Homeಕರ್ನಾಟಕರಾಯಚೂರು ಲೋಕಸಭಾ ಕ್ಷೇತ್ರ : ಮತ್ತೆ ಜಾರಲಿದೆಯೆ ಕಾಂಗ್ರೆಸ್ ತೆಕ್ಕೆಗೆ?

ರಾಯಚೂರು ಲೋಕಸಭಾ ಕ್ಷೇತ್ರ : ಮತ್ತೆ ಜಾರಲಿದೆಯೆ ಕಾಂಗ್ರೆಸ್ ತೆಕ್ಕೆಗೆ?

- Advertisement -
- Advertisement -

ರಾಯಚೂರು ಲೋಕಸಭಾ ಕ್ಷೇತ್ರ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರ. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ವಾಲ್ಮೀಕಿ ಸಮುದಾಯ ನಿರ್ಣಾಯಕ ಪಾತ್ರ ವಹಿಸಲಿದೆ. ಇಲ್ಲಿ ಒಂದು ವಾರದ ಹಿಂದೆಯೇ ಹಾಲಿ ಸಂಸದ ಬಿ.ವಿ ನಾಯಕ್‍ಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ಜೆಡಿಎಸ್ ಮೈತ್ರಿಯ ಕಾರಣಕ್ಕೆ ಕಾಂಗ್ರೆಸ್ ಅನ್ನು ಬೆಂಬಲಿಸಲಿದೆ. ಬಿ.ವಿ ನಾಯಕ್ ಬಗ್ಗೆ ಕ್ಷೇತ್ರದಲ್ಲಿ ಈ ಹಿಂದೆ ಒಳ್ಳೆಯ ಹೆಸರು ಇರಲಿಲ್ಲ. ಆದರೆ ಈಗ ಟಿಕೆಟ್ ಪಡೆದಿರುವ ಪ್ರತಿಸ್ಪರ್ಧಿ ಬಿಜೆಪಿಯ ರಾಜಾ ಅಮರೇಶ್ವರ್ ನಾಯಕ್ ಪ್ರಬಲನಾಗಿ ಕಾಣುತ್ತಿಲ್ಲ. ಟಿಕೆಟ್ ಸಿಗದ ಕಾರಣಕ್ಕೆ ಬಂಡಾಯದ ಬಿಸಿ ಅಮರೇಶ್ ನಾಯಕ್‍ರನ್ನು ಸುಡುತ್ತಲೇ ಇದೆ.

ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಗಳ ದಂಡೇ ಇತ್ತು. ಮೊದಲನೆಯದಾಗಿ ರಾಜಾ ಅಮರೇಶ್ವರ್ ನಾಯಕ್ ಟಿಕೆಟ್‍ಗಾಗಿ ಪ್ರಬಲ ಸ್ಪರ್ಧೆ ಒಡ್ಡಿದ್ದರು. ಇನ್ನು ಎರಡನೆಯ ಪೈಪೋಟಿ ನಡೆಸಿದ್ದು ಬಿಜೆಪಿಯ ಮಾಜಿ ಶಾಸಕ ತಿಪ್ಪರಾಜ ಹವಾಲ್ದಾರ. ಈತ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ರಾಯಚೂರು ಗ್ರಾಮಾಂತರ ಕ್ಷೇತ್ರದಿಂದ ನಿಂತು ಸೋತಿದ್ದ. ಆಗಿನಿಂದ ಎಂಪಿ ಟಿಕೆಟ್ ಮೇಲೆ ಕಣ್ಣಿಟ್ಟು ಕೆಲಸ ಮಾಡಿದ್ದ. ಇದು ಈತನ ಗುರು ಹಾಲಿ ದೇವದುರ್ಗ ಶಾಸಕ ಶಿವನಗೌಡ ನಾಯಕ್ ಕಿವಿಗೆ ಬಿದ್ದಿದೆ ತಡ ತನಗೂ ಟಿಕೆಟ್ ಬೇಕೆಂದು ಹಠ ಹಿಡಿದು ಕೂತಿದ್ದ. ಈತನಿಗೆ ತಾನು ಎಂಪಿ ಆಗುವುದಕ್ಕಿಂತ ತಾನು ಬೆಳೆಸಿದ, ತನ್ನ ಶಿಷ್ಯ ತಿಪ್ಪರಾಜು ಎಂಪಿ ಆಗದಂತೆ ತಡೆಯುವುದು ಮುಖ್ಯವಾಗಿತ್ತು. ಅದಕ್ಕಾಗಿ ತನಗೂ ಕೊಡಿ ಎಂಬ ದಾಳ ಉರುಳಿಸಿದ್ದ. ಕೊನೆಗೆ ಬಿಜೆಪಿ ಅಳೆದು ತೂಗಿ ರಾಜಾ ಅಮರೇಶ್ ನಾಯಕ್‍ಗೆ ಟಿಕೆಟ್ ನೀಡಿದೆ.

