Homeಕರ್ನಾಟಕರಾಯಚೂರು: ಬೆಲೆ ಏರಿಕೆ ವಿರುದ್ಧ ಮಾರ್ಚ್ 6ಕ್ಕೆ ಬೃಹತ್ ಪ್ರತಿಭಟನಾ ರ್‍ಯಾಲಿ

ರಾಯಚೂರು: ಬೆಲೆ ಏರಿಕೆ ವಿರುದ್ಧ ಮಾರ್ಚ್ 6ಕ್ಕೆ ಬೃಹತ್ ಪ್ರತಿಭಟನಾ ರ್‍ಯಾಲಿ

ಸಿಂಧನೂರಿನಲ್ಲಿಯು ಇಂಧನ ಬೆಲೆ ಗಗನಕ್ಕೆ ಏರಿಸಿದ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಸೋಮವಾರ (ಮಾರ್ಚ್ 1)ಕ್ಕೆ ಟ್ರಾಕ್ಟರ್ ಎಳೆದು ಪ್ರತಿಭಟನಾ ರ್‍ಯಾಲಿ ನಡೆಸಲು ನಿರ್ಧರಿಸಲಾಗಿದೆ

- Advertisement -
- Advertisement -

’ಆನೆಗೆ ಅಂಕುಶ ಇರುವಂತೆ ಆಡಳಿತಗಾರರನ್ನು ಎಚ್ಚರಿಸಲು ಹೋರಾಟ ಎನ್ನುವ ಅಂಕುಶ ಬೇಕೇ ಬೇಕು’ ಎಂದು ಬೆಲೆ ಏರಿಕೆ ವಿರುದ್ಧ ಮಾರ್ಚ್ 6ರಂದು ರಾಯಚೂರಿನಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನಾ ರ್‍ಯಾಲಿಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ನಾಗರಿಕರು ಅಭಿಪ್ರಾಯ ವ್ಯಕ್ತಪಡಿಸಿದರು.

ರಾಯಚೂರಿನ ಸ್ಪಂದನ ಭವನದಲ್ಲಿ ಭಾನುವಾರ (ಫೆ.28) ಬೆಳಿಗ್ಗೆ ವಿವಿಧ ವಿಭಾಗಗಳ ಜನರು ಈ ಪೂರ್ವಸಿದ್ಧತಾ ಸಭೆಯಲ್ಲಿ ಭಾಗವಹಿಸಿದ್ದರು. ಮಾರ್ಚ್ 6ರಂದು ಬೆಳಿಗ್ಗೆ 11ಕ್ಕೆ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಗೆ ಬೃಹತ್ ಪ್ರತಿಭಟನಾ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ.

SUCI(C) ಪಕ್ಷದ ರಾಯಚೂರು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಡಾಕ್ಟರ್ ಚಂದ್ರಗಿರೀಶ್ ಮಾತನಾಡಿ, ’ಅಚ್ಛೇ ದಿನ ತರುತ್ತೇವೆ ಎಂದು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರವು ಜನಗಳ ಜೇಬಿಗೆ ಕೈಹಾಕಿ ಲೂಟಿ ಮಾಡುತ್ತಿದೆ. ಎಲ್ಲಾ ಅಗತ್ಯ ವಸ್ತುಗಳ ಮೇಲೆ ಅತೀ ಹೆಚ್ಚು ತೆರಿಗೆ ಹಾಕಿ, ಬೆಲೆ ಏರಿಕೆ ಮಾಡಿದೆ. ಜನರು ಒಂದೊತ್ತಿನ ಊಟಕ್ಕೆ ಪರದಾಡುವಂತಾಗಿದೆ’ ಎಂದರು.

