Homeಕರ್ನಾಟಕರಾಯಚೂರು ಪಿ.ಜಿ ಸೆಂಟರ್‌ನಲ್ಲಿ ಬೋರ್ಡ್‌, ಊಟದ ತಟ್ಟೆ, ಕುಡಿಯುವ ನೀರು ಸಹ ಇಲ್ಲ! : ಸಿಟ್ಟಿಗೆದ್ದ...

ರಾಯಚೂರು ಪಿ.ಜಿ ಸೆಂಟರ್‌ನಲ್ಲಿ ಬೋರ್ಡ್‌, ಊಟದ ತಟ್ಟೆ, ಕುಡಿಯುವ ನೀರು ಸಹ ಇಲ್ಲ! : ಸಿಟ್ಟಿಗೆದ್ದ ವಿದ್ಯಾರ್ಥಿಗಳಿಂದ ಧಿಡೀರ್‌ ಪ್ರತಿಭಟನೆ

600 ಜನಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಇಲ್ಲ ಕೇವಲ 6 ಜನ ಮಾತ್ರ ಕಾಯಂ ಉಪನ್ಯಾಸಕರಿದ್ದಾರೆ. ಉಳಿದವರೆಲ್ಲಾ ಅಥಿತಿ ಉಪನ್ಯಾಸಕರಾಗಿರುವುದರಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ

- Advertisement -
- Advertisement -

ಹೈದರಾಬಾದ್‌ ಕರ್ನಾಟಕದ ಹಿಂದುಳಿದ ಜಿಲ್ಲೆಗಳಲ್ಲಿ ಒಂದಾದ ರಾಯಚೂರಿನಲ್ಲಿ ಉತ್ತಮ ಶಿಕ್ಷಣ ಸಂಸ್ಥೆಗಳಿಲ್ಲ ಎನ್ನುವುದು ಹಲವಾರು ದಶಕಗಳ ಕೂಗು. ಹಲವು ವರ್ಷಗಳ ಹಿಂದೆ ಇಲ್ಲಿಗೊಂದು ಐಐಟಿ ಬರುತ್ತದೆ ಎಂದು ಆಸೆ ಹುಟ್ಟಿಸಿ ಕೊನೆಗೆ ಕೈಕೊಡಲಾಯ್ತು, ಐಐಟಿ ಧಾರವಾಡದ ಪಾಲಾಯ್ತು. ಹೋಗಲಿ ಈ ಜಿಲ್ಲೆಗೆ ಒಂದು ವಿವಿಯಾದರೂ ಇದೆಯೇ ಎಂದು ನೋಡಿದರೆ ರಾಯಚೂರಿನಲ್ಲಿ ವಿಶ್ವವಿದ್ಯಾನಿಲಯ ಸ್ಥಾಪಿಸಬೇಕೆಂದು ಮೂರ್‍ನಾಲ್ಕು ವರ್ಷಗಳಿಂದ ಚರ್ಚೆಗಳು ನಡೆದಿವೆಯೇ ಹೊರತು ಕಾರ್ಯರೂಪಕ್ಕೆ ಬಂದಿಲ್ಲ. ಇಷ್ಟೆಲ್ಲದರ ನಡುವೆ ಅಲ್ಲಿನ ವಿದ್ಯಾರ್ಥಿಗಳು ಸಮರ್ಪಕ ಶಿಕ್ಷಣ ಸಿಗದೇ ನರಳುತ್ತಿದ್ದಾರೆ. ಅಲ್ಲಿಯ ವಿದ್ಯಾರ್ಥಿಗಳ ಧಾರುಣ ಸ್ಥಿತಿ ಇಲ್ಲಿದೆ ನೋಡಿ.

