Homeಮುಖಪುಟರಾಯಚೂರಿನಲ್ಲಿ ಮೊದಲ ಏಕವ್ಯಕ್ತಿ ರಂಗಪ್ರಯೋಗ: ರೋಹಿತ್ ವೇಮುಲಾ ಬದುಕನ್ನಾಧರಿಸಿದ 'ನಕ್ಷತ್ರದ ಧೂಳು' ನಾಳೆ ಪ್ರದರ್ಶನ

ರಾಯಚೂರಿನಲ್ಲಿ ಮೊದಲ ಏಕವ್ಯಕ್ತಿ ರಂಗಪ್ರಯೋಗ: ರೋಹಿತ್ ವೇಮುಲಾ ಬದುಕನ್ನಾಧರಿಸಿದ ‘ನಕ್ಷತ್ರದ ಧೂಳು’ ನಾಳೆ ಪ್ರದರ್ಶನ

“ಆಕ್ಟಿವಿಸಂ, ಈ ಗ್ರಹದ ಮೇಲೆ ವಾಸಿಸಲು ನಾನು ಕೊಡುವ ಬಾಡಿಗೆ” ಎಂಬ ಆಲಿಸ್ ವಾಕರ್‌ರವರ ನುಡಿಗಳನ್ನು ರೋಹಿತ್ ತನ್ನ ಫೇಸ್ಬುಕ್ ನಲ್ಲಿ ಹಂಚಿಕೊಂಡಿದ್ದರು.

- Advertisement -
- Advertisement -

“ನಾನು ವಿಜ್ಞಾನದ ಬರಹಗಾರ ಆಗಬೇಕೆಂದುಕೊಂಡಿದ್ದೆ, ವಿಜ್ಞಾನ ಲೇಖಕ ಕಾರ್ಲ್ ಸಗಾನನ ಹಾಗೆ. ಆದರೆ ಕೊನೆಗೆ, ಇದೊಂದು ಪತ್ರವನ್ನಷ್ಟೇ ಬರೆಯಲು ನನ್ನಿಂದಾದದ್ದು”… ಕ್ಯಾಂಪಸ್‌ಗಳಲ್ಲಿನ ಜಾತಿವಾದಿ ಮನಸ್ಥಿತಿ ವಿರೋಧಿಸಿ ಆತ್ಮಹತ್ಯೆ ಪತ್ರ ಬರೆದು ಜನವರಿ 16, 2016ರಂದು ಅಂದರೆ ಐದು ವರ್ಷಗಳ ಹಿಂದೆ ನಮ್ಮನ್ನಗಲಿದ ವಿದ್ಯಾರ್ಥಿ ಹೋರಾಟದ ಧೃವತಾರೆ ರೋಹಿತ್ ವೇಮುಲಾ ಬದುಕನ್ನಾಧರಿಸಿದ ‘ನಕ್ಷತ್ರದ ಧೂಳು’ ನಾಟಕ ಮತ್ತೆ ಪ್ರದರ್ಶನಕ್ಕೆ ಅಣಿಯಾಗಿದೆ.

ಸಾಮಾಜಿಕ ಕಾರ್ಯಕರ್ತರಾದ ಹರ್ಷಕುಮಾರ್ ಕುಗ್ವೆಯವರು ರಚಿಸಿರುವ ‘ನಕ್ಷತ್ರದ ಧೂಳು’ ಮಾರ್ಚ್ 27 ರ ಸಂಜೆ 6:30ಕ್ಕೆ ರಾಯಚೂರಿನ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಪ್ರದರ್ಶನಗೊಳ್ಳುತ್ತಿದೆ. ಇದು ಜಿಲ್ಲೆಯಲ್ಲಿನ ಮೊದಲ ಏಕವ್ಯಕ್ತಿ ರಂಗಪ್ರಯೋಗವಾಗಿದ್ದು ರಂಗಕಲಾವಿದ ಮತ್ತು ಸಾಮಾಜಿಕ ಹೋರಾಟಗಾರ ಲಕ್ಷ್ಮಣ್ ಮಂಡಲಗೇರ ಪ್ರಸ್ತುತಿಪಡಿಸಲಿದ್ದು, ಪ್ರವೀಣ್ ರೆಡ್ಡಿ ಗುಂಜಹಳ್ಳಿಯವರು ನಿರ್ದೇಶಿಸಿದ್ದಾರೆ. ‘ಸಮುದಾಯ ರಾಯಚೂರು’ ನಾಟಕ ಪ್ರದರ್ಶನ ಆಯೋಜಿಸುತ್ತಿದೆ.

