Homeಕರ್ನಾಟಕರಾಯಚೂರು ಪಿ.ಜಿ ಸೆಂಟರ್‌ನಲ್ಲಿ ಬೋರ್ಡ್‌, ಊಟದ ತಟ್ಟೆ, ಕುಡಿಯುವ ನೀರು ಸಹ ಇಲ್ಲ! : ಸಿಟ್ಟಿಗೆದ್ದ...

ರಾಯಚೂರು ಪಿ.ಜಿ ಸೆಂಟರ್‌ನಲ್ಲಿ ಬೋರ್ಡ್‌, ಊಟದ ತಟ್ಟೆ, ಕುಡಿಯುವ ನೀರು ಸಹ ಇಲ್ಲ! : ಸಿಟ್ಟಿಗೆದ್ದ ವಿದ್ಯಾರ್ಥಿಗಳಿಂದ ಧಿಡೀರ್‌ ಪ್ರತಿಭಟನೆ

600 ಜನಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಇಲ್ಲ ಕೇವಲ 6 ಜನ ಮಾತ್ರ ಕಾಯಂ ಉಪನ್ಯಾಸಕರಿದ್ದಾರೆ. ಉಳಿದವರೆಲ್ಲಾ ಅಥಿತಿ ಉಪನ್ಯಾಸಕರಾಗಿರುವುದರಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ

- Advertisement -
- Advertisement -

ಹೈದರಾಬಾದ್‌ ಕರ್ನಾಟಕದ ಹಿಂದುಳಿದ ಜಿಲ್ಲೆಗಳಲ್ಲಿ ಒಂದಾದ ರಾಯಚೂರಿನಲ್ಲಿ ಉತ್ತಮ ಶಿಕ್ಷಣ ಸಂಸ್ಥೆಗಳಿಲ್ಲ ಎನ್ನುವುದು ಹಲವಾರು ದಶಕಗಳ ಕೂಗು. ಹಲವು ವರ್ಷಗಳ ಹಿಂದೆ ಇಲ್ಲಿಗೊಂದು ಐಐಟಿ ಬರುತ್ತದೆ ಎಂದು ಆಸೆ ಹುಟ್ಟಿಸಿ ಕೊನೆಗೆ ಕೈಕೊಡಲಾಯ್ತು, ಐಐಟಿ ಧಾರವಾಡದ ಪಾಲಾಯ್ತು. ಹೋಗಲಿ ಈ ಜಿಲ್ಲೆಗೆ ಒಂದು ವಿವಿಯಾದರೂ ಇದೆಯೇ ಎಂದು ನೋಡಿದರೆ ರಾಯಚೂರಿನಲ್ಲಿ ವಿಶ್ವವಿದ್ಯಾನಿಲಯ ಸ್ಥಾಪಿಸಬೇಕೆಂದು ಮೂರ್‍ನಾಲ್ಕು ವರ್ಷಗಳಿಂದ ಚರ್ಚೆಗಳು ನಡೆದಿವೆಯೇ ಹೊರತು ಕಾರ್ಯರೂಪಕ್ಕೆ ಬಂದಿಲ್ಲ. ಇಷ್ಟೆಲ್ಲದರ ನಡುವೆ ಅಲ್ಲಿನ ವಿದ್ಯಾರ್ಥಿಗಳು ಸಮರ್ಪಕ ಶಿಕ್ಷಣ ಸಿಗದೇ ನರಳುತ್ತಿದ್ದಾರೆ. ಅಲ್ಲಿಯ ವಿದ್ಯಾರ್ಥಿಗಳ ಧಾರುಣ ಸ್ಥಿತಿ ಇಲ್ಲಿದೆ ನೋಡಿ.