ಬೋರ್ಡೇ ಇಲ್ಲದ ಕಗ್ಗಾಡಿನಲ್ಲೊಂದು ಪಿ.ಜಿ ಸೆಂಟರ್‌

ದೊಡ್ಡ ಜಿಲ್ಲೆ ರಾಯಚೂರಿನಲ್ಲಿ ಯರಗೇರಾ ಪಿ.ಜಿ ಸೆಂಟರ್‌ ಇದೆ. ಸದ್ಯಕ್ಕೆ ಪದವಿ ನಂತರ ಉನ್ನತ ಶಿಕ್ಷಣ ಪಡೆಯಲು ರಾಯಚೂರು ಸುತ್ತ ಇರುವ ವಿದ್ಯಾರ್ಥಿಗಳೆಲ್ಲಾ ಇಲ್ಲಿಗೆ ಬರಬೇಕು. ದುರಂತವೆಂದರೆ ಇಲ್ಲಿ ಪಿ.ಜಿ ಸೆಂಟರ್‌ ಇದೆ ಎಂದು ಗೊತ್ತಾಗಲು ಇರಬೇಕಾದ ಒಂದು ಬೋರ್ಡ್‌ ಕೂಡ ಇಲ್ಲ. ಸುತ್ತಲೂ ಜಾಲಿಗಿಡಗಳು ಬೆಳೆದುಕೊಂಡಿದ್ದು ದೊಡ್ಡ ಕೊಂಪೆಯಾಗಿ ಕಾಣಿಸುತ್ತದೆಯೇ ವಿನಾಃ ವಿಶ್ವವಿದ್ಯಾನಿಲಯವಿರಲಿ ಒಂದು ಕಾಲೇಜು ಕಂಡಂತೆ ಸಹ ಕಾಣುವುದಿಲ್ಲ.

ಈ ಪಿ.ಜಿ ಸೆಂಟರ್‌ನಲ್ಲಿ ಇಂದು ವಿದ್ಯಾರ್ಥಿಗಳ ಆಕ್ರೋಶದ ಕಟ್ಟೆಯೊಡದಿದೆ. ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕೈಬರಹದಲ್ಲಿ ಕೊಟ್ಟಿರುವ ಮನವಿ ಪತ್ರ ನೋಡಿದರೆ ಎಂತವರಿಗೂ ಕನಿಕರ ಹುಟ್ಟುತ್ತದೆ. ಪಿ.ಜಿ ಹಾಸ್ಟೆಲ್‌ನಲ್ಲಿ ಗಂಗಳದ ಸಮಸ್ಯೆ( ಊಟದ ತಟ್ಟೆ), ಶುದ್ದ ಕುಡಿಯುವ ನೀರು ಇಲ್ಲ. ಸಮರ್ಪಕ ಬಸ್‌ ಸೌಲಭ್ಯವಿಲ್ಲ. ಬರುವ ಬಸ್‌ಗಳು ಸಹ ಸರಿಯಾಗಿ ನಿಲ್ಲಿಸುವುದಿಲ್ಲ. ಬಸ್‌ ಸ್ಟ್ಯಾಂಡ್‌ನಿಂದ ಪಿ.ಜಿ ಯೊಳಗೆ ಹೋಗಬೇಕಾದರೆ ವಿದ್ಯುತ್‌ ದೀಪ ಇಲ್ಲ. ಕ್ರೀಡಾಂಗಣ, ಕ್ರೀಡಾ ಸಾಮಾಗ್ರಿಗಳು, ಜಿಮ್‌ ಯಾವುದೂ ಇಲ್ಲ. ಗ್ರಂಥಾಲಯದ ಪುಸ್ತಕಗಳಿಲ್ಲ, ದಿನಪತ್ರಿಕೆಗಳಿಲ್ಲ… ಹೇಳುತ್ತಾ ಹೋದರೆ ಸಮಸ್ಯೆಗಳು ಮುಗಿಯುವುದೇ ಇಲ್ಲ.

ಒಂದು ರೀತಿ ಕಾಡಿನಂತಿರುವ ಅಲ್ಲಿ ಹೆಣ್ಣು ಮಕ್ಕಳ ಹಾಸ್ಟೆಲ್‌ಗೂ ಕೂಡ ಯಾವುದೇ ಭದ್ರತೆಯಿಲ್ಲ. ಹಾಸ್ಟೆಲ್‌ ರೂಂಗಳಿಗೆ ಕಿಟಕಿ ಬಾಗಿಲುಗಳಿಲ್ಲ, ಸಮರ್ಪಕ ಚಿಲಕಗಳಿಲ್ಲ. ಹಾಸ್ಟೆಲ್‌ ಊಟ ನೀಡುವ ಜವಾಬ್ದಾರಿಯನ್ನು ಗುತ್ತಿಗೆ ನೀಡಲಾಗಿದ್ದು ಅವರು ಅದನ್ನು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ.. ಹೀಗೆ ಸಮಸ್ಯೆಗಳ ಪಟ್ಟಿ ಬೆಳೆಯುತ್ತಲೇ ಇದೆ.

