HomeUncategorizedಬಡ ಭೀಮಣ್ಣನ ಮೇಲೆ ರಾಯಚೂರು ಪೊಲೀಸರ ಸವಾರಿ...

ಬಡ ಭೀಮಣ್ಣನ ಮೇಲೆ ರಾಯಚೂರು ಪೊಲೀಸರ ಸವಾರಿ…

- Advertisement -
- Advertisement -

| ಸೋಮಶೇಖರ್ ಚಲ್ಯ |

ರಾಯಚೂರಿನ ಸುರಕ್ಷಾ ಆಸ್ಪತ್ರೆಯ ಹಾಸಿಗೆಯ ಮೇಲೆ ಮಲಗಿರುವ ಈ ಯುವಕನ ಹೆಸರು ಭೀಮಣ್ಣ. ಇಪ್ಪತ್ನಾಲ್ಕನೇ ವಯಸ್ಸಿನ ಈತನೇ ಇವನ ಕುಟುಂಬದ ಆಧಾರ ಸ್ತಂಭ. ಇರೋ ನಾಲ್ಕು ಎಕರೆ ಒಣಭೂಮಿಯಲ್ಲಿ ಒಂದಷ್ಟು ದವಸ ಧಾನ್ಯ ಬೆಳೆದುಕೊಂಡು, ಕೆಲಸ ಇಲ್ಲದ ಸಮಯದಲ್ಲಿ ಕೂಲಿನಾಲಿ ಮಾಡುತ್ತಾ ಜೀವನ ಸಾಗಿಸುತ್ತಿರುವ ಕುಟುಂಬ ಈತನದು.

ಐದು ತಿಂಗಳ ಹಿಂದೆ ಹುಟ್ಟಿದ ಎರಡನೇ ಮಗು ಸಮಸ್ಯೆಯೊಂದಿಗೇ ಹುಟ್ಟಿತು. ಖಾಸಗಿ ಆಸ್ಪತ್ರೆಯಲ್ಲಿ ಎಷ್ಟೇ ಖರ್ಚು ಮಾಡಿದರೂ ಮಗು ಉಳಿಯಲಿಲ್ಲ. ಇದಾದ ಕೆಲವೇ ದಿನಗಳಲ್ಲಿ ಆತನ ತಂದೆಯೂ ತೀರಿಕೊಂಡರು. ಆಸ್ಪತ್ರೆ, ಮಗು ಮತ್ತು ತಂದೆಯ ಸಂಸ್ಕಾರಕ್ಕಾಗಿ ಹೆಚ್ಚು ಸಾಲದ ಹೊರೆ ಹೆಚ್ಚಾಗಿತ್ತು. ಶವಸಂಸ್ಕಾರದ ನಂತರದ ಕಾರ್ಯಗಳಿಗಾಗಿ ಭೀಮಣ್ಣ ಹುಲಿಗೆಮ್ಮ ಮತ್ತು ಆಕೆಯ ಗಂಡ ಬಾರ್ ಆಂಜನೇಯನಿಂದ ಮೂರು ಸಾವಿರ ರೂಪಾಯಿಗಳನ್ನು ಸಾಲ ಪಡೆದಿದ್ದ.

