Homeಕರ್ನಾಟಕರಾಯಚೂರು: ಬೆಲೆ ಏರಿಕೆ ವಿರುದ್ಧ ಮಾರ್ಚ್ 6ಕ್ಕೆ ಬೃಹತ್ ಪ್ರತಿಭಟನಾ ರ್‍ಯಾಲಿ

ರಾಯಚೂರು: ಬೆಲೆ ಏರಿಕೆ ವಿರುದ್ಧ ಮಾರ್ಚ್ 6ಕ್ಕೆ ಬೃಹತ್ ಪ್ರತಿಭಟನಾ ರ್‍ಯಾಲಿ

ಸಿಂಧನೂರಿನಲ್ಲಿಯು ಇಂಧನ ಬೆಲೆ ಗಗನಕ್ಕೆ ಏರಿಸಿದ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಸೋಮವಾರ (ಮಾರ್ಚ್ 1)ಕ್ಕೆ ಟ್ರಾಕ್ಟರ್ ಎಳೆದು ಪ್ರತಿಭಟನಾ ರ್‍ಯಾಲಿ ನಡೆಸಲು ನಿರ್ಧರಿಸಲಾಗಿದೆ

- Advertisement -
- Advertisement -

’ಆನೆಗೆ ಅಂಕುಶ ಇರುವಂತೆ ಆಡಳಿತಗಾರರನ್ನು ಎಚ್ಚರಿಸಲು ಹೋರಾಟ ಎನ್ನುವ ಅಂಕುಶ ಬೇಕೇ ಬೇಕು’ ಎಂದು ಬೆಲೆ ಏರಿಕೆ ವಿರುದ್ಧ ಮಾರ್ಚ್ 6ರಂದು ರಾಯಚೂರಿನಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನಾ ರ್‍ಯಾಲಿಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ನಾಗರಿಕರು ಅಭಿಪ್ರಾಯ ವ್ಯಕ್ತಪಡಿಸಿದರು.

ರಾಯಚೂರಿನ ಸ್ಪಂದನ ಭವನದಲ್ಲಿ ಭಾನುವಾರ (ಫೆ.28) ಬೆಳಿಗ್ಗೆ ವಿವಿಧ ವಿಭಾಗಗಳ ಜನರು ಈ ಪೂರ್ವಸಿದ್ಧತಾ ಸಭೆಯಲ್ಲಿ ಭಾಗವಹಿಸಿದ್ದರು. ಮಾರ್ಚ್ 6ರಂದು ಬೆಳಿಗ್ಗೆ 11ಕ್ಕೆ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಗೆ ಬೃಹತ್ ಪ್ರತಿಭಟನಾ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ.

SUCI(C) ಪಕ್ಷದ ರಾಯಚೂರು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಡಾಕ್ಟರ್ ಚಂದ್ರಗಿರೀಶ್ ಮಾತನಾಡಿ, ’ಅಚ್ಛೇ ದಿನ ತರುತ್ತೇವೆ ಎಂದು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರವು ಜನಗಳ ಜೇಬಿಗೆ ಕೈಹಾಕಿ ಲೂಟಿ ಮಾಡುತ್ತಿದೆ. ಎಲ್ಲಾ ಅಗತ್ಯ ವಸ್ತುಗಳ ಮೇಲೆ ಅತೀ ಹೆಚ್ಚು ತೆರಿಗೆ ಹಾಕಿ, ಬೆಲೆ ಏರಿಕೆ ಮಾಡಿದೆ. ಜನರು ಒಂದೊತ್ತಿನ ಊಟಕ್ಕೆ ಪರದಾಡುವಂತಾಗಿದೆ’ ಎಂದರು.

