕಟ್ಟಿಸಲು 200 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಜನರ ಬಗ್ಗೆ ಯಾವುದೇ ಕಾಳಜಿ ಇಲ್ಲ. ಆದ್ದರಿಂದ ಈ ಬೆಲೆ ಏರಿಕೆ ವಿರುದ್ಧ ಜನರ ನಡುವೆ ವ್ಯಾಪಕ ಪ್ರಚಾರ ಮಾಡಿ ಮಾರ್ಚ್ 6ರಂದು ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ’ ಎಂದು ಡೆಮಾಕ್ರಟಿಕ್ ಯೂತ್ ಆರ್ಗನೈಸೆಷನ್ ಜಿಲ್ಲಾಧ್ಯಕ್ಷ ಚನ್ನಬಸವ ಜಾನೇಕಲ್ ಹೇಳಿದರು.

ಹಿರಿಯ ನಾಗರಿಕರಾದ ಖಂಡೇರಾವ್, ದಯಾನಂದ, ಅಣ್ಣಪ್ಪ, ಫ್ರಾಂಕ್ಲಿನ್ ರಾಜು, ನಿಸಾರ್, ನೂರ್, ಜಮಾಲುದ್ದಿನ್, ರಾಮಣ್ಣ ಎಂ, ಜಾವೇದ್, ಭೀಮಣ್ಣ, ಪ್ರಮೋದ್ ಕುಮಾರ್, ರವೂಫ್ ಮುಂತಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

May be an image of 5 people, outdoors and text that says "ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಟಾ ಕ ರ‍ಗೆ ಹಗ ಕಟ್ಟಿ பவி ಪ ಎಳೆಯುವ ಮೂಲಕ ಪ್ರತಿಭಟನಾ ಮೆರವಣಿಗೆ TRAKSTER 536 ದಿನಾಂಕ: 1.3.2021 ಬೆಳಿಗ್ಗೆ 10.30 ಗಂಟೆಗೆ ಸ್ಥಳ: ಎಪಿಎಂಸಿ ಗಣೇಶ ದೇವಸ್ಥಾನದಿಂದ ಮಹಾತ್ಮ ಗಾಂಧಿ ವೃತ್ತದವರೆಗೆ... ಪ್ರಗತಪರ ಸಂಘಟನಗಳ ಒಕ್ಕೂಟ ಸಿಂಧನೂರು"

ಇತ್ತ ಸಿಂಧನೂರಿನಲ್ಲಿಯೂ ಇಂಧನ ಬೆಲೆ ಗಗನಕ್ಕೆ ಏರಿಸಿದ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಸೋಮವಾರ (ಮಾರ್ಚ್ 1)ಕ್ಕೆ ಸಿಂಧನೂರಿನ ಎಪಿಎಂಸಿ ಗಣೇಶ ದೇವಸ್ಥಾನದಿಂದ ಮಹಾತ್ಮ ಗಾಂಧಿ ಸರ್ಕಲ್ ವರೆಗೆ ಟ್ರಾಕ್ಟರ್ ಎಳೆದು ಪ್ರತಿಭಟನಾ ಮೆರವಣಿಗೆ ನಡೆಸಲು ಜಿಲ್ಲೆಯ ಪ್ರಗತಿಪರ ಸಂಘಟನೆಗಳ ಒಕ್ಕೂಟ ನಿರ್ಧರಿಸಿದೆ.


ಇದನ್ನೂ ಓದಿ: ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ರೈತರ ಮಹಾಪಂಚಾಯತ್‌ ವೇದಿಕೆಯಲ್ಲಿ ABP ಚಾನೆಲ್‌ ವರದಿಗಾರನ ರಾಜೀನಾಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...