Homeಮುಖಪುಟರಾಯಚೂರಿನಲ್ಲಿ ಮೊದಲ ಏಕವ್ಯಕ್ತಿ ರಂಗಪ್ರಯೋಗ: ರೋಹಿತ್ ವೇಮುಲಾ ಬದುಕನ್ನಾಧರಿಸಿದ 'ನಕ್ಷತ್ರದ ಧೂಳು' ನಾಳೆ ಪ್ರದರ್ಶನ

ರಾಯಚೂರಿನಲ್ಲಿ ಮೊದಲ ಏಕವ್ಯಕ್ತಿ ರಂಗಪ್ರಯೋಗ: ರೋಹಿತ್ ವೇಮುಲಾ ಬದುಕನ್ನಾಧರಿಸಿದ ‘ನಕ್ಷತ್ರದ ಧೂಳು’ ನಾಳೆ ಪ್ರದರ್ಶನ

“ಆಕ್ಟಿವಿಸಂ, ಈ ಗ್ರಹದ ಮೇಲೆ ವಾಸಿಸಲು ನಾನು ಕೊಡುವ ಬಾಡಿಗೆ” ಎಂಬ ಆಲಿಸ್ ವಾಕರ್‌ರವರ ನುಡಿಗಳನ್ನು ರೋಹಿತ್ ತನ್ನ ಫೇಸ್ಬುಕ್ ನಲ್ಲಿ ಹಂಚಿಕೊಂಡಿದ್ದರು.

- Advertisement -
- Advertisement -

“ನಾನು ವಿಜ್ಞಾನದ ಬರಹಗಾರ ಆಗಬೇಕೆಂದುಕೊಂಡಿದ್ದೆ, ವಿಜ್ಞಾನ ಲೇಖಕ ಕಾರ್ಲ್ ಸಗಾನನ ಹಾಗೆ. ಆದರೆ ಕೊನೆಗೆ, ಇದೊಂದು ಪತ್ರವನ್ನಷ್ಟೇ ಬರೆಯಲು ನನ್ನಿಂದಾದದ್ದು”… ಕ್ಯಾಂಪಸ್‌ಗಳಲ್ಲಿನ ಜಾತಿವಾದಿ ಮನಸ್ಥಿತಿ ವಿರೋಧಿಸಿ ಆತ್ಮಹತ್ಯೆ ಪತ್ರ ಬರೆದು ಜನವರಿ 16, 2016ರಂದು ಅಂದರೆ ಐದು ವರ್ಷಗಳ ಹಿಂದೆ ನಮ್ಮನ್ನಗಲಿದ ವಿದ್ಯಾರ್ಥಿ ಹೋರಾಟದ ಧೃವತಾರೆ ರೋಹಿತ್ ವೇಮುಲಾ ಬದುಕನ್ನಾಧರಿಸಿದ ‘ನಕ್ಷತ್ರದ ಧೂಳು’ ನಾಟಕ ಮತ್ತೆ ಪ್ರದರ್ಶನಕ್ಕೆ ಅಣಿಯಾಗಿದೆ.

ಸಾಮಾಜಿಕ ಕಾರ್ಯಕರ್ತರಾದ ಹರ್ಷಕುಮಾರ್ ಕುಗ್ವೆಯವರು ರಚಿಸಿರುವ ‘ನಕ್ಷತ್ರದ ಧೂಳು’ ಮಾರ್ಚ್ 27 ರ ಸಂಜೆ 6:30ಕ್ಕೆ ರಾಯಚೂರಿನ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಪ್ರದರ್ಶನಗೊಳ್ಳುತ್ತಿದೆ. ಇದು ಜಿಲ್ಲೆಯಲ್ಲಿನ ಮೊದಲ ಏಕವ್ಯಕ್ತಿ ರಂಗಪ್ರಯೋಗವಾಗಿದ್ದು ರಂಗಕಲಾವಿದ ಮತ್ತು ಸಾಮಾಜಿಕ ಹೋರಾಟಗಾರ ಲಕ್ಷ್ಮಣ್ ಮಂಡಲಗೇರ ಪ್ರಸ್ತುತಿಪಡಿಸಲಿದ್ದು, ಪ್ರವೀಣ್ ರೆಡ್ಡಿ ಗುಂಜಹಳ್ಳಿಯವರು ನಿರ್ದೇಶಿಸಿದ್ದಾರೆ. ‘ಸಮುದಾಯ ರಾಯಚೂರು’ ನಾಟಕ ಪ್ರದರ್ಶನ ಆಯೋಜಿಸುತ್ತಿದೆ.

