HomeUncategorizedಬಡ ಭೀಮಣ್ಣನ ಮೇಲೆ ರಾಯಚೂರು ಪೊಲೀಸರ ಸವಾರಿ...

ಬಡ ಭೀಮಣ್ಣನ ಮೇಲೆ ರಾಯಚೂರು ಪೊಲೀಸರ ಸವಾರಿ…

- Advertisement -
- Advertisement -

| ಸೋಮಶೇಖರ್ ಚಲ್ಯ |

ರಾಯಚೂರಿನ ಸುರಕ್ಷಾ ಆಸ್ಪತ್ರೆಯ ಹಾಸಿಗೆಯ ಮೇಲೆ ಮಲಗಿರುವ ಈ ಯುವಕನ ಹೆಸರು ಭೀಮಣ್ಣ. ಇಪ್ಪತ್ನಾಲ್ಕನೇ ವಯಸ್ಸಿನ ಈತನೇ ಇವನ ಕುಟುಂಬದ ಆಧಾರ ಸ್ತಂಭ. ಇರೋ ನಾಲ್ಕು ಎಕರೆ ಒಣಭೂಮಿಯಲ್ಲಿ ಒಂದಷ್ಟು ದವಸ ಧಾನ್ಯ ಬೆಳೆದುಕೊಂಡು, ಕೆಲಸ ಇಲ್ಲದ ಸಮಯದಲ್ಲಿ ಕೂಲಿನಾಲಿ ಮಾಡುತ್ತಾ ಜೀವನ ಸಾಗಿಸುತ್ತಿರುವ ಕುಟುಂಬ ಈತನದು.

ಐದು ತಿಂಗಳ ಹಿಂದೆ ಹುಟ್ಟಿದ ಎರಡನೇ ಮಗು ಸಮಸ್ಯೆಯೊಂದಿಗೇ ಹುಟ್ಟಿತು. ಖಾಸಗಿ ಆಸ್ಪತ್ರೆಯಲ್ಲಿ ಎಷ್ಟೇ ಖರ್ಚು ಮಾಡಿದರೂ ಮಗು ಉಳಿಯಲಿಲ್ಲ. ಇದಾದ ಕೆಲವೇ ದಿನಗಳಲ್ಲಿ ಆತನ ತಂದೆಯೂ ತೀರಿಕೊಂಡರು. ಆಸ್ಪತ್ರೆ, ಮಗು ಮತ್ತು ತಂದೆಯ ಸಂಸ್ಕಾರಕ್ಕಾಗಿ ಹೆಚ್ಚು ಸಾಲದ ಹೊರೆ ಹೆಚ್ಚಾಗಿತ್ತು. ಶವಸಂಸ್ಕಾರದ ನಂತರದ ಕಾರ್ಯಗಳಿಗಾಗಿ ಭೀಮಣ್ಣ ಹುಲಿಗೆಮ್ಮ ಮತ್ತು ಆಕೆಯ ಗಂಡ ಬಾರ್ ಆಂಜನೇಯನಿಂದ ಮೂರು ಸಾವಿರ ರೂಪಾಯಿಗಳನ್ನು ಸಾಲ ಪಡೆದಿದ್ದ.

ಅದಾದ ಕೆಲವು ದಿನಗಳ ನಂತರ ತಮ್ಮ ಮನೆಯಲ್ಲಿ 55,000 ರೂಪಾಯಿ ಕಳ್ಳತನವಾಗಿದೆ, ಕದ್ದಿರುವುದು ಭೀಮಣ್ಣನೇ ಇರಬೇಕೆಂಬ ಅನುಮಾನ ಆತನ ಮೇಲೆ ಇಡಪನೂರು ಪೊಲೀಸ್ ಸ್ಟೇಷನ್‍ನಲ್ಲಿ ದೂರು ನೀಡಿದರು. ಪೊಲೀಸರು ವಿಚಾರಣೆಗಾಗಿ ಕರೆದಾಗ ಬೀಮಣ್ಣನ ಜೊತೆ ಹೋದ ಊರಿನ ಜನರು ಆತ ಹಣ ಕದ್ದಿಲ್ಲ. ನಾವು ಈ ವಿಷಯವನ್ನು ಊರಿನಲ್ಲೇ ಬಗೆಹರಿಸಿಕೊಳ್ಳುತ್ತೇವೆಂದು ಹೇಳಿ ಬಂದಿದ್ದಾರೆ. ಇದನ್ನು ನಿರಾಕರಿಸಿದ ಬಾರ್ ಆಂಜನೇಯ ಮತ್ತೆ ಅದೇ ಪೊಲೀಸರಿಗೆ ದೂರು ನೀಡಿದ್ದಾನೆ.

ಭೀಮಣ್ಣನನ್ನು ವಿಚಾರಣೆ ನಡೆಸಿ ವಾಪಸ್ ಕಳಿಸುವುದಾಗಿ ಹೇಳಿ ಆತನನ್ನು ಎತ್ತಾಕಿಕೊಂಡು ಹೋದ ಪೊಲೀಸರು ಮನಸೋಯಿಚ್ಛೆ ಹೊಡೆದಿದ್ದಾರೆ. ಭೀಮಣ್ಣ ತಾನು ಯಾವ ತಪ್ಪನ್ನೂ ಮಾಡಿಲ್ಲ, ತಾನು ಹಣವನ್ನು ಕದ್ದಿಲ್ಲ. ನೀವು ಹೀಗೆ ಹೊಡೆದರೆ ಸತ್ತು ಹೋಗುತ್ತೇನೆ. ನನ್ನ ಹೆಂಡತಿ, ಮಗು, ಅಮ್ಮನನ್ನು ಯಾರು ಸಾಕ್ತಾರೆ?” ಅಂತೆಲ್ಲಾ ಗೋಗರೆದರೂ ಕರಗದ ಪೊಲೀಸರು ಆತನಿಗೆ ಮತ್ತಷ್ಟು ಚಿತ್ರಹಿಂಸೆ ನೀಡಿದ್ದಾರೆ. ಹಿಂಸೆ ತಾಳಲಾರದೆ ಭೀಮಣ್ಣ ಕಣ್ಣು ಮಂಜಾಗಿ ಕುಸಿದು ಬಿದ್ದಿದ್ದಾನೆ. ಇದನ್ನ ನೋಡಿ ಗಾಬರಿಗೊಂಡ ಪೊಲೀಸರು ಭೀಮಣ್ಣ ಲಾಕಪ್ಪಿನಲ್ಲೇ ಸತ್ತರೆ ತಾವು ತೊಂದರೆಗೆ ಸಿಲುಕಿಕೊಳ್ಳುತ್ತೇವೆಂದು ಸ್ಟೇಷನ್ನಿನಿಂದ ದೂರ ಕಳಿಸಿದ್ದ ಭೀಮಣ್ಣನ ನಾಲ್ವರು ಸಂಬಂಧಿಗಳ ಕೈಗೆ ಭೀಮಣ್ಣನನ್ನು ಒಪ್ಪಿಸಿ, “ಇವನನ್ನು ಸೀದಾ ಊರಿಗೆ ಕರೆದುಕೊಂಡು ಹೋಗಿ. ಅಲ್ಲಿ-ಇಲ್ಲಿ ಹೋಗಿ ನಮ್ಮ ವಿರುದ್ಧ ಏನಾದರೂ ಮಾತಾಡಿದರೆ ಮತ್ತೆ ಅವನನ್ನು ಎತ್ತಾಕಿಕೊಂಡು ಬಂದು ಇವತ್ತು ಮಾಡಿದ್ದರ ಹತ್ತು ಪಟ್ಟು ಮಾಡಿ, ಅವನನ್ನು ಕೊಂದು ಹೆಣ ಕೂಡ ಸಿಗದಂತೆ ಬಿಸಾಕುತ್ತೇವೆ,” ಎಂದು ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಡಾಕೇಶ ಹೆದರಿಸಿದ್ದಾನೆ.

ಚಿಂತಾಜನಕಸ್ಥಿತಿಯಲ್ಲಿದ್ದ ಭೀಮಣ್ಣನನ್ನು ರಾಯಚೂರಿನ ಸುರಕ್ಷಾ ಎಂಬ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಅಲ್ಲಿಗೆ ಬಂದ ಇಡಪನೂರು ಪೊಲೀಸರು ಮೇಲಧಿಕಾರಿಗಳಿಗೆ, ಸರ್ಕಾರಕ್ಕೆ ಈ ಕುರಿತು ಕಂಪ್ಲೇಂಟ್ ಕೊಡಬಾರದೆಂದು ಭೀಮಣ್ಣ ಮತ್ತು ಆತನ ಕುಟುಂಬದವರಿಗೆ ಖಾಸಗಿ ಆಸ್ಪತ್ರೆಗೆ ಸೇರಿದ್ದೀರಾ, ಆಸ್ಪತ್ರೆಯ ಖರ್ಚನ್ನೆಲ್ಲಾ ನಾವು ನೋಡಿಕೊಳ್ಳುತ್ತೇವೆಂದು ಆಮಿಷವನ್ನೂ, ಇದನ್ನು ದೊಡ್ಡ ಇಶ್ಯೂ ಮಾಡಿದರೆ ಮುಂದೆಯೂ ಇಂತಹ ಹಿಂಸೆಗಳನ್ನು ಅನುಭವಿಸಬೇಕಾಗುತ್ತದೆಂದು ಬೆದರಿಕೆಯನ್ನೂ ಒಡ್ಡಿದ್ದಾರೆ.

“ಸಾರ್, ನಾವು ಬಡವರು. ದುಡಿದು ತಿನ್ನುವ ಮಂದಿ. ಏನೂ ತಪ್ಪು ಮಾಡದಿದ್ದರೂ ಈ ಪೊಲೀಸರು ನನಗೆ ಕಳ್ಳತನದ ಹಣೆಪಟ್ಟಿ ಕಟ್ಟಿ ಚಿತ್ರಹಿಂಸೆ ಕೊಟ್ಟರು. ಸತ್ತೇ ಹೋಗುತ್ತೇನೆ ಎಂದುಕೊಂಡಿದ್ದೆ. ಹೇಗೋ ಬದುಕಿಬಿಟ್ಟೆ. ತಪ್ಪು ಮಾಡದಿದ್ದ ನನಗೆ ಚಿತ್ರಹಿಂಸೆ ಕೊಟ್ಟ ಪೊಲೀಸರನ್ನು ಸುಮ್ಮನೇ ಬಿಡಬಾರದು ಅನ್ನಿಸುತ್ತೆ. ಆದರೆ, ನಾವು ಬಡವರು. ಪೊಲೀಸರನ್ನು ಎದುರುಹಾಕಿಕೊಂಡರೆ ಮತ್ತೆ ನಾಳೆ ಯಾವ್ಯಾವುದೋ ಕೇಸು ಹಾಕಿ ಠಾಣೆಗೆ ಕರೆತಂದು ಚಿತ್ರಹಿಂಸೆ ಕೊಡಬಹುದು ಅಂತ ಹೆದರಿಕೆಯಾಗುತ್ತದೆ. ಅದಕ್ಕೆ ಸುಮ್ಮನಾಗಿದ್ದೇವೆ” ಎಂದು ತನ್ನ ಅಸಹಾಯಕತೆಗೆ ಬೇಸರ ವ್ಯಕ್ತಪಡಿಸಿದ ಭೀಮಣ್ಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...