ಬೋರ್ಡೇ ಇಲ್ಲದ ಕಗ್ಗಾಡಿನಲ್ಲೊಂದು ಪಿ.ಜಿ ಸೆಂಟರ್‌

ದೊಡ್ಡ ಜಿಲ್ಲೆ ರಾಯಚೂರಿನಲ್ಲಿ ಯರಗೇರಾ ಪಿ.ಜಿ ಸೆಂಟರ್‌ ಇದೆ. ಸದ್ಯಕ್ಕೆ ಪದವಿ ನಂತರ ಉನ್ನತ ಶಿಕ್ಷಣ ಪಡೆಯಲು ರಾಯಚೂರು ಸುತ್ತ ಇರುವ ವಿದ್ಯಾರ್ಥಿಗಳೆಲ್ಲಾ ಇಲ್ಲಿಗೆ ಬರಬೇಕು. ದುರಂತವೆಂದರೆ ಇಲ್ಲಿ ಪಿ.ಜಿ ಸೆಂಟರ್‌ ಇದೆ ಎಂದು ಗೊತ್ತಾಗಲು ಇರಬೇಕಾದ ಒಂದು ಬೋರ್ಡ್‌ ಕೂಡ ಇಲ್ಲ. ಸುತ್ತಲೂ ಜಾಲಿಗಿಡಗಳು ಬೆಳೆದುಕೊಂಡಿದ್ದು ದೊಡ್ಡ ಕೊಂಪೆಯಾಗಿ ಕಾಣಿಸುತ್ತದೆಯೇ ವಿನಾಃ ವಿಶ್ವವಿದ್ಯಾನಿಲಯವಿರಲಿ ಒಂದು ಕಾಲೇಜು ಕಂಡಂತೆ ಸಹ ಕಾಣುವುದಿಲ್ಲ.

ಈ ಪಿ.ಜಿ ಸೆಂಟರ್‌ನಲ್ಲಿ ಇಂದು ವಿದ್ಯಾರ್ಥಿಗಳ ಆಕ್ರೋಶದ ಕಟ್ಟೆಯೊಡದಿದೆ. ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕೈಬರಹದಲ್ಲಿ ಕೊಟ್ಟಿರುವ ಮನವಿ ಪತ್ರ ನೋಡಿದರೆ ಎಂತವರಿಗೂ ಕನಿಕರ ಹುಟ್ಟುತ್ತದೆ. ಪಿ.ಜಿ ಹಾಸ್ಟೆಲ್‌ನಲ್ಲಿ ಗಂಗಳದ ಸಮಸ್ಯೆ( ಊಟದ ತಟ್ಟೆ), ಶುದ್ದ ಕುಡಿಯುವ ನೀರು ಇಲ್ಲ. ಸಮರ್ಪಕ ಬಸ್‌ ಸೌಲಭ್ಯವಿಲ್ಲ. ಬರುವ ಬಸ್‌ಗಳು ಸಹ ಸರಿಯಾಗಿ ನಿಲ್ಲಿಸುವುದಿಲ್ಲ. ಬಸ್‌ ಸ್ಟ್ಯಾಂಡ್‌ನಿಂದ ಪಿ.ಜಿ ಯೊಳಗೆ ಹೋಗಬೇಕಾದರೆ ವಿದ್ಯುತ್‌ ದೀಪ ಇಲ್ಲ. ಕ್ರೀಡಾಂಗಣ, ಕ್ರೀಡಾ ಸಾಮಾಗ್ರಿಗಳು, ಜಿಮ್‌ ಯಾವುದೂ ಇಲ್ಲ. ಗ್ರಂಥಾಲಯದ ಪುಸ್ತಕಗಳಿಲ್ಲ, ದಿನಪತ್ರಿಕೆಗಳಿಲ್ಲ… ಹೇಳುತ್ತಾ ಹೋದರೆ ಸಮಸ್ಯೆಗಳು ಮುಗಿಯುವುದೇ ಇಲ್ಲ.

ಒಂದು ರೀತಿ ಕಾಡಿನಂತಿರುವ ಅಲ್ಲಿ ಹೆಣ್ಣು ಮಕ್ಕಳ ಹಾಸ್ಟೆಲ್‌ಗೂ ಕೂಡ ಯಾವುದೇ ಭದ್ರತೆಯಿಲ್ಲ. ಹಾಸ್ಟೆಲ್‌ ರೂಂಗಳಿಗೆ ಕಿಟಕಿ ಬಾಗಿಲುಗಳಿಲ್ಲ, ಸಮರ್ಪಕ ಚಿಲಕಗಳಿಲ್ಲ. ಹಾಸ್ಟೆಲ್‌ ಊಟ ನೀಡುವ ಜವಾಬ್ದಾರಿಯನ್ನು ಗುತ್ತಿಗೆ ನೀಡಲಾಗಿದ್ದು ಅವರು ಅದನ್ನು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ.. ಹೀಗೆ ಸಮಸ್ಯೆಗಳ ಪಟ್ಟಿ ಬೆಳೆಯುತ್ತಲೇ ಇದೆ.