 

ವಿದ್ಯಾರ್ಥಿಗಳು ಇಷ್ಟೆಲ್ಲಾ ಕಷ್ಟದ ನಡುವೆ ಹೇಗೆ ಓದುತ್ತಿದ್ದಾರೆ ಎಂದು ನೆನೆಸಿಕೊಂಡರೇ ಕಷ್ಟವಾಗುತ್ತದೆ. ಹಾಗಾಗಿ ಆ ವಿದ್ಯಾರ್ಥಿಗಳು ತಮ್ಮ ಹಕ್ಕೊತ್ತಾಯಗಳನ್ನು ಮುಂದಿಟ್ಟಿದ್ದಾರೆ. ಸಮರ್ಪಕವಾಗಿ ಸ್ಕಾಲರ್‌ಶಿಪ್‌ ನೀಡಬೇಕು. ಎಲ್ಲಾ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡಬೇಕು, ಇಂಟರ್‌ನೆಟ್‌ ಸಂಪರ್ಕ ಒದಗಿಸಬೇಕು. ವಿದ್ಯುತ್‌ ಕಡಿತದ ಸಮಸ್ಯೆಯಿರುವುದರಿಂದ ಜನರೇಟರ್‌ ಬೇಕು ಮತ್ತು ಮುಖ್ಯವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೂ ಸಹ ಹಾಸ್ಟೆಲ್‌ ಸೌಲಭ್ಯ ಸಿಗಬೇಕು.

ನಮಗೇನಾದರೂ ಅನಾಹುತವಾದರೆ ನಾವೇ ಹೊಣೆ!

ಈ ಪಿ.ಜಿ ಸೆಂಟರ್‌ನ ಹಾಸ್ಟೆಲ್‌ನಲ್ಲಿ ಒಂದಷ್ಟು ವಿದ್ಯಾರ್ಥಿನಿಯರು ಇದ್ದಾರೆ. ಯಾರಾದರೂ ಇಲ್ಲಿಗೆ ಸೇರಬೇಕಾದರೆ ಅವರೊಂದು ಮುಚ್ಚಳಿಕೆ ಪತ್ರವನ್ನು ಕಡ್ಡಾಯವಾಗಿ ಬರೆದುಕೊಡಬೇಕು. ಅದರಲ್ಲಿ  ನಮಗೇನಾದರೂ ಅನಾಹುತವಾದರೆ ನಾವೇ ಹೊಣೆ ಹೊರತು ಇಲ್ಲಿಯ ಆಡಳಿಯ ಮಂಡಳಿಯಲ್ಲ ಎಂದು! ರಾಜ್ಯದ, ದೇಶದ ಯಾವ ವಿ.ವಿಯಲ್ಲಿಯೂ ಇಂತಹ ಮುಚ್ಚಳಿಕೆ ಪತ್ರ ಬರೆಸಿಕೊಳ್ಳುವುದಿಲ್ಲವೇನೋ? ಇಲ್ಲಿಯ ಅನ್ಯಾಯ ಅಕ್ರಮಗಳನ್ನು ವಿದ್ಯಾರ್ಥಿಗಳು ಪ್ರಶ್ನೆ ಮಾಡಬಾರದೆಂದು ಈ ರೀತಿ ಮುಚ್ಚಳಿಕೆ ಪತ್ರ ಬರೆಸಿಕೊಂಡು ವಿದ್ಯಾರ್ಥಿಗಳನ್ನು ಹೆದರಿಸಲಾಗುತ್ತಿದೆ. ಅವರ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ಪಿ.ಜಿ ಸೆಂಟರ್‌ನ ಆವರಣ

