Homeಮುಖಪುಟರಾಯಚೂರಿನಲ್ಲಿ ಮೊದಲ ಏಕವ್ಯಕ್ತಿ ರಂಗಪ್ರಯೋಗ: ರೋಹಿತ್ ವೇಮುಲಾ ಬದುಕನ್ನಾಧರಿಸಿದ 'ನಕ್ಷತ್ರದ ಧೂಳು' ನಾಳೆ ಪ್ರದರ್ಶನ

ರಾಯಚೂರಿನಲ್ಲಿ ಮೊದಲ ಏಕವ್ಯಕ್ತಿ ರಂಗಪ್ರಯೋಗ: ರೋಹಿತ್ ವೇಮುಲಾ ಬದುಕನ್ನಾಧರಿಸಿದ ‘ನಕ್ಷತ್ರದ ಧೂಳು’ ನಾಳೆ ಪ್ರದರ್ಶನ

“ಆಕ್ಟಿವಿಸಂ, ಈ ಗ್ರಹದ ಮೇಲೆ ವಾಸಿಸಲು ನಾನು ಕೊಡುವ ಬಾಡಿಗೆ” ಎಂಬ ಆಲಿಸ್ ವಾಕರ್‌ರವರ ನುಡಿಗಳನ್ನು ರೋಹಿತ್ ತನ್ನ ಫೇಸ್ಬುಕ್ ನಲ್ಲಿ ಹಂಚಿಕೊಂಡಿದ್ದರು.

- Advertisement -
- Advertisement -

“ನಾನು ವಿಜ್ಞಾನದ ಬರಹಗಾರ ಆಗಬೇಕೆಂದುಕೊಂಡಿದ್ದೆ, ವಿಜ್ಞಾನ ಲೇಖಕ ಕಾರ್ಲ್ ಸಗಾನನ ಹಾಗೆ. ಆದರೆ ಕೊನೆಗೆ, ಇದೊಂದು ಪತ್ರವನ್ನಷ್ಟೇ ಬರೆಯಲು ನನ್ನಿಂದಾದದ್ದು”… ಕ್ಯಾಂಪಸ್‌ಗಳಲ್ಲಿನ ಜಾತಿವಾದಿ ಮನಸ್ಥಿತಿ ವಿರೋಧಿಸಿ ಆತ್ಮಹತ್ಯೆ ಪತ್ರ ಬರೆದು ಜನವರಿ 16, 2016ರಂದು ಅಂದರೆ ಐದು ವರ್ಷಗಳ ಹಿಂದೆ ನಮ್ಮನ್ನಗಲಿದ ವಿದ್ಯಾರ್ಥಿ ಹೋರಾಟದ ಧೃವತಾರೆ ರೋಹಿತ್ ವೇಮುಲಾ ಬದುಕನ್ನಾಧರಿಸಿದ ‘ನಕ್ಷತ್ರದ ಧೂಳು’ ನಾಟಕ ಮತ್ತೆ ಪ್ರದರ್ಶನಕ್ಕೆ ಅಣಿಯಾಗಿದೆ.

ಸಾಮಾಜಿಕ ಕಾರ್ಯಕರ್ತರಾದ ಹರ್ಷಕುಮಾರ್ ಕುಗ್ವೆಯವರು ರಚಿಸಿರುವ ‘ನಕ್ಷತ್ರದ ಧೂಳು’ ಮಾರ್ಚ್ 27 ರ ಸಂಜೆ 6:30ಕ್ಕೆ ರಾಯಚೂರಿನ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಪ್ರದರ್ಶನಗೊಳ್ಳುತ್ತಿದೆ. ಇದು ಜಿಲ್ಲೆಯಲ್ಲಿನ ಮೊದಲ ಏಕವ್ಯಕ್ತಿ ರಂಗಪ್ರಯೋಗವಾಗಿದ್ದು ರಂಗಕಲಾವಿದ ಮತ್ತು ಸಾಮಾಜಿಕ ಹೋರಾಟಗಾರ ಲಕ್ಷ್ಮಣ್ ಮಂಡಲಗೇರ ಪ್ರಸ್ತುತಿಪಡಿಸಲಿದ್ದು, ಪ್ರವೀಣ್ ರೆಡ್ಡಿ ಗುಂಜಹಳ್ಳಿಯವರು ನಿರ್ದೇಶಿಸಿದ್ದಾರೆ. ‘ಸಮುದಾಯ ರಾಯಚೂರು’ ನಾಟಕ ಪ್ರದರ್ಶನ ಆಯೋಜಿಸುತ್ತಿದೆ.