 

ವಿದ್ಯಾರ್ಥಿಗಳು ಇಷ್ಟೆಲ್ಲಾ ಕಷ್ಟದ ನಡುವೆ ಹೇಗೆ ಓದುತ್ತಿದ್ದಾರೆ ಎಂದು ನೆನೆಸಿಕೊಂಡರೇ ಕಷ್ಟವಾಗುತ್ತದೆ. ಹಾಗಾಗಿ ಆ ವಿದ್ಯಾರ್ಥಿಗಳು ತಮ್ಮ ಹಕ್ಕೊತ್ತಾಯಗಳನ್ನು ಮುಂದಿಟ್ಟಿದ್ದಾರೆ. ಸಮರ್ಪಕವಾಗಿ ಸ್ಕಾಲರ್‌ಶಿಪ್‌ ನೀಡಬೇಕು. ಎಲ್ಲಾ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡಬೇಕು, ಇಂಟರ್‌ನೆಟ್‌ ಸಂಪರ್ಕ ಒದಗಿಸಬೇಕು. ವಿದ್ಯುತ್‌ ಕಡಿತದ ಸಮಸ್ಯೆಯಿರುವುದರಿಂದ ಜನರೇಟರ್‌ ಬೇಕು ಮತ್ತು ಮುಖ್ಯವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೂ ಸಹ ಹಾಸ್ಟೆಲ್‌ ಸೌಲಭ್ಯ ಸಿಗಬೇಕು.

ನಮಗೇನಾದರೂ ಅನಾಹುತವಾದರೆ ನಾವೇ ಹೊಣೆ!

ಈ ಪಿ.ಜಿ ಸೆಂಟರ್‌ನ ಹಾಸ್ಟೆಲ್‌ನಲ್ಲಿ ಒಂದಷ್ಟು ವಿದ್ಯಾರ್ಥಿನಿಯರು ಇದ್ದಾರೆ. ಯಾರಾದರೂ ಇಲ್ಲಿಗೆ ಸೇರಬೇಕಾದರೆ ಅವರೊಂದು ಮುಚ್ಚಳಿಕೆ ಪತ್ರವನ್ನು ಕಡ್ಡಾಯವಾಗಿ ಬರೆದುಕೊಡಬೇಕು. ಅದರಲ್ಲಿ  ನಮಗೇನಾದರೂ ಅನಾಹುತವಾದರೆ ನಾವೇ ಹೊಣೆ ಹೊರತು ಇಲ್ಲಿಯ ಆಡಳಿಯ ಮಂಡಳಿಯಲ್ಲ ಎಂದು! ರಾಜ್ಯದ, ದೇಶದ ಯಾವ ವಿ.ವಿಯಲ್ಲಿಯೂ ಇಂತಹ ಮುಚ್ಚಳಿಕೆ ಪತ್ರ ಬರೆಸಿಕೊಳ್ಳುವುದಿಲ್ಲವೇನೋ? ಇಲ್ಲಿಯ ಅನ್ಯಾಯ ಅಕ್ರಮಗಳನ್ನು ವಿದ್ಯಾರ್ಥಿಗಳು ಪ್ರಶ್ನೆ ಮಾಡಬಾರದೆಂದು ಈ ರೀತಿ ಮುಚ್ಚಳಿಕೆ ಪತ್ರ ಬರೆಸಿಕೊಂಡು ವಿದ್ಯಾರ್ಥಿಗಳನ್ನು ಹೆದರಿಸಲಾಗುತ್ತಿದೆ. ಅವರ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ಪಿ.ಜಿ ಸೆಂಟರ್‌ನ ಆವರಣ