 

ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಷಿಯೆಷನ್ ಸಂಘಟನೆ ಮೂಲಕ ರೋಹಿತ್ ವೇಮುಲಾ ಯಾರೆಂದು ಪ್ರಪಂಚಕ್ಕೆ ಗೊತ್ತಾಗುವ ಮೊದಲೇ ಆತ ಕಾಶ್ಮೀರದ ಪ್ರಜೆಗಳ ಮೇಲಿನ ಹಲ್ಲೆಯನ್ನು ವಿರೋಧಿಸಿದ್ದ.. “ಕೆಲವರಿಗೆ ಬದುಕೇ ಶಾಪ. ನನಗೆ, ನನ್ನ ಹುಟ್ಟೇ ಮಾರಣಾಂತಿಕ ಆಘಾತ” ಎಂದು ಬರೆದುಕೊಂಡಿದ್ದ ರೋಹಿತ್ ವೇಮುಲಾ ಜಾತಿಯನ್ನು ಕಿತ್ತುಹಾಕಲು ಬಯಸಿದ್ದ. ಏಕೆಂದರೆ ಹುಟ್ಟಿನಿಂದಲೇ ಅವನ್ನನ್ನು ತೀವ್ರವಾಗಿ ಅದು ಕಾಡಿತ್ತು. ಜಾತಿವಿರುದ್ಧ ದನಿಯೆತ್ತಿದಾಗ ಆತನೊಂದಿಗೆ ಇದ್ದದ್ದು ಸಾವಿತ್ರಿಬಾಯಿ ಫುಲೆ ಮತ್ತು ಬಾಬಾಸಾಹೇಬರ ಚಿತ್ರ ಮಾತ್ರ..

ಅಂದು ರೋಹಿತ್ ವೇಮುಲಾನನ್ನು ಜಾತಿ ತೀವ್ರವಾಗಿ ಕಾಡಿತ್ತು. ಆತ ಪಿಎಚ್‌ಡಿ ಮಾಡುತ್ತಿದ್ದಾಗ ಎಬಿವಿಪಿ ಗೂಂಡಾಗಳು ಕಾಡಿದರು. ಬ್ರಾಹ್ಮಣವಾದಿ ವಿವಿಯ ಆಡಳಿತ ಮಂಡಳಿ 7 ತಿಂಗಳು ಆತನಿಗೆ ಫೆಲೋಶಿಪ್ ತಡೆ ಹಿಡಿದಿದ್ದಲ್ಲದೇ ಆತನನ್ನು ಕಾಲೇಜು ಮತ್ತು ಹಾಸ್ಟೆಲ್‌ನಿಂದ ಹೊರಹಾಕಿತ್ತು. ಆತ ಆತ ಅಂಬೇಡ್ಕರ್, ಸಾವಿತ್ರಿ ಬಾಫುಲೆ ಫೋಟೊ ಹಿಡಿದು ಕ್ಯಾಂಪಸ್ಸಿನ ’ವೆಲಿವಾಡ’ದಲ್ಲಿ ಹೋರಾಟ ಆರಂಭಿಸಿದ್ದ. ಆಗ ಬಹುತೇಕರು ಆತನ ಬೆಂಬಲಕ್ಕೆ ನಿಲ್ಲಲಿಲ್ಲ. ಕಾರಣ ಏನೇ ಇರಬಹುದು ಆತ ಒಂಟಿಯಾದ. ಕೊನೆಗೂ ಪ್ರಭುತ್ವ ಆತನನ್ನು ಬಲಿ ತೆಗೆದುಕೊಂಡಿತು.

