HomeUncategorizedಬಡ ಭೀಮಣ್ಣನ ಮೇಲೆ ರಾಯಚೂರು ಪೊಲೀಸರ ಸವಾರಿ...

ಬಡ ಭೀಮಣ್ಣನ ಮೇಲೆ ರಾಯಚೂರು ಪೊಲೀಸರ ಸವಾರಿ…

- Advertisement -
- Advertisement -

| ಸೋಮಶೇಖರ್ ಚಲ್ಯ |

ರಾಯಚೂರಿನ ಸುರಕ್ಷಾ ಆಸ್ಪತ್ರೆಯ ಹಾಸಿಗೆಯ ಮೇಲೆ ಮಲಗಿರುವ ಈ ಯುವಕನ ಹೆಸರು ಭೀಮಣ್ಣ. ಇಪ್ಪತ್ನಾಲ್ಕನೇ ವಯಸ್ಸಿನ ಈತನೇ ಇವನ ಕುಟುಂಬದ ಆಧಾರ ಸ್ತಂಭ. ಇರೋ ನಾಲ್ಕು ಎಕರೆ ಒಣಭೂಮಿಯಲ್ಲಿ ಒಂದಷ್ಟು ದವಸ ಧಾನ್ಯ ಬೆಳೆದುಕೊಂಡು, ಕೆಲಸ ಇಲ್ಲದ ಸಮಯದಲ್ಲಿ ಕೂಲಿನಾಲಿ ಮಾಡುತ್ತಾ ಜೀವನ ಸಾಗಿಸುತ್ತಿರುವ ಕುಟುಂಬ ಈತನದು.

ಐದು ತಿಂಗಳ ಹಿಂದೆ ಹುಟ್ಟಿದ ಎರಡನೇ ಮಗು ಸಮಸ್ಯೆಯೊಂದಿಗೇ ಹುಟ್ಟಿತು. ಖಾಸಗಿ ಆಸ್ಪತ್ರೆಯಲ್ಲಿ ಎಷ್ಟೇ ಖರ್ಚು ಮಾಡಿದರೂ ಮಗು ಉಳಿಯಲಿಲ್ಲ. ಇದಾದ ಕೆಲವೇ ದಿನಗಳಲ್ಲಿ ಆತನ ತಂದೆಯೂ ತೀರಿಕೊಂಡರು. ಆಸ್ಪತ್ರೆ, ಮಗು ಮತ್ತು ತಂದೆಯ ಸಂಸ್ಕಾರಕ್ಕಾಗಿ ಹೆಚ್ಚು ಸಾಲದ ಹೊರೆ ಹೆಚ್ಚಾಗಿತ್ತು. ಶವಸಂಸ್ಕಾರದ ನಂತರದ ಕಾರ್ಯಗಳಿಗಾಗಿ ಭೀಮಣ್ಣ ಹುಲಿಗೆಮ್ಮ ಮತ್ತು ಆಕೆಯ ಗಂಡ ಬಾರ್ ಆಂಜನೇಯನಿಂದ ಮೂರು ಸಾವಿರ ರೂಪಾಯಿಗಳನ್ನು ಸಾಲ ಪಡೆದಿದ್ದ.

