Homeಮುಖಪುಟರಾಯಚೂರಿನಲ್ಲಿ ಮೊದಲ ಏಕವ್ಯಕ್ತಿ ರಂಗಪ್ರಯೋಗ: ರೋಹಿತ್ ವೇಮುಲಾ ಬದುಕನ್ನಾಧರಿಸಿದ 'ನಕ್ಷತ್ರದ ಧೂಳು' ನಾಳೆ ಪ್ರದರ್ಶನ

ರಾಯಚೂರಿನಲ್ಲಿ ಮೊದಲ ಏಕವ್ಯಕ್ತಿ ರಂಗಪ್ರಯೋಗ: ರೋಹಿತ್ ವೇಮುಲಾ ಬದುಕನ್ನಾಧರಿಸಿದ ‘ನಕ್ಷತ್ರದ ಧೂಳು’ ನಾಳೆ ಪ್ರದರ್ಶನ

“ಆಕ್ಟಿವಿಸಂ, ಈ ಗ್ರಹದ ಮೇಲೆ ವಾಸಿಸಲು ನಾನು ಕೊಡುವ ಬಾಡಿಗೆ” ಎಂಬ ಆಲಿಸ್ ವಾಕರ್‌ರವರ ನುಡಿಗಳನ್ನು ರೋಹಿತ್ ತನ್ನ ಫೇಸ್ಬುಕ್ ನಲ್ಲಿ ಹಂಚಿಕೊಂಡಿದ್ದರು.

- Advertisement -
- Advertisement -

“ನಾನು ವಿಜ್ಞಾನದ ಬರಹಗಾರ ಆಗಬೇಕೆಂದುಕೊಂಡಿದ್ದೆ, ವಿಜ್ಞಾನ ಲೇಖಕ ಕಾರ್ಲ್ ಸಗಾನನ ಹಾಗೆ. ಆದರೆ ಕೊನೆಗೆ, ಇದೊಂದು ಪತ್ರವನ್ನಷ್ಟೇ ಬರೆಯಲು ನನ್ನಿಂದಾದದ್ದು”… ಕ್ಯಾಂಪಸ್‌ಗಳಲ್ಲಿನ ಜಾತಿವಾದಿ ಮನಸ್ಥಿತಿ ವಿರೋಧಿಸಿ ಆತ್ಮಹತ್ಯೆ ಪತ್ರ ಬರೆದು ಜನವರಿ 16, 2016ರಂದು ಅಂದರೆ ಐದು ವರ್ಷಗಳ ಹಿಂದೆ ನಮ್ಮನ್ನಗಲಿದ ವಿದ್ಯಾರ್ಥಿ ಹೋರಾಟದ ಧೃವತಾರೆ ರೋಹಿತ್ ವೇಮುಲಾ ಬದುಕನ್ನಾಧರಿಸಿದ ‘ನಕ್ಷತ್ರದ ಧೂಳು’ ನಾಟಕ ಮತ್ತೆ ಪ್ರದರ್ಶನಕ್ಕೆ ಅಣಿಯಾಗಿದೆ.

ಸಾಮಾಜಿಕ ಕಾರ್ಯಕರ್ತರಾದ ಹರ್ಷಕುಮಾರ್ ಕುಗ್ವೆಯವರು ರಚಿಸಿರುವ ‘ನಕ್ಷತ್ರದ ಧೂಳು’ ಮಾರ್ಚ್ 27 ರ ಸಂಜೆ 6:30ಕ್ಕೆ ರಾಯಚೂರಿನ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಪ್ರದರ್ಶನಗೊಳ್ಳುತ್ತಿದೆ. ಇದು ಜಿಲ್ಲೆಯಲ್ಲಿನ ಮೊದಲ ಏಕವ್ಯಕ್ತಿ ರಂಗಪ್ರಯೋಗವಾಗಿದ್ದು ರಂಗಕಲಾವಿದ ಮತ್ತು ಸಾಮಾಜಿಕ ಹೋರಾಟಗಾರ ಲಕ್ಷ್ಮಣ್ ಮಂಡಲಗೇರ ಪ್ರಸ್ತುತಿಪಡಿಸಲಿದ್ದು, ಪ್ರವೀಣ್ ರೆಡ್ಡಿ ಗುಂಜಹಳ್ಳಿಯವರು ನಿರ್ದೇಶಿಸಿದ್ದಾರೆ. ‘ಸಮುದಾಯ ರಾಯಚೂರು’ ನಾಟಕ ಪ್ರದರ್ಶನ ಆಯೋಜಿಸುತ್ತಿದೆ.

