Homeಕರ್ನಾಟಕರಾಯಚೂರು ಲೋಕಸಭಾ ಕ್ಷೇತ್ರ : ಮತ್ತೆ ಜಾರಲಿದೆಯೆ ಕಾಂಗ್ರೆಸ್ ತೆಕ್ಕೆಗೆ?

ರಾಯಚೂರು ಲೋಕಸಭಾ ಕ್ಷೇತ್ರ : ಮತ್ತೆ ಜಾರಲಿದೆಯೆ ಕಾಂಗ್ರೆಸ್ ತೆಕ್ಕೆಗೆ?

- Advertisement -
- Advertisement -

ರಾಯಚೂರು ಲೋಕಸಭಾ ಕ್ಷೇತ್ರ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರ. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ವಾಲ್ಮೀಕಿ ಸಮುದಾಯ ನಿರ್ಣಾಯಕ ಪಾತ್ರ ವಹಿಸಲಿದೆ. ಇಲ್ಲಿ ಒಂದು ವಾರದ ಹಿಂದೆಯೇ ಹಾಲಿ ಸಂಸದ ಬಿ.ವಿ ನಾಯಕ್‍ಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ಜೆಡಿಎಸ್ ಮೈತ್ರಿಯ ಕಾರಣಕ್ಕೆ ಕಾಂಗ್ರೆಸ್ ಅನ್ನು ಬೆಂಬಲಿಸಲಿದೆ. ಬಿ.ವಿ ನಾಯಕ್ ಬಗ್ಗೆ ಕ್ಷೇತ್ರದಲ್ಲಿ ಈ ಹಿಂದೆ ಒಳ್ಳೆಯ ಹೆಸರು ಇರಲಿಲ್ಲ. ಆದರೆ ಈಗ ಟಿಕೆಟ್ ಪಡೆದಿರುವ ಪ್ರತಿಸ್ಪರ್ಧಿ ಬಿಜೆಪಿಯ ರಾಜಾ ಅಮರೇಶ್ವರ್ ನಾಯಕ್ ಪ್ರಬಲನಾಗಿ ಕಾಣುತ್ತಿಲ್ಲ. ಟಿಕೆಟ್ ಸಿಗದ ಕಾರಣಕ್ಕೆ ಬಂಡಾಯದ ಬಿಸಿ ಅಮರೇಶ್ ನಾಯಕ್‍ರನ್ನು ಸುಡುತ್ತಲೇ ಇದೆ.

ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಗಳ ದಂಡೇ ಇತ್ತು. ಮೊದಲನೆಯದಾಗಿ ರಾಜಾ ಅಮರೇಶ್ವರ್ ನಾಯಕ್ ಟಿಕೆಟ್‍ಗಾಗಿ ಪ್ರಬಲ ಸ್ಪರ್ಧೆ ಒಡ್ಡಿದ್ದರು. ಇನ್ನು ಎರಡನೆಯ ಪೈಪೋಟಿ ನಡೆಸಿದ್ದು ಬಿಜೆಪಿಯ ಮಾಜಿ ಶಾಸಕ ತಿಪ್ಪರಾಜ ಹವಾಲ್ದಾರ. ಈತ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ರಾಯಚೂರು ಗ್ರಾಮಾಂತರ ಕ್ಷೇತ್ರದಿಂದ ನಿಂತು ಸೋತಿದ್ದ. ಆಗಿನಿಂದ ಎಂಪಿ ಟಿಕೆಟ್ ಮೇಲೆ ಕಣ್ಣಿಟ್ಟು ಕೆಲಸ ಮಾಡಿದ್ದ. ಇದು ಈತನ ಗುರು ಹಾಲಿ ದೇವದುರ್ಗ ಶಾಸಕ ಶಿವನಗೌಡ ನಾಯಕ್ ಕಿವಿಗೆ ಬಿದ್ದಿದೆ ತಡ ತನಗೂ ಟಿಕೆಟ್ ಬೇಕೆಂದು ಹಠ ಹಿಡಿದು ಕೂತಿದ್ದ. ಈತನಿಗೆ ತಾನು ಎಂಪಿ ಆಗುವುದಕ್ಕಿಂತ ತಾನು ಬೆಳೆಸಿದ, ತನ್ನ ಶಿಷ್ಯ ತಿಪ್ಪರಾಜು ಎಂಪಿ ಆಗದಂತೆ ತಡೆಯುವುದು ಮುಖ್ಯವಾಗಿತ್ತು. ಅದಕ್ಕಾಗಿ ತನಗೂ ಕೊಡಿ ಎಂಬ ದಾಳ ಉರುಳಿಸಿದ್ದ. ಕೊನೆಗೆ ಬಿಜೆಪಿ ಅಳೆದು ತೂಗಿ ರಾಜಾ ಅಮರೇಶ್ ನಾಯಕ್‍ಗೆ ಟಿಕೆಟ್ ನೀಡಿದೆ.