ಅದಾದ ಕೆಲವು ದಿನಗಳ ನಂತರ ತಮ್ಮ ಮನೆಯಲ್ಲಿ 55,000 ರೂಪಾಯಿ ಕಳ್ಳತನವಾಗಿದೆ, ಕದ್ದಿರುವುದು ಭೀಮಣ್ಣನೇ ಇರಬೇಕೆಂಬ ಅನುಮಾನ ಆತನ ಮೇಲೆ ಇಡಪನೂರು ಪೊಲೀಸ್ ಸ್ಟೇಷನ್‍ನಲ್ಲಿ ದೂರು ನೀಡಿದರು. ಪೊಲೀಸರು ವಿಚಾರಣೆಗಾಗಿ ಕರೆದಾಗ ಬೀಮಣ್ಣನ ಜೊತೆ ಹೋದ ಊರಿನ ಜನರು ಆತ ಹಣ ಕದ್ದಿಲ್ಲ. ನಾವು ಈ ವಿಷಯವನ್ನು ಊರಿನಲ್ಲೇ ಬಗೆಹರಿಸಿಕೊಳ್ಳುತ್ತೇವೆಂದು ಹೇಳಿ ಬಂದಿದ್ದಾರೆ. ಇದನ್ನು ನಿರಾಕರಿಸಿದ ಬಾರ್ ಆಂಜನೇಯ ಮತ್ತೆ ಅದೇ ಪೊಲೀಸರಿಗೆ ದೂರು ನೀಡಿದ್ದಾನೆ.

ಭೀಮಣ್ಣನನ್ನು ವಿಚಾರಣೆ ನಡೆಸಿ ವಾಪಸ್ ಕಳಿಸುವುದಾಗಿ ಹೇಳಿ ಆತನನ್ನು ಎತ್ತಾಕಿಕೊಂಡು ಹೋದ ಪೊಲೀಸರು ಮನಸೋಯಿಚ್ಛೆ ಹೊಡೆದಿದ್ದಾರೆ. ಭೀಮಣ್ಣ ತಾನು ಯಾವ ತಪ್ಪನ್ನೂ ಮಾಡಿಲ್ಲ, ತಾನು ಹಣವನ್ನು ಕದ್ದಿಲ್ಲ. ನೀವು ಹೀಗೆ ಹೊಡೆದರೆ ಸತ್ತು ಹೋಗುತ್ತೇನೆ. ನನ್ನ ಹೆಂಡತಿ, ಮಗು, ಅಮ್ಮನನ್ನು ಯಾರು ಸಾಕ್ತಾರೆ?” ಅಂತೆಲ್ಲಾ ಗೋಗರೆದರೂ ಕರಗದ ಪೊಲೀಸರು ಆತನಿಗೆ ಮತ್ತಷ್ಟು ಚಿತ್ರಹಿಂಸೆ ನೀಡಿದ್ದಾರೆ. ಹಿಂಸೆ ತಾಳಲಾರದೆ ಭೀಮಣ್ಣ ಕಣ್ಣು ಮಂಜಾಗಿ ಕುಸಿದು ಬಿದ್ದಿದ್ದಾನೆ. ಇದನ್ನ ನೋಡಿ ಗಾಬರಿಗೊಂಡ ಪೊಲೀಸರು ಭೀಮಣ್ಣ ಲಾಕಪ್ಪಿನಲ್ಲೇ ಸತ್ತರೆ ತಾವು ತೊಂದರೆಗೆ ಸಿಲುಕಿಕೊಳ್ಳುತ್ತೇವೆಂದು ಸ್ಟೇಷನ್ನಿನಿಂದ ದೂರ ಕಳಿಸಿದ್ದ ಭೀಮಣ್ಣನ ನಾಲ್ವರು ಸಂಬಂಧಿಗಳ ಕೈಗೆ ಭೀಮಣ್ಣನನ್ನು ಒಪ್ಪಿಸಿ, “ಇವನನ್ನು ಸೀದಾ ಊರಿಗೆ ಕರೆದುಕೊಂಡು ಹೋಗಿ. ಅಲ್ಲಿ-ಇಲ್ಲಿ ಹೋಗಿ ನಮ್ಮ ವಿರುದ್ಧ ಏನಾದರೂ ಮಾತಾಡಿದರೆ ಮತ್ತೆ ಅವನನ್ನು ಎತ್ತಾಕಿಕೊಂಡು ಬಂದು ಇವತ್ತು ಮಾಡಿದ್ದರ ಹತ್ತು ಪಟ್ಟು ಮಾಡಿ, ಅವನನ್ನು ಕೊಂದು ಹೆಣ ಕೂಡ ಸಿಗದಂತೆ ಬಿಸಾಕುತ್ತೇವೆ,” ಎಂದು ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಡಾಕೇಶ ಹೆದರಿಸಿದ್ದಾನೆ.