 

ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಷಿಯೆಷನ್ ಸಂಘಟನೆ ಮೂಲಕ ರೋಹಿತ್ ವೇಮುಲಾ ಯಾರೆಂದು ಪ್ರಪಂಚಕ್ಕೆ ಗೊತ್ತಾಗುವ ಮೊದಲೇ ಆತ ಕಾಶ್ಮೀರದ ಪ್ರಜೆಗಳ ಮೇಲಿನ ಹಲ್ಲೆಯನ್ನು ವಿರೋಧಿಸಿದ್ದ.. “ಕೆಲವರಿಗೆ ಬದುಕೇ ಶಾಪ. ನನಗೆ, ನನ್ನ ಹುಟ್ಟೇ ಮಾರಣಾಂತಿಕ ಆಘಾತ” ಎಂದು ಬರೆದುಕೊಂಡಿದ್ದ ರೋಹಿತ್ ವೇಮುಲಾ ಜಾತಿಯನ್ನು ಕಿತ್ತುಹಾಕಲು ಬಯಸಿದ್ದ. ಏಕೆಂದರೆ ಹುಟ್ಟಿನಿಂದಲೇ ಅವನ್ನನ್ನು ತೀವ್ರವಾಗಿ ಅದು ಕಾಡಿತ್ತು. ಜಾತಿವಿರುದ್ಧ ದನಿಯೆತ್ತಿದಾಗ ಆತನೊಂದಿಗೆ ಇದ್ದದ್ದು ಸಾವಿತ್ರಿಬಾಯಿ ಫುಲೆ ಮತ್ತು ಬಾಬಾಸಾಹೇಬರ ಚಿತ್ರ ಮಾತ್ರ..

ಅಂದು ರೋಹಿತ್ ವೇಮುಲಾನನ್ನು ಜಾತಿ ತೀವ್ರವಾಗಿ ಕಾಡಿತ್ತು. ಆತ ಪಿಎಚ್‌ಡಿ ಮಾಡುತ್ತಿದ್ದಾಗ ಎಬಿವಿಪಿ ಗೂಂಡಾಗಳು ಕಾಡಿದರು. ಬ್ರಾಹ್ಮಣವಾದಿ ವಿವಿಯ ಆಡಳಿತ ಮಂಡಳಿ 7 ತಿಂಗಳು ಆತನಿಗೆ ಫೆಲೋಶಿಪ್ ತಡೆ ಹಿಡಿದಿದ್ದಲ್ಲದೇ ಆತನನ್ನು ಕಾಲೇಜು ಮತ್ತು ಹಾಸ್ಟೆಲ್‌ನಿಂದ ಹೊರಹಾಕಿತ್ತು. ಆತ ಆತ ಅಂಬೇಡ್ಕರ್, ಸಾವಿತ್ರಿ ಬಾಫುಲೆ ಫೋಟೊ ಹಿಡಿದು ಕ್ಯಾಂಪಸ್ಸಿನ ’ವೆಲಿವಾಡ’ದಲ್ಲಿ ಹೋರಾಟ ಆರಂಭಿಸಿದ್ದ. ಆಗ ಬಹುತೇಕರು ಆತನ ಬೆಂಬಲಕ್ಕೆ ನಿಲ್ಲಲಿಲ್ಲ. ಕಾರಣ ಏನೇ ಇರಬಹುದು ಆತ ಒಂಟಿಯಾದ. ಕೊನೆಗೂ ಪ್ರಭುತ್ವ ಆತನನ್ನು ಬಲಿ ತೆಗೆದುಕೊಂಡಿತು.