ಮುಂದುವರಿದು, ’ಅಂಬಾನಿ, ಅದಾನಿ, ಟಾಟಾ, ಬಿರ್ಲಾ ಅಂತಹ ಕಾರ್ಫೊರೇಟರ್‌ಗಳ ಸಂಪತ್ತಿನ ಹೆಚ್ಚಳವಾಗುತ್ತಿದೆ‌. ಜನರು ದರಿದ್ರರಾಗುತ್ತಿದ್ದಾರೆ. ಅಧಿಕಾರಕ್ಕೆ ಬಂದ ಸರ್ಕಾರಗಳು ಬಂಡವಾಳಗಾರರ ಸೇವೆಗೆ ನಿಂತಿವೆ. ಇದರ ವಿರುದ್ಧ ಹೋರಾಟ ಮಾಡುವುದನ್ನು ಬಿಟ್ಟು ಬೇರೆ ದಾರಿ ಇಲ್ಲವಾಗಿದೆ. ಸಣ್ಣಪುಟ್ಟ ಹೋರಾಟಗಳಿಗೆ ಇವರು ಮಣಿಯುವುದಿಲ್ಲ. ಹಾಗಾಗಿ ಜನರು ಬೃಹತ್ ಹೋರಾಟಕ್ಕೆ ತಯಾರಾಗಬೇಕಾದ ಅವಶ್ಯಕತೆ ಇದೆ. ಈಗ ಅಂತಹ ಸಮಯ ಬಂದಿದೆ. ಪ್ರತಿಯೊಬ್ಬರು ಆ ದಿಕ್ಕಿನಲ್ಲಿ ಕೆಲಸ ಮಾಡಲು ತಯಾರಾಗಬೇಕು’ ಎಂದರು.

ಇದನ್ನೂ ಓದಿ: ಪಂಚ ರಾಜ್ಯ ಚುನಾವಣೆ ಕುರಿತು ಎಬಿಪಿ-ಸಿ- ಓಟರ್ ಸಮೀಕ್ಷೆ ಹೇಳಿದ್ದೇನು…ಇಲ್ಲಿದೆ ವಿವರ

ಸಭೆಯ ಅಧ್ಯಕ್ಷತೆ ವಹಿಸಿದ್ದ AIUTUC ಜಿಲ್ಲಾಧ್ಯಕ್ಷ ವೀರೇಶ್ ಎನ್.ಎಸ್ ಮಾತನಾಡಿ, ’ನಿರುದ್ಯೋಗ, ಬಡತನ, ಬೆಲೆಯೇರಿಕೆ ಜನಗಳ ದಿನನಿತ್ಯ ಸಮಸ್ಯೆಗಳಾಗಿವೆ. ಕೊರೊನಾ ಕಾಲದಲ್ಲಿ ಜನಗಳಲ್ಲಿ ನೆರವಿಗೆ ಬರಬೇಕಾದ ಸರಕಾರ ಬಂಡವಾಳಗಾರರ ಸೇವೆಗೆ ನಿಂತಿದೆ. ಈ ಸಮಯದಲ್ಲಿ ರೈತ- ಕಾರ್ಮಿಕರ ವಿರೋಧಿ ನೀತಿಗಳನ್ನು ಜಾರಿಗೆ ತಂದಿದೆ. ಇಂತಹ ಜನವಿರೋಧಿ ನೀತಿಗಳ ವಿರುದ್ಧ ಜನಗಳು ಒಂದುಗೂಡಿ ಹೋರಾಟಕ್ಕೆ ಮುಂದಾಗಬೇಕು’ ಎಂದರು.