ಈ ವಿಚಾರದ ಕುರಿತು ನಾನುಗೌರಿ.ಕಾಂ ವತಿಯಿಂದ ರಾಯಚೂರು ವಿ.ವಿಯ ವಿಶೇಷಾಧಿಕಾರಿಗಳಾದ ಪ್ರೊ.ಮುಝಾಫರ್‌ ಅಸ್ಸಾದಿಯವರನ್ನು ಮಾತಾಡಿಸಲಾಯಿತು. “ಇಲ್ಲಿ ರಾಯಚೂರು ವಿಶ್ವವಿದ್ಯಾನಿಲಯವಾದರೆ ಮಾತ್ರ ಆ ಪಿ.ಜಿ ಸೆಂಟರ್‌ ನಮ್ಮ ವ್ಯಾಪ್ತಿಗೆ ಬರುತ್ತದೆ. ಸದ್ಯಕ್ಕೆ ಅದು ಗುಲಬರ್ಗಾ ವಿ.ವಿಯ ವ್ಯಾಪ್ತಿಯಲ್ಲಿದ್ದು ಅಲ್ಲಿ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಲು ನಮಗೆ ಅಧಿಕಾರವಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

ಆ ಪಿ.ಜಿ ಸೆಂಟರ್‌ನ ಕಾರ್ಯಾಧಿಕಾರಿಗಳಾದ ನುಶ್ರತ್‌ ರವರನ್ನು ಸಂಪರ್ಕಿಸಲು ಪ್ರಯತ್ನಿಸಿದರು ಕೂಡ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ.

ಇನ್ನು ವಿದ್ಯಾರ್ಥಿಗಳು ಬೆಳಿಗ್ಗೆಯಿಂದಲೇ ಪ್ರತಿಭಟನೆ ನಡೆಸಿದರೂ ಯಾವೊಬ್ಬ ಅಧಿಕಾರಿಯೂ ಅತ್ತ ಸುಳಿದಿಲ್ಲ. ವಿಷಯ ತಿಳಿದ ನಂತರ ರವಿ ಪಾಟೀಲ್‌ ಫೌಂಡೇಶನ್‌ನ ರವಿ ಪಾಟೀಲ್‌ರವರು ಸ್ಥಳಕ್ಕೆ ತೆರಳಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ್ದಾರೆ. ನಂತರವಷ್ಟೇ ತಹಶೀಲ್ದಾರ್‌ ಪಿ.ಜಿ ಸೆಂಟರ್‌ಗೆ ಭೇಟಿಕೊಟ್ಟು ಮನವಿ ಪತ್ರ ಸ್ವೀಕರಿಸಿದ್ದಾರೆ. ಮತ್ತೆ ಯಥಾಪ್ರಕಾರ ಇದನ್ನು ಉನ್ನತ ಅಧಿಕಾರಿಗಳ ಗಮನಕ್ಕೆ ತರುತ್ತೇವೆ ಎಂದು ಹೇಳಿ ಹೊರಟಿದ್ದಾರೆ.

ರಾಯಚೂರು ವಿಶ್ವವಿದ್ಯಾಲಯವಾಗುವುದೇ ಪರಿಹಾರದ ದಾರಿ: ರವಿ ಪಾಟೀಲ್‌

ಈ ಕುರಿತು ರವಿ ಪಾಟೀಲ್‌ರವರು ಮಾತನಾಡಿ, ಈ ಪಿ.ಜಿ ಸೆಂಟರ್‌ ಬಗ್ಗೆ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ. ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಹಲವಾರು ವಿದ್ಯಾರ್ಥಿಗಳು ಇಲ್ಲಿಗೆ ವಿದ್ಯಾಭ್ಯಾಸಕ್ಕಾಗಿ ಬಂದರೂ ಸಹ ಇಲ್ಲಿನ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಅನುದಾನ ಬಿಡುಗಡೆ ಆಗಿಲ್ಲ. ಇಲ್ಲಿಗೆ ಬರುವ ಇನ್‌ಚಾರ್ಜ್‌‌ಗಲು ಪ್ರತಿ ಮೂರು ತಿಂಗಳಿಗೊಮ್ಮೆ ಬದಲಾಗುತ್ತಿದ್ದಾರೆ. ಈಗ ಇರುವವರು ಸಹ ಡಿಸೆಂಬರ್‌ನಲ್ಲಿ ನಿವೃತ್ತಿಯಾಗುತ್ತಿದ್ದಾರೆ. ಈಗಾದರೆ ಈ ಪಿ.ಜಿ ಸೆಂಟರ್‌ ಉದ್ದಾರ ಆಗುವುದಾದರೂ ಹೇಗೆ ಎಂದು ಪ್ರಶ್ನಿಸಿದ್ದಾರೆ.

600 ಜನಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಇಲ್ಲ ಕೇವಲ 6 ಜನ ಮಾತ್ರ ಕಾಯಂ ಉಪನ್ಯಾಸಕರಿದ್ದಾರೆ. ಉಳಿದವರೆಲ್ಲಾ ಅಥಿತಿ ಉಪನ್ಯಾಸಕರಾಗಿರುವುದರಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಹಾಗಾಗಿ ಈ ತಿಂಗಳ 28 ರಂದು ಅಂತಿಮ ಮಾತುಕತೆ ನಡೆಸುತ್ತೇವೆ. ಆನಂತರ ಇದಕ್ಕಾಗಿ ಬೆಂಗಳೂರಿನಲ್ಲಿ ಒತ್ತಡ ತರುವ ಕೆಲಸ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಹೋರಾಟ ತೀವ್ರಗೊಳಿಸುತ್ತೇವೆ

ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಲಕ್ಷ್ಮಣ್‌ ಮಂಡಲಗೇರಾ ಮಾತನಾಡಿ, ಪಿ.ಜಿ ಸೆಂಟರ್‌ ಸಣ್ಣ ಪುಟ್ಟ ಸಮಸ್ಯೆಗಳೇ ಇದ್ದರೂ ಸಹ ಬಗೆಹರಿಯುತ್ತಿಲ್ಲ. ಇಲ್ಲಿ ಹೇಳುವವರು ಕೇಳುವವರು ಯಾರು ಇಲ್ಲ. ಈ ಭಾಗದ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಎಲ್ಲಾ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಹಾಗಾಗಿ ಹೋರಾಟವನ್ನು ತೀವ್ರಗೊಳಿಸಲು ತೀರ್ಮಾನಿಸಿದ್ದೇವೆ ಎಂದಿದ್ದಾರೆ.

ಆವರಣದ ತುಂಬಾ ಜಾಲಿ ಮರಗಳು

ರಾಯಚೂರು ವಿ.ವಿ ಆಗಬೇಕು ಎಂಬುದು ನಮ್ಮ ಬಹುದಿನದ ಬೇಡಿಕೆ. ಆದರೆ ಆ ಕಡತವನ್ನು ರಾಜ್ಯಪಾಲರು ಎರಡು ಬಾರಿ ಕಾರಣವಿಲ್ಲದೆ ತಿರಸ್ಕರಿದ್ದಾರೆ. ಈ ಪಿ.ಜಿ ಸೆಂಟರ್‌ ಗುಲಬರ್ಗಾ ವಿ.ವಿ ವ್ಯಾಪ್ತಿಗೆ ಬರಲಿದ್ದು, ಇಲ್ಲಿ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ. ರಾಯಚೂರು ನಗರದಿಂದ 15 ಕಿ.ಮಿ ದೂರದಲ್ಲಿದೆ. ಸಮರ್ಪಕ ಬಸ್‌ ವ್ಯವಸ್ಥೆ ಕೂಡ ಇಲ್ಲ. ಕಷ್ಟಪಟ್ಟು ಬಂದರೂ ಸಹ ನಿಗಧಿತವಾಗಿ ಕ್ಲಾಸ್‌ ನಡೆಯುವುದಿಲ್ಲ. ಇಲ್ಲಿ ಒಂದು ಝೆರಾಕ್ಸ್ ಅಂಗಡಿ ಸಹ ಇಲ್ಲ. ಇಲ್ಲಿನ ವಿಶೇಷ ಅಧಿಕಾರಿಗಳು ರಬ್ಬರ್‌ ಸ್ಟ್ಯಾಂಪ್‌ ರೀತಿ ವರ್ತಿಸುತ್ತಾರೆ. ನಾವು ಕಟ್ಟಿದ ಶುಲ್ಕಕ್ಕೆ ರಶೀದಿ ಸಹ ನೀಡದೆ ವಂಚನೆ ನಡೆಯುತ್ತಿದೆ. ಹಾಗಾಗಿ ಪ್ರತಿಭಟನೆ ನಮಗೆ ಅನಿವಾರ್ಯವಾಗಿದೆ

-ಮಲ್ಲನಗೌಡ, ಪ್ರಥಮ ಎಂ.ಎ, ರಾಜ್ಯಶಾಸ್ತ್ರ ವಿಭಾಗ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...