ತನ್ನ ಕ್ಯಾಂಪಸ್‌ನಲ್ಲಿನ ಡೆಮಾಕ್ರಸಿಯನ್ನಷ್ಟೇ ಬಯಸದ ರೋಹಿತ್ ಇಡೀ ಸಮಾಜದಲ್ಲಿ ಡೆಮಾಕ್ರಸಿಯನ್ನು ಹಂಬಲಿಸಿದ್ದರು. ಅದಕ್ಕಾಗಿಯೇ “ಆಕ್ಟಿವಿಸಂ, ಈ ಗ್ರಹದ ಮೇಲೆ ವಾಸಿಸಲು ನಾನು ಕೊಡುವ ಬಾಡಿಗೆ” ಎಂಬ ಆಲಿಸ್ ವಾಕರ್‌ರವರ ನುಡಿಗಳನ್ನು ತನ್ನ ಫೇಸ್ಬುಕ್ ನಲ್ಲಿ ಹಂಚಿಕೊಂಡಿದ್ದರು. ಸಫ್ದಾರ್ ಹಶ್ಮಿ ಅವರು 1989 ರ ಜನವರಿ 2 ರಂದು ನಾಟಕವನ್ನು ಪ್ರದರ್ಶಿಸುತ್ತಿದ್ದಾಗಲೇ ಅಸಷ್ಣುತೆಯ ಪ್ರತಿಪಾದಕರಿಂದ ಕೊಲ್ಲಲ್ಪಟ್ಟರು. ಈ ಕುರಿತು “ಅಸಹಿಷ್ಣುತೆಯ ಕೋರೆಹಲ್ಲುಗಳಿಗೆ ನಾವು ಸುಂದರ ಕಲಾವಿದ ಮತ್ತು ಧೈರ್ಯಶಾಲಿ ಆತ್ಮವನ್ನು ಕಳೆದುಕೊಂಡಿದ್ದೇವೆ” ಎಂದು ಬರೆದುಕೊಂಡಿದ್ದ ರೋಹಿತ್‌ನನ್ನು ನಾವೀಗ ಕಳೆದುಕೊಂಡಿದ್ದೇವೆ.

ರೋಹಿತ್ ವೇಮುಲಾ ದೈಹಿಕವಾಗಿ ನಮ್ಮಿಂದ ದೂರವಾಗಿದ್ದರೂ ಆತನ ಚೈತನ್ಯವನ್ನು ನಾವು ಉಸಿರಾಡುತ್ತಿದ್ದೇವೆ. ಹಾಗಾಗಿಯೇ ಇಂದು ಅವರ ನಕ್ಷತ್ರದ ಧೂಳು ನಾಟಕ ಮತ್ತೆ ಸದ್ದು ಮಾಡುತ್ತಿದೆ. ಆತನ ವಿಚಾರಗಳೇನು? ಆತನ ಬದುಕಿನ ಗುರಿಯೇನು? ಆತ ವಿಜ್ಞಾನವನ್ನು ಅಷ್ಟರ ಮಟ್ಟಿಗೆ ಹಚ್ಚಿಕೊಂಡಿತ್ತಾದರೂ ಹೇಗೆ? ಈ ಕುರಿತು ತಿಳಿಯಲು ನೀವು ಸಹ ಈ ನಾಟಕ ನೋಡಿ. ರಾಯಚೂರು ಜಿಲ್ಲೆಯ ಪ್ರದರ್ಶನದ ನಂತರ ನಿಮ್ಮ ಜಿಲ್ಲೆ-ತಾಲ್ಲೂಕುಗಳಲ್ಲಿ ನಾಟಕ ಆಯೋಜಿಸಲು ಕಲಾವಿದರಾದ ಲಕ್ಷ್ಮಣ್ ಮಂಡಲಗೇರರವನ್ನು (8762718341) ಸಂಪರ್ಕಿಸಿ.


ಇದನ್ನೂ ಓದಿ: ‘ರೋಹಿತ್ ವೇಮುಲ ಇಂದು ಬದುಕಿದ್ದರೆ……’ : ಅಗಲಿದ ಯುವಚೈತನ್ಯದ ಸ್ಮರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...