ತನ್ನ ಕ್ಯಾಂಪಸ್‌ನಲ್ಲಿನ ಡೆಮಾಕ್ರಸಿಯನ್ನಷ್ಟೇ ಬಯಸದ ರೋಹಿತ್ ಇಡೀ ಸಮಾಜದಲ್ಲಿ ಡೆಮಾಕ್ರಸಿಯನ್ನು ಹಂಬಲಿಸಿದ್ದರು. ಅದಕ್ಕಾಗಿಯೇ “ಆಕ್ಟಿವಿಸಂ, ಈ ಗ್ರಹದ ಮೇಲೆ ವಾಸಿಸಲು ನಾನು ಕೊಡುವ ಬಾಡಿಗೆ” ಎಂಬ ಆಲಿಸ್ ವಾಕರ್‌ರವರ ನುಡಿಗಳನ್ನು ತನ್ನ ಫೇಸ್ಬುಕ್ ನಲ್ಲಿ ಹಂಚಿಕೊಂಡಿದ್ದರು. ಸಫ್ದಾರ್ ಹಶ್ಮಿ ಅವರು 1989 ರ ಜನವರಿ 2 ರಂದು ನಾಟಕವನ್ನು ಪ್ರದರ್ಶಿಸುತ್ತಿದ್ದಾಗಲೇ ಅಸಷ್ಣುತೆಯ ಪ್ರತಿಪಾದಕರಿಂದ ಕೊಲ್ಲಲ್ಪಟ್ಟರು. ಈ ಕುರಿತು “ಅಸಹಿಷ್ಣುತೆಯ ಕೋರೆಹಲ್ಲುಗಳಿಗೆ ನಾವು ಸುಂದರ ಕಲಾವಿದ ಮತ್ತು ಧೈರ್ಯಶಾಲಿ ಆತ್ಮವನ್ನು ಕಳೆದುಕೊಂಡಿದ್ದೇವೆ” ಎಂದು ಬರೆದುಕೊಂಡಿದ್ದ ರೋಹಿತ್‌ನನ್ನು ನಾವೀಗ ಕಳೆದುಕೊಂಡಿದ್ದೇವೆ.

ರೋಹಿತ್ ವೇಮುಲಾ ದೈಹಿಕವಾಗಿ ನಮ್ಮಿಂದ ದೂರವಾಗಿದ್ದರೂ ಆತನ ಚೈತನ್ಯವನ್ನು ನಾವು ಉಸಿರಾಡುತ್ತಿದ್ದೇವೆ. ಹಾಗಾಗಿಯೇ ಇಂದು ಅವರ ನಕ್ಷತ್ರದ ಧೂಳು ನಾಟಕ ಮತ್ತೆ ಸದ್ದು ಮಾಡುತ್ತಿದೆ. ಆತನ ವಿಚಾರಗಳೇನು? ಆತನ ಬದುಕಿನ ಗುರಿಯೇನು? ಆತ ವಿಜ್ಞಾನವನ್ನು ಅಷ್ಟರ ಮಟ್ಟಿಗೆ ಹಚ್ಚಿಕೊಂಡಿತ್ತಾದರೂ ಹೇಗೆ? ಈ ಕುರಿತು ತಿಳಿಯಲು ನೀವು ಸಹ ಈ ನಾಟಕ ನೋಡಿ. ರಾಯಚೂರು ಜಿಲ್ಲೆಯ ಪ್ರದರ್ಶನದ ನಂತರ ನಿಮ್ಮ ಜಿಲ್ಲೆ-ತಾಲ್ಲೂಕುಗಳಲ್ಲಿ ನಾಟಕ ಆಯೋಜಿಸಲು ಕಲಾವಿದರಾದ ಲಕ್ಷ್ಮಣ್ ಮಂಡಲಗೇರರವನ್ನು (8762718341) ಸಂಪರ್ಕಿಸಿ.


ಇದನ್ನೂ ಓದಿ: ‘ರೋಹಿತ್ ವೇಮುಲ ಇಂದು ಬದುಕಿದ್ದರೆ……’ : ಅಗಲಿದ ಯುವಚೈತನ್ಯದ ಸ್ಮರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...