ಮುಂದುವರಿದು, ’ಅಂಬಾನಿ, ಅದಾನಿ, ಟಾಟಾ, ಬಿರ್ಲಾ ಅಂತಹ ಕಾರ್ಫೊರೇಟರ್‌ಗಳ ಸಂಪತ್ತಿನ ಹೆಚ್ಚಳವಾಗುತ್ತಿದೆ‌. ಜನರು ದರಿದ್ರರಾಗುತ್ತಿದ್ದಾರೆ. ಅಧಿಕಾರಕ್ಕೆ ಬಂದ ಸರ್ಕಾರಗಳು ಬಂಡವಾಳಗಾರರ ಸೇವೆಗೆ ನಿಂತಿವೆ. ಇದರ ವಿರುದ್ಧ ಹೋರಾಟ ಮಾಡುವುದನ್ನು ಬಿಟ್ಟು ಬೇರೆ ದಾರಿ ಇಲ್ಲವಾಗಿದೆ. ಸಣ್ಣಪುಟ್ಟ ಹೋರಾಟಗಳಿಗೆ ಇವರು ಮಣಿಯುವುದಿಲ್ಲ. ಹಾಗಾಗಿ ಜನರು ಬೃಹತ್ ಹೋರಾಟಕ್ಕೆ ತಯಾರಾಗಬೇಕಾದ ಅವಶ್ಯಕತೆ ಇದೆ. ಈಗ ಅಂತಹ ಸಮಯ ಬಂದಿದೆ. ಪ್ರತಿಯೊಬ್ಬರು ಆ ದಿಕ್ಕಿನಲ್ಲಿ ಕೆಲಸ ಮಾಡಲು ತಯಾರಾಗಬೇಕು’ ಎಂದರು.

ಇದನ್ನೂ ಓದಿ: ಪಂಚ ರಾಜ್ಯ ಚುನಾವಣೆ ಕುರಿತು ಎಬಿಪಿ-ಸಿ- ಓಟರ್ ಸಮೀಕ್ಷೆ ಹೇಳಿದ್ದೇನು…ಇಲ್ಲಿದೆ ವಿವರ

ಸಭೆಯ ಅಧ್ಯಕ್ಷತೆ ವಹಿಸಿದ್ದ AIUTUC ಜಿಲ್ಲಾಧ್ಯಕ್ಷ ವೀರೇಶ್ ಎನ್.ಎಸ್ ಮಾತನಾಡಿ, ’ನಿರುದ್ಯೋಗ, ಬಡತನ, ಬೆಲೆಯೇರಿಕೆ ಜನಗಳ ದಿನನಿತ್ಯ ಸಮಸ್ಯೆಗಳಾಗಿವೆ. ಕೊರೊನಾ ಕಾಲದಲ್ಲಿ ಜನಗಳಲ್ಲಿ ನೆರವಿಗೆ ಬರಬೇಕಾದ ಸರಕಾರ ಬಂಡವಾಳಗಾರರ ಸೇವೆಗೆ ನಿಂತಿದೆ. ಈ ಸಮಯದಲ್ಲಿ ರೈತ- ಕಾರ್ಮಿಕರ ವಿರೋಧಿ ನೀತಿಗಳನ್ನು ಜಾರಿಗೆ ತಂದಿದೆ. ಇಂತಹ ಜನವಿರೋಧಿ ನೀತಿಗಳ ವಿರುದ್ಧ ಜನಗಳು ಒಂದುಗೂಡಿ ಹೋರಾಟಕ್ಕೆ ಮುಂದಾಗಬೇಕು’ ಎಂದರು.