 

ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಷಿಯೆಷನ್ ಸಂಘಟನೆ ಮೂಲಕ ರೋಹಿತ್ ವೇಮುಲಾ ಯಾರೆಂದು ಪ್ರಪಂಚಕ್ಕೆ ಗೊತ್ತಾಗುವ ಮೊದಲೇ ಆತ ಕಾಶ್ಮೀರದ ಪ್ರಜೆಗಳ ಮೇಲಿನ ಹಲ್ಲೆಯನ್ನು ವಿರೋಧಿಸಿದ್ದ.. “ಕೆಲವರಿಗೆ ಬದುಕೇ ಶಾಪ. ನನಗೆ, ನನ್ನ ಹುಟ್ಟೇ ಮಾರಣಾಂತಿಕ ಆಘಾತ” ಎಂದು ಬರೆದುಕೊಂಡಿದ್ದ ರೋಹಿತ್ ವೇಮುಲಾ ಜಾತಿಯನ್ನು ಕಿತ್ತುಹಾಕಲು ಬಯಸಿದ್ದ. ಏಕೆಂದರೆ ಹುಟ್ಟಿನಿಂದಲೇ ಅವನ್ನನ್ನು ತೀವ್ರವಾಗಿ ಅದು ಕಾಡಿತ್ತು. ಜಾತಿವಿರುದ್ಧ ದನಿಯೆತ್ತಿದಾಗ ಆತನೊಂದಿಗೆ ಇದ್ದದ್ದು ಸಾವಿತ್ರಿಬಾಯಿ ಫುಲೆ ಮತ್ತು ಬಾಬಾಸಾಹೇಬರ ಚಿತ್ರ ಮಾತ್ರ..

ಅಂದು ರೋಹಿತ್ ವೇಮುಲಾನನ್ನು ಜಾತಿ ತೀವ್ರವಾಗಿ ಕಾಡಿತ್ತು. ಆತ ಪಿಎಚ್‌ಡಿ ಮಾಡುತ್ತಿದ್ದಾಗ ಎಬಿವಿಪಿ ಗೂಂಡಾಗಳು ಕಾಡಿದರು. ಬ್ರಾಹ್ಮಣವಾದಿ ವಿವಿಯ ಆಡಳಿತ ಮಂಡಳಿ 7 ತಿಂಗಳು ಆತನಿಗೆ ಫೆಲೋಶಿಪ್ ತಡೆ ಹಿಡಿದಿದ್ದಲ್ಲದೇ ಆತನನ್ನು ಕಾಲೇಜು ಮತ್ತು ಹಾಸ್ಟೆಲ್‌ನಿಂದ ಹೊರಹಾಕಿತ್ತು. ಆತ ಆತ ಅಂಬೇಡ್ಕರ್, ಸಾವಿತ್ರಿ ಬಾಫುಲೆ ಫೋಟೊ ಹಿಡಿದು ಕ್ಯಾಂಪಸ್ಸಿನ ’ವೆಲಿವಾಡ’ದಲ್ಲಿ ಹೋರಾಟ ಆರಂಭಿಸಿದ್ದ. ಆಗ ಬಹುತೇಕರು ಆತನ ಬೆಂಬಲಕ್ಕೆ ನಿಲ್ಲಲಿಲ್ಲ. ಕಾರಣ ಏನೇ ಇರಬಹುದು ಆತ ಒಂಟಿಯಾದ. ಕೊನೆಗೂ ಪ್ರಭುತ್ವ ಆತನನ್ನು ಬಲಿ ತೆಗೆದುಕೊಂಡಿತು.