’ಜನಕಲ್ಯಾಣ ಯೋಜನೆಗಳಿಗೆ ಬೊಕ್ಕಸದಲ್ಲಿ ಹಣವಿಲ್ಲವೆಂದು ಹೇಳುವ ಸರ್ಕಾರಗಳು ಮಂತ್ರಿಗಳು ಐಷಾರಾಮಿ ಕಾರುಗಳನ್ನು ಖರೀದಿಸಲು ಹಣ ಹೆಚ್ಚಳ ಮಾಡಿದೆ. ತಿರುಪತಿಯಲ್ಲಿ ಬೃಹತ್ ವಸತಿ ಗೃಹ ಕಟ್ಟಿಸಲು 200 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಜನರ ಬಗ್ಗೆ ಯಾವುದೇ ಕಾಳಜಿ ಇಲ್ಲ. ಆದ್ದರಿಂದ ಈ ಬೆಲೆ ಏರಿಕೆ ವಿರುದ್ಧ ಜನರ ನಡುವೆ ವ್ಯಾಪಕ ಪ್ರಚಾರ ಮಾಡಿ ಮಾರ್ಚ್ 6ರಂದು ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ’ ಎಂದು ಡೆಮಾಕ್ರಟಿಕ್ ಯೂತ್ ಆರ್ಗನೈಸೆಷನ್ ಜಿಲ್ಲಾಧ್ಯಕ್ಷ ಚನ್ನಬಸವ ಜಾನೇಕಲ್ ಹೇಳಿದರು.

ಹಿರಿಯ ನಾಗರಿಕರಾದ ಖಂಡೇರಾವ್, ದಯಾನಂದ, ಅಣ್ಣಪ್ಪ, ಫ್ರಾಂಕ್ಲಿನ್ ರಾಜು, ನಿಸಾರ್, ನೂರ್, ಜಮಾಲುದ್ದಿನ್, ರಾಮಣ್ಣ ಎಂ, ಜಾವೇದ್, ಭೀಮಣ್ಣ, ಪ್ರಮೋದ್ ಕುಮಾರ್, ರವೂಫ್ ಮುಂತಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

May be an image of 5 people, outdoors and text that says "ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಟಾ ಕ ರ‍ಗೆ ಹಗ ಕಟ್ಟಿ பவி ಪ ಎಳೆಯುವ ಮೂಲಕ ಪ್ರತಿಭಟನಾ ಮೆರವಣಿಗೆ TRAKSTER 536 ದಿನಾಂಕ: 1.3.2021 ಬೆಳಿಗ್ಗೆ 10.30 ಗಂಟೆಗೆ ಸ್ಥಳ: ಎಪಿಎಂಸಿ ಗಣೇಶ ದೇವಸ್ಥಾನದಿಂದ ಮಹಾತ್ಮ ಗಾಂಧಿ ವೃತ್ತದವರೆಗೆ... ಪ್ರಗತಪರ ಸಂಘಟನಗಳ ಒಕ್ಕೂಟ ಸಿಂಧನೂರು"

ಇತ್ತ ಸಿಂಧನೂರಿನಲ್ಲಿಯೂ ಇಂಧನ ಬೆಲೆ ಗಗನಕ್ಕೆ ಏರಿಸಿದ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಸೋಮವಾರ (ಮಾರ್ಚ್ 1)ಕ್ಕೆ ಸಿಂಧನೂರಿನ ಎಪಿಎಂಸಿ ಗಣೇಶ ದೇವಸ್ಥಾನದಿಂದ ಮಹಾತ್ಮ ಗಾಂಧಿ ಸರ್ಕಲ್ ವರೆಗೆ ಟ್ರಾಕ್ಟರ್ ಎಳೆದು ಪ್ರತಿಭಟನಾ ಮೆರವಣಿಗೆ ನಡೆಸಲು ಜಿಲ್ಲೆಯ ಪ್ರಗತಿಪರ ಸಂಘಟನೆಗಳ ಒಕ್ಕೂಟ ನಿರ್ಧರಿಸಿದೆ.


ಇದನ್ನೂ ಓದಿ: ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ರೈತರ ಮಹಾಪಂಚಾಯತ್‌ ವೇದಿಕೆಯಲ್ಲಿ ABP ಚಾನೆಲ್‌ ವರದಿಗಾರನ ರಾಜೀನಾಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...