’ಜನಕಲ್ಯಾಣ ಯೋಜನೆಗಳಿಗೆ ಬೊಕ್ಕಸದಲ್ಲಿ ಹಣವಿಲ್ಲವೆಂದು ಹೇಳುವ ಸರ್ಕಾರಗಳು ಮಂತ್ರಿಗಳು ಐಷಾರಾಮಿ ಕಾರುಗಳನ್ನು ಖರೀದಿಸಲು ಹಣ ಹೆಚ್ಚಳ ಮಾಡಿದೆ. ತಿರುಪತಿಯಲ್ಲಿ ಬೃಹತ್ ವಸತಿ ಗೃಹ ಕಟ್ಟಿಸಲು 200 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಜನರ ಬಗ್ಗೆ ಯಾವುದೇ ಕಾಳಜಿ ಇಲ್ಲ. ಆದ್ದರಿಂದ ಈ ಬೆಲೆ ಏರಿಕೆ ವಿರುದ್ಧ ಜನರ ನಡುವೆ ವ್ಯಾಪಕ ಪ್ರಚಾರ ಮಾಡಿ ಮಾರ್ಚ್ 6ರಂದು ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ’ ಎಂದು ಡೆಮಾಕ್ರಟಿಕ್ ಯೂತ್ ಆರ್ಗನೈಸೆಷನ್ ಜಿಲ್ಲಾಧ್ಯಕ್ಷ ಚನ್ನಬಸವ ಜಾನೇಕಲ್ ಹೇಳಿದರು.

ಹಿರಿಯ ನಾಗರಿಕರಾದ ಖಂಡೇರಾವ್, ದಯಾನಂದ, ಅಣ್ಣಪ್ಪ, ಫ್ರಾಂಕ್ಲಿನ್ ರಾಜು, ನಿಸಾರ್, ನೂರ್, ಜಮಾಲುದ್ದಿನ್, ರಾಮಣ್ಣ ಎಂ, ಜಾವೇದ್, ಭೀಮಣ್ಣ, ಪ್ರಮೋದ್ ಕುಮಾರ್, ರವೂಫ್ ಮುಂತಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

May be an image of 5 people, outdoors and text that says "ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಟಾ ಕ ರ‍ಗೆ ಹಗ ಕಟ್ಟಿ பவி ಪ ಎಳೆಯುವ ಮೂಲಕ ಪ್ರತಿಭಟನಾ ಮೆರವಣಿಗೆ TRAKSTER 536 ದಿನಾಂಕ: 1.3.2021 ಬೆಳಿಗ್ಗೆ 10.30 ಗಂಟೆಗೆ ಸ್ಥಳ: ಎಪಿಎಂಸಿ ಗಣೇಶ ದೇವಸ್ಥಾನದಿಂದ ಮಹಾತ್ಮ ಗಾಂಧಿ ವೃತ್ತದವರೆಗೆ... ಪ್ರಗತಪರ ಸಂಘಟನಗಳ ಒಕ್ಕೂಟ ಸಿಂಧನೂರು"

ಇತ್ತ ಸಿಂಧನೂರಿನಲ್ಲಿಯೂ ಇಂಧನ ಬೆಲೆ ಗಗನಕ್ಕೆ ಏರಿಸಿದ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಸೋಮವಾರ (ಮಾರ್ಚ್ 1)ಕ್ಕೆ ಸಿಂಧನೂರಿನ ಎಪಿಎಂಸಿ ಗಣೇಶ ದೇವಸ್ಥಾನದಿಂದ ಮಹಾತ್ಮ ಗಾಂಧಿ ಸರ್ಕಲ್ ವರೆಗೆ ಟ್ರಾಕ್ಟರ್ ಎಳೆದು ಪ್ರತಿಭಟನಾ ಮೆರವಣಿಗೆ ನಡೆಸಲು ಜಿಲ್ಲೆಯ ಪ್ರಗತಿಪರ ಸಂಘಟನೆಗಳ ಒಕ್ಕೂಟ ನಿರ್ಧರಿಸಿದೆ.


ಇದನ್ನೂ ಓದಿ: ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ರೈತರ ಮಹಾಪಂಚಾಯತ್‌ ವೇದಿಕೆಯಲ್ಲಿ ABP ಚಾನೆಲ್‌ ವರದಿಗಾರನ ರಾಜೀನಾಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...