Homeಕರ್ನಾಟಕರಾಯಚೂರು ಪಿ.ಜಿ ಸೆಂಟರ್‌ನಲ್ಲಿ ಬೋರ್ಡ್‌, ಊಟದ ತಟ್ಟೆ, ಕುಡಿಯುವ ನೀರು ಸಹ ಇಲ್ಲ! : ಸಿಟ್ಟಿಗೆದ್ದ...

ರಾಯಚೂರು ಪಿ.ಜಿ ಸೆಂಟರ್‌ನಲ್ಲಿ ಬೋರ್ಡ್‌, ಊಟದ ತಟ್ಟೆ, ಕುಡಿಯುವ ನೀರು ಸಹ ಇಲ್ಲ! : ಸಿಟ್ಟಿಗೆದ್ದ ವಿದ್ಯಾರ್ಥಿಗಳಿಂದ ಧಿಡೀರ್‌ ಪ್ರತಿಭಟನೆ

600 ಜನಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಇಲ್ಲ ಕೇವಲ 6 ಜನ ಮಾತ್ರ ಕಾಯಂ ಉಪನ್ಯಾಸಕರಿದ್ದಾರೆ. ಉಳಿದವರೆಲ್ಲಾ ಅಥಿತಿ ಉಪನ್ಯಾಸಕರಾಗಿರುವುದರಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ

- Advertisement -
- Advertisement -

ಹೈದರಾಬಾದ್‌ ಕರ್ನಾಟಕದ ಹಿಂದುಳಿದ ಜಿಲ್ಲೆಗಳಲ್ಲಿ ಒಂದಾದ ರಾಯಚೂರಿನಲ್ಲಿ ಉತ್ತಮ ಶಿಕ್ಷಣ ಸಂಸ್ಥೆಗಳಿಲ್ಲ ಎನ್ನುವುದು ಹಲವಾರು ದಶಕಗಳ ಕೂಗು. ಹಲವು ವರ್ಷಗಳ ಹಿಂದೆ ಇಲ್ಲಿಗೊಂದು ಐಐಟಿ ಬರುತ್ತದೆ ಎಂದು ಆಸೆ ಹುಟ್ಟಿಸಿ ಕೊನೆಗೆ ಕೈಕೊಡಲಾಯ್ತು, ಐಐಟಿ ಧಾರವಾಡದ ಪಾಲಾಯ್ತು. ಹೋಗಲಿ ಈ ಜಿಲ್ಲೆಗೆ ಒಂದು ವಿವಿಯಾದರೂ ಇದೆಯೇ ಎಂದು ನೋಡಿದರೆ ರಾಯಚೂರಿನಲ್ಲಿ ವಿಶ್ವವಿದ್ಯಾನಿಲಯ ಸ್ಥಾಪಿಸಬೇಕೆಂದು ಮೂರ್‍ನಾಲ್ಕು ವರ್ಷಗಳಿಂದ ಚರ್ಚೆಗಳು ನಡೆದಿವೆಯೇ ಹೊರತು ಕಾರ್ಯರೂಪಕ್ಕೆ ಬಂದಿಲ್ಲ. ಇಷ್ಟೆಲ್ಲದರ ನಡುವೆ ಅಲ್ಲಿನ ವಿದ್ಯಾರ್ಥಿಗಳು ಸಮರ್ಪಕ ಶಿಕ್ಷಣ ಸಿಗದೇ ನರಳುತ್ತಿದ್ದಾರೆ. ಅಲ್ಲಿಯ ವಿದ್ಯಾರ್ಥಿಗಳ ಧಾರುಣ ಸ್ಥಿತಿ ಇಲ್ಲಿದೆ ನೋಡಿ.