ಅಲ್ಲಿಗೆ ಶಿವನಗೌಡನಾಯಕ್ ತನ್ನ ಉದ್ದೇಶ ಫಲಿಸಿದ್ದಕ್ಕೆ ತಣ್ಣಗಾದರೆ, ಟಿಕೆಟ್ ತಪ್ಪಿದ್ದಕ್ಕೆ ತಿಪ್ಪರಾಜು ಕುದಿಯಲಾರಂಭಿಸಿದ್ದಾನೆ. ಟಿಕೆಟ್ ಗಾಗಿ ಯಡಿಯೂರಪ್ಪನಿಗೆ ದುಂಬಾಲು ಬಿದ್ದಿದ್ದ ಈತ, ಈಗ ಇದು ಯಡ್ಯೂರಪ್ಪನವರಿಗೆ ಮಾಡುತ್ತಿರುವ ಅವಮಾನ ಎಂದು ಬಹಿರಂಗವಾಗಿ ತನ್ನ ಅಸಮಾಧಾನ ಹೊರಹಾಕಿದ್ದಾನೆ. ಈ ಬಂಡಾಯದ ಬಿಸಿ ಬಿಜೆಪಿಗೆ ದೊಡ್ಡ ತಲೆನೋವಾಗಿದೆ. ಆದರೆ ಅತ್ತ ಕಾಂಗ್ರೆಸ್ ಜೆಡಿಎಸ್‍ನಲ್ಲಿ ಯಾವುದೇ ಬಂಡಾಯವಿಲ್ಲದೆ ಅನಾಯಾಸವಾಗಿ ಕ್ಷೇತ್ರವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಉತ್ಸುಕರಾಗಿದ್ದಾರೆ.

ಕಾಂಗ್ರೆಸ್‍ನ ಭದ್ರ ಕೋಟೆಯಾಗಿರುವ ಇಲ್ಲಿ  ಜಾರಕಿಹೊಳಿ ಬ್ರದರ್ಸ್ ಪ್ರಭಾವ ದಡ್ಡವಾಗಿ ಹರಡಿದೆ. ಅವರ ಸಂಬಂಧಿಗಳು ರಾಜಕೀಯದ ಆಯಕಟ್ಟಿನ ಸ್ಥಾನದಲ್ಲಿ ಕೂತಿದ್ದಾರೆ. ಬಿ.ವಿ ನಾಯಕ್ ಕೂಡ ಜಾರಕಿಹೊಳಿ ಸಹೋದರರಿಗೆ ಸಂಬಂಧಿಯಾದ ಕಾರಣ ಎಲ್ಲರೂ ಅವರ ಪರ ಒಗ್ಗಟ್ಟಾಗಿ ನಿಂತಿದ್ದಾರೆ. ಇನ್ನು ಬಿಜೆಪಿ ಪಾಳಯದಲ್ಲಿ ಅಂತಹ ಒಗ್ಗಟ್ಟು ಕಂಡುಬರುತ್ತಿಲ್ಲ. ಬಂಡಾಯದ ಕಾರಣಕ್ಕಾಗಿ ಕೊನೆಗಳಿಗೆಯಲ್ಲಿ ಟಿಕೆಟ್ ನೀಡಲಾಗಿದೆ. ಕಳೆದ ಚುನಾವಣೆಯಲ್ಲಿಯೂ ಸಹ ಕೊನೆ ಗಳಿಗೆಯಲ್ಲಿ ಟಿಕೆಟ್ ನೀಡಿದ್ದೇ ಸೋಲಿಗೆ ಕಾರಣ ಎಂದು ವಿಶ್ಲೇಷಿಸಲಾಗಿತ್ತು. ಈ ಬಾರಿಯ ಬಂಡಾಯದ ಬಿಸಿಯಿಂದ ತಪ್ಪಿಸಿಕೊಳ್ಳಲು ಕೊನೆ ಗಳಿಗೆಯಲ್ಲಿ ಟಿಕೆಟ್ ನೀಡಿ ಮೋದಿ ಮುಖ ಇಟ್ಟುಕೊಂಡು ವೋಟು ಕೇಳಿ ಎಂದು ಹಿರಿಯಲು ಸಲಹೆ ನೀಡುತ್ತಿದ್ದಾರೆ.

ಅಷ್ಟೆಲ್ಲಾ ಮೋದಿ ಅಲೆ ಇದ್ದ 2014ರಲ್ಲಿಯೇ ಗೆಲ್ಲಲಾಗದ ಬಿಜೆಪಿ ಈ ಬಾರಿ ಇಷ್ಟೆಲ್ಲಾ ಗೊಂದಲಗಳ ನಡುವೆ ಗೆಲ್ಲುವುದು ಕಷ್ಟ. ಇದೆಲ್ಲದರ ಅನುಕೂಲ, ಹೆಚ್ಚಿನ ಸಂಖ್ಯೆಯ ಶಾಸಕರು, ಜೆಡಿಎಸ್‍ನ ಬೆಂಬಲ, ಸಂಬಂಧಿಗಳ ನೆರವು ಎಲ್ಲವೂಗಳಿಂದ ಬಿ.ವಿ ನಾಯಕ್ ಮರು ಆಯ್ಕೆಯಾಗುವ ಸೂಚನೆಗಳಿವೆ. ತನ್ನ ಭದ್ರಕೋಟೆಯನ್ನು ಕಾಂಗ್ರೆಸ್ ಮತ್ತಷ್ಟು ಭದ್ರ ಮಾಡಿಕೊಳ್ಳಲು ಎಲ್ಲಾ ಅವಕಾಶಗಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...