ತನ್ನ ಕ್ಯಾಂಪಸ್‌ನಲ್ಲಿನ ಡೆಮಾಕ್ರಸಿಯನ್ನಷ್ಟೇ ಬಯಸದ ರೋಹಿತ್ ಇಡೀ ಸಮಾಜದಲ್ಲಿ ಡೆಮಾಕ್ರಸಿಯನ್ನು ಹಂಬಲಿಸಿದ್ದರು. ಅದಕ್ಕಾಗಿಯೇ “ಆಕ್ಟಿವಿಸಂ, ಈ ಗ್ರಹದ ಮೇಲೆ ವಾಸಿಸಲು ನಾನು ಕೊಡುವ ಬಾಡಿಗೆ” ಎಂಬ ಆಲಿಸ್ ವಾಕರ್‌ರವರ ನುಡಿಗಳನ್ನು ತನ್ನ ಫೇಸ್ಬುಕ್ ನಲ್ಲಿ ಹಂಚಿಕೊಂಡಿದ್ದರು. ಸಫ್ದಾರ್ ಹಶ್ಮಿ ಅವರು 1989 ರ ಜನವರಿ 2 ರಂದು ನಾಟಕವನ್ನು ಪ್ರದರ್ಶಿಸುತ್ತಿದ್ದಾಗಲೇ ಅಸಷ್ಣುತೆಯ ಪ್ರತಿಪಾದಕರಿಂದ ಕೊಲ್ಲಲ್ಪಟ್ಟರು. ಈ ಕುರಿತು “ಅಸಹಿಷ್ಣುತೆಯ ಕೋರೆಹಲ್ಲುಗಳಿಗೆ ನಾವು ಸುಂದರ ಕಲಾವಿದ ಮತ್ತು ಧೈರ್ಯಶಾಲಿ ಆತ್ಮವನ್ನು ಕಳೆದುಕೊಂಡಿದ್ದೇವೆ” ಎಂದು ಬರೆದುಕೊಂಡಿದ್ದ ರೋಹಿತ್‌ನನ್ನು ನಾವೀಗ ಕಳೆದುಕೊಂಡಿದ್ದೇವೆ.

ರೋಹಿತ್ ವೇಮುಲಾ ದೈಹಿಕವಾಗಿ ನಮ್ಮಿಂದ ದೂರವಾಗಿದ್ದರೂ ಆತನ ಚೈತನ್ಯವನ್ನು ನಾವು ಉಸಿರಾಡುತ್ತಿದ್ದೇವೆ. ಹಾಗಾಗಿಯೇ ಇಂದು ಅವರ ನಕ್ಷತ್ರದ ಧೂಳು ನಾಟಕ ಮತ್ತೆ ಸದ್ದು ಮಾಡುತ್ತಿದೆ. ಆತನ ವಿಚಾರಗಳೇನು? ಆತನ ಬದುಕಿನ ಗುರಿಯೇನು? ಆತ ವಿಜ್ಞಾನವನ್ನು ಅಷ್ಟರ ಮಟ್ಟಿಗೆ ಹಚ್ಚಿಕೊಂಡಿತ್ತಾದರೂ ಹೇಗೆ? ಈ ಕುರಿತು ತಿಳಿಯಲು ನೀವು ಸಹ ಈ ನಾಟಕ ನೋಡಿ. ರಾಯಚೂರು ಜಿಲ್ಲೆಯ ಪ್ರದರ್ಶನದ ನಂತರ ನಿಮ್ಮ ಜಿಲ್ಲೆ-ತಾಲ್ಲೂಕುಗಳಲ್ಲಿ ನಾಟಕ ಆಯೋಜಿಸಲು ಕಲಾವಿದರಾದ ಲಕ್ಷ್ಮಣ್ ಮಂಡಲಗೇರರವನ್ನು (8762718341) ಸಂಪರ್ಕಿಸಿ.


ಇದನ್ನೂ ಓದಿ: ‘ರೋಹಿತ್ ವೇಮುಲ ಇಂದು ಬದುಕಿದ್ದರೆ……’ : ಅಗಲಿದ ಯುವಚೈತನ್ಯದ ಸ್ಮರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...