Homeಕರ್ನಾಟಕರಾಯಚೂರು ಲೋಕಸಭಾ ಕ್ಷೇತ್ರ : ಮತ್ತೆ ಜಾರಲಿದೆಯೆ ಕಾಂಗ್ರೆಸ್ ತೆಕ್ಕೆಗೆ?

ರಾಯಚೂರು ಲೋಕಸಭಾ ಕ್ಷೇತ್ರ : ಮತ್ತೆ ಜಾರಲಿದೆಯೆ ಕಾಂಗ್ರೆಸ್ ತೆಕ್ಕೆಗೆ?

- Advertisement -
- Advertisement -

ರಾಯಚೂರು ಲೋಕಸಭಾ ಕ್ಷೇತ್ರ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರ. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ವಾಲ್ಮೀಕಿ ಸಮುದಾಯ ನಿರ್ಣಾಯಕ ಪಾತ್ರ ವಹಿಸಲಿದೆ. ಇಲ್ಲಿ ಒಂದು ವಾರದ ಹಿಂದೆಯೇ ಹಾಲಿ ಸಂಸದ ಬಿ.ವಿ ನಾಯಕ್‍ಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ಜೆಡಿಎಸ್ ಮೈತ್ರಿಯ ಕಾರಣಕ್ಕೆ ಕಾಂಗ್ರೆಸ್ ಅನ್ನು ಬೆಂಬಲಿಸಲಿದೆ. ಬಿ.ವಿ ನಾಯಕ್ ಬಗ್ಗೆ ಕ್ಷೇತ್ರದಲ್ಲಿ ಈ ಹಿಂದೆ ಒಳ್ಳೆಯ ಹೆಸರು ಇರಲಿಲ್ಲ. ಆದರೆ ಈಗ ಟಿಕೆಟ್ ಪಡೆದಿರುವ ಪ್ರತಿಸ್ಪರ್ಧಿ ಬಿಜೆಪಿಯ ರಾಜಾ ಅಮರೇಶ್ವರ್ ನಾಯಕ್ ಪ್ರಬಲನಾಗಿ ಕಾಣುತ್ತಿಲ್ಲ. ಟಿಕೆಟ್ ಸಿಗದ ಕಾರಣಕ್ಕೆ ಬಂಡಾಯದ ಬಿಸಿ ಅಮರೇಶ್ ನಾಯಕ್‍ರನ್ನು ಸುಡುತ್ತಲೇ ಇದೆ.

ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಗಳ ದಂಡೇ ಇತ್ತು. ಮೊದಲನೆಯದಾಗಿ ರಾಜಾ ಅಮರೇಶ್ವರ್ ನಾಯಕ್ ಟಿಕೆಟ್‍ಗಾಗಿ ಪ್ರಬಲ ಸ್ಪರ್ಧೆ ಒಡ್ಡಿದ್ದರು. ಇನ್ನು ಎರಡನೆಯ ಪೈಪೋಟಿ ನಡೆಸಿದ್ದು ಬಿಜೆಪಿಯ ಮಾಜಿ ಶಾಸಕ ತಿಪ್ಪರಾಜ ಹವಾಲ್ದಾರ. ಈತ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ರಾಯಚೂರು ಗ್ರಾಮಾಂತರ ಕ್ಷೇತ್ರದಿಂದ ನಿಂತು ಸೋತಿದ್ದ. ಆಗಿನಿಂದ ಎಂಪಿ ಟಿಕೆಟ್ ಮೇಲೆ ಕಣ್ಣಿಟ್ಟು ಕೆಲಸ ಮಾಡಿದ್ದ. ಇದು ಈತನ ಗುರು ಹಾಲಿ ದೇವದುರ್ಗ ಶಾಸಕ ಶಿವನಗೌಡ ನಾಯಕ್ ಕಿವಿಗೆ ಬಿದ್ದಿದೆ ತಡ ತನಗೂ ಟಿಕೆಟ್ ಬೇಕೆಂದು ಹಠ ಹಿಡಿದು ಕೂತಿದ್ದ. ಈತನಿಗೆ ತಾನು ಎಂಪಿ ಆಗುವುದಕ್ಕಿಂತ ತಾನು ಬೆಳೆಸಿದ, ತನ್ನ ಶಿಷ್ಯ ತಿಪ್ಪರಾಜು ಎಂಪಿ ಆಗದಂತೆ ತಡೆಯುವುದು ಮುಖ್ಯವಾಗಿತ್ತು. ಅದಕ್ಕಾಗಿ ತನಗೂ ಕೊಡಿ ಎಂಬ ದಾಳ ಉರುಳಿಸಿದ್ದ. ಕೊನೆಗೆ ಬಿಜೆಪಿ ಅಳೆದು ತೂಗಿ ರಾಜಾ ಅಮರೇಶ್ ನಾಯಕ್‍ಗೆ ಟಿಕೆಟ್ ನೀಡಿದೆ.

