HomeUncategorizedಬಡ ಭೀಮಣ್ಣನ ಮೇಲೆ ರಾಯಚೂರು ಪೊಲೀಸರ ಸವಾರಿ...

ಬಡ ಭೀಮಣ್ಣನ ಮೇಲೆ ರಾಯಚೂರು ಪೊಲೀಸರ ಸವಾರಿ…

- Advertisement -
- Advertisement -

| ಸೋಮಶೇಖರ್ ಚಲ್ಯ |

ರಾಯಚೂರಿನ ಸುರಕ್ಷಾ ಆಸ್ಪತ್ರೆಯ ಹಾಸಿಗೆಯ ಮೇಲೆ ಮಲಗಿರುವ ಈ ಯುವಕನ ಹೆಸರು ಭೀಮಣ್ಣ. ಇಪ್ಪತ್ನಾಲ್ಕನೇ ವಯಸ್ಸಿನ ಈತನೇ ಇವನ ಕುಟುಂಬದ ಆಧಾರ ಸ್ತಂಭ. ಇರೋ ನಾಲ್ಕು ಎಕರೆ ಒಣಭೂಮಿಯಲ್ಲಿ ಒಂದಷ್ಟು ದವಸ ಧಾನ್ಯ ಬೆಳೆದುಕೊಂಡು, ಕೆಲಸ ಇಲ್ಲದ ಸಮಯದಲ್ಲಿ ಕೂಲಿನಾಲಿ ಮಾಡುತ್ತಾ ಜೀವನ ಸಾಗಿಸುತ್ತಿರುವ ಕುಟುಂಬ ಈತನದು.

ಐದು ತಿಂಗಳ ಹಿಂದೆ ಹುಟ್ಟಿದ ಎರಡನೇ ಮಗು ಸಮಸ್ಯೆಯೊಂದಿಗೇ ಹುಟ್ಟಿತು. ಖಾಸಗಿ ಆಸ್ಪತ್ರೆಯಲ್ಲಿ ಎಷ್ಟೇ ಖರ್ಚು ಮಾಡಿದರೂ ಮಗು ಉಳಿಯಲಿಲ್ಲ. ಇದಾದ ಕೆಲವೇ ದಿನಗಳಲ್ಲಿ ಆತನ ತಂದೆಯೂ ತೀರಿಕೊಂಡರು. ಆಸ್ಪತ್ರೆ, ಮಗು ಮತ್ತು ತಂದೆಯ ಸಂಸ್ಕಾರಕ್ಕಾಗಿ ಹೆಚ್ಚು ಸಾಲದ ಹೊರೆ ಹೆಚ್ಚಾಗಿತ್ತು. ಶವಸಂಸ್ಕಾರದ ನಂತರದ ಕಾರ್ಯಗಳಿಗಾಗಿ ಭೀಮಣ್ಣ ಹುಲಿಗೆಮ್ಮ ಮತ್ತು ಆಕೆಯ ಗಂಡ ಬಾರ್ ಆಂಜನೇಯನಿಂದ ಮೂರು ಸಾವಿರ ರೂಪಾಯಿಗಳನ್ನು ಸಾಲ ಪಡೆದಿದ್ದ.

ಅದಾದ ಕೆಲವು ದಿನಗಳ ನಂತರ ತಮ್ಮ ಮನೆಯಲ್ಲಿ 55,000 ರೂಪಾಯಿ ಕಳ್ಳತನವಾಗಿದೆ, ಕದ್ದಿರುವುದು ಭೀಮಣ್ಣನೇ ಇರಬೇಕೆಂಬ ಅನುಮಾನ ಆತನ ಮೇಲೆ ಇಡಪನೂರು ಪೊಲೀಸ್ ಸ್ಟೇಷನ್‍ನಲ್ಲಿ ದೂರು ನೀಡಿದರು. ಪೊಲೀಸರು ವಿಚಾರಣೆಗಾಗಿ ಕರೆದಾಗ ಬೀಮಣ್ಣನ ಜೊತೆ ಹೋದ ಊರಿನ ಜನರು ಆತ ಹಣ ಕದ್ದಿಲ್ಲ. ನಾವು ಈ ವಿಷಯವನ್ನು ಊರಿನಲ್ಲೇ ಬಗೆಹರಿಸಿಕೊಳ್ಳುತ್ತೇವೆಂದು ಹೇಳಿ ಬಂದಿದ್ದಾರೆ. ಇದನ್ನು ನಿರಾಕರಿಸಿದ ಬಾರ್ ಆಂಜನೇಯ ಮತ್ತೆ ಅದೇ ಪೊಲೀಸರಿಗೆ ದೂರು ನೀಡಿದ್ದಾನೆ.

ಭೀಮಣ್ಣನನ್ನು ವಿಚಾರಣೆ ನಡೆಸಿ ವಾಪಸ್ ಕಳಿಸುವುದಾಗಿ ಹೇಳಿ ಆತನನ್ನು ಎತ್ತಾಕಿಕೊಂಡು ಹೋದ ಪೊಲೀಸರು ಮನಸೋಯಿಚ್ಛೆ ಹೊಡೆದಿದ್ದಾರೆ. ಭೀಮಣ್ಣ ತಾನು ಯಾವ ತಪ್ಪನ್ನೂ ಮಾಡಿಲ್ಲ, ತಾನು ಹಣವನ್ನು ಕದ್ದಿಲ್ಲ. ನೀವು ಹೀಗೆ ಹೊಡೆದರೆ ಸತ್ತು ಹೋಗುತ್ತೇನೆ. ನನ್ನ ಹೆಂಡತಿ, ಮಗು, ಅಮ್ಮನನ್ನು ಯಾರು ಸಾಕ್ತಾರೆ?” ಅಂತೆಲ್ಲಾ ಗೋಗರೆದರೂ ಕರಗದ ಪೊಲೀಸರು ಆತನಿಗೆ ಮತ್ತಷ್ಟು ಚಿತ್ರಹಿಂಸೆ ನೀಡಿದ್ದಾರೆ. ಹಿಂಸೆ ತಾಳಲಾರದೆ ಭೀಮಣ್ಣ ಕಣ್ಣು ಮಂಜಾಗಿ ಕುಸಿದು ಬಿದ್ದಿದ್ದಾನೆ. ಇದನ್ನ ನೋಡಿ ಗಾಬರಿಗೊಂಡ ಪೊಲೀಸರು ಭೀಮಣ್ಣ ಲಾಕಪ್ಪಿನಲ್ಲೇ ಸತ್ತರೆ ತಾವು ತೊಂದರೆಗೆ ಸಿಲುಕಿಕೊಳ್ಳುತ್ತೇವೆಂದು ಸ್ಟೇಷನ್ನಿನಿಂದ ದೂರ ಕಳಿಸಿದ್ದ ಭೀಮಣ್ಣನ ನಾಲ್ವರು ಸಂಬಂಧಿಗಳ ಕೈಗೆ ಭೀಮಣ್ಣನನ್ನು ಒಪ್ಪಿಸಿ, “ಇವನನ್ನು ಸೀದಾ ಊರಿಗೆ ಕರೆದುಕೊಂಡು ಹೋಗಿ. ಅಲ್ಲಿ-ಇಲ್ಲಿ ಹೋಗಿ ನಮ್ಮ ವಿರುದ್ಧ ಏನಾದರೂ ಮಾತಾಡಿದರೆ ಮತ್ತೆ ಅವನನ್ನು ಎತ್ತಾಕಿಕೊಂಡು ಬಂದು ಇವತ್ತು ಮಾಡಿದ್ದರ ಹತ್ತು ಪಟ್ಟು ಮಾಡಿ, ಅವನನ್ನು ಕೊಂದು ಹೆಣ ಕೂಡ ಸಿಗದಂತೆ ಬಿಸಾಕುತ್ತೇವೆ,” ಎಂದು ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಡಾಕೇಶ ಹೆದರಿಸಿದ್ದಾನೆ.

ಚಿಂತಾಜನಕಸ್ಥಿತಿಯಲ್ಲಿದ್ದ ಭೀಮಣ್ಣನನ್ನು ರಾಯಚೂರಿನ ಸುರಕ್ಷಾ ಎಂಬ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಅಲ್ಲಿಗೆ ಬಂದ ಇಡಪನೂರು ಪೊಲೀಸರು ಮೇಲಧಿಕಾರಿಗಳಿಗೆ, ಸರ್ಕಾರಕ್ಕೆ ಈ ಕುರಿತು ಕಂಪ್ಲೇಂಟ್ ಕೊಡಬಾರದೆಂದು ಭೀಮಣ್ಣ ಮತ್ತು ಆತನ ಕುಟುಂಬದವರಿಗೆ ಖಾಸಗಿ ಆಸ್ಪತ್ರೆಗೆ ಸೇರಿದ್ದೀರಾ, ಆಸ್ಪತ್ರೆಯ ಖರ್ಚನ್ನೆಲ್ಲಾ ನಾವು ನೋಡಿಕೊಳ್ಳುತ್ತೇವೆಂದು ಆಮಿಷವನ್ನೂ, ಇದನ್ನು ದೊಡ್ಡ ಇಶ್ಯೂ ಮಾಡಿದರೆ ಮುಂದೆಯೂ ಇಂತಹ ಹಿಂಸೆಗಳನ್ನು ಅನುಭವಿಸಬೇಕಾಗುತ್ತದೆಂದು ಬೆದರಿಕೆಯನ್ನೂ ಒಡ್ಡಿದ್ದಾರೆ.

“ಸಾರ್, ನಾವು ಬಡವರು. ದುಡಿದು ತಿನ್ನುವ ಮಂದಿ. ಏನೂ ತಪ್ಪು ಮಾಡದಿದ್ದರೂ ಈ ಪೊಲೀಸರು ನನಗೆ ಕಳ್ಳತನದ ಹಣೆಪಟ್ಟಿ ಕಟ್ಟಿ ಚಿತ್ರಹಿಂಸೆ ಕೊಟ್ಟರು. ಸತ್ತೇ ಹೋಗುತ್ತೇನೆ ಎಂದುಕೊಂಡಿದ್ದೆ. ಹೇಗೋ ಬದುಕಿಬಿಟ್ಟೆ. ತಪ್ಪು ಮಾಡದಿದ್ದ ನನಗೆ ಚಿತ್ರಹಿಂಸೆ ಕೊಟ್ಟ ಪೊಲೀಸರನ್ನು ಸುಮ್ಮನೇ ಬಿಡಬಾರದು ಅನ್ನಿಸುತ್ತೆ. ಆದರೆ, ನಾವು ಬಡವರು. ಪೊಲೀಸರನ್ನು ಎದುರುಹಾಕಿಕೊಂಡರೆ ಮತ್ತೆ ನಾಳೆ ಯಾವ್ಯಾವುದೋ ಕೇಸು ಹಾಕಿ ಠಾಣೆಗೆ ಕರೆತಂದು ಚಿತ್ರಹಿಂಸೆ ಕೊಡಬಹುದು ಅಂತ ಹೆದರಿಕೆಯಾಗುತ್ತದೆ. ಅದಕ್ಕೆ ಸುಮ್ಮನಾಗಿದ್ದೇವೆ” ಎಂದು ತನ್ನ ಅಸಹಾಯಕತೆಗೆ ಬೇಸರ ವ್ಯಕ್ತಪಡಿಸಿದ ಭೀಮಣ್ಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....