 

ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಷಿಯೆಷನ್ ಸಂಘಟನೆ ಮೂಲಕ ರೋಹಿತ್ ವೇಮುಲಾ ಯಾರೆಂದು ಪ್ರಪಂಚಕ್ಕೆ ಗೊತ್ತಾಗುವ ಮೊದಲೇ ಆತ ಕಾಶ್ಮೀರದ ಪ್ರಜೆಗಳ ಮೇಲಿನ ಹಲ್ಲೆಯನ್ನು ವಿರೋಧಿಸಿದ್ದ.. “ಕೆಲವರಿಗೆ ಬದುಕೇ ಶಾಪ. ನನಗೆ, ನನ್ನ ಹುಟ್ಟೇ ಮಾರಣಾಂತಿಕ ಆಘಾತ” ಎಂದು ಬರೆದುಕೊಂಡಿದ್ದ ರೋಹಿತ್ ವೇಮುಲಾ ಜಾತಿಯನ್ನು ಕಿತ್ತುಹಾಕಲು ಬಯಸಿದ್ದ. ಏಕೆಂದರೆ ಹುಟ್ಟಿನಿಂದಲೇ ಅವನ್ನನ್ನು ತೀವ್ರವಾಗಿ ಅದು ಕಾಡಿತ್ತು. ಜಾತಿವಿರುದ್ಧ ದನಿಯೆತ್ತಿದಾಗ ಆತನೊಂದಿಗೆ ಇದ್ದದ್ದು ಸಾವಿತ್ರಿಬಾಯಿ ಫುಲೆ ಮತ್ತು ಬಾಬಾಸಾಹೇಬರ ಚಿತ್ರ ಮಾತ್ರ..

ಅಂದು ರೋಹಿತ್ ವೇಮುಲಾನನ್ನು ಜಾತಿ ತೀವ್ರವಾಗಿ ಕಾಡಿತ್ತು. ಆತ ಪಿಎಚ್‌ಡಿ ಮಾಡುತ್ತಿದ್ದಾಗ ಎಬಿವಿಪಿ ಗೂಂಡಾಗಳು ಕಾಡಿದರು. ಬ್ರಾಹ್ಮಣವಾದಿ ವಿವಿಯ ಆಡಳಿತ ಮಂಡಳಿ 7 ತಿಂಗಳು ಆತನಿಗೆ ಫೆಲೋಶಿಪ್ ತಡೆ ಹಿಡಿದಿದ್ದಲ್ಲದೇ ಆತನನ್ನು ಕಾಲೇಜು ಮತ್ತು ಹಾಸ್ಟೆಲ್‌ನಿಂದ ಹೊರಹಾಕಿತ್ತು. ಆತ ಆತ ಅಂಬೇಡ್ಕರ್, ಸಾವಿತ್ರಿ ಬಾಫುಲೆ ಫೋಟೊ ಹಿಡಿದು ಕ್ಯಾಂಪಸ್ಸಿನ ’ವೆಲಿವಾಡ’ದಲ್ಲಿ ಹೋರಾಟ ಆರಂಭಿಸಿದ್ದ. ಆಗ ಬಹುತೇಕರು ಆತನ ಬೆಂಬಲಕ್ಕೆ ನಿಲ್ಲಲಿಲ್ಲ. ಕಾರಣ ಏನೇ ಇರಬಹುದು ಆತ ಒಂಟಿಯಾದ. ಕೊನೆಗೂ ಪ್ರಭುತ್ವ ಆತನನ್ನು ಬಲಿ ತೆಗೆದುಕೊಂಡಿತು.