ಈ ವಿಚಾರದ ಕುರಿತು ನಾನುಗೌರಿ.ಕಾಂ ವತಿಯಿಂದ ರಾಯಚೂರು ವಿ.ವಿಯ ವಿಶೇಷಾಧಿಕಾರಿಗಳಾದ ಪ್ರೊ.ಮುಝಾಫರ್‌ ಅಸ್ಸಾದಿಯವರನ್ನು ಮಾತಾಡಿಸಲಾಯಿತು. “ಇಲ್ಲಿ ರಾಯಚೂರು ವಿಶ್ವವಿದ್ಯಾನಿಲಯವಾದರೆ ಮಾತ್ರ ಆ ಪಿ.ಜಿ ಸೆಂಟರ್‌ ನಮ್ಮ ವ್ಯಾಪ್ತಿಗೆ ಬರುತ್ತದೆ. ಸದ್ಯಕ್ಕೆ ಅದು ಗುಲಬರ್ಗಾ ವಿ.ವಿಯ ವ್ಯಾಪ್ತಿಯಲ್ಲಿದ್ದು ಅಲ್ಲಿ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಲು ನಮಗೆ ಅಧಿಕಾರವಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

ಆ ಪಿ.ಜಿ ಸೆಂಟರ್‌ನ ಕಾರ್ಯಾಧಿಕಾರಿಗಳಾದ ನುಶ್ರತ್‌ ರವರನ್ನು ಸಂಪರ್ಕಿಸಲು ಪ್ರಯತ್ನಿಸಿದರು ಕೂಡ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ.

ಇನ್ನು ವಿದ್ಯಾರ್ಥಿಗಳು ಬೆಳಿಗ್ಗೆಯಿಂದಲೇ ಪ್ರತಿಭಟನೆ ನಡೆಸಿದರೂ ಯಾವೊಬ್ಬ ಅಧಿಕಾರಿಯೂ ಅತ್ತ ಸುಳಿದಿಲ್ಲ. ವಿಷಯ ತಿಳಿದ ನಂತರ ರವಿ ಪಾಟೀಲ್‌ ಫೌಂಡೇಶನ್‌ನ ರವಿ ಪಾಟೀಲ್‌ರವರು ಸ್ಥಳಕ್ಕೆ ತೆರಳಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ್ದಾರೆ. ನಂತರವಷ್ಟೇ ತಹಶೀಲ್ದಾರ್‌ ಪಿ.ಜಿ ಸೆಂಟರ್‌ಗೆ ಭೇಟಿಕೊಟ್ಟು ಮನವಿ ಪತ್ರ ಸ್ವೀಕರಿಸಿದ್ದಾರೆ. ಮತ್ತೆ ಯಥಾಪ್ರಕಾರ ಇದನ್ನು ಉನ್ನತ ಅಧಿಕಾರಿಗಳ ಗಮನಕ್ಕೆ ತರುತ್ತೇವೆ ಎಂದು ಹೇಳಿ ಹೊರಟಿದ್ದಾರೆ.

ರಾಯಚೂರು ವಿಶ್ವವಿದ್ಯಾಲಯವಾಗುವುದೇ ಪರಿಹಾರದ ದಾರಿ: ರವಿ ಪಾಟೀಲ್‌

ಈ ಕುರಿತು ರವಿ ಪಾಟೀಲ್‌ರವರು ಮಾತನಾಡಿ, ಈ ಪಿ.ಜಿ ಸೆಂಟರ್‌ ಬಗ್ಗೆ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ. ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಹಲವಾರು ವಿದ್ಯಾರ್ಥಿಗಳು ಇಲ್ಲಿಗೆ ವಿದ್ಯಾಭ್ಯಾಸಕ್ಕಾಗಿ ಬಂದರೂ ಸಹ ಇಲ್ಲಿನ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಅನುದಾನ ಬಿಡುಗಡೆ ಆಗಿಲ್ಲ. ಇಲ್ಲಿಗೆ ಬರುವ ಇನ್‌ಚಾರ್ಜ್‌‌ಗಲು ಪ್ರತಿ ಮೂರು ತಿಂಗಳಿಗೊಮ್ಮೆ ಬದಲಾಗುತ್ತಿದ್ದಾರೆ. ಈಗ ಇರುವವರು ಸಹ ಡಿಸೆಂಬರ್‌ನಲ್ಲಿ ನಿವೃತ್ತಿಯಾಗುತ್ತಿದ್ದಾರೆ. ಈಗಾದರೆ ಈ ಪಿ.ಜಿ ಸೆಂಟರ್‌ ಉದ್ದಾರ ಆಗುವುದಾದರೂ ಹೇಗೆ ಎಂದು ಪ್ರಶ್ನಿಸಿದ್ದಾರೆ.