ಬೋರ್ಡೇ ಇಲ್ಲದ ಕಗ್ಗಾಡಿನಲ್ಲೊಂದು ಪಿ.ಜಿ ಸೆಂಟರ್‌

ದೊಡ್ಡ ಜಿಲ್ಲೆ ರಾಯಚೂರಿನಲ್ಲಿ ಯರಗೇರಾ ಪಿ.ಜಿ ಸೆಂಟರ್‌ ಇದೆ. ಸದ್ಯಕ್ಕೆ ಪದವಿ ನಂತರ ಉನ್ನತ ಶಿಕ್ಷಣ ಪಡೆಯಲು ರಾಯಚೂರು ಸುತ್ತ ಇರುವ ವಿದ್ಯಾರ್ಥಿಗಳೆಲ್ಲಾ ಇಲ್ಲಿಗೆ ಬರಬೇಕು. ದುರಂತವೆಂದರೆ ಇಲ್ಲಿ ಪಿ.ಜಿ ಸೆಂಟರ್‌ ಇದೆ ಎಂದು ಗೊತ್ತಾಗಲು ಇರಬೇಕಾದ ಒಂದು ಬೋರ್ಡ್‌ ಕೂಡ ಇಲ್ಲ. ಸುತ್ತಲೂ ಜಾಲಿಗಿಡಗಳು ಬೆಳೆದುಕೊಂಡಿದ್ದು ದೊಡ್ಡ ಕೊಂಪೆಯಾಗಿ ಕಾಣಿಸುತ್ತದೆಯೇ ವಿನಾಃ ವಿಶ್ವವಿದ್ಯಾನಿಲಯವಿರಲಿ ಒಂದು ಕಾಲೇಜು ಕಂಡಂತೆ ಸಹ ಕಾಣುವುದಿಲ್ಲ.

ಈ ಪಿ.ಜಿ ಸೆಂಟರ್‌ನಲ್ಲಿ ಇಂದು ವಿದ್ಯಾರ್ಥಿಗಳ ಆಕ್ರೋಶದ ಕಟ್ಟೆಯೊಡದಿದೆ. ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕೈಬರಹದಲ್ಲಿ ಕೊಟ್ಟಿರುವ ಮನವಿ ಪತ್ರ ನೋಡಿದರೆ ಎಂತವರಿಗೂ ಕನಿಕರ ಹುಟ್ಟುತ್ತದೆ. ಪಿ.ಜಿ ಹಾಸ್ಟೆಲ್‌ನಲ್ಲಿ ಗಂಗಳದ ಸಮಸ್ಯೆ( ಊಟದ ತಟ್ಟೆ), ಶುದ್ದ ಕುಡಿಯುವ ನೀರು ಇಲ್ಲ. ಸಮರ್ಪಕ ಬಸ್‌ ಸೌಲಭ್ಯವಿಲ್ಲ. ಬರುವ ಬಸ್‌ಗಳು ಸಹ ಸರಿಯಾಗಿ ನಿಲ್ಲಿಸುವುದಿಲ್ಲ. ಬಸ್‌ ಸ್ಟ್ಯಾಂಡ್‌ನಿಂದ ಪಿ.ಜಿ ಯೊಳಗೆ ಹೋಗಬೇಕಾದರೆ ವಿದ್ಯುತ್‌ ದೀಪ ಇಲ್ಲ. ಕ್ರೀಡಾಂಗಣ, ಕ್ರೀಡಾ ಸಾಮಾಗ್ರಿಗಳು, ಜಿಮ್‌ ಯಾವುದೂ ಇಲ್ಲ. ಗ್ರಂಥಾಲಯದ ಪುಸ್ತಕಗಳಿಲ್ಲ, ದಿನಪತ್ರಿಕೆಗಳಿಲ್ಲ… ಹೇಳುತ್ತಾ ಹೋದರೆ ಸಮಸ್ಯೆಗಳು ಮುಗಿಯುವುದೇ ಇಲ್ಲ.

ಒಂದು ರೀತಿ ಕಾಡಿನಂತಿರುವ ಅಲ್ಲಿ ಹೆಣ್ಣು ಮಕ್ಕಳ ಹಾಸ್ಟೆಲ್‌ಗೂ ಕೂಡ ಯಾವುದೇ ಭದ್ರತೆಯಿಲ್ಲ. ಹಾಸ್ಟೆಲ್‌ ರೂಂಗಳಿಗೆ ಕಿಟಕಿ ಬಾಗಿಲುಗಳಿಲ್ಲ, ಸಮರ್ಪಕ ಚಿಲಕಗಳಿಲ್ಲ. ಹಾಸ್ಟೆಲ್‌ ಊಟ ನೀಡುವ ಜವಾಬ್ದಾರಿಯನ್ನು ಗುತ್ತಿಗೆ ನೀಡಲಾಗಿದ್ದು ಅವರು ಅದನ್ನು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ.. ಹೀಗೆ ಸಮಸ್ಯೆಗಳ ಪಟ್ಟಿ ಬೆಳೆಯುತ್ತಲೇ ಇದೆ.