ಅಲ್ಲಿಗೆ ಶಿವನಗೌಡನಾಯಕ್ ತನ್ನ ಉದ್ದೇಶ ಫಲಿಸಿದ್ದಕ್ಕೆ ತಣ್ಣಗಾದರೆ, ಟಿಕೆಟ್ ತಪ್ಪಿದ್ದಕ್ಕೆ ತಿಪ್ಪರಾಜು ಕುದಿಯಲಾರಂಭಿಸಿದ್ದಾನೆ. ಟಿಕೆಟ್ ಗಾಗಿ ಯಡಿಯೂರಪ್ಪನಿಗೆ ದುಂಬಾಲು ಬಿದ್ದಿದ್ದ ಈತ, ಈಗ ಇದು ಯಡ್ಯೂರಪ್ಪನವರಿಗೆ ಮಾಡುತ್ತಿರುವ ಅವಮಾನ ಎಂದು ಬಹಿರಂಗವಾಗಿ ತನ್ನ ಅಸಮಾಧಾನ ಹೊರಹಾಕಿದ್ದಾನೆ. ಈ ಬಂಡಾಯದ ಬಿಸಿ ಬಿಜೆಪಿಗೆ ದೊಡ್ಡ ತಲೆನೋವಾಗಿದೆ. ಆದರೆ ಅತ್ತ ಕಾಂಗ್ರೆಸ್ ಜೆಡಿಎಸ್‍ನಲ್ಲಿ ಯಾವುದೇ ಬಂಡಾಯವಿಲ್ಲದೆ ಅನಾಯಾಸವಾಗಿ ಕ್ಷೇತ್ರವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಉತ್ಸುಕರಾಗಿದ್ದಾರೆ.

ಕಾಂಗ್ರೆಸ್‍ನ ಭದ್ರ ಕೋಟೆಯಾಗಿರುವ ಇಲ್ಲಿ  ಜಾರಕಿಹೊಳಿ ಬ್ರದರ್ಸ್ ಪ್ರಭಾವ ದಡ್ಡವಾಗಿ ಹರಡಿದೆ. ಅವರ ಸಂಬಂಧಿಗಳು ರಾಜಕೀಯದ ಆಯಕಟ್ಟಿನ ಸ್ಥಾನದಲ್ಲಿ ಕೂತಿದ್ದಾರೆ. ಬಿ.ವಿ ನಾಯಕ್ ಕೂಡ ಜಾರಕಿಹೊಳಿ ಸಹೋದರರಿಗೆ ಸಂಬಂಧಿಯಾದ ಕಾರಣ ಎಲ್ಲರೂ ಅವರ ಪರ ಒಗ್ಗಟ್ಟಾಗಿ ನಿಂತಿದ್ದಾರೆ. ಇನ್ನು ಬಿಜೆಪಿ ಪಾಳಯದಲ್ಲಿ ಅಂತಹ ಒಗ್ಗಟ್ಟು ಕಂಡುಬರುತ್ತಿಲ್ಲ. ಬಂಡಾಯದ ಕಾರಣಕ್ಕಾಗಿ ಕೊನೆಗಳಿಗೆಯಲ್ಲಿ ಟಿಕೆಟ್ ನೀಡಲಾಗಿದೆ. ಕಳೆದ ಚುನಾವಣೆಯಲ್ಲಿಯೂ ಸಹ ಕೊನೆ ಗಳಿಗೆಯಲ್ಲಿ ಟಿಕೆಟ್ ನೀಡಿದ್ದೇ ಸೋಲಿಗೆ ಕಾರಣ ಎಂದು ವಿಶ್ಲೇಷಿಸಲಾಗಿತ್ತು. ಈ ಬಾರಿಯ ಬಂಡಾಯದ ಬಿಸಿಯಿಂದ ತಪ್ಪಿಸಿಕೊಳ್ಳಲು ಕೊನೆ ಗಳಿಗೆಯಲ್ಲಿ ಟಿಕೆಟ್ ನೀಡಿ ಮೋದಿ ಮುಖ ಇಟ್ಟುಕೊಂಡು ವೋಟು ಕೇಳಿ ಎಂದು ಹಿರಿಯಲು ಸಲಹೆ ನೀಡುತ್ತಿದ್ದಾರೆ.

ಅಷ್ಟೆಲ್ಲಾ ಮೋದಿ ಅಲೆ ಇದ್ದ 2014ರಲ್ಲಿಯೇ ಗೆಲ್ಲಲಾಗದ ಬಿಜೆಪಿ ಈ ಬಾರಿ ಇಷ್ಟೆಲ್ಲಾ ಗೊಂದಲಗಳ ನಡುವೆ ಗೆಲ್ಲುವುದು ಕಷ್ಟ. ಇದೆಲ್ಲದರ ಅನುಕೂಲ, ಹೆಚ್ಚಿನ ಸಂಖ್ಯೆಯ ಶಾಸಕರು, ಜೆಡಿಎಸ್‍ನ ಬೆಂಬಲ, ಸಂಬಂಧಿಗಳ ನೆರವು ಎಲ್ಲವೂಗಳಿಂದ ಬಿ.ವಿ ನಾಯಕ್ ಮರು ಆಯ್ಕೆಯಾಗುವ ಸೂಚನೆಗಳಿವೆ. ತನ್ನ ಭದ್ರಕೋಟೆಯನ್ನು ಕಾಂಗ್ರೆಸ್ ಮತ್ತಷ್ಟು ಭದ್ರ ಮಾಡಿಕೊಳ್ಳಲು ಎಲ್ಲಾ ಅವಕಾಶಗಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...