600 ಜನಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಇಲ್ಲ ಕೇವಲ 6 ಜನ ಮಾತ್ರ ಕಾಯಂ ಉಪನ್ಯಾಸಕರಿದ್ದಾರೆ. ಉಳಿದವರೆಲ್ಲಾ ಅಥಿತಿ ಉಪನ್ಯಾಸಕರಾಗಿರುವುದರಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಹಾಗಾಗಿ ಈ ತಿಂಗಳ 28 ರಂದು ಅಂತಿಮ ಮಾತುಕತೆ ನಡೆಸುತ್ತೇವೆ. ಆನಂತರ ಇದಕ್ಕಾಗಿ ಬೆಂಗಳೂರಿನಲ್ಲಿ ಒತ್ತಡ ತರುವ ಕೆಲಸ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಹೋರಾಟ ತೀವ್ರಗೊಳಿಸುತ್ತೇವೆ

ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಲಕ್ಷ್ಮಣ್‌ ಮಂಡಲಗೇರಾ ಮಾತನಾಡಿ, ಪಿ.ಜಿ ಸೆಂಟರ್‌ ಸಣ್ಣ ಪುಟ್ಟ ಸಮಸ್ಯೆಗಳೇ ಇದ್ದರೂ ಸಹ ಬಗೆಹರಿಯುತ್ತಿಲ್ಲ. ಇಲ್ಲಿ ಹೇಳುವವರು ಕೇಳುವವರು ಯಾರು ಇಲ್ಲ. ಈ ಭಾಗದ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಎಲ್ಲಾ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಹಾಗಾಗಿ ಹೋರಾಟವನ್ನು ತೀವ್ರಗೊಳಿಸಲು ತೀರ್ಮಾನಿಸಿದ್ದೇವೆ ಎಂದಿದ್ದಾರೆ.

ಆವರಣದ ತುಂಬಾ ಜಾಲಿ ಮರಗಳು

ರಾಯಚೂರು ವಿ.ವಿ ಆಗಬೇಕು ಎಂಬುದು ನಮ್ಮ ಬಹುದಿನದ ಬೇಡಿಕೆ. ಆದರೆ ಆ ಕಡತವನ್ನು ರಾಜ್ಯಪಾಲರು ಎರಡು ಬಾರಿ ಕಾರಣವಿಲ್ಲದೆ ತಿರಸ್ಕರಿದ್ದಾರೆ. ಈ ಪಿ.ಜಿ ಸೆಂಟರ್‌ ಗುಲಬರ್ಗಾ ವಿ.ವಿ ವ್ಯಾಪ್ತಿಗೆ ಬರಲಿದ್ದು, ಇಲ್ಲಿ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ. ರಾಯಚೂರು ನಗರದಿಂದ 15 ಕಿ.ಮಿ ದೂರದಲ್ಲಿದೆ. ಸಮರ್ಪಕ ಬಸ್‌ ವ್ಯವಸ್ಥೆ ಕೂಡ ಇಲ್ಲ. ಕಷ್ಟಪಟ್ಟು ಬಂದರೂ ಸಹ ನಿಗಧಿತವಾಗಿ ಕ್ಲಾಸ್‌ ನಡೆಯುವುದಿಲ್ಲ. ಇಲ್ಲಿ ಒಂದು ಝೆರಾಕ್ಸ್ ಅಂಗಡಿ ಸಹ ಇಲ್ಲ. ಇಲ್ಲಿನ ವಿಶೇಷ ಅಧಿಕಾರಿಗಳು ರಬ್ಬರ್‌ ಸ್ಟ್ಯಾಂಪ್‌ ರೀತಿ ವರ್ತಿಸುತ್ತಾರೆ. ನಾವು ಕಟ್ಟಿದ ಶುಲ್ಕಕ್ಕೆ ರಶೀದಿ ಸಹ ನೀಡದೆ ವಂಚನೆ ನಡೆಯುತ್ತಿದೆ. ಹಾಗಾಗಿ ಪ್ರತಿಭಟನೆ ನಮಗೆ ಅನಿವಾರ್ಯವಾಗಿದೆ

-ಮಲ್ಲನಗೌಡ, ಪ್ರಥಮ ಎಂ.ಎ, ರಾಜ್ಯಶಾಸ್ತ್ರ ವಿಭಾಗ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...