ಚಿಂತಾಜನಕಸ್ಥಿತಿಯಲ್ಲಿದ್ದ ಭೀಮಣ್ಣನನ್ನು ರಾಯಚೂರಿನ ಸುರಕ್ಷಾ ಎಂಬ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಅಲ್ಲಿಗೆ ಬಂದ ಇಡಪನೂರು ಪೊಲೀಸರು ಮೇಲಧಿಕಾರಿಗಳಿಗೆ, ಸರ್ಕಾರಕ್ಕೆ ಈ ಕುರಿತು ಕಂಪ್ಲೇಂಟ್ ಕೊಡಬಾರದೆಂದು ಭೀಮಣ್ಣ ಮತ್ತು ಆತನ ಕುಟುಂಬದವರಿಗೆ ಖಾಸಗಿ ಆಸ್ಪತ್ರೆಗೆ ಸೇರಿದ್ದೀರಾ, ಆಸ್ಪತ್ರೆಯ ಖರ್ಚನ್ನೆಲ್ಲಾ ನಾವು ನೋಡಿಕೊಳ್ಳುತ್ತೇವೆಂದು ಆಮಿಷವನ್ನೂ, ಇದನ್ನು ದೊಡ್ಡ ಇಶ್ಯೂ ಮಾಡಿದರೆ ಮುಂದೆಯೂ ಇಂತಹ ಹಿಂಸೆಗಳನ್ನು ಅನುಭವಿಸಬೇಕಾಗುತ್ತದೆಂದು ಬೆದರಿಕೆಯನ್ನೂ ಒಡ್ಡಿದ್ದಾರೆ.

“ಸಾರ್, ನಾವು ಬಡವರು. ದುಡಿದು ತಿನ್ನುವ ಮಂದಿ. ಏನೂ ತಪ್ಪು ಮಾಡದಿದ್ದರೂ ಈ ಪೊಲೀಸರು ನನಗೆ ಕಳ್ಳತನದ ಹಣೆಪಟ್ಟಿ ಕಟ್ಟಿ ಚಿತ್ರಹಿಂಸೆ ಕೊಟ್ಟರು. ಸತ್ತೇ ಹೋಗುತ್ತೇನೆ ಎಂದುಕೊಂಡಿದ್ದೆ. ಹೇಗೋ ಬದುಕಿಬಿಟ್ಟೆ. ತಪ್ಪು ಮಾಡದಿದ್ದ ನನಗೆ ಚಿತ್ರಹಿಂಸೆ ಕೊಟ್ಟ ಪೊಲೀಸರನ್ನು ಸುಮ್ಮನೇ ಬಿಡಬಾರದು ಅನ್ನಿಸುತ್ತೆ. ಆದರೆ, ನಾವು ಬಡವರು. ಪೊಲೀಸರನ್ನು ಎದುರುಹಾಕಿಕೊಂಡರೆ ಮತ್ತೆ ನಾಳೆ ಯಾವ್ಯಾವುದೋ ಕೇಸು ಹಾಕಿ ಠಾಣೆಗೆ ಕರೆತಂದು ಚಿತ್ರಹಿಂಸೆ ಕೊಡಬಹುದು ಅಂತ ಹೆದರಿಕೆಯಾಗುತ್ತದೆ. ಅದಕ್ಕೆ ಸುಮ್ಮನಾಗಿದ್ದೇವೆ” ಎಂದು ತನ್ನ ಅಸಹಾಯಕತೆಗೆ ಬೇಸರ ವ್ಯಕ್ತಪಡಿಸಿದ ಭೀಮಣ್ಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...