ತನ್ನ ಕ್ಯಾಂಪಸ್‌ನಲ್ಲಿನ ಡೆಮಾಕ್ರಸಿಯನ್ನಷ್ಟೇ ಬಯಸದ ರೋಹಿತ್ ಇಡೀ ಸಮಾಜದಲ್ಲಿ ಡೆಮಾಕ್ರಸಿಯನ್ನು ಹಂಬಲಿಸಿದ್ದರು. ಅದಕ್ಕಾಗಿಯೇ “ಆಕ್ಟಿವಿಸಂ, ಈ ಗ್ರಹದ ಮೇಲೆ ವಾಸಿಸಲು ನಾನು ಕೊಡುವ ಬಾಡಿಗೆ” ಎಂಬ ಆಲಿಸ್ ವಾಕರ್‌ರವರ ನುಡಿಗಳನ್ನು ತನ್ನ ಫೇಸ್ಬುಕ್ ನಲ್ಲಿ ಹಂಚಿಕೊಂಡಿದ್ದರು. ಸಫ್ದಾರ್ ಹಶ್ಮಿ ಅವರು 1989 ರ ಜನವರಿ 2 ರಂದು ನಾಟಕವನ್ನು ಪ್ರದರ್ಶಿಸುತ್ತಿದ್ದಾಗಲೇ ಅಸಷ್ಣುತೆಯ ಪ್ರತಿಪಾದಕರಿಂದ ಕೊಲ್ಲಲ್ಪಟ್ಟರು. ಈ ಕುರಿತು “ಅಸಹಿಷ್ಣುತೆಯ ಕೋರೆಹಲ್ಲುಗಳಿಗೆ ನಾವು ಸುಂದರ ಕಲಾವಿದ ಮತ್ತು ಧೈರ್ಯಶಾಲಿ ಆತ್ಮವನ್ನು ಕಳೆದುಕೊಂಡಿದ್ದೇವೆ” ಎಂದು ಬರೆದುಕೊಂಡಿದ್ದ ರೋಹಿತ್‌ನನ್ನು ನಾವೀಗ ಕಳೆದುಕೊಂಡಿದ್ದೇವೆ.

ರೋಹಿತ್ ವೇಮುಲಾ ದೈಹಿಕವಾಗಿ ನಮ್ಮಿಂದ ದೂರವಾಗಿದ್ದರೂ ಆತನ ಚೈತನ್ಯವನ್ನು ನಾವು ಉಸಿರಾಡುತ್ತಿದ್ದೇವೆ. ಹಾಗಾಗಿಯೇ ಇಂದು ಅವರ ನಕ್ಷತ್ರದ ಧೂಳು ನಾಟಕ ಮತ್ತೆ ಸದ್ದು ಮಾಡುತ್ತಿದೆ. ಆತನ ವಿಚಾರಗಳೇನು? ಆತನ ಬದುಕಿನ ಗುರಿಯೇನು? ಆತ ವಿಜ್ಞಾನವನ್ನು ಅಷ್ಟರ ಮಟ್ಟಿಗೆ ಹಚ್ಚಿಕೊಂಡಿತ್ತಾದರೂ ಹೇಗೆ? ಈ ಕುರಿತು ತಿಳಿಯಲು ನೀವು ಸಹ ಈ ನಾಟಕ ನೋಡಿ. ರಾಯಚೂರು ಜಿಲ್ಲೆಯ ಪ್ರದರ್ಶನದ ನಂತರ ನಿಮ್ಮ ಜಿಲ್ಲೆ-ತಾಲ್ಲೂಕುಗಳಲ್ಲಿ ನಾಟಕ ಆಯೋಜಿಸಲು ಕಲಾವಿದರಾದ ಲಕ್ಷ್ಮಣ್ ಮಂಡಲಗೇರರವನ್ನು (8762718341) ಸಂಪರ್ಕಿಸಿ.


ಇದನ್ನೂ ಓದಿ: ‘ರೋಹಿತ್ ವೇಮುಲ ಇಂದು ಬದುಕಿದ್ದರೆ……’ : ಅಗಲಿದ ಯುವಚೈತನ್ಯದ ಸ್ಮರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....