ಅಲ್ಲಿಗೆ ಶಿವನಗೌಡನಾಯಕ್ ತನ್ನ ಉದ್ದೇಶ ಫಲಿಸಿದ್ದಕ್ಕೆ ತಣ್ಣಗಾದರೆ, ಟಿಕೆಟ್ ತಪ್ಪಿದ್ದಕ್ಕೆ ತಿಪ್ಪರಾಜು ಕುದಿಯಲಾರಂಭಿಸಿದ್ದಾನೆ. ಟಿಕೆಟ್ ಗಾಗಿ ಯಡಿಯೂರಪ್ಪನಿಗೆ ದುಂಬಾಲು ಬಿದ್ದಿದ್ದ ಈತ, ಈಗ ಇದು ಯಡ್ಯೂರಪ್ಪನವರಿಗೆ ಮಾಡುತ್ತಿರುವ ಅವಮಾನ ಎಂದು ಬಹಿರಂಗವಾಗಿ ತನ್ನ ಅಸಮಾಧಾನ ಹೊರಹಾಕಿದ್ದಾನೆ. ಈ ಬಂಡಾಯದ ಬಿಸಿ ಬಿಜೆಪಿಗೆ ದೊಡ್ಡ ತಲೆನೋವಾಗಿದೆ. ಆದರೆ ಅತ್ತ ಕಾಂಗ್ರೆಸ್ ಜೆಡಿಎಸ್‍ನಲ್ಲಿ ಯಾವುದೇ ಬಂಡಾಯವಿಲ್ಲದೆ ಅನಾಯಾಸವಾಗಿ ಕ್ಷೇತ್ರವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಉತ್ಸುಕರಾಗಿದ್ದಾರೆ.

ಕಾಂಗ್ರೆಸ್‍ನ ಭದ್ರ ಕೋಟೆಯಾಗಿರುವ ಇಲ್ಲಿ  ಜಾರಕಿಹೊಳಿ ಬ್ರದರ್ಸ್ ಪ್ರಭಾವ ದಡ್ಡವಾಗಿ ಹರಡಿದೆ. ಅವರ ಸಂಬಂಧಿಗಳು ರಾಜಕೀಯದ ಆಯಕಟ್ಟಿನ ಸ್ಥಾನದಲ್ಲಿ ಕೂತಿದ್ದಾರೆ. ಬಿ.ವಿ ನಾಯಕ್ ಕೂಡ ಜಾರಕಿಹೊಳಿ ಸಹೋದರರಿಗೆ ಸಂಬಂಧಿಯಾದ ಕಾರಣ ಎಲ್ಲರೂ ಅವರ ಪರ ಒಗ್ಗಟ್ಟಾಗಿ ನಿಂತಿದ್ದಾರೆ. ಇನ್ನು ಬಿಜೆಪಿ ಪಾಳಯದಲ್ಲಿ ಅಂತಹ ಒಗ್ಗಟ್ಟು ಕಂಡುಬರುತ್ತಿಲ್ಲ. ಬಂಡಾಯದ ಕಾರಣಕ್ಕಾಗಿ ಕೊನೆಗಳಿಗೆಯಲ್ಲಿ ಟಿಕೆಟ್ ನೀಡಲಾಗಿದೆ. ಕಳೆದ ಚುನಾವಣೆಯಲ್ಲಿಯೂ ಸಹ ಕೊನೆ ಗಳಿಗೆಯಲ್ಲಿ ಟಿಕೆಟ್ ನೀಡಿದ್ದೇ ಸೋಲಿಗೆ ಕಾರಣ ಎಂದು ವಿಶ್ಲೇಷಿಸಲಾಗಿತ್ತು. ಈ ಬಾರಿಯ ಬಂಡಾಯದ ಬಿಸಿಯಿಂದ ತಪ್ಪಿಸಿಕೊಳ್ಳಲು ಕೊನೆ ಗಳಿಗೆಯಲ್ಲಿ ಟಿಕೆಟ್ ನೀಡಿ ಮೋದಿ ಮುಖ ಇಟ್ಟುಕೊಂಡು ವೋಟು ಕೇಳಿ ಎಂದು ಹಿರಿಯಲು ಸಲಹೆ ನೀಡುತ್ತಿದ್ದಾರೆ.

ಅಷ್ಟೆಲ್ಲಾ ಮೋದಿ ಅಲೆ ಇದ್ದ 2014ರಲ್ಲಿಯೇ ಗೆಲ್ಲಲಾಗದ ಬಿಜೆಪಿ ಈ ಬಾರಿ ಇಷ್ಟೆಲ್ಲಾ ಗೊಂದಲಗಳ ನಡುವೆ ಗೆಲ್ಲುವುದು ಕಷ್ಟ. ಇದೆಲ್ಲದರ ಅನುಕೂಲ, ಹೆಚ್ಚಿನ ಸಂಖ್ಯೆಯ ಶಾಸಕರು, ಜೆಡಿಎಸ್‍ನ ಬೆಂಬಲ, ಸಂಬಂಧಿಗಳ ನೆರವು ಎಲ್ಲವೂಗಳಿಂದ ಬಿ.ವಿ ನಾಯಕ್ ಮರು ಆಯ್ಕೆಯಾಗುವ ಸೂಚನೆಗಳಿವೆ. ತನ್ನ ಭದ್ರಕೋಟೆಯನ್ನು ಕಾಂಗ್ರೆಸ್ ಮತ್ತಷ್ಟು ಭದ್ರ ಮಾಡಿಕೊಳ್ಳಲು ಎಲ್ಲಾ ಅವಕಾಶಗಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...