ಅದಾದ ಕೆಲವು ದಿನಗಳ ನಂತರ ತಮ್ಮ ಮನೆಯಲ್ಲಿ 55,000 ರೂಪಾಯಿ ಕಳ್ಳತನವಾಗಿದೆ, ಕದ್ದಿರುವುದು ಭೀಮಣ್ಣನೇ ಇರಬೇಕೆಂಬ ಅನುಮಾನ ಆತನ ಮೇಲೆ ಇಡಪನೂರು ಪೊಲೀಸ್ ಸ್ಟೇಷನ್‍ನಲ್ಲಿ ದೂರು ನೀಡಿದರು. ಪೊಲೀಸರು ವಿಚಾರಣೆಗಾಗಿ ಕರೆದಾಗ ಬೀಮಣ್ಣನ ಜೊತೆ ಹೋದ ಊರಿನ ಜನರು ಆತ ಹಣ ಕದ್ದಿಲ್ಲ. ನಾವು ಈ ವಿಷಯವನ್ನು ಊರಿನಲ್ಲೇ ಬಗೆಹರಿಸಿಕೊಳ್ಳುತ್ತೇವೆಂದು ಹೇಳಿ ಬಂದಿದ್ದಾರೆ. ಇದನ್ನು ನಿರಾಕರಿಸಿದ ಬಾರ್ ಆಂಜನೇಯ ಮತ್ತೆ ಅದೇ ಪೊಲೀಸರಿಗೆ ದೂರು ನೀಡಿದ್ದಾನೆ.

ಭೀಮಣ್ಣನನ್ನು ವಿಚಾರಣೆ ನಡೆಸಿ ವಾಪಸ್ ಕಳಿಸುವುದಾಗಿ ಹೇಳಿ ಆತನನ್ನು ಎತ್ತಾಕಿಕೊಂಡು ಹೋದ ಪೊಲೀಸರು ಮನಸೋಯಿಚ್ಛೆ ಹೊಡೆದಿದ್ದಾರೆ. ಭೀಮಣ್ಣ ತಾನು ಯಾವ ತಪ್ಪನ್ನೂ ಮಾಡಿಲ್ಲ, ತಾನು ಹಣವನ್ನು ಕದ್ದಿಲ್ಲ. ನೀವು ಹೀಗೆ ಹೊಡೆದರೆ ಸತ್ತು ಹೋಗುತ್ತೇನೆ. ನನ್ನ ಹೆಂಡತಿ, ಮಗು, ಅಮ್ಮನನ್ನು ಯಾರು ಸಾಕ್ತಾರೆ?” ಅಂತೆಲ್ಲಾ ಗೋಗರೆದರೂ ಕರಗದ ಪೊಲೀಸರು ಆತನಿಗೆ ಮತ್ತಷ್ಟು ಚಿತ್ರಹಿಂಸೆ ನೀಡಿದ್ದಾರೆ. ಹಿಂಸೆ ತಾಳಲಾರದೆ ಭೀಮಣ್ಣ ಕಣ್ಣು ಮಂಜಾಗಿ ಕುಸಿದು ಬಿದ್ದಿದ್ದಾನೆ. ಇದನ್ನ ನೋಡಿ ಗಾಬರಿಗೊಂಡ ಪೊಲೀಸರು ಭೀಮಣ್ಣ ಲಾಕಪ್ಪಿನಲ್ಲೇ ಸತ್ತರೆ ತಾವು ತೊಂದರೆಗೆ ಸಿಲುಕಿಕೊಳ್ಳುತ್ತೇವೆಂದು ಸ್ಟೇಷನ್ನಿನಿಂದ ದೂರ ಕಳಿಸಿದ್ದ ಭೀಮಣ್ಣನ ನಾಲ್ವರು ಸಂಬಂಧಿಗಳ ಕೈಗೆ ಭೀಮಣ್ಣನನ್ನು ಒಪ್ಪಿಸಿ, “ಇವನನ್ನು ಸೀದಾ ಊರಿಗೆ ಕರೆದುಕೊಂಡು ಹೋಗಿ. ಅಲ್ಲಿ-ಇಲ್ಲಿ ಹೋಗಿ ನಮ್ಮ ವಿರುದ್ಧ ಏನಾದರೂ ಮಾತಾಡಿದರೆ ಮತ್ತೆ ಅವನನ್ನು ಎತ್ತಾಕಿಕೊಂಡು ಬಂದು ಇವತ್ತು ಮಾಡಿದ್ದರ ಹತ್ತು ಪಟ್ಟು ಮಾಡಿ, ಅವನನ್ನು ಕೊಂದು ಹೆಣ ಕೂಡ ಸಿಗದಂತೆ ಬಿಸಾಕುತ್ತೇವೆ,” ಎಂದು ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಡಾಕೇಶ ಹೆದರಿಸಿದ್ದಾನೆ.

ಚಿಂತಾಜನಕಸ್ಥಿತಿಯಲ್ಲಿದ್ದ ಭೀಮಣ್ಣನನ್ನು ರಾಯಚೂರಿನ ಸುರಕ್ಷಾ ಎಂಬ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಅಲ್ಲಿಗೆ ಬಂದ ಇಡಪನೂರು ಪೊಲೀಸರು ಮೇಲಧಿಕಾರಿಗಳಿಗೆ, ಸರ್ಕಾರಕ್ಕೆ ಈ ಕುರಿತು ಕಂಪ್ಲೇಂಟ್ ಕೊಡಬಾರದೆಂದು ಭೀಮಣ್ಣ ಮತ್ತು ಆತನ ಕುಟುಂಬದವರಿಗೆ ಖಾಸಗಿ ಆಸ್ಪತ್ರೆಗೆ ಸೇರಿದ್ದೀರಾ, ಆಸ್ಪತ್ರೆಯ ಖರ್ಚನ್ನೆಲ್ಲಾ ನಾವು ನೋಡಿಕೊಳ್ಳುತ್ತೇವೆಂದು ಆಮಿಷವನ್ನೂ, ಇದನ್ನು ದೊಡ್ಡ ಇಶ್ಯೂ ಮಾಡಿದರೆ ಮುಂದೆಯೂ ಇಂತಹ ಹಿಂಸೆಗಳನ್ನು ಅನುಭವಿಸಬೇಕಾಗುತ್ತದೆಂದು ಬೆದರಿಕೆಯನ್ನೂ ಒಡ್ಡಿದ್ದಾರೆ.

“ಸಾರ್, ನಾವು ಬಡವರು. ದುಡಿದು ತಿನ್ನುವ ಮಂದಿ. ಏನೂ ತಪ್ಪು ಮಾಡದಿದ್ದರೂ ಈ ಪೊಲೀಸರು ನನಗೆ ಕಳ್ಳತನದ ಹಣೆಪಟ್ಟಿ ಕಟ್ಟಿ ಚಿತ್ರಹಿಂಸೆ ಕೊಟ್ಟರು. ಸತ್ತೇ ಹೋಗುತ್ತೇನೆ ಎಂದುಕೊಂಡಿದ್ದೆ. ಹೇಗೋ ಬದುಕಿಬಿಟ್ಟೆ. ತಪ್ಪು ಮಾಡದಿದ್ದ ನನಗೆ ಚಿತ್ರಹಿಂಸೆ ಕೊಟ್ಟ ಪೊಲೀಸರನ್ನು ಸುಮ್ಮನೇ ಬಿಡಬಾರದು ಅನ್ನಿಸುತ್ತೆ. ಆದರೆ, ನಾವು ಬಡವರು. ಪೊಲೀಸರನ್ನು ಎದುರುಹಾಕಿಕೊಂಡರೆ ಮತ್ತೆ ನಾಳೆ ಯಾವ್ಯಾವುದೋ ಕೇಸು ಹಾಕಿ ಠಾಣೆಗೆ ಕರೆತಂದು ಚಿತ್ರಹಿಂಸೆ ಕೊಡಬಹುದು ಅಂತ ಹೆದರಿಕೆಯಾಗುತ್ತದೆ. ಅದಕ್ಕೆ ಸುಮ್ಮನಾಗಿದ್ದೇವೆ” ಎಂದು ತನ್ನ ಅಸಹಾಯಕತೆಗೆ ಬೇಸರ ವ್ಯಕ್ತಪಡಿಸಿದ ಭೀಮಣ್ಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...