 

ವಿದ್ಯಾರ್ಥಿಗಳು ಇಷ್ಟೆಲ್ಲಾ ಕಷ್ಟದ ನಡುವೆ ಹೇಗೆ ಓದುತ್ತಿದ್ದಾರೆ ಎಂದು ನೆನೆಸಿಕೊಂಡರೇ ಕಷ್ಟವಾಗುತ್ತದೆ. ಹಾಗಾಗಿ ಆ ವಿದ್ಯಾರ್ಥಿಗಳು ತಮ್ಮ ಹಕ್ಕೊತ್ತಾಯಗಳನ್ನು ಮುಂದಿಟ್ಟಿದ್ದಾರೆ. ಸಮರ್ಪಕವಾಗಿ ಸ್ಕಾಲರ್‌ಶಿಪ್‌ ನೀಡಬೇಕು. ಎಲ್ಲಾ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡಬೇಕು, ಇಂಟರ್‌ನೆಟ್‌ ಸಂಪರ್ಕ ಒದಗಿಸಬೇಕು. ವಿದ್ಯುತ್‌ ಕಡಿತದ ಸಮಸ್ಯೆಯಿರುವುದರಿಂದ ಜನರೇಟರ್‌ ಬೇಕು ಮತ್ತು ಮುಖ್ಯವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೂ ಸಹ ಹಾಸ್ಟೆಲ್‌ ಸೌಲಭ್ಯ ಸಿಗಬೇಕು.

ನಮಗೇನಾದರೂ ಅನಾಹುತವಾದರೆ ನಾವೇ ಹೊಣೆ!

ಈ ಪಿ.ಜಿ ಸೆಂಟರ್‌ನ ಹಾಸ್ಟೆಲ್‌ನಲ್ಲಿ ಒಂದಷ್ಟು ವಿದ್ಯಾರ್ಥಿನಿಯರು ಇದ್ದಾರೆ. ಯಾರಾದರೂ ಇಲ್ಲಿಗೆ ಸೇರಬೇಕಾದರೆ ಅವರೊಂದು ಮುಚ್ಚಳಿಕೆ ಪತ್ರವನ್ನು ಕಡ್ಡಾಯವಾಗಿ ಬರೆದುಕೊಡಬೇಕು. ಅದರಲ್ಲಿ  ನಮಗೇನಾದರೂ ಅನಾಹುತವಾದರೆ ನಾವೇ ಹೊಣೆ ಹೊರತು ಇಲ್ಲಿಯ ಆಡಳಿಯ ಮಂಡಳಿಯಲ್ಲ ಎಂದು! ರಾಜ್ಯದ, ದೇಶದ ಯಾವ ವಿ.ವಿಯಲ್ಲಿಯೂ ಇಂತಹ ಮುಚ್ಚಳಿಕೆ ಪತ್ರ ಬರೆಸಿಕೊಳ್ಳುವುದಿಲ್ಲವೇನೋ? ಇಲ್ಲಿಯ ಅನ್ಯಾಯ ಅಕ್ರಮಗಳನ್ನು ವಿದ್ಯಾರ್ಥಿಗಳು ಪ್ರಶ್ನೆ ಮಾಡಬಾರದೆಂದು ಈ ರೀತಿ ಮುಚ್ಚಳಿಕೆ ಪತ್ರ ಬರೆಸಿಕೊಂಡು ವಿದ್ಯಾರ್ಥಿಗಳನ್ನು ಹೆದರಿಸಲಾಗುತ್ತಿದೆ. ಅವರ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ಪಿ.ಜಿ ಸೆಂಟರ್‌ನ ಆವರಣ

ಈ ವಿಚಾರದ ಕುರಿತು ನಾನುಗೌರಿ.ಕಾಂ ವತಿಯಿಂದ ರಾಯಚೂರು ವಿ.ವಿಯ ವಿಶೇಷಾಧಿಕಾರಿಗಳಾದ ಪ್ರೊ.ಮುಝಾಫರ್‌ ಅಸ್ಸಾದಿಯವರನ್ನು ಮಾತಾಡಿಸಲಾಯಿತು. “ಇಲ್ಲಿ ರಾಯಚೂರು ವಿಶ್ವವಿದ್ಯಾನಿಲಯವಾದರೆ ಮಾತ್ರ ಆ ಪಿ.ಜಿ ಸೆಂಟರ್‌ ನಮ್ಮ ವ್ಯಾಪ್ತಿಗೆ ಬರುತ್ತದೆ. ಸದ್ಯಕ್ಕೆ ಅದು ಗುಲಬರ್ಗಾ ವಿ.ವಿಯ ವ್ಯಾಪ್ತಿಯಲ್ಲಿದ್ದು ಅಲ್ಲಿ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಲು ನಮಗೆ ಅಧಿಕಾರವಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

ಆ ಪಿ.ಜಿ ಸೆಂಟರ್‌ನ ಕಾರ್ಯಾಧಿಕಾರಿಗಳಾದ ನುಶ್ರತ್‌ ರವರನ್ನು ಸಂಪರ್ಕಿಸಲು ಪ್ರಯತ್ನಿಸಿದರು ಕೂಡ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ.

ಇನ್ನು ವಿದ್ಯಾರ್ಥಿಗಳು ಬೆಳಿಗ್ಗೆಯಿಂದಲೇ ಪ್ರತಿಭಟನೆ ನಡೆಸಿದರೂ ಯಾವೊಬ್ಬ ಅಧಿಕಾರಿಯೂ ಅತ್ತ ಸುಳಿದಿಲ್ಲ. ವಿಷಯ ತಿಳಿದ ನಂತರ ರವಿ ಪಾಟೀಲ್‌ ಫೌಂಡೇಶನ್‌ನ ರವಿ ಪಾಟೀಲ್‌ರವರು ಸ್ಥಳಕ್ಕೆ ತೆರಳಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ್ದಾರೆ. ನಂತರವಷ್ಟೇ ತಹಶೀಲ್ದಾರ್‌ ಪಿ.ಜಿ ಸೆಂಟರ್‌ಗೆ ಭೇಟಿಕೊಟ್ಟು ಮನವಿ ಪತ್ರ ಸ್ವೀಕರಿಸಿದ್ದಾರೆ. ಮತ್ತೆ ಯಥಾಪ್ರಕಾರ ಇದನ್ನು ಉನ್ನತ ಅಧಿಕಾರಿಗಳ ಗಮನಕ್ಕೆ ತರುತ್ತೇವೆ ಎಂದು ಹೇಳಿ ಹೊರಟಿದ್ದಾರೆ.

ರಾಯಚೂರು ವಿಶ್ವವಿದ್ಯಾಲಯವಾಗುವುದೇ ಪರಿಹಾರದ ದಾರಿ: ರವಿ ಪಾಟೀಲ್‌

ಈ ಕುರಿತು ರವಿ ಪಾಟೀಲ್‌ರವರು ಮಾತನಾಡಿ, ಈ ಪಿ.ಜಿ ಸೆಂಟರ್‌ ಬಗ್ಗೆ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ. ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಹಲವಾರು ವಿದ್ಯಾರ್ಥಿಗಳು ಇಲ್ಲಿಗೆ ವಿದ್ಯಾಭ್ಯಾಸಕ್ಕಾಗಿ ಬಂದರೂ ಸಹ ಇಲ್ಲಿನ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಅನುದಾನ ಬಿಡುಗಡೆ ಆಗಿಲ್ಲ. ಇಲ್ಲಿಗೆ ಬರುವ ಇನ್‌ಚಾರ್ಜ್‌‌ಗಲು ಪ್ರತಿ ಮೂರು ತಿಂಗಳಿಗೊಮ್ಮೆ ಬದಲಾಗುತ್ತಿದ್ದಾರೆ. ಈಗ ಇರುವವರು ಸಹ ಡಿಸೆಂಬರ್‌ನಲ್ಲಿ ನಿವೃತ್ತಿಯಾಗುತ್ತಿದ್ದಾರೆ. ಈಗಾದರೆ ಈ ಪಿ.ಜಿ ಸೆಂಟರ್‌ ಉದ್ದಾರ ಆಗುವುದಾದರೂ ಹೇಗೆ ಎಂದು ಪ್ರಶ್ನಿಸಿದ್ದಾರೆ.

600 ಜನಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಇಲ್ಲ ಕೇವಲ 6 ಜನ ಮಾತ್ರ ಕಾಯಂ ಉಪನ್ಯಾಸಕರಿದ್ದಾರೆ. ಉಳಿದವರೆಲ್ಲಾ ಅಥಿತಿ ಉಪನ್ಯಾಸಕರಾಗಿರುವುದರಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಹಾಗಾಗಿ ಈ ತಿಂಗಳ 28 ರಂದು ಅಂತಿಮ ಮಾತುಕತೆ ನಡೆಸುತ್ತೇವೆ. ಆನಂತರ ಇದಕ್ಕಾಗಿ ಬೆಂಗಳೂರಿನಲ್ಲಿ ಒತ್ತಡ ತರುವ ಕೆಲಸ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಹೋರಾಟ ತೀವ್ರಗೊಳಿಸುತ್ತೇವೆ

ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಲಕ್ಷ್ಮಣ್‌ ಮಂಡಲಗೇರಾ ಮಾತನಾಡಿ, ಪಿ.ಜಿ ಸೆಂಟರ್‌ ಸಣ್ಣ ಪುಟ್ಟ ಸಮಸ್ಯೆಗಳೇ ಇದ್ದರೂ ಸಹ ಬಗೆಹರಿಯುತ್ತಿಲ್ಲ. ಇಲ್ಲಿ ಹೇಳುವವರು ಕೇಳುವವರು ಯಾರು ಇಲ್ಲ. ಈ ಭಾಗದ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಎಲ್ಲಾ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಹಾಗಾಗಿ ಹೋರಾಟವನ್ನು ತೀವ್ರಗೊಳಿಸಲು ತೀರ್ಮಾನಿಸಿದ್ದೇವೆ ಎಂದಿದ್ದಾರೆ.

ಆವರಣದ ತುಂಬಾ ಜಾಲಿ ಮರಗಳು

ರಾಯಚೂರು ವಿ.ವಿ ಆಗಬೇಕು ಎಂಬುದು ನಮ್ಮ ಬಹುದಿನದ ಬೇಡಿಕೆ. ಆದರೆ ಆ ಕಡತವನ್ನು ರಾಜ್ಯಪಾಲರು ಎರಡು ಬಾರಿ ಕಾರಣವಿಲ್ಲದೆ ತಿರಸ್ಕರಿದ್ದಾರೆ. ಈ ಪಿ.ಜಿ ಸೆಂಟರ್‌ ಗುಲಬರ್ಗಾ ವಿ.ವಿ ವ್ಯಾಪ್ತಿಗೆ ಬರಲಿದ್ದು, ಇಲ್ಲಿ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ. ರಾಯಚೂರು ನಗರದಿಂದ 15 ಕಿ.ಮಿ ದೂರದಲ್ಲಿದೆ. ಸಮರ್ಪಕ ಬಸ್‌ ವ್ಯವಸ್ಥೆ ಕೂಡ ಇಲ್ಲ. ಕಷ್ಟಪಟ್ಟು ಬಂದರೂ ಸಹ ನಿಗಧಿತವಾಗಿ ಕ್ಲಾಸ್‌ ನಡೆಯುವುದಿಲ್ಲ. ಇಲ್ಲಿ ಒಂದು ಝೆರಾಕ್ಸ್ ಅಂಗಡಿ ಸಹ ಇಲ್ಲ. ಇಲ್ಲಿನ ವಿಶೇಷ ಅಧಿಕಾರಿಗಳು ರಬ್ಬರ್‌ ಸ್ಟ್ಯಾಂಪ್‌ ರೀತಿ ವರ್ತಿಸುತ್ತಾರೆ. ನಾವು ಕಟ್ಟಿದ ಶುಲ್ಕಕ್ಕೆ ರಶೀದಿ ಸಹ ನೀಡದೆ ವಂಚನೆ ನಡೆಯುತ್ತಿದೆ. ಹಾಗಾಗಿ ಪ್ರತಿಭಟನೆ ನಮಗೆ ಅನಿವಾರ್ಯವಾಗಿದೆ

-ಮಲ್ಲನಗೌಡ, ಪ್ರಥಮ ಎಂ.ಎ, ರಾಜ್ಯಶಾಸ್ತ್ರ